ಧಾರ್ಮಿಕ

ಎ. 9 – 12: ಹನುಮಗಿರಿಯಲ್ಲಿ ನಡೆಯಲಿದೆ ಅದ್ಧೂರಿ ಬ್ರಹ್ಮಕಲಶ

ಪುತ್ತೂರು: ಈಶ್ವರಮಂಗಲದ ಹನುಮಗಿರಿಯಲ್ಲಿರುವ ತೋದಂಡರಾಮ, ಪಂಚಮುಖಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಎ. 9-12 ರ ವರೆಗೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳು ಅಂತಿಮ ಘಟ್ಟಕ್ಕೆ ತಲುಪಿರುವುದಾಗಿ ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು ಎ. 10 ರಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಮಿಸಲಿದ್ದಾರೆ. ನೂತನ ಗೋಪುರ ಅವರಿಂದ ಲೋಕಾರ್ಪಣೆಯಾಗಲಿದೆ ಎಂದು ಹೇಳಿದ್ದಾರೆ. ಆಯೋಧ್ಯೆಯಿಂದ ತಂದ […]

ಎ. 9 – 12: ಹನುಮಗಿರಿಯಲ್ಲಿ ನಡೆಯಲಿದೆ ಅದ್ಧೂರಿ ಬ್ರಹ್ಮಕಲಶ Read More »

ಪುತ್ತೂರು ಜಾತ್ರೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸಲು ಸರ್ಕಾರದ ಎಂಟು ಇಲಾಖೆಗಳಿಗೆ ಪತ್ರ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರತಿಭಟನೆ, ಅಹಿತಕರ ಘಟನೆಗಳು ಸಂಭವಿಸದ ಹಾಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆರ್. ಕೆ. ಪಾಂಗಣ್ಣಾಯ ಅವರು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಎಂಟು ಇಲಾಖೆಗಳಿಗೆ ಮನವಿ ಸಲ್ಲಿಸಿದ್ದಾರೆ. ಪುತ್ತೂರಿನ ಪಿ. ಜಿ. ಜಗನ್ನಿವಾಸ ರಾವ್ ಅವರ ಪುತ್ರ ಯುವತಿಯೊಬ್ಬಳಿಗೆ ಮದುವೆಯಾಗುವ ಭರವಸೆ ನೀಡಿ ಮಗು ಕರುಣಿಸಿ ಕೈಕೊಟ್ಟ ಘಟನೆಗೆ ಸಂಬಂಧಿಸಿದ ಹಾಗೆ ಸಂತ್ರಸ್ತ ಯುವತಿಯ ತಾಯಿ ಜಾತ್ರೆಯ ಧ್ವಜಾರೋಹಣದ ದಿನ ಧ್ವಜ

ಪುತ್ತೂರು ಜಾತ್ರೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸಲು ಸರ್ಕಾರದ ಎಂಟು ಇಲಾಖೆಗಳಿಗೆ ಪತ್ರ Read More »

ಶಬರಿಮಲೆ ವಿವಾದ : 9 ನ್ಯಾಯಾಧೀಶರ ಸಂವಿಧಾನದ ಪೀಠದಲ್ಲಿ ವಿಚಾರಣೆ ಆರಂಭ

ಮಹಿಳೆಯರಿಗೆ ದೇವಳ ಪ್ರವೇಶ ನೀಡುವ ವಿಚಾರವಾಗಿ ವಾದ-ಪ್ರತಿವಾದ ಮಂಡನೆ ನವದೆಹಲಿ: ಕೇರಳಂನ ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನೀಡಿದ ತೀರ್ಪಿನ ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆರಂಭಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ 9 ನ್ಯಾಯಾಧೀಶರ ಸಂವಿಧಾನ ಪೀಠ ವಿಚಾರಣೆಯಲ್ಲಿ ಪೀಠವು 7 ಪ್ರಶ್ನೆಗಳನ್ನು ಎತ್ತಿದೆ. ಪ್ರಕರಣದಲ್ಲಿ ವಾದ ಮಂಡಿಸುವ ವಕೀಲರು ನಿಗದಿತ ಗಡುವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇನ್ನೂ ಅನೇಕ ಸೂಕ್ಷ್ಮ ಪ್ರಕರಣಗಳು ಬಾಕಿ ಉಳಿದಿವೆ. ಆದ್ದರಿಂದ ಹೆಚ್ಚುವರಿ ಸಮಯ ನೀಡಲಾಗುವುದಿಲ್ಲ.

ಶಬರಿಮಲೆ ವಿವಾದ : 9 ನ್ಯಾಯಾಧೀಶರ ಸಂವಿಧಾನದ ಪೀಠದಲ್ಲಿ ವಿಚಾರಣೆ ಆರಂಭ Read More »

ಇಚ್ಚೂರು ದೇವಸ್ಥಾನದಲ್ಲಿ ಶ್ರೀ ಮಹಾಭಾರತ ಸರಣಿಯ ತಾಳಮದ್ದಳೆ

ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಇಚ್ಚೂರು ಉರುವಾಲು ಇಲ್ಲಿನ ವಾರ್ಷಿಕ ಜಾತ್ರೆಯ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸುವರ್ಣ ವರ್ಷದ ನಿಮಿತ್ತ ಶ್ರೀ ಮಹಾಭಾರತ ಸರಣಿಯ 109 ಮತ್ತು 110ನೇ ತಾಳಮದ್ದಳೆ ಜರಗಿತು. ಕವಿ ಗೆರೆಸೊಪ್ಪೆ ಶಾಂತಪ್ಪಯ್ಯ ವಿರಚಿತ ರುದ್ರ ಭೀಮ ಪ್ರಸಂಗದಲ್ಲಿ ಭಾಗವತರಾಗಿ ಮಹೇಶ್ ಕನ್ಯಾಡಿ, ಹಿಮ್ಮೇಳದಲ್ಲಿ ಲಕ್ಷ್ಮೀಶ ಅಮ್ಮಣ್ಣಾಯ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಅರ್ಥಧಾರಿಗಳಾಗಿ ಗಣರಾಜ ಕುಂಬ್ಳೆ(ಭೀಮಸೇನ)ಜಯರಾಮ ಬಲ್ಯ (ದುಶ್ಯಾಸನ)ಜಿನೇಂದ್ರ ಜೈನ್ (ದ್ರೌಪದಿ)ದಿವಾಕರ ಆಚಾರ್ಯ ಗೇರುಕಟ್ಟೆ(ಶ್ರೀಕೃಷ್ಣ),ಶ್ರೀಧರ ಎಸ್ಪಿ ಕೃಷ್ಣಾಪುರ (ಅರ್ಜುನ) ಕಿರಿಯ

ಇಚ್ಚೂರು ದೇವಸ್ಥಾನದಲ್ಲಿ ಶ್ರೀ ಮಹಾಭಾರತ ಸರಣಿಯ ತಾಳಮದ್ದಳೆ Read More »

ಯಕ್ಷಗಾನ ಕಲಾರಂಗದ  92ನೇ  ಮನೆ  ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ  ಕುಸುಮಾ ಮತ್ತು ಶ್ರೀ ಕೃಷ್ಣ ಇವರ ಪುತ್ರಿ ಯಜ್ಞ ಇವಳಿಗೆ  ಉದ್ಯಾವರದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಮತ್ತು ನಂದಕುಮಾರ್ ಎಸೋಸಿಯೇಟ್ಸ್ ನ ವರಿಷ್ಠರಾದ  ಎಂ. ಗಂಗಾಧರ ರಾವ್  ಪ್ರಾಯೋಜಕತ್ವದಲ್ಲಿ  ನಿರ್ಮಿಸಿದ ನೂತನ ಮನೆ ‘ನಂದಾದೀಪ’ವನ್ನು ಸೋದೆ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.  ಸ್ವಾಮೀಜಿಯವರು ಅನುಗ್ರಹ ಸಂದೇಶದಲ್ಲಿ ಎಂ.ಗಂಗಾಧರ ರಾವ್ ಅವರುತಮ್ಮ ದುಡಿಮೆಯ ಒಂದು ಪಾಲನ್ನು ಸಮಾಜಕ್ಕೆ ಅರ್ಪಿಸಿ ಸಂತೋಷವನ್ನು ಹೊಂದುವ ವಿರಳರಲ್ಲಿ ಒಬ್ಬರು. 

ಯಕ್ಷಗಾನ ಕಲಾರಂಗದ  92ನೇ  ಮನೆ  ಹಸ್ತಾಂತರ Read More »

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀರಾಮನವಮಿ ಆಚರಣೆ

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ರಿ. ಕರ್ನಾಟಕ, ಕೇಂದ್ರ ಕಚೇರಿ ತುಮಕೂರು, ಮಂಗಳೂರು ವಿಭಾಗ ಪುತ್ತೂರು ತಾಲೂಕು ಕಳಿಯ ಶಾಖೆಯಲ್ಲಿ ಶ್ರೀರಾಮ ರಾಮನವಮಿ ಆಚರಣೆ ಮಾಡಲಾಯಿತು. ಗೇರುಕಟ್ಟೆ ಕ್ಷೀರ ಸಂಗಮ ಸಭಾಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಶ್ರೀರಾಮ ಭಜನೆ, ಸ್ತೋತ್ರ ಪಾರಾಯಣವನ್ನು ಯೋಗ ಬಂಧುಗಳು ನಡೆಸಿಕೊಟ್ಟರು. ಭಾರತಿ ಎಂ. ಎಲ್., ಅರುಣಾ, ಪದ್ಮಲತಾ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಹಿರಿಯ ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ, ಶ್ರೀ ರಾಮಚಂದ್ರನ ಆದರ್ಶಗುಣಗಳ ಬಗ್ಗೆ ಬೌದ್ಧಿಕ ನೀಡಿ ಮರ್ಯಾದ

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀರಾಮನವಮಿ ಆಚರಣೆ Read More »

ಮಾ.25-28:ನೈತಾಡಿ ಬಂಗೇರ ಕುಟುಂಬದ ಸಾವಿರದ ಒಂದು ದೈವಗಳ ತರವಾಡು ಮನೆಯಲ್ಲಿ ನೇಮೋತ್ಸವ

ಪುತ್ತೂರು: ಸುಮಾರು 56 ವರ್ಷಗಳ ಇತಿಹಾಸವಿರುವ ಕೆಮ್ಮಿಂಜೆ ಗ್ರಾಮದ ನೈತಾಡಿ ಬಂಗೇರ ಕುಟುಂಬಸ್ಥರ ಸಾವಿರದ ಒಂದು ದೈವಗಳ ತರವಾಡು ಮನೆಯಲ್ಲಿ ದೈವಗಳ‌ ನೇಮೋತ್ಸವ ಕಾರ್ಯಕ್ರಮ ಮಾ.25 ರಿಂದ 28ರ ವರೆಗೆ ಜರಗಲಿದೆ. ಮಾ. 25 ರಂದು ಬೆಳಿಗ್ಗೆ ಗಣಹೋಮ, ನಾಗತಂಬಿಲ, ಮುಡಿಪು ಶುದ್ಧ, ಉಳ್ಳಾಕುಲು ದೈವದ ಭಂಡಾರ ತೆಗೆಯುವುದು, ಜಾಗದ ಕಲ್ಲುರ್ಟಿ ನೇಮ, ಮಾ. 26 ರಂದು ಬೆಳಿಗ್ಗೆ ಉಳ್ಳಾಕುಲು ದೈವದ ನೇಮೋತ್ಸವ, ಮಧ್ಯಾಹ್ನ ಅನ್ನಪ್ರಸಾದ, ಸಂಜೆ ರಕ್ತೇಶ್ವರಿ, ಪಿಲಿಚಾಮುಂಡಿ ಧರ್ಮದೈವ ವರ್ಣರ ಪಂಜುರ್ಲಿ, ಜಾವತೆ ದೈವಗಳ

ಮಾ.25-28:ನೈತಾಡಿ ಬಂಗೇರ ಕುಟುಂಬದ ಸಾವಿರದ ಒಂದು ದೈವಗಳ ತರವಾಡು ಮನೆಯಲ್ಲಿ ನೇಮೋತ್ಸವ Read More »

ಕರಾವಳಿಯಲ್ಲಿ ಇಂದು ಈದ್‌ ಹಬ್ಬ ಆಚರಣೆ : ಜಿಲ್ಲಾಧಿಕಾರಿಗಳಿಂದ ರಜೆ ಘೋಷಣೆ

ಗುರುವಾರ ರಾತ್ರಿ ಶವ್ವಾಲ್ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಹಬ್ಬ ಮಂಗಳೂರು : ಗುರುವಾರ ಸಂಜೆ ಶವ್ವಾಲ್ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಮಾರ್ಚ್ 20ರ ಶುಕ್ರವಾರದಂದು ಈದ್-ಉಲ್-ಫಿತರ್ ಹಬ್ಬವನ್ನು ಆಚರಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಆಗಿರುವ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಚಂದ್ರ ದರ್ಶನವಾಗಿರುವುದಾಗಿ ತಿಳಿಸಿದ್ದು, ಶುಕ್ರವಾರ ಹಬ್ಬವನ್ನು ಆಚರಿಸುವಂತೆ ಸಮುದಾಯಕ್ಕೆ ಕರೆ ನೀಡಿದ್ದಾರೆ ಎಂದು ಮಸೀದಿ ಝೀನತ್ ಭಕ್ಷ್ ಇದರ ಕೋಶಾಧಿಕಾರಿ ಹಾಜಿ ಎಸ್.

ಕರಾವಳಿಯಲ್ಲಿ ಇಂದು ಈದ್‌ ಹಬ್ಬ ಆಚರಣೆ : ಜಿಲ್ಲಾಧಿಕಾರಿಗಳಿಂದ ರಜೆ ಘೋಷಣೆ Read More »

ಯುಗಾದಿಗೆ ‌ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ನಮೋ

ನವದೆಹಲಿ: ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೂ ಶುಭಾಶಯಗಳನ್ನು ತಿಳಿಸುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ. ಹೊಸ ವರ್ಷ, ವಸಂತ ಋತುವಿನ ಆಗಮನ ಪ್ರತಿಯೊಬ್ಬರ ಬದುಕಿನಲ್ಲಿಯೂ ಹೊಸ ಉತ್ಸಾಹ ಮತ್ತು ಅವಕಾಶಗಳನ್ನು ತರಲಿ ‌ಎಂದು ಹಾರೈಸಿದ್ದಾರೆ. ಪ್ರಕೃತಿಯಲ್ಲಿನ ಹಸಿರು, ಹೂವುಗಳ ಸುವಾಸನೆ, ಹಣ್ಣುಗಳ ಆಗಮನ ಹೊಸ ಶಕ್ತಿಯ ಸಂಕೇತ. ರೈತಾಪಿ ವರ್ಗ ಈ ಸಂದರ್ಭದಲ್ಲಿ ಹೊಸ ಕೃಷಿ ಚಟುವಟಿಕೆಗಳಿಗೆ ತೊಡಗಲು ಸಿದ್ಧತೆ ನಡೆಸುತ್ತಿರುವ ಬಗೆಗೂ ಆವರು ಹರ್ಷ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಬದುಕಿನ ಸಿಹಿ –

ಯುಗಾದಿಗೆ ‌ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ನಮೋ Read More »

ಶಬರಿಮಲೆ ದೇವಳಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ : ಟಿಡಿಬಿ ನಿರ್ಣಯ

ದೇವಾಲಯದ ಸಂಪ್ರದಾಯ, ಭಕ್ತರ ನಂಬಿಕೆ ಎತ್ತಿ ಹಿಡಿಯಲು ಆದ್ಯತೆ ತಿರುವಂತಪುರ: ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಿಸಲು ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂಬ ಮಹತ್ವದ ತೀರ್ಮಾನವನ್ನು ತಿರುವಾಂಕೂರು ದೇವಸ್ವಂ ಮಂಡಳಿ ತೆಗೆದುಕೊಂಡಿದೆ. ಋತುಮತಿಯರಾಗುವ ವಯಸ್ಸಿನ ಮಹಿಳೆಯರ ದೇವಾಲಯ ಪ್ರವೇಶ, ಪೂಜೆ ಸಲ್ಲಿಕೆಗೆ ಅವಕಾಶ ಕೊಟ್ಟಿರುವ ಸುಪ್ರೀಂ ಕೋರ್ಟ್‌ 2018ರ ತೀರ್ಪನ್ನು ವಿರೋಧಿಸಿ ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ದೇವಸ್ವಂ ಬೋರ್ಡ್‌ ಅಧ್ಯಕ್ಷ ಕೆ.ಜಯಕುಮಾರ್ ತಿಳಿಸಿದ್ದಾರೆ. ಟಿಡಿಬಿಯು ಶಬರಿಮಲೆ ಪದ್ಧತಿ, ಸಂಪ್ರದಾಯ ಹಾಗೂ ನಂಬಿಕೆಗಳನ್ನು ಕಾಪಾಡಲು ಒತ್ತು ಕೊಡುತ್ತದೆ.

ಶಬರಿಮಲೆ ದೇವಳಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ : ಟಿಡಿಬಿ ನಿರ್ಣಯ Read More »

error: Content is protected !!
Scroll to Top