ಧಾರ್ಮಿಕ

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷರಾಗಿ ವೇದ ಲಕ್ಷ್ಮೀಕಾಂತ್, ಸಂಚಾಲಕರಾಗಿ ಅರುಣ್ ಕುಮಾರ್ ರೈ ಆನಾಜೆ, ಕಾರ್ಯದರ್ಶಿಯಾಗಿ ಗಣೇಶ್ ಕಾಮತ್ ಮತ್ತು ಕೋಶಾಧಿಕಾರಿಯಾಗಿ ಕೇಶವ್ ಪ್ರಸಾದ್ ಬಿ.ವಿ. ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಸುಹಾಸ್ ಮರಿಕೆ, ಡಾ.ಅನನ್ಯ ಲಕ್ಷ್ಮಿ,ಶೇಖರ ಬ್ರಹ್ಮನಗರ, […]

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ Read More »

ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆ : ಪ್ರಧಾನಿ ಮೋದಿ ನಮನ

ನವದೆಹಲಿ: ಕೇಸರಿ ಸಂತ ಸ್ವಾಮಿ ವಿವೇಕಾನಂದ ಅವರ 123 ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನಗಳನ್ನು ‌ಸಲ್ಲಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಸ್ವಾಮಿ ವಿವೇಕಾನಂದರ ಪುಣ್ಯತಿಥಿಯಂದು ಅವರಿಗೆ ನಾನು ನಮನಗಳನ್ನು ‌ಸಲ್ಲಿಸುತ್ತಿದ್ದೇನೆ. ಈ ಸಮಾಜಕ್ಕಾಗಿ ಅವರ ಆಲೋಚನೆಗಳು, ದೃಷ್ಟಿಕೋನಗಳು ನಮಗೆ ಮಾರ್ಗದರ್ಶಕವಾಗಿ ಉಳಿದಿವೆ. ಅವರು ನಮ್ಮ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ವಿಶ್ವಾಸವನ್ನು ಹುಟ್ಟುಹಾಕಿದವರು. ಸೇವೆ ಮತ್ತು ಕರುಣೆಯ ಹಾದಿಯಲ್ಲಿ ಹೆಜ್ಜೆ

ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆ : ಪ್ರಧಾನಿ ಮೋದಿ ನಮನ Read More »

ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಬೇಕು, ಮೊಬೈಲ್ ಬಳಕೆ ನಿಷೇಧಿಸಬೇಕು: ಯುದುವೀರ್

ಧಾರ್ಮಿಕ ಕ್ಷೇತ್ರಗಳಿಗೆ ಧಾರ್ಮಿಕ ಭಾವನೆಯಿಂದಲೇ ಭೇಟಿ ನೀಡಬೇಕು ಮೈಸೂರು: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೂ ವಸ್ತ್ರ ಸಂಹಿತೆ ಜಾರಿಯಾಗಬೇಕು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯ ಪಟ್ಟಿದ್ದಾರೆ. ಈ ಸಂಬಂಧ ಮಾಧ್ಯಮಗಳ‌ ಜೊತೆಗೆ ಮಾತನಾಡಿದ ಅವರು, ಜನರು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದಾಗ ಅವರ ಮನಸ್ಸು ಸಹ ಧಾರ್ಮಿಕ ಭಾವನೆಯಿಂದಲೇ ಇರುವಂತಾಗಬೇಕು ಎಂದು ಅವರು ಹೇಳಿದ್ದಾರೆ. ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿರ್ಬಂಧಿಸಬೇಕು. ಈ ಕ್ರಮ ತಿರುಪತಿಯಲ್ಲಿ ಈಗಾಗಲೇ ಇದೆ. ಇದನ್ನು ಚಾಮುಂಡಿ ಬೆಟ್ಟದಲ್ಲೂ ಅಳವಡಿಸಬೇಕು.

ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಬೇಕು, ಮೊಬೈಲ್ ಬಳಕೆ ನಿಷೇಧಿಸಬೇಕು: ಯುದುವೀರ್ Read More »

ಎಣ್ಮೂರು ಶ್ರೀ ಸೀತಾರಾಮಾಂಜನೇಯ ಭಜನಾ ಮಂದಿರದ ವಾರ್ಷಿಕ ಹಬ್ಬ ಆಚರಣಾ ಸಮಿತಿ ರಚನೆ | ಅಧ್ಯಕ್ಷರಾಗಿ ನಾಗೇಶ್‍ ಆಳ್ವ, ಕಾರ್ಯದರ್ಶಿಯಾಗಿ ಸಚಿನ್ ಆರೆಂಬಿ ಆಯ್ಕೆ

ಎಣ್ಮೂರು: ಎಣ್ಮೂರು ಶ್ರೀ ಸೀತಾರಾಮಾಂಜನೇಯ ಭಜನಾ ಮಂದಿರದ ವಾರ್ಷಿಕ ಹಬ್ಬ ಆಚರಣಾ ಸಮಿತಿಯನ್ನು ಬುಧವಾರ ರಚಿಸಲಾಯಿತು. ಸಮಿತಿ ಅಧ್ಯಕ್ಷರಾಗಿ ನಾಗೇಶ್‍ ಆಳ್ವ, ಕಾರ್ಯದರ್ಶಿಯಾಗಿ ಸಚಿನ್‍ ಆರೆಂಬಿ ಆಯ್ಕೆಯಾದರು. ಉಳಿದಂತೆ ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಭಜನಾ ಮಂದಿರ, ಆಚರಣಾ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

ಎಣ್ಮೂರು ಶ್ರೀ ಸೀತಾರಾಮಾಂಜನೇಯ ಭಜನಾ ಮಂದಿರದ ವಾರ್ಷಿಕ ಹಬ್ಬ ಆಚರಣಾ ಸಮಿತಿ ರಚನೆ | ಅಧ್ಯಕ್ಷರಾಗಿ ನಾಗೇಶ್‍ ಆಳ್ವ, ಕಾರ್ಯದರ್ಶಿಯಾಗಿ ಸಚಿನ್ ಆರೆಂಬಿ ಆಯ್ಕೆ Read More »

ಅಮರನಾಥ ಯಾತ್ರಿಕರಿಗೆ ಭದ್ರತೆ ಒದಗಿಸಲು ಸೂಕ್ತ ಕ್ರಮ

ಶ್ರೀನಗರ: ಅಮರನಾಥ ಯಾತ್ರೆ ಜುಲೈ 3 ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಪೊಲೀಸ್ ಬಿಗಿ ಭದ್ರತೆ ಆಯೋಜಿಸಲಾಗಿದ್ದು, ತಪಾಸಣೆಗಾಗಿ ಚೆಕ್ ಪೋಸ್ಟ್ ‌ಗಳನ್ನು ನಿರ್ಮಾಣ ಮಾಡಲಾಗಿದೆ. ಕೆಲ ಸಮಯದ ಹಿಂದೆ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಪಹಲ್ಗಾಮ್‌ನಲ್ಲಿ ನಡೆದಿದ್ದ ಉಗ್ರ ದಾಳಿಯ ಬಳಿಕ ಅಮರಾನಾಥ ಯಾತ್ರಿಕರ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ತೆಗೆದುಕೊಂಡಿರುವುದಾಗಿದೆ. ಭಕ್ತರಿಗೆ ಸುಗಮ ಯಾತ್ರೆಯ ಅನುಕೂಲ ಒದಗಿಸಿ ಕೊಡಲು ಅರೆಸೇನಾ ಪಡೆಗಳು ಚೆಕ್‌ಪೋಸ್ಟ್‌ಗಳನ್ನು ನಿರ್ಮಾಣ ಮಾಡಿರುವುದಾಗಿದೆ. 24*7 ರೀತಿಯಲ್ಲಿ ಯಾತ್ರಿಕರಿಗೆ ರಕ್ಷಣೆ ಒಗದಗಿಸಲು

ಅಮರನಾಥ ಯಾತ್ರಿಕರಿಗೆ ಭದ್ರತೆ ಒದಗಿಸಲು ಸೂಕ್ತ ಕ್ರಮ Read More »

ಆ.8 : ಶ್ರೀ ವರಮಹಾಲಕ್ಷ್ಮೀ ಪೂಜೆ : ಆಮಂತ್ರಣ ಬಿಡುಗಡೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಆ.8 ರಂದು ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯುವ ನಡೆಯುವ ವರ ಮಹಾಲಕ್ಷ್ಮಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಭಾನುವಾರ ಸುಭದ್ರ ಕಲ್ಯಾಣ ಮಂಟಪದಲ್ಲಿ ಸಂಜೆ ಗಣ್ಯರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಮಹೇಂದ್ರ ವರ್ಮ ,ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಮಠ, ವರ ಮಹಾಲಕ್ಷ್ಮಿ ಪೂಜೆಯ ಅಧ್ಯಕ್ಷೆ ಪ್ರೇಮ ಆರ್

ಆ.8 : ಶ್ರೀ ವರಮಹಾಲಕ್ಷ್ಮೀ ಪೂಜೆ : ಆಮಂತ್ರಣ ಬಿಡುಗಡೆ Read More »

ನೆಕ್ಕರೆ ಶ್ರೀ ಚಾಮುಂಡೇಶ್ವರೀ, ಕೊರಗಜ್ಜ ಕ್ಷೇತ್ರದಲ್ಲಿ ಧರ್ಮ ಶಿಕ್ಷಣ ತರಗತಿಗೆ ಚಾಲನೆ | ಸನಾತನ ಹಿಂದೂ ಧರ್ಮ ಪುರಾತನ ಧರ್ಮ : ಬಾಲಕೃಷ್ಣ ಬೋರ್ಕರ್

ಪುತ್ತೂರು : ಸನಾತನ ಹಿಂದೂ ಧರ್ಮದ ಆಳ, ಅಗಲವನ್ನು ತಿಳಿದುಕೊಳ್ಳಲು ಯಾರಿಂದಲೂ ಸಾಧ್ಯವಾಗಿಲ್ಲ. ಅಂದರೆ ಹಿಂದೂ ಧರ್ಮ ಅತ್ಯಂತ ಪುರಾತನವಾದದ್ದು. ಇಂತಹಾ ಹಿಂದೂ ಧರ್ಮವನ್ನು ಧರ್ಮ ಶಿಕ್ಷಣದ ಮೂಲಕ ಉಳಿಸಿ ಬೆಳೆಸುವಲ್ಲಿ ಮುಂದಿನ ಪೀಳಿಗೆಯ ಮಹತ್ತರವಾದ ಜವಾಬ್ದಾರಿ ಎಂದು ತಾಲೂಕು ಹಿಂದೂ ಧರ್ಮ ಶಿಕ್ಷಣ ಸಮಿತಿ ಅಧ್ಯಕ್ಷ ಬಾಲಕೃಷ್ಣ ಬೋರ್ಕರ್ ಅಭಿಪ್ರಾಯಪಟ್ಟರು. ಅವರು ಭಾನುವಾರ ನೆಕ್ಕರೆ ಶ್ರೀ ಚಾಮುಂಡೇಶ್ವರಿ, ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಧರ್ಮ ಶಿಕ್ಷಣ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಸನಾತನ ಧರ್ಮದ ಕುರಿತು ಗೊಂದಲವಿದ್ದು,

ನೆಕ್ಕರೆ ಶ್ರೀ ಚಾಮುಂಡೇಶ್ವರೀ, ಕೊರಗಜ್ಜ ಕ್ಷೇತ್ರದಲ್ಲಿ ಧರ್ಮ ಶಿಕ್ಷಣ ತರಗತಿಗೆ ಚಾಲನೆ | ಸನಾತನ ಹಿಂದೂ ಧರ್ಮ ಪುರಾತನ ಧರ್ಮ : ಬಾಲಕೃಷ್ಣ ಬೋರ್ಕರ್ Read More »

ಮೈಸೂರು ದಸರಾ : ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ ಸಿಎಂ ‌ಸಿದ್ದರಾಮಯ್ಯ

ಬೆಂಗಳೂರು: ನಾಡ ಹಬ್ಬ ದಸರಾವನ್ನು ಈ ಬಾರಿಯೂ ವಿಜೃಂಭಣೆಯಿಂದ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸಿಎಂ ‌ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ್ದು, ದಸರಾ ಆಚರಣೆಯಲ್ಲಿ ಪ್ರವಾಸಿಗರಿಗೆ ನೂಕುನುಗ್ಗಲು ಆಗದಂತೆ ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ನಾಡ ಹಬ್ಬ ದಸರಾ ವೀಕ್ಷಣೆಗೆ ದೇಶ ವಿದೇಶಗಳಿಂದ ಸುಮಾರು 10 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಪ್ರವಾಸಿಗರಿಗೆ ಯಾವುದೇ ಅನಾಹುತವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು.

ಮೈಸೂರು ದಸರಾ : ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ ಸಿಎಂ ‌ಸಿದ್ದರಾಮಯ್ಯ Read More »

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 5.5 ಕೋಟಿ ಭಕ್ತರ ಭೇಟಿ

ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣವಾಗಿ ಲೋಕಾರ್ಪಣೆಯಾದ ಬಳಿಕ ಅಲ್ಲಿಗೆ ದೇಶ ವಿದೇಶಗಳಿಂದ ಯಾತ್ರಿಕರ ದಂಡು ಹರಿದು ಬಂದಿದೆ. ಈವರೆಗೆ ಶ್ರೀರಾಮನ ದರ್ಶನಕ್ಕೆ ಸುಮಾರು 5.5 ಕೋಟಿಗೂ ಅಧಿಕ ಜನರು ಭೇಟಿ ನೀಡಿದ್ದಾಗಿ ಉತ್ತರ ಪ್ರದೇಶದ ಸರ್ಕಾರ ಮಾಹಿತಿ ನೀಡಿದೆ. ಸುಮಾರು 4.5 ಲಕ್ಷಕ್ಕೂ ಅಧಿಕ ಗಣ್ಯರು ಶ್ರೀರಾಮ ಮಂದಿರಕ್ಕೆ ಬಂದು ಹೋಗಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಯಾವುದೇ ಭಕ್ತರಿಗೂ ‌ಸಮಸ್ಯೆಯಾಗದ ನೆಲೆಯಲ್ಲಿ ಎಲ್ಲಾ ರೀತಿಯ ಅನುಕೂಲಗಳನ್ನು ಮಾಡಿದ್ದು, ಅಲ್ಲಿನ ವ್ಯವಸ್ಥೆಗಳ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 5.5 ಕೋಟಿ ಭಕ್ತರ ಭೇಟಿ Read More »

ಜಗತ್ಪ್ರಸಿದ್ಧ ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ : ಓರ್ವ ಮೃತ, 500 ಮಂದಿಗೆ ಗಾಯ

ತಾಳಧ್ವಜ ರಥ ರಥ ಎಳೆಯಲು ತಳ್ಳಾಟ ನಡೆದಾಗ ಅವಘಡ ಭುವನೇಶ್ವರ : ಒಡಿಶಾದ ಪುರಿಯ ಜಗತ್ಪ್ರಸಿದ್ಧ ವಾರ್ಷಿಕ ರಥಯಾತ್ರೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮೃತಪಟ್ಟು 500ಕ್ಕೂ ಅಧಿಕ ಭಕ್ತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬಲಭದ್ರನ ರಥವನ್ನು ಎಳೆಯಲು ಭಾರಿ ಜನಸಮೂಹ ಮುಂದಕ್ಕೆ ಬಂದಾಗ ಕಾಲ್ತುಳಿದಂಥ ಪರಿಸ್ಥಿತಿ ತಲೆದೋರಿದೆ. ಶತಮಾನಗಳಷ್ಟು ಹಳೆಯ ಸಂಪ್ರದಾಯದ ಭಾಗವಾಗಿ ಎಳೆಯುವ ಮೂರು ಭವ್ಯ ರಥಗಳಲ್ಲಿ ಒಂದಾದ ತಾಳಧ್ವಜ ರಥವನ್ನು ಎಳೆಯುವ ಸಮಯದಲ್ಲಿ ಈ ಕಾಲ್ತುಳಿತದ ರೀತಿಯ ಘಟನೆ ಸಂಭವಿಸಿದೆ. ಲಕ್ಷಾಂತರ ಭಕ್ತರನ್ನು

ಜಗತ್ಪ್ರಸಿದ್ಧ ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ : ಓರ್ವ ಮೃತ, 500 ಮಂದಿಗೆ ಗಾಯ Read More »

error: Content is protected !!
Scroll to Top