ಧಾರ್ಮಿಕ

ಶಿಶಿಲದಲ್ಲಿ ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನ ಜಲಾವೃತ | ಗರ್ಭಗುಡಿಗೆ ನುಗ್ಗಿದ ನೀರು

ಶಿಶಿಲ: ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನ ಜಲಾವೃತವಾಗಿದ್ದು, ಗರ್ಭಗುಡಿಗೆ ನೀರು ನುಗ್ಗಿದೆ. ಶಿಶಿಲೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದ್ದು, ಜನರಲ್ಲಿ ಭೀತಿಯನ್ನು ಉಂಟುಮಾಡಿದೆ. ಭಾರೀ ಮಳೆಯಿಂದಾಗಿ ಕಪಿಲಾ ನದಿಯಲ್ಲಿ ಉಂಟಾದ ಪ್ರವಾಹ ದೇವಸ್ಥಾನದ ಒಳಗೆ ನುಗ್ಗಿ, ಪವಿತ್ರ ಗರ್ಭಗುಡಿಗೂ ಪ್ರವೇಶಿಸಿದೆ ಎನ್ನಲಾಗಿದೆ. ದೇವಳದ ಪಕ್ಕದಲ್ಲಿರುವ ಅಂಗಡಿಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ದೇವಾಲಯದ ಸಂಪರ್ಕಮಾರ್ಗವಾಗಿರುವ ಕಿಂಡಿ ಆಣೆಕಟ್ಟಿನು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಸದ್ಯಕ್ಕೆ ತೂಗುಸೇತುವೆಯವರೆಗೂ ನೀರು ಹರಿಯುತ್ತಿದೆ. ಪ್ರವಾಹದ ವೇಗ ಹಾಗೂ […]

ಶಿಶಿಲದಲ್ಲಿ ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನ ಜಲಾವೃತ | ಗರ್ಭಗುಡಿಗೆ ನುಗ್ಗಿದ ನೀರು Read More »

ಶ್ರೀಮತ್ ಜಗದ್ಗುರು ಅನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ 21ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ : ಪೂರ್ವಭಾವಿ ಸಭೆ

ಪುತ್ತೂರು: ಉಡುಪಿ ಜಿಲ್ಲೆಯ ಕಟಪಾಡಿ ಶ್ರೀಮತ್ ಜಗದ್ಗುರು ಅನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ 21ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ ಜು.10ರಿಂದ ಪಡಕುತ್ಯಾರು ಸರಸ್ವತೀ ಮಂದಿರದಲ್ಲಿ ಜರಗಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಮಂಗಳವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಪುತ್ತೂರು ಸಂಘ ಸಂಸ್ಥೆಗಳಿಗೆ ಆಮಂತ್ರಣ ಪತ್ರ ವಿತರಣೆ ನೀಡುವ ಕುರಿತು ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲ ಪುತ್ತೂರು ವತಿಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ಶ್ರೀಗುರುಗಳಿಗೆ ಪಾದುಕೆಯ ರಜತ ಹರಿವಾಣ ಸಮರ್ಪಣೆ ಮಾಡುವ ಕುರಿತು ನಿರ್ಣಯಿಸಲಾಯಿತು.

ಶ್ರೀಮತ್ ಜಗದ್ಗುರು ಅನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ 21ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ : ಪೂರ್ವಭಾವಿ ಸಭೆ Read More »

ಶಿವನ ದೃಷ್ಟಿ ಸಂಚಾರಕ್ಕೆ ಅಡಚಣೆ | ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ ಕಟ್ಟಡ ತೆರವುಗೊಳಿಸುವುದೇ ಪರಿಹಾರ | ಪ್ರಶ್ನಾ ಚಿಂತನೆಯಲ್ಲಿ ದೈವಜ್ಞ ನಿಟ್ಟೆ ಪ್ರಸನ್ನ ಆಚಾರ್ಯ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ ಕಟ್ಟಡ ಶಿವನ ದೃಷ್ಟಿ ಸಂಚಾರಕ್ಕೆ ಅಡಚಣೆಯಾಗಿದ್ದು, ಈ ಕಟ್ಟಡಕ್ಕೆ ಯಾವುದೇ ಪರಿಹಾರವಿಲ್ಲ. ಇದನ್ನು ತೆರವುಗೊಳಿಸುವುದೇ ಪರಿಹಾರ ಎಂದು ದೈವಜ್ಞ ನಿಟ್ಟೆ ಪ್ರಸನ್ನ ಆಚಾರ್ಯ ಹೇಳಿದರು. ಮಂಗಳವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಪ್ರಶ್ನಾ ಚಿಂತನೆಯಲ್ಲಿ ಅವರು ಈ ಕುರಿತು ತಿಳಿಸಿದರು. ಇದರ ಜೊತೆಗೆ ವಾಸುಕಿ ನಾಗ ಸನ್ನಿಧಿ ಮೂಲ ನಾಗಸನ್ನಿಧಿಗೆ ಸೇರುವುದು, ನವಗ್ರಹ ಗುಡಿ ದೇವಳದ ಒಳಾಂಗಣಕ್ಕೆ ಮತ್ತು ಅಯ್ಯಪ್ಪ ಸನ್ನಿಧಿಯನ್ನು ಆರಂಭದ

ಶಿವನ ದೃಷ್ಟಿ ಸಂಚಾರಕ್ಕೆ ಅಡಚಣೆ | ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ ಕಟ್ಟಡ ತೆರವುಗೊಳಿಸುವುದೇ ಪರಿಹಾರ | ಪ್ರಶ್ನಾ ಚಿಂತನೆಯಲ್ಲಿ ದೈವಜ್ಞ ನಿಟ್ಟೆ ಪ್ರಸನ್ನ ಆಚಾರ್ಯ Read More »

ಮುರುಡೇಶ್ವರ ಕ್ಷೇತ್ರದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ

ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿ ಸಭ್ಯ ಉಡುಪು ಧರಿಸಲು ಸೂಚನೆ ಮುರುಡೇಶ್ವರ : ದೇಶದೆಲ್ಲೆಡೆಯಿಂದ ನಿತ್ಯ ಸಾವಿರಾರು ಭಕ್ತರು ಆಗಮಿಸುವ ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮುರುಡೇಶ್ವರದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆಯನ್ನು ಜರಿಗೊಳಿಸಲಾಗಿದೆ. ಪುರಾಣ ಪ್ರಸಿದ್ಧ ಸ್ಥಳವಾದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಭಟ್ಕಳ ತಾಲೂಕಿನ ಪ್ರಸಿದ್ಧ ಶಿವ ಕ್ಷೇತ್ರವಾದ ಮುರುಡೇಶ್ವರ ಶಿವಾಲಯದಲ್ಲೂ ಇಲ್ಲಿನ ಆಡಳಿತ ಮಂಡಳಿ ವಸ್ತ್ರ ಸಂಹಿತೆ ಜಾರಿಗೆ ತಂದಿದೆ. ಮುರುಡೇಶ್ವರ

ಮುರುಡೇಶ್ವರ ಕ್ಷೇತ್ರದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ Read More »

ಕೌಡಿಚ್ಚಾರಿನಲ್ಲಿ ಧರ್ಮ ಶಿಕ್ಷಣ ತರಗತಿ ಉದ್ಘಾಟನೆ

ಪುತ್ತೂರು: ಗುರುಕುಲ  ಶಿಕ್ಷಣ  ಪದ್ಧತಿ  ಬ್ರಿಟಿಷರಿಂದ  ನಾಶವಾಗಿದೆ.  ಇಂದಿನ  ಶಿಕ್ಷಣ  ಪಠ್ಯಪುಸ್ತಕಗಳಲ್ಲಿ  ದೇಶಭಕ್ತಿ  ಕಾಣಸಿಗುವುದಿಲ್ಲ  ಎಂದು  ತಾಲೂಕು  ಧರ್ಮ  ಶಿಕ್ಷಣ  ಸಮಿತಿ ಸಂಚಾಲಕ  ಸುಬ್ರಹ್ಮಣ್ಯ ನಟ್ಟೋಜ ಅಭಿಪ್ರಾಯಪಟ್ಟರು. ಅವರು ಭಾನುವಾರ ಧರ್ಮ ಶಿಕ್ಷಣ ಸಮಿತಿ ವತಿಯಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಧರ್ಮ ಶಿಕ್ಷಣ ತರಗತಿ ಉದ್ಘಾಟಿಸಿ ಮಾತನಾಡಿದರು. ನಮ್ಮನ್ನು ನಿರ್ಗತಿಕರನ್ನಾಗಿ ಮಾಡಿದ ಬ್ರಿಟಿಷ್ ಅಧಿಕಾರಿಗಳನ್ನು ವೈಭವೀಕರಿಸುವ ಶಿಕ್ಷಣ ಇನ್ನೂ ಕೂಡ ನಮ್ಮ ಪಠ್ಯ ಪುಸ್ತಕಗಳಲ್ಲಿದೆ.  ಮನುಷ್ಯನನ್ನು ಮನುಷ್ಯತ್ವಕ್ಕೇರಿಸುವ ಶಿಕ್ಷಣ ನಮಗೆ ಬೇಕಾಗಿದೆ. ಇಂದಿನ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕು. ದೇಶಪ್ರೇಮ ಎದ್ದು ಕಾಣಬೇಕು. ಹಿಂದೂ ಧರ್ಮದ ರಕ್ಷಣೆ ಗೋಸ್ಕರ ಇಂದಿನ ಮಕ್ಕಳಿಗೆ ಧಾರ್ಮಿಕಶಿಕ್ಷಣದ ಅವಶ್ಯಕತೆ ಇದೆ ಎಂದರು. ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರ ಗೌರವಾಧ್ಯಕ್ಷ ವಾಸು ಪೂಜಾರಿ ಗುಂಡ್ಯಡ್ಕ ಮಾತನಾಡಿ, ಇಂದಿನ ಪೀಳಿಗೆಗೆ ಧರ್ಮ ಶಿಕ್ಷಣದ  ಅವಶ್ಯಕತೆ ಇದೆ.  ಈ ಶುಭ ಕಾರ್ಯಕ್ಕೆ ಶ್ರೀ ಕೃಷ್ಣನ ಆಶೀರ್ವಾದ ಇರಲಿ ಎಂದು ಶುಭ ಹಾರೈಸಿದರು. ಧರ್ಮ ಶಿಕ್ಷಣದ ತಾಲೂಕು ಸಮಿತಿ ಅಧ್ಯಕ್ಷ ಸದಾಶಿವ ರೈ ದಂಬೆಕಾನ ಮಾತನಾಡಿ, ಪ್ರತಿಯೊಬ್‍ ಹಿಂದೂವಿಗೂ  ಧಾರ್ಮಿಕ  ಶಿಕ್ಷಣದ  ಅವಶ್ಯಕತೆ ಇದೆ.  ಧಾರ್ಮಿಕ  ಶಿಕ್ಷಣ  ಸಿಗದೇ ನಾವು ಸೋತಿದ್ದೇವೆ. 

ಕೌಡಿಚ್ಚಾರಿನಲ್ಲಿ ಧರ್ಮ ಶಿಕ್ಷಣ ತರಗತಿ ಉದ್ಘಾಟನೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ಸಭೆ | ಅಯ್ಯಪ್ಪ ಗುಡಿ, ನವಗ್ರಹ ಗುಡಿ, ನಾಗನ ಸಾನಿಧ್ಯವನ್ನು ಸ್ಥಳಾಂತರಿಸಲು ದೈವಜ್ಞರ ಮೂಲಕ ಪ್ರಶ್ನಾಚಿಂತನೆ ಇರಿಸಿ ತೀರ್ಮಾನ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ  ವಠಾರದಲ್ಲಿರುವ ಅಯ್ಯಪ್ಪ ಗುಡಿ, ನವಗ್ರಹ ಗುಡಿ, ನಾಗನ ಸಾನಿಧ್ಯವನ್ನು ಸ್ಥಳಾಂತರಗೊಳಿಸುವ ಬಗ್ಗೆ ದೈವಜ್ಞರ ಮೂಲಕ ಪ್ರಶ್ನಾಚಿಂತನೆ ಇರಿಸಿ ಆ ಪ್ರಕಾರ ತೀರ್ಮಾನ ಕೈಗೊಳ್ಳಲು ಶನಿವಾರ ಸಂಜೆ ನಡೆದ ದೇವಸ್ಥಾನದ ಕುರಿತ ಅಭಿವೃದ್ಧಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಅಯ್ಯಪ್ಪ ಗುಡಿ ಇರುವ ಸ್ಥಳದಲ್ಲಿ ರಥ ನಿಲುಗಡೆ ಆಗಬೇಕು ಅನ್ನುವ ಅಂಶ ಕಂಡು ಬಂದಿದೆ. ಜತೆಗೆ ಅಲ್ಲಿರುವ ನಾಗನ ಸಾನಿಧ್ಯವನ್ನು ದೇವಾಲಯದ ಗದ್ದೆಯಲ್ಲಿರುವ ಮೂಲ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ಸಭೆ | ಅಯ್ಯಪ್ಪ ಗುಡಿ, ನವಗ್ರಹ ಗುಡಿ, ನಾಗನ ಸಾನಿಧ್ಯವನ್ನು ಸ್ಥಳಾಂತರಿಸಲು ದೈವಜ್ಞರ ಮೂಲಕ ಪ್ರಶ್ನಾಚಿಂತನೆ ಇರಿಸಿ ತೀರ್ಮಾನ Read More »

ವಾಹನ ಅಪಘಾತದಲ್ಲಿ ಮೃತಪಟ್ಟ ಸರ್ಪ | ಸ್ಥಳೀಯರಿಂದ ಸರ್ಪ ಸಂಸ್ಕಾರ ಕಾರ್ಯ

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸರ್ಪವೊಂದು ವಾಹನ ಅಪಘಾತದಲ್ಲಿ ಮೃತಪಟ್ಟಿದ್ದು, ಈ ಕುರಿತು ಸರ್ಪ ಸಂಸ್ಕಾರ ಕಾರ್ಯ ಭಾನುವಾರ ಬೈಪಾಸ್ ರಸ್ತೆಯಲ್ಲಿರುವ ಅಪೂರ್ವ ಸೆಂಟರ್‍ ಬಳಿ ಇರುವ ಸತೀಶ್‍ ರೈ ಎಂಬವರ ಮನೆಯಲ್ಲಿ  ನಡೆಯಿತು. ಕೆಮ್ಮಿಂಜೆ ವೇ.ಮೂ. ಶ್ರೀಕೃಷ್ಣ ಕಲ್ಲೂರಾಯ ಅವರ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.

ವಾಹನ ಅಪಘಾತದಲ್ಲಿ ಮೃತಪಟ್ಟ ಸರ್ಪ | ಸ್ಥಳೀಯರಿಂದ ಸರ್ಪ ಸಂಸ್ಕಾರ ಕಾರ್ಯ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ಕೊಡುಗೆ | ರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ.ಕೆ.ವಿ ರೇಣುಕಾಪ್ರಸಾದ್ ಮತ್ತು ಕುಟುಂಬದವರು ಬೆಳ್ಳಿ ರಥವನ್ನು ಕೊಡುಗೆಯಾಗಿ ನೀಡಲಿದ್ದು, ಇದರ ಪೂರ್ವಭಾವಿಯಾಗಿ ರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ ಶನಿವಾರ (ಇಂದು) ನಡೆಯಿತು. ದೇವಾಲಯದಲ್ಲಿ ಶಾಸ್ರೋಕ್ತ ವಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥನೆ ಮಾಡಿದ ಬಳಿಕ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರು, ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಆಯ್ಯಪ್ಪ ಸುತಗುಂಡಿ ಮತ್ತಿತರರು ಅನುಮತಿ ಪತ್ರವನ್ನು ಹಸ್ತಾಂತರಿಸಿದರು. ನಂತರ ವೀಳ ನೀಡಿಕೆ ನಡೆಯಿತು. ಈ ಸಂದರ್ಭದಲ್ಲಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ಕೊಡುಗೆ | ರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ Read More »

G5 Nexusನ ವಿನೂತನ ಯೋಜನೆಯಾದ ANGEL Gardeniaದ ಭೂಮಿ ಪೂಜೆ

ಪುತ್ತೂರು: ಪುತ್ತೂರು ನಗರದಲ್ಲಿ, ಬಸ್ ನಿಲ್ದಾಣದಿಂದ ಕೇವಲ ಅರ್ಧ ಕಿ.ಮೀ. ದೂರದಲ್ಲಿನ ಕಲ್ಲಿಮಾರಿನ ಮುಖ್ಯ ರಸ್ತೆಯಲ್ಲಿ ANGEL Gardenia – A house of luxury ಯೋಜನೆಯಡಿಯಲ್ಲಿ ನಿರ್ಮಾಣವಾಗಲಿರುವ ವಸತಿ ಸಮುಚ್ಛಯದ ಭೂಮಿ ಪೂಜೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಿತು. ಬೆಳಿಗ್ಗೆ ಗಂಟೆ 6ಕ್ಕೆ ಸರಿಯಾಗಿ ಗಣಪತಿ ಹವನದೊಂದಿಗೆ ಆರಂಭವಾದ ಕಾರ್ಯಕ್ರಮದ ಬಳಿಕ ಪುತ್ತೂರಿನ ಮಾಯ್ದೆದೇವುಸ್ ಇಗರ್ಜಿಯ ಸಹಾಯಕ ಧರ್ಮಗುರುಗಳಾದ ರೆ.ಫಾ. ಮರ್ವಿನ್ ಲೋಬೋರವರು ಧಾರ್ಮಿಕ ಪೂಜೆ ಮತ್ತು ಸ್ಥಳ ಶುದ್ಧಿ ಕಾರ್ಯಕ್ರಮವನ್ನು ನೆರವೇರಿಸಿದರು. ಸಭಾ ಕಾರ್ಯಕ್ರಮ ಸಂಕ್ಷಿಪ್ತವಾದ ಸಭಾ ಕಾರ್ಯಕ್ರಮವನ್ನು

G5 Nexusನ ವಿನೂತನ ಯೋಜನೆಯಾದ ANGEL Gardeniaದ ಭೂಮಿ ಪೂಜೆ Read More »

ಮಂಗಳೂರಿನ ಕದ್ರಿ ದೇವಸ್ಥಾನದ ಕೊಳದ ಬಳಿ ಬುದ್ಧನ ವಿಗ್ರಹ, ಗುಹೆ ಪತ್ತೆ

ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಪವಿತ್ರ ಕೊಳದ ಬಳಿ ಬುದ್ಧನ ಅಪರೂಪದ ಶಿಲ್ಪ ಮತ್ತು ಗುಹೆ ಪತ್ತೆಯಾಗಿದೆ. ದೇವಸ್ಥಾನದ ಅಧಿಕಾರಿಗಳ ಅನುಮತಿಯೊಂದಿಗೆ ಇತ್ತೀಚೆಗೆ ನಡೆಸಿದ ಪರಿಶೋಧನೆಯಲ್ಲಿ ಈ ಆವಿಷ್ಕಾರ ಮಾಡಲಾಗಿದೆ.ಕೊಳದಲ್ಲಿ ಮುಳುಗಿದ್ದ ಸ್ಥಿತಿಯಲ್ಲಿ ದೊರೆತ ಈ ಶಿಲ್ಪವು, ಪದ್ಮಾಸನದಲ್ಲಿ (ಧ್ಯಾನ ಮುದ್ರೆ) ಕುಳಿತಿರುವ ಬುದ್ಧನನ್ನು ಚಿತ್ರಿಸುತ್ತದೆ. ವಿಗ್ರಹದ ಬಲಗೈ ಸಂಪೂರ್ಣವಾಗಿ ಮುರಿದಿದ್ದು, ಎಡಗೈ ಇಟ್ಟ ಕಾಲುಗಳ ನಡುವೆ ಇದೆ. ಭಾಗಶಃ ಕಾಣುವ ಉತ್ತರೀಯ (ಮೇಲು ಹೊದಿಕೆ) ಎಡ ಭುಜ ಮತ್ತು ಎದೆಗೆ ಆವರಿಸಿದೆ. ಶಿಲ್ಪದ ತಲೆ

ಮಂಗಳೂರಿನ ಕದ್ರಿ ದೇವಸ್ಥಾನದ ಕೊಳದ ಬಳಿ ಬುದ್ಧನ ವಿಗ್ರಹ, ಗುಹೆ ಪತ್ತೆ Read More »

error: Content is protected !!
Scroll to Top