ಧಾರ್ಮಿಕ

ಧರ್ಮ ಶಿಕ್ಷಣ ಉದ್ಘಾಟನೆಗೆ ಸಹಸ್ರಾರು ಮಂದಿ ಭಾಗಿಯಾಗಬೇಕು : ಬಾಲಕೃಷ್ಣ ಬೋರ್ಕರ್ | ತಾಲೂಕು ಧರ್ಮ ಶಿಕ್ಷಣ ಸಮಿತಿ ಸಭೆ

ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನಿರ್ದೇಶನ ಹಾಗೂ ಮಾರ್ಗದರ್ಶನದಲ್ಲಿ ಇಡಿಯ ದೇಶದಲ್ಲೇ ನಡೆಸಲು ಉದ್ದೇಶಿಸಲಾಗಿರುವ ಹಿಂದೂ ಧರ್ಮ ಶಿಕ್ಷಣ ವ್ಯವಸ್ಥೆ ಮೊದಲು ಪುತ್ತೂರಿನಲ್ಲಿ ಜಾರಿಗೊಳ್ಳುತ್ತಿರುವುದು ಹೆಮ್ಮೆಯ ವಿಚಾರ. ಇಂತಹ ಮಹೋನ್ನತ ಹಾಗೂ ಐತಿಹಾಸಿಕ ಘಟನೆಗೆ ಪುತ್ತೂರಿನ ನಾಗರಿಕ ಸಮಾಜ ಸಾಕ್ಷಿಯಾಗುತ್ತಿದೆ ಎಂದು ತಾಲೂಕು ಧರ್ಮ ಶಿಕ್ಷಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಬೋರ್ಕರ್ ಹೇಳಿದರು. ಅವರು ನಗರದ ತೆಂಕಿಲದಲ್ಲಿರುವ ಸ್ವಾಮಿ ಕಲಾ ಮಂದಿರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ತಾಲೂಕು ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. […]

ಧರ್ಮ ಶಿಕ್ಷಣ ಉದ್ಘಾಟನೆಗೆ ಸಹಸ್ರಾರು ಮಂದಿ ಭಾಗಿಯಾಗಬೇಕು : ಬಾಲಕೃಷ್ಣ ಬೋರ್ಕರ್ | ತಾಲೂಕು ಧರ್ಮ ಶಿಕ್ಷಣ ಸಮಿತಿ ಸಭೆ Read More »

ಇತಿಹಾಸ ಪ್ರಸಿದ್ಧ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ನೇಮೋತ್ಸವ | ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡ ಭಕ್ತಾದಿಗಳಿಂದ ಮಲ್ಲಿಗೆ, ಪಟ್ಟೆಸೀರೆ, ಹರಕೆ ಸಮರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದಂಡನಾಯಕ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮ ನಡಾವಳಿಯು ಎ.28 ರಂದು ಪೂರ್ವಶಿಷ್ಟ ಸಂಪ್ರದಾಯದಂತೆ ನೆರವೇರಿತು. ನೇಮ ನಡಾವಳಿಯ ಪೂರ್ವಭಾವಿಯಾಗಿ ಎ.27ರಂದು ಮಧ್ಯಾಹ್ನ ಬಲ್ನಾಡು ಶ್ರೀ ವಿನಾಯಕ ದೇವಸ್ಥಾನದಲ್ಲಿ ದೇವತಾ ಪ್ರಾರ್ಥನೆ, ವಿಶೇಷ ಮಹಾಪೂಜೆ, ಸಂಜೆ ರಂಗಪೂಜೆ, ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದೈವಗಳ ಭಂಡಾರ ತೆಗೆದು ನೇಮೋತ್ಸವ ನಡೆಯುವ ದೈವಸ್ಥಾನಕ್ಕೆ ಆಗಮಿಸಿದ ಬಳಿಕ ತಂಬಿಲ ಸೇವೆಗಳು ನಡೆದ ಬಳಿಕ ಅನ್ನಸಂತರ್ಪಣೆ ನೆರವೇರಿತು.

ಇತಿಹಾಸ ಪ್ರಸಿದ್ಧ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ನೇಮೋತ್ಸವ | ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡ ಭಕ್ತಾದಿಗಳಿಂದ ಮಲ್ಲಿಗೆ, ಪಟ್ಟೆಸೀರೆ, ಹರಕೆ ಸಮರ್ಪಣೆ Read More »

ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದಡಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ

ಪುತ್ತೂರು: ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕಿ ಕೃಷ್ಣವೇಣಿ ಮುಳಿಯ ಅವರ ಮುತುವರ್ಜಿಯಲ್ಲಿ, ಕಾಸರಗೋಡಿನ  ಲೇಖಕಿ  ಶೀಲಾ ಲಕ್ಷ್ಮೀ ಅವರು ಬರೆದ ಕೃತಿ ‘ಕುಂಕುಮ ಮಹತಿ’ ಯು ಭಾನುವಾರ  ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಚೇರಿ ಸಭಾಂಗಣ ದಲ್ಲಿ ಲೋಕಾರ್ಪಣೆ ಗೊಂಡಿತು. ದೇವಾಲಯ ಸಂವರ್ಧನ  ಸಮಿತಿ ಮಂಗಳೂರು ವಿಭಾಗ, ಮುಳಿಯ ಪ್ರತಿಷ್ಠಾನ ಪುತ್ತೂರು ಸಹಯೋಗದಲ್ಲಿ , ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಕಾರದಲ್ಲಿ  ಕೃತಿ ಲೋಕಾರ್ಪಣಾ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಚಿಂತಕ ಕಶೆಕೋಡಿ ಸೂರ್ಯನಾರಾಯಣ ಭಟ್ ಕೃತಿ ಲೋಕಾರ್ಪಣೆ

ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದಡಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ Read More »

ನಾಳೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ, ಪರಿವಾರ ದೈವಗಳ ನೇಮೋತ್ಸವ | ಸ್ವರ್ಣದ ಮಲ್ಲಿಗೆಯ ಮೊಗ್ಗಿನ ಹಾರ, ಬೆಳ್ಳಿಯ ಗಗ್ಗರ ಸಮರ್ಪಣೆ

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮ ನಡಾವಳಿ ಏ.28 ಸೋಮವಾರ ನಡೆಯಲಿದೆ. ನಡಾವಳಿಯ ಪೂರ್ವಭಾವಿಯಾಗಿ ಇಂದು ಮಧ್ಯಾಹ್ನ ಬಲ್ನಾಡು ಶ್ರೀ ವಿನಾಯಕ ದೇವಸ್ಥಾನದಲ್ಲಿ ದೇವತಾ ಪ್ರಾರ್ಥನೆ, ವಿಶೇಷ ಮಹಾಪೂಜೆ, ಸಂಜೆ ರಂಗಪೂಜೆ, ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಮಕರತೋರಣರೋಹಣ, ಶ್ರೀ ದೈವಗಳ ಭಂಡಾರ ತೆಗೆದು ಮೂಲಸ್ಥಾನದಿಂದ ನೇಮ್ ನಡೆಯುವ ದೈವಸ್ಥಾನಕ್ಕೆ ಆಗಮನ, ತಂಬಿಲ ಸೇವೆಗಳು ನಡೆದ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಎ.28ರಂದು ಬೆಳಿಗ್ಗೆ ದೈವಸ್ಥಾನದಲ್ಲಿ ಗಣಪತಿ ಹೋಮ ನಡೆದ ಬಳಿಕ

ನಾಳೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ, ಪರಿವಾರ ದೈವಗಳ ನೇಮೋತ್ಸವ | ಸ್ವರ್ಣದ ಮಲ್ಲಿಗೆಯ ಮೊಗ್ಗಿನ ಹಾರ, ಬೆಳ್ಳಿಯ ಗಗ್ಗರ ಸಮರ್ಪಣೆ Read More »

ಕರ್ತಕೋಡಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರ ದೈವಗಳ ಗಗ್ಗರ ಸೇವೆ

ಬಂಟ್ವಾಳ: ತಾಲೂಕಿನ ಬರಿಮಾರು ಕರ್ತಕೋಡಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರ ದೈವಗಳ ಗಗ್ಗರ ಸೇವೆ ಶುಕ್ರವಾರ ರಾತ್ರಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಶುಕ್ರವಾರ ಬೆಳಿಗ್ಗೆ ಗಣಹೋಮ, ನಾಗತಂಬಿಲ, ಮುಡಿಪು ಕಟ್ಟುವುದು, ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ಸಂಜೆ 5 ಗಂಟೆಗೆ ಭಂಡಾರ ಇಳಿದು ರಾತ್ರಿ ಅನ್ನಸಂತರ್ಪಣೆ ಜರಗಿತು. ಬಳಿಕ ಸತ್ಯದೇವತೆ ಕಲ್ಲುರ್ಟಿ ಪಂಜುರ್ಲಿ, ಚಾಮುಂಡಿ-ಗುಳಿಗ ರಾಹು-ಗುಳಿಗ ದೈವಗಳಿಗೆ ಗಗ್ಗರ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರು, ಸ್ಥಳೀಯರು ಉಪಸ್ಥಿತರಿದ್ದರು. ಇಂದು ರಾತ್ರಿ ದೈವಗಳಿಗೆ ವರ್ಷಾವಧಿ ಅಗೇಲು

ಕರ್ತಕೋಡಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರ ದೈವಗಳ ಗಗ್ಗರ ಸೇವೆ Read More »

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ,  ಸಾಮೂಹಿಕ ಕುಂಕುಮಾರ್ಚನೆ

ಪುತ್ತೂರು: ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆ ಸಿಂಧೂರ, ಈ ಸಿಂಧೂರದ ಕುರಿತಾದ ಮಹತ್ವವನ್ನು ತಿಳಿಸುವ ಹಿನ್ನೆಲೆಯಲ್ಲಿ, ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕಿ ಕೃಷ್ಣವೇಣಿ ಮುಳಿಯ ಅವರ ಮುತುವರ್ಜಿಯಲ್ಲಿ, ಕಾಸರಗೋಡಿನ  ಲೇಖಕಿ ಶೀಲಾ ಲಕ್ಷ್ಮೀ ಅವರು ಬರೆದ ಕೃತಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ ಏ.27 ಆದಿತ್ಯವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಬಳಿಯಲ್ಲಿರುವ ಅನ್ನ ಛತ್ರದಲ್ಲಿ ಬೆಳಗ್ಗೆ  9:30 ಕ್ಕೆ  ಲೋಕಾರ್ಪಣೆ ಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಮಹಿಳೆಯರಿಂದ  ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. ಮಂಗಳೂರು ದೇವಾಲಯ

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ,  ಸಾಮೂಹಿಕ ಕುಂಕುಮಾರ್ಚನೆ Read More »

ಅಂಬುಲ ತರವಾಡು ಮನೆಯಲ್ಲಿ ನಡೆದ ನಾಗದೇವರ, ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ಪುನಃಪ್ರತಿಷ್ಠೆ ಕಾರ್ಯಕ್ರಮ

ಅಂಬುಲ ತರವಾಡು ಮನೆ ಇವರಿಂದ ನಾಗದೇವರ, ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ಪುನಃಪ್ರತಿಷ್ಠೆ ಕಾರ್ಯಕ್ರಮ ಏ, 20ರಿಂದ ಏ,23ರವರೆಗೆ ನಡೆಯಿತು. ಏ.20 ಭಾನುವಾರ ಸಂಜೆ 6 ಗಂಟೆಗೆ ನಾಗನ ಕಟ್ಟೆಯಲ್ಲಿ ಪ್ರಾಸಾದ ಪರಿಗ್ರಹ, ಪ್ರಾರ್ಥನೆ, ಸ್ಥಳಶುದ್ದಿ, ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ಬಿಂಬಾದಿ ವಾಸ ಕಾರ್ಯಕ್ರಮ ನೆರವೇರಿತು. ಏ.21 ಸೋಮವಾರ ಬೆಳಗ್ಗೆ 7 ಗಂಟೆಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಬೆಳಗ್ಗೆ 9:30ರ ಶುಭ ಮುಹೂರ್ತದಲ್ಲಿ ನಾಗಪ್ರತಿಷ್ಠೆ, ನಾಗರಕ್ತೇಶ್ವರಿ,

ಅಂಬುಲ ತರವಾಡು ಮನೆಯಲ್ಲಿ ನಡೆದ ನಾಗದೇವರ, ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ಪುನಃಪ್ರತಿಷ್ಠೆ ಕಾರ್ಯಕ್ರಮ Read More »

ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಧ್ವಜಾವರೋಹಣದೊಂದಿಗೆ ಸಂಪನ್ನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಧ್ವಜಾವರೋಹಣದೊಂದಿಗೆ ಶನಿವಾರ ಬೆಳಿಗ್ಗೆ ಸಂಪನ್ನಗೊಂಡಿತು. ಶುಕ್ರವಾರ ಸಂಜೆ ಶ್ರೀ ದೇವರು ದೂರದ ವೀರಮಂಗಲಕ್ಕೆ ಅವಭೃತ ಸವಾರಿ ನಡೆಸಿ ಶನಿವಾರ ಮುಂಜಾನೆ ತಲುಪಿ ವೀರಮಂಗಲ ಶ್ರಿ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಇರುವ ಕುಮಾರಧಾರ ನದಿಯಲ್ಲಿ ಅವಭೃತ ಸ್ನಾನ ಮುಗಿಸಿದರು. ಬಳಿಕ ಸುಮಾರು 11 ಗಂಟೆಗೆ ಶ್ರೀ ದೇವರು ದೇವಸ್ಥಾನ ತಲುಪಿ ಬಳಿಕ ಗರ್ಭಗುಡಿ ಪ್ರವೇಶಿಸಿ ಪೂಜೆ ನಡೆದ ಬಳಿಕ ಸಹಸ್ರಾರು ಭಕ್ತಾದಿಗಳ ಜಯಘೋಷಗಳೊಂದಿಗೆ ಧ್ವಜಾವರೋಹಣ ನಡೆಯಿತು. ಇಂದು

ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಧ್ವಜಾವರೋಹಣದೊಂದಿಗೆ ಸಂಪನ್ನ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅವಭೃತ ಸ್ನಾನ ಸಂಪನ್ನ | ಶ್ರೀ ದೇವರೊಂದಿಗೆ ತೆರಳಿದ ಸಹಸ್ರಾರು ಭಕ್ತಾದಿಗಳು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸವಾರಿ ಶನಿವಾರ ಮುಂಜಾನೆ ಅತ್ಯಂತ ವೈಭವದಿಂದ ಸಂಪನ್ನಗೊಂಡಿತು. ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಇರುವ ಕುಮಾರಧಾರ ನದಿಯಲ್ಲಿ ಶನಿವಾರ ಶುಕ್ರವಾರ ಮುಂಜಾನೆ ಅವಭೃತ ಸ್ನಾನ ಮುಗಿಸಿದರು. ಶುಕ್ರವಾರ ಸಂಜೆ ಶ್ರೀ ದೇವರ ಬಲಿ ಉತ್ಸವ ನಡೆದು ಬಳಿಕ ರಕ್ತೇಶ್ವರಿ ದೈವಗಳೊಂದಿಗೆ ನುಡಿಗಟ್ಟು ನಡೆದು ಬಳಿಕ ರಥಬೀದಿಯಿಂದ ಅವಭೃತ ಸವಾರಿಗೆ ಹೊರಟರು. ಶ್ರೀ ದೇವರೊಂದಿಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ತೆರಳಿದರು. ದಾರಿಯುದ್ದಕ್ಕೂ ಸುಮಾರು 54 ಕಟ್ಟೆಗಳಲ್ಲಿ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅವಭೃತ ಸ್ನಾನ ಸಂಪನ್ನ | ಶ್ರೀ ದೇವರೊಂದಿಗೆ ತೆರಳಿದ ಸಹಸ್ರಾರು ಭಕ್ತಾದಿಗಳು Read More »

ಮುರಿದು ಬಿದ್ದ ಬಪ್ಪನಾಡು ದೇವಿಯ ಬ್ರಹ್ಮರಥ

ವಾರ್ಷಿಕ ಜಾತ್ರೆ ವೇಳೆ ಸಂಭವಿಸಿದ ದುರ್ಘಟನೆ ಮಂಗಳೂರು: ಕರಾವಳಿಯ ಇತಿಹಾಸ ಪ್ರಸಿದ್ಧ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ವಾರ್ಷಿಕ ಉತ್ಸವದ ವೇಳೆ ರಥ ಮುರಿದು ಬಿದ್ದ ದುರ್ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ವರ್ಷಾವಧಿ ಜಾತ್ರೆಯ ವೇಳೆ ಬ್ರಹ್ಮರಥೋತ್ಸವ ನಡೆಯುತ್ತಿರುವಾಗ ರಥದ ಮೇಲ್ಭಾಗ ಮುರಿದು ಬಿದ್ದಿದೆ. ರಾತ್ರಿ ಸುಮಾರು 2 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಕ್ಷೇತ್ರದಲ್ಲಿ ಸಾಕಷ್ಟು ಭಕ್ತರು ಇದ್ದರು. ಅರ್ಚಕರು ರಥದಲ್ಲೇ ಇದ್ದರು. ಆದರೆ ಯಾರಿಗೂ ಯಾವುದೇ ಹಾನಿ ಸಂಭವಿಸಿಲ್ಲ.

ಮುರಿದು ಬಿದ್ದ ಬಪ್ಪನಾಡು ದೇವಿಯ ಬ್ರಹ್ಮರಥ Read More »

error: Content is protected !!
Scroll to Top