ಧಾರ್ಮಿಕ

ಇಂದಿನಿಂದ ಪುತ್ತೂರು ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಭಕ್ತರ ಜಯಘೋಷದೊಂದಿಗೆ ನೆರವೇರಿದ ಧ್ವಜಾರೋಹಣ | ಸಾವಿರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆ

ಪುತ್ತೂರು: ಏ.10 ರಿಂದ 20 ರ ತನಕ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ ಗುರುವಾರ ಬೆಳಿಗ್ಗೆ ಸಾವಿರಾರು ಭಕ್ತಾದಿಗಳ ಜಯಘೋಷದೊಂದಿಗೆ ನಡೆಯಿತು. ಬೆಳಿಗ್ಗೆ ಶ್ರೀ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ವಿ.ಎಸ್. ಭಟ್ ಅವರು ವೈದಿಕ ವಿಧಾನಗಳನ್ನು ನೆರವೇರಿಸಿದರು. ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು. ಬಳಿಕ ಭಕ್ತಾದಿಗಳ ಜಯಘೋಷದೊಂದಿಗೆ ಧ್ವಜಾರೋಹಣ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ […]

ಇಂದಿನಿಂದ ಪುತ್ತೂರು ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಭಕ್ತರ ಜಯಘೋಷದೊಂದಿಗೆ ನೆರವೇರಿದ ಧ್ವಜಾರೋಹಣ | ಸಾವಿರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆ Read More »

ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಪ್ರಿವೆಡ್ಡಿಂಗ್‌ ಫೋಟೊಶೂಟ್‌ ನಿಷೇಧ

ಧಾರ್ಮಿಕ ವಾತಾವರಣಕ್ಕೆ ಅಪಚಾರವಾಗುತ್ತಿರುವ ಹಿನ್ನೆಲೆಯಲ್ಲಿ ಪರ್ಯಾಯ ಪುತ್ತಿಗೆ ಮಠ ನಿರ್ಧಾರ ಉಡುಪಿ : ಈಗ ಪ್ರಿವೆಡ್ಡಿಂಗ್‌ ಫೋಟೊಶೂಟ್‌ ಬಹಳ ಜನಪ್ರಿಯವಾಗಿದೆ. ಮದುವೆಗೆ ಮುಂಚಿತವಾಗಿ ಬೇರೆ ಬೇರೆ ತಾಣಗಳಿಗೆ ಹೋಗಿ ಭಾವಿ ಪತಿ-ಪತ್ನಿಯರು ನಾನಾ ಭಂಗಿಗಳಲ್ಲಿ ಫೊಟೊ ತೆಗೆಸಿಕೊಂಡು, ವೀಡಿಯೊ ಮಾಡಿಕೊಂಡು ಸಂಭ್ರಮಿಸುವುದು ಸಾಮಾನ್ಯವಾಗುತ್ತಿದೆ. ಇದಕ್ಕಾಗಿ ಲಕ್ಷಗಟ್ಟಲೆ ಖರ್ಚು ಮಾಡುವವರು ಇದ್ದಾರೆ. ಹಾಗೆಯೇ ಫೋಟೊಶೂಟ್‌ ಮಾಡಿಸಿಕೊಳ್ಳಲು ಬೇರೆ ಬೇರೆ ತಾಣಗಳನ್ನು ಹುಡುಕಾಡಿಕೊಂಡು ಹೋಗುತ್ತಾರೆ. ಈಗ ಪವಿತ್ರ ಧಾರ್ಮಿಕ ಸ್ಥಳವಾಗಿರುವ ಉಡುಪಿಯ ಕೃಷ್ಣ ಮಠದ ಪರಿಸರವೂ ಇಂಥ ತಾಣವಾಗುತ್ತಿರುವುದು ಇಲ್ಲಿನ

ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಪ್ರಿವೆಡ್ಡಿಂಗ್‌ ಫೋಟೊಶೂಟ್‌ ನಿಷೇಧ Read More »

ಏ. 22-23 : ಶ್ರೀ ಅಶ್ವತ್ಥ ಉಪನಯನ ವಿವಾಹ ಸಮಿತಿ ಕಾಣಿಯೂರು ವತಿಯಿಂದ ಅಶ್ವತ್ಥ ಉಪನಯನ ಹಾಗೂ ವಿವಾಹ ಸಮಾರಂಭ

ಕಾಣಿಯೂರು : ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಉಡುಪಿ ಕಾಣಿಯೂರು ಮಠ ಇವರ ಆಶೀರ್ವಾದದೊಂದಿಗೆ ಏ.22 ಮಂಗಳವಾರದಿಂದ ಏ.23 ಬುಧವಾರದವರೆಗೆ ಬೆಳಗ್ಗೆ ವೃಷಭ ಲಗ್ನದಲ್ಲಿ ಅಶ್ವತ್ಥ ಉಪನಯನ ಹಾಗೂ ವಿವಾಹ ಸಮಾರಂಭ ನಡೆಯಲಿದೆ. ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಉಪಾಧ್ಯಾಯ ರವರ ಮಾರ್ಗದರ್ಶನದಲ್ಲಿ ಅಶ್ವತ್ಥ ಉಪನಯನ ಹಾಗೂ ವಿವಾಹ ಸಮಾರಂಭ ನೆರವೇರಲಿದೆ. ಈ ಸಮಾರಂಭಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಆಡಳಿತ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ. 22-23 : ಶ್ರೀ ಅಶ್ವತ್ಥ ಉಪನಯನ ವಿವಾಹ ಸಮಿತಿ ಕಾಣಿಯೂರು ವತಿಯಿಂದ ಅಶ್ವತ್ಥ ಉಪನಯನ ಹಾಗೂ ವಿವಾಹ ಸಮಾರಂಭ Read More »

ಜಾತ್ರೆಯೊಳಗೊಂದು ಜಾತ್ರೆ ಯೋಜನೆಯಡಿ ಮಹಾಲಿಂಗೇಶ್ವರ ಸಭಾಭವನದಲ್ಲಿ ಅಂಗಡಿ ಮಳಿಗೆಗಳಿಗೆ ಅವಕಾಶ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ಪ್ರಪ್ರಥಮ ಬಾರಿಗೆ ಪುತ್ತೂರು ಜಾತ್ರೋತ್ಸವದ ಅಂಗವಾಗಿ ಜಾತ್ರೆಯೊಳಗೊಂದು ಜಾತ್ರೆ ಯೋಜನೆಯಡಿ ಅಂಗಡಿ ಮಳಿಗೆಗಳಿಗೆ ಅವಕಾಶವನ್ನು ನೀಡಿದೆ. ಪುತ್ತೂರು ಮಹಾಲಿಂಗೇಶ್ವರ ದೇವಳದ ಸಭಾಭವನದ ಮೊದಲ ಮಹಡಿಯಲ್ಲಿ ಎಪ್ರಿಲ್ 10 ರಿಂದ 20ರವರೆಗೆ ಸ್ಪಾಲ್ ಮಳಿಗೆಗಳಿಗೆ ಅವಕಾಶ ನೀಡಲಾಗಿದೆ. ಒಟ್ಟು 25 ಮಳಿಗೆಗಳಿಗೆ ಅವಕಾಶವಿದ್ದು, ಸದ್ಯ ಕೆಲವೇ ಕೆಲವು ಸ್ಪಾಲ್ಗಳು ಲಭ್ಯವಿದೆ. ಅಸಕ್ತರು ಈ ಕೆಳಗಿನ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ರೋ. ಕುಸುಮ್ ರಾಜ್ 9945170216 ರೋ. ಸುಹಾಸ್‍ 9480535708, ರೋ. ಸಾಯಿರಾಂ

ಜಾತ್ರೆಯೊಳಗೊಂದು ಜಾತ್ರೆ ಯೋಜನೆಯಡಿ ಮಹಾಲಿಂಗೇಶ್ವರ ಸಭಾಭವನದಲ್ಲಿ ಅಂಗಡಿ ಮಳಿಗೆಗಳಿಗೆ ಅವಕಾಶ Read More »

ಏ.1 ರಿಂದ 6 : ಚಾರ್ವಾಕ-ಕಂಡಿಗದ ದೊಡ್ಡಮನೆ ಕಂಡಿಗ ತರವಾಡು ಮನೆ ಟ್ರಸ್ಟ್ ನ ಧರ್ಮದೈವ ಶ್ರೀ ರುದ್ರಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶ ಮತ್ತು ನೇಮೋತ್ಸವ

ಕಡಬ : ತಾಲೂಕಿನ ಚಾರ್ವಾಕ-ಕಂಡಿಗದ ದೊಡ್ಡಮನೆ ಕಂಡಿಗ ತರವಾಡು ಮನೆ ಟ್ರಸ್ಟ್ ನ ಧರ್ಮದೈವ ಶ್ರೀ ರುದ್ರಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶ ಮತ್ತು ನೇಮೋತ್ಸವ ಏ.1 ಮಂಗಳವಾರದಿಂದ ಆರಂಭಗೊಂಡಿದ್ದು, ಏ.6 ಭಾನುವಾರದ ತನಕ ನಡೆಯಲಿದೆ. ಏ.1 ರಂದು ಸಂಜೆ 6 ರಿಂದ ನಾಗನಕಟ್ಟೆಯಲ್ಲಿ ಪ್ರಾಸಾದ ಪರಿಗ್ರಹ, ಪ್ರಾರ್ಥನೆ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ಬಿಂಬಾದಿವಾಸ, ದಿಕ್ಪಾಲಬಲಿ ನಡೆದು ಅನ್ನಸಂತರ್ಪಣೆ ಜರಗಿತು. ಏ.2 ಬುಧವಾರ ಬೆಳಿಗ್ಗೆ 7 ರಿಂದ ಶ್ರೀ ಮಹಾಗಣಪತಿ

ಏ.1 ರಿಂದ 6 : ಚಾರ್ವಾಕ-ಕಂಡಿಗದ ದೊಡ್ಡಮನೆ ಕಂಡಿಗ ತರವಾಡು ಮನೆ ಟ್ರಸ್ಟ್ ನ ಧರ್ಮದೈವ ಶ್ರೀ ರುದ್ರಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶ ಮತ್ತು ನೇಮೋತ್ಸವ Read More »

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಭಕ್ತಿ ರಥಯಾತ್ರೆ

ಪುತ್ತೂರು : ಉಡುಪಿ ಪೇಜಾವರ ಅಧೋಕ್ಷಜ ಮಠ ಹಾಗೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಪೆರಣಂಕಿಲ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿರುವ ಭಕ್ತಿ ಸಿದ್ದಾಂತೋತ್ಸವ- ರಾಮೋತ್ಸವದ ಪ್ರಯುಕ್ತ ಏ.2 ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಭಕ್ತಿ ರಥಯಾತ್ರೆಯನ್ನು ದೇವಳದ ವ್ಯವಸ್ಥಾಪನಾ ಸಮಿತಿಯಿಂದ ಸ್ವಾಗತಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರು ಹಾಗು ವಿ.ಹಿಂ.ಪ. ಪ್ರಮುಖರು ಭಕ್ತಿ ರಥಯಾತ್ರೆಯನ್ನು ಸ್ವಾಗತಿಸಿದರು. ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯರು ಭಕ್ತಿ ರಥಕ್ಕೆ ಪೂಜೆಯನ್ನು

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಭಕ್ತಿ ರಥಯಾತ್ರೆ Read More »

ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಪ್ಪಿನಂಗಡಿ ಸಮೀಪದ‌ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ  ಏ. ‌13 ಭಾನುವಾರದಂದು ನಡೆಯಲಿರುವ ಶ್ರೀ ಮಹಾವಿಷ್ಣು ಯಾಗ ಮತ್ತು ಧಾರ್ಮಿಕ ಸಂಭೆಯ ಆಮಂತ್ರಣ ಪತ್ರಿಕೆ ಬಿಡುಗಡೆಯಾಯಿತು. ಶ್ರೀ ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯರ ಪ್ರಾರ್ಥನೆಯೊಂದಿಗೆ ಆಡಳಿತ ಟ್ರಸ್ಟ್ ಉಪಾಧ್ಯಕ್ಷ ನಾರಾಯಣ ಗೌಡರು  ಬಿಡುಗಡೆಗೊಳಿಸಿದರು . ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಪೈ  ಟ್ರಸ್ಟಿಗಳಾದ  ಮನೋಹರ ಶೆಟ್ಟಿ, ನವೀನ , ರಾಮಣ್ಣಗೌಡ  ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಯಕ್ಷ ಭಾರತಿಯಿಂದ ಮಧೂರಿನಲ್ಲಿ  ದೇವದರ್ಶನ ತಾಳಮದ್ದಳೆ

ಮಧೂರು : ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನ ಮಧೂರು ಅಷ್ಟ ಬಂಧ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವಾಗಿ  ಯಕ್ಷ ಭಾರತಿ ರಿ. ಬೆಳ್ತಂಗಡಿ ತಂಡದಿಂದ ಮದವೂರ ವಿಘ್ನೇಶ  ವೇದಿಕೆಯಲ್ಲಿ ದೇವ ದರ್ಶನ ತಾಳಮದ್ದಳೆ ಜರಗಿತು.  ಭಾಗವತರಾಗಿ ನಾರಾಯಣ ಶರ್ಮ ಕಾಟುಕುಕ್ಕೆ,ಹಿಮ್ಮೇಳದಲ್ಲಿ ಲಕ್ಷ್ಮೀಶ ಬೆಂಗರೋಡಿ, ರಾಜೇಂದ್ರ ಪ್ರಸಾದ್  ಪುಂಡಿಕಾಯಿ, ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ , ಅರ್ಥದಾರಿಗಳಾಗಿ ವಾಸುದೇವ ರಂಗಾಭಟ್ ಮಧೂರು (ಬಲರಾಮ ), ಗುರುರಾಜ ಹೊಳ್ಳ ಬಾಯಾರು (ನಾರದ ),  ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀ ಕೃಷ್ಣ ),

ಯಕ್ಷ ಭಾರತಿಯಿಂದ ಮಧೂರಿನಲ್ಲಿ  ದೇವದರ್ಶನ ತಾಳಮದ್ದಳೆ Read More »

ಏ.10-20 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಜಾತ್ರೋತ್ಸವಕ್ಕೆ ನಡೆಯಿತು ಗೊನೆ ಮುಹೂರ್ತ

ಪುತ್ತೂರು : ಏ.10 ರಿಂದ 20 ರ ತನಕ ವೈಭವದಿಂದ ನಡೆಯಲಿರುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಮಂಗಳವಾರ ಬೆಳಿಗ್ಗೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯರು ಗರ್ಭಗುಡಿಯಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ವಾದ್ಯದೊಂದಿಗೆ ಸ್ಥಳೀಯ ತೋಟವೊಂದರಲ್ಲಿ ವೆ.ಮೂರ್ತಿ ವಿ.ಎಸ್.ಭಟ್ ಗೊನೆ ಕಡಿಯುವ ಮೂಲಕ ಗೊನೆಮುಹೂರ್ತಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಶಾಸಕ ಅಶೋಕ್ ಕುಮಾರ್ ರೈ,

ಏ.10-20 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಜಾತ್ರೋತ್ಸವಕ್ಕೆ ನಡೆಯಿತು ಗೊನೆ ಮುಹೂರ್ತ Read More »

ಬಾರ್ಯ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆಯ ಅಧ್ಯಕ್ಷರಾದ ಭಾಸ್ಕರ ಬಾರ್ಯ ನೇತ್ರತ್ವದಲ್ಲಿ ದೇವಳದ ಪ್ರಾಂಗಣದಲ್ಲಿ ನಡೆಯಿತು.  2025 ಫೆಬ್ರವರಿಯಲ್ಲಿ ಜರಗಿದ ಜಾತ್ರೆಯ ಆಯವ್ಯಯವನ್ನು  ಮಂಡಿಸಲಾಯಿತು. ಏಪ್ರಿಲ್ 13 ರಂದು ಲೋಕಕಲ್ಯಾಣಕ್ಕಾಗಿ  ದೇವಾಲಯದಲ್ಲಿ ಶ್ರೀ ವಿಷ್ಣು ಸಹಸ್ರನಾಮ ಹೋಮ ಮತ್ತು ಧಾರ್ಮಿಕ ಸಭೆ ನಡೆಸುವುದೆಂದು ನಿರ್ಧರಿಸಲಾಯಿತು. ದೇವಳ ಆಡಳಿತ ಟ್ರಸ್ಟ್  ಕಾರ್ಯದರ್ಶಿ ಪ್ರಶಾಂತ್ ಪೈ , ಉಪಾಧ್ಯಕ್ಷ ನಾರಾಯಣ ಗೌಡ ಮೂರುಗೋಳಿ , ಕೋಶಾಧಿಕಾರಿ ಸೇಸಪ್ಪ ಸಾಲಿಯಾನ್ , ಪವಿತ್ರಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ

ಬಾರ್ಯ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ Read More »

error: Content is protected !!
Scroll to Top