ಧಾರ್ಮಿಕ

ಕಾವು ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು: ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನ ಕಾವು ವಾರ್ಷಿಕ ಜಾತ್ರೋತ್ಸವವು ಫೆ. 27ರಿಂದ ಮಾ. 3ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದೇವಸ್ಥಾನದ ವಠಾರದಲ್ಲಿ ದೀಪ ಪ್ರಜ್ವಲನೆಯೊಂದಿಗೆ ನೆರವೇರಿತು. ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಸದಸ್ಯೆ ಶ್ರೀಮತಿ ನವೀನಾ ಬಿ.ಡಿ., ಹಿರಿಯರಾದ ಪ್ರಕಾಶ್ ಉಂಗ್ರುಳಿತ್ತಾಯ ಹಾಗೂ ಶೇಷಪ್ಪ ಗೌಡ, ಕಾವು ಸಿ.ಎ. ಬ್ಯಾಂಕ್ ನಿರ್ದೇಶಕ ಲೋಹಿತ್ ಅಂಚಿನಡ್ಕ, ಪುತ್ತಿಲ ಪರಿವಾರ ಕಾವು ಘಟಕದ ಕಾರ್ಯದರ್ಶಿ […]

ಕಾವು ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಫೆ. 12 – 21: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ, ದೈವಗಳ ‌ನೇಮ

ಈಶ್ವರಮಂಗಲ: ಇಲ್ಲಿನ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಕಿನ್ನಿಮಾಣಿ, ಪೂಮಾಣಿ ಮತ್ತು ಪಿಲಿ ಚಾಮುಂಡಿ ದೈವಗಳ ‌ನೇಮ ಫೆ. 12 ರಿಂದ ಫೆ. 21 ರ ವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ನಡೆಯಲಿದೆ. ಫೆ. 12 ರಿಂದ 20 ರ ವರೆಗೆ ದೇವಾಲಯದಲ್ಲಿ ಜಾತ್ರೆ ಮತ್ತು ಫೆ. 21 ರಂದು ಮಾಡದ ಗುಡ್ಡೆಯಲ್ಲಿ ದೈವಗಳ ನೇಮ ನಡೆಯಲಿದೆ. ಜಾತ್ರಾ ಪ್ರಯುಕ್ತ ಫೆ. 12 ರಂದು ಹಸಿರುವಾಣಿ ಹೊರೆಕಾಣಿಕೆ ‌ಸಮರ್ಪಣೆಯಾಗಲಿದ್ದು, ದೇಗುಲದ ಆಡಳಿತ

ಫೆ. 12 – 21: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ, ದೈವಗಳ ‌ನೇಮ Read More »

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ

ವೀರಮಂಗಲ: ಶಾಂತಿಗೋಡು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ ಮತ್ತು ದೈವಗಳ ನೇಮೋತ್ಸವ ಫೆ. 15 ರಂದು ನಡೆಯಲಿದೆ. ಫೆ. 9 ರಂದು ನಾಗತಂಬಿಲ, ಫೆ. 10 ರಂದು ಸಂಜೆ 6 ಗಂಟೆಗೆ ನೂತನವಾಗಿ ನಿರ್ಮಾಣವಾಗಿರುವ ಅಂಙಣಪಂಜುರ್ಲಿ ದೈವಸ್ಥಾನದ ವಾಸ್ತು ಪೂಜೆ, ಫೆ. 11 ರಂದು ಹುಲಿ ಚಾಮುಂಡಿ ಮತ್ತು ಅಂಙಣಪಂಜುರ್ಲಿ ದೈವಗಳ ಪುನಃಪ್ರತಿಷ್ಟೆ, ಫೆ. 14 ರಂದು ಕುಮಾರಧಾರಾ ನದಿಯಲ್ಲಿ ಗಂಗಾ ಪೂಜೆ, ಕಲಶ ಜಲ ಮೆರವಣಿಗೆ, ಮಹಾ ಪೂಜೆ, ಅನ್ನಸಂತರ್ಪಣೆ, ರಾತ್ರಿ

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ Read More »

ದೇವರೇ ಚಿನ್ನದ ಬೆಲೆ ಇಳಿಸು…: ಮೊರೆಯಿಟ್ಟ ಭಕ್ತ!

ಸಿಕ್ಕಾಪಟ್ಟೆ ಏರಿಕೆಯಾದ ಚಿನ್ನ, ಬೆಳ್ಳಿ ಬೆಲೆಯಿಂದ ಜನ ಕಂಗಾಲು ಬೆಂಗಳೂರು: ಚಿನ್ನದ ಬೆಲೆ ಗಗನಕ್ಕೇರಿ ಬಡವರ ಪಾಲಿಗೆ ಮರೀಚಿಕೆಯಾಗಿದ್ದು, ವ್ಯಕ್ತಿಯೊಬ್ಬರು ಕೊನೆಗೆ ಚಿನ್ನದ ಬೆಲೆ ಇಳಿಸಲು ದೇವರಿಗೇ ಮೊರೆ ಹೋಗಿದ್ದಾರೆ! ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಭಕ್ತರೊಬ್ಬರು ಚಿನ್ನದ ಬೆಲೆ ಇಳಿಯಲಿ ಎಂದು ಕೋರಿ ಸಲ್ಲಿಸಿರುವ ವಿಭಿನ್ನ ಹರಕೆ ಇದೀಗ ಎಲ್ಲರ ಗಮನ ಸೆಳೆದಿದೆ. ಭಕ್ತ ಕೆ.ನಾಗರಾಜ ಉಲವತ್ತಿ ಎಂಬವರು, ಚಿನ್ನದ ದರ ಇಳಿಯಲಿ, ಬಡವರು ಹಾಗೂ

ದೇವರೇ ಚಿನ್ನದ ಬೆಲೆ ಇಳಿಸು…: ಮೊರೆಯಿಟ್ಟ ಭಕ್ತ! Read More »

ಅಯೋಧ್ಯೆಯ ಶ್ರೀ ರಾಮನಿಗೆ 286 KG ತೂಕದ ಧನಸ್ಸು

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕೆ ಒಡಿಶಾದಿಂದ 286 ಕೆಜಿ ತೂಕದ ಚಿನ್ನದ ಧನಸ್ಸು ಸಮರ್ಪಣೆಯಾಗಿದೆ. ಈ ಧನಸ್ಸನ್ನು ತಮಿಳುನಾಡಿನ ಕಾಂಚೀಪುರಂನ ಮಹಿಳಾ ಕುಶಲಕರ್ಮಿಗಳ‌ ನೈಪುಣ್ಯದಿಂದ ತಯಾರು ಮಾಡಲಾಗಿದೆ. ಇದನ್ನು ತಯಾರಿಸಲು ಚಿನ್ನ, ಬೆಳ್ಳಿ, ತಾಮ್ರ, ಸತು, ಕಬ್ಬಿಣ ಮೊದಲಾದ ಮಿಶ್ರ ಲೋಹದಿಂದ ತಯಾರಿಸಲಾಗಿದೆ. ಇದರ ನಿರ್ಮಾಣ ಕಾರ್ಯ ಒಡಿಶಾದಲ್ಲಿ ಪೂರ್ಣಗೊಂಡಿದೆ.

ಅಯೋಧ್ಯೆಯ ಶ್ರೀ ರಾಮನಿಗೆ 286 KG ತೂಕದ ಧನಸ್ಸು Read More »

ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ

ಜೀನ್ಸ್‌, ಟಿ-ಶರ್ಟ್‌, ತೋಳಿಲ್ಲದ ಉಡುಪುಗಳು ನಿಷಿದ್ಧ ಉಡುಪಿ : ಶೀರೂರು ಮಠದ ಶ್ರೀ ವೇದವರ್ಧನ ಶ್ರೀಗಳು ಪರ್ಯಾಯ ಪೀಠಾರೋಹಣ ಮಾಡಿದ ಬೆನ್ನಿಗೆ ಉಡುಪಿ ಕೃಷ್ಣ ಮಠದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ. ಎಲ್ಲ ಭಕ್ತರಿಗೆ ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದ್ದು, ದೇವಾಲಯದ ಆವರಣವನ್ನು ಪ್ರವೇಶಿಸುವ ಮೊದಲು ಪುರುಷ ಭಕ್ತರು ಶರ್ಟ್‌, ಬನಿಯನ್‌ ತೆಗೆಯಬೇಕು. ಪರ್ಯಾಯ ಶೀರೂರು ಮಠ ಹೊರಡಿಸಿದ ಈ ನಿರ್ದೇಶನ ಜನವರಿ 19ರಿಂದಲೇ ಜಾರಿಗೆ ತಂದಿದೆ. ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ, ದೇವಾಲಯ ಪ್ರವೇಶಿಸುವ ಭಕ್ತರಿಗೆ ವಸ್ತ್ರ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ Read More »

ಧಾರ್ಮಿಕ ಭಾವನೆಗೆ ಧಕ್ಕೆ: ಹಿಂದೂ ನಾಯಕಿಯ ವಿರುದ್ಧ ದೂರು ದಾಖಲು

ಬೆಳಗಾವಿ: ಹಿಂದೂ ಸಮ್ಮೇಳನದ ಶೋಭಾಯಾತ್ರೆಯ ವೇಳೆ ಹಿಂದೂ ನಾಯಕಿ ಹರ್ಷಿತಾ ಠಾಕೂರ್ ಎಂಬವರು ದರ್ಗಾ‌ವೊಂದರ ಕಡೆಗೆ ಬಾಣ ಬಿಟ್ಚಂತೆ ಕೈ ಸನ್ನೆ ಮಾಡಿದ್ದು ಅವರ ವಿರುದ್ಧ ದೂರು ದಾಖಲಾಗಿದೆ. ಧಾರ್ಮಿಕ ಭಾವನೆಗೆ ‌ಧಕ್ಕೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಮಚ್ಚೆ ಗ್ರಾಮದಲ್ಲಿ ನಡೆದ ಶೋಭಾಯಾತ್ರೆಯ ಸಂದರ್ಭದಲ್ಲಿ ತೆರೆದ ವಾಹನದಲ್ಲಿ ನಿಂತಿದ್ದ ಹರ್ಷಿತಾ ದರ್ಗಾದತ್ತ ಬಾಣ ಬಿಡುವಂತೆ ಕೈ ಚಾಚಿದ್ದರು. ಆಗ ನೆರೆದಿದ್ದವರು ಜೈ ಶ್ರೀ ರಾಮ್ ಘೋಷಣೆ ಕೂಗಿದ್ದಾರೆ. ಹಾಗೆಯೇ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂಬುದಾಗಿಯೂ ದೂರಿನಲ್ಲಿ

ಧಾರ್ಮಿಕ ಭಾವನೆಗೆ ಧಕ್ಕೆ: ಹಿಂದೂ ನಾಯಕಿಯ ವಿರುದ್ಧ ದೂರು ದಾಖಲು Read More »

ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನ ತೀರ್ಥರು ಸರ್ವಜ್ಞ ಪೀಠಾರೋಹಣ

ರಾತ್ರಿಯಿಡೀ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ಭವ್ಯ ಪರ್ಯಾಯ ಮೆರವಣಿಗೆ ಉಡುಪಿ: ಉಡುಪಿ ಕೃಷ್ಣಮಠದಲ್ಲಿ ಶೀರೂರು ಪರ್ಯಾಯ ಮಹೋತ್ಸವ ಸಡಗರದಿಂದ ನೆರವೇರಿದೆ. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥರು ಸರ್ವಜ್ಞ ಪೀಠಾರೋಹಣ ಮಾಡಿದ್ದು, ಅತ್ಯಂತ ಎಳೆಯ ಪ್ರಾಯದಲ್ಲೇ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾಧಿಕಾರವನ್ನು ಅವರು ನಿರ್ವಹಿಸಲಿದ್ದಾರೆ. ಇದು ಕೃಷ್ಣ ಮಠದ 253ನೇ ಪರ್ಯಾಯ ಮಹೋತ್ಸವವಾಗಿದ್ದು, ಭಕ್ತರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಉಡುಪಿಯಲ್ಲಿ ಶೀರೂರು ಪರ್ಯಾಯ ಮಹೋತ್ಸವ ಸಂಭ್ರಮ ಮುಗಿಲು ಮುಟ್ಟಿದೆ.

ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನ ತೀರ್ಥರು ಸರ್ವಜ್ಞ ಪೀಠಾರೋಹಣ Read More »

ಜ.20ರಂದು ಶಬರಿಮಲೆ ಯಾತ್ರೆ ಸಂಪನ್ನ

ಈ ಸಾಲಿನಲ್ಲಿ ದಾಖಲೆ ಮೊತ್ತದ ಕಾಣಿಕೆ ಸಂಗ್ರಹ ಶಬರಿಮಲೆ: ಈ ಸಾಲಿನ ಶಬರಿಮಲೆ ಮಂಡಲ ಮತ್ತು ಮಕರ ವಿಳಕ್ಕು ವಾರ್ಷಿಕ ಯಾತ್ರಾ ಋತುವಿಗೆ ಜ.20ರಂದು ತೆರೆಬೀಳಲಿದೆ. ಭಕ್ತರಿಗೆ ಜ.19ರಂದು ರಾತ್ರಿ ತನಕ ಅಯ್ಯಪ್ಪನ ದರ್ಶನಕ್ಕೆ ಅವಕಾಶವಿದ್ದು, ಜ.20ರಂದು ಬೆಳಗ್ಗೆ ರಾಜ ಪ್ರತಿನಿಧಿಯ ದರ್ಶನದ ಬಳಿಕ ದೇಗುಲದ ಗರ್ಭಗುಡಿಯ ಮುಚ್ಚಲಾಗುತ್ತದೆ. ಬಳಿಕ ರಾಜ ಪ್ರತಿನಿಧಿ ತಿರುವಾಭರಣದೊಂದಿಗೆ ಮರಳುವುದರೊಂದಿಗೆ ಎರಡೂವರೆ ತಿಂಗಳ ಮಹೋತ್ಸವ ಸಂಪನ್ನಗೊಳ್ಳಲಿದೆ. ಈ ಬಾರಿ ಮಂಡಲ-ಮಕರಜ್ಯೋತಿ ಋುತುವಿನಲ್ಲಿ 52 ಲಕ್ಷಕ್ಕೂ ಹೆಚ್ಚು ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದಾರೆ.

ಜ.20ರಂದು ಶಬರಿಮಲೆ ಯಾತ್ರೆ ಸಂಪನ್ನ Read More »

ಜ.17-ಜ.25: ಶ್ರೀ ಕಪಿಲೇಶ್ವರ ದೇವಸ್ಥಾನ ಚಾರ್ವಾಕದಲ್ಲಿ ವಾರ್ಷಿಕ ಜಾತ್ರೋತ್ಸವ

ಕಡಬ: ಶ್ರೀ ಕಪಿಲೇಶ್ವರ ದೇವಸ್ಥಾನ ಚಾರ್ವಾಕ, ಇರ್ವೆರ್ ಉಳ್ಳಾಕುಲ ದೈವಗಳ ಕ್ಷೇತ್ರ ಅಮರಕಾಸ್ಪಾಡಿಯಲ್ಲಿ ಜ. 17 – ಜ.25 ರ ವರೆಗೆ ವರ್ಷಾವಧಿ ಜಾತ್ರೋತ್ಸವ, ದೈವಗಳ ನೇಮ ನಡೆಯಲಿದೆ. ಜಾತ್ರಾ ಪ್ರಯುಕ್ತ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಜ.20 ರಂದು ಶ್ರೀ ದೇವರ ದರ್ಶನ ಬಲಿ ನಡೆಯಲಿದೆ. ಜ.22 ರಿಂದ ಜ. 25 ರ ವರೆಗೆ ದೈವಗಳ ನೇಮ ನಡೆಯಲಿದೆ. ಕಾರ್ಯಕ್ರಮಗಳ ವಿವರ: ಜ.16: ದೇವತಾ ಪ್ರಾರ್ಥನೆ, ಪ್ರಾಸಾದ ಶುದ್ದಿ, ವಾಸ್ತು

ಜ.17-ಜ.25: ಶ್ರೀ ಕಪಿಲೇಶ್ವರ ದೇವಸ್ಥಾನ ಚಾರ್ವಾಕದಲ್ಲಿ ವಾರ್ಷಿಕ ಜಾತ್ರೋತ್ಸವ Read More »

error: Content is protected !!
Scroll to Top