ಧಾರ್ಮಿಕ

ನಾಳೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ, ಪರಿವಾರ ದೈವಗಳ ನೇಮೋತ್ಸವ | ಸ್ವರ್ಣದ ಮಲ್ಲಿಗೆಯ ಮೊಗ್ಗಿನ ಹಾರ, ಬೆಳ್ಳಿಯ ಗಗ್ಗರ ಸಮರ್ಪಣೆ

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮ ನಡಾವಳಿ ಏ.28 ಸೋಮವಾರ ನಡೆಯಲಿದೆ. ನಡಾವಳಿಯ ಪೂರ್ವಭಾವಿಯಾಗಿ ಇಂದು ಮಧ್ಯಾಹ್ನ ಬಲ್ನಾಡು ಶ್ರೀ ವಿನಾಯಕ ದೇವಸ್ಥಾನದಲ್ಲಿ ದೇವತಾ ಪ್ರಾರ್ಥನೆ, ವಿಶೇಷ ಮಹಾಪೂಜೆ, ಸಂಜೆ ರಂಗಪೂಜೆ, ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಮಕರತೋರಣರೋಹಣ, ಶ್ರೀ ದೈವಗಳ ಭಂಡಾರ ತೆಗೆದು ಮೂಲಸ್ಥಾನದಿಂದ ನೇಮ್ ನಡೆಯುವ ದೈವಸ್ಥಾನಕ್ಕೆ ಆಗಮನ, ತಂಬಿಲ ಸೇವೆಗಳು ನಡೆದ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಎ.28ರಂದು ಬೆಳಿಗ್ಗೆ ದೈವಸ್ಥಾನದಲ್ಲಿ ಗಣಪತಿ ಹೋಮ ನಡೆದ ಬಳಿಕ […]

ನಾಳೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ, ಪರಿವಾರ ದೈವಗಳ ನೇಮೋತ್ಸವ | ಸ್ವರ್ಣದ ಮಲ್ಲಿಗೆಯ ಮೊಗ್ಗಿನ ಹಾರ, ಬೆಳ್ಳಿಯ ಗಗ್ಗರ ಸಮರ್ಪಣೆ Read More »

ಕರ್ತಕೋಡಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರ ದೈವಗಳ ಗಗ್ಗರ ಸೇವೆ

ಬಂಟ್ವಾಳ: ತಾಲೂಕಿನ ಬರಿಮಾರು ಕರ್ತಕೋಡಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರ ದೈವಗಳ ಗಗ್ಗರ ಸೇವೆ ಶುಕ್ರವಾರ ರಾತ್ರಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಶುಕ್ರವಾರ ಬೆಳಿಗ್ಗೆ ಗಣಹೋಮ, ನಾಗತಂಬಿಲ, ಮುಡಿಪು ಕಟ್ಟುವುದು, ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ಸಂಜೆ 5 ಗಂಟೆಗೆ ಭಂಡಾರ ಇಳಿದು ರಾತ್ರಿ ಅನ್ನಸಂತರ್ಪಣೆ ಜರಗಿತು. ಬಳಿಕ ಸತ್ಯದೇವತೆ ಕಲ್ಲುರ್ಟಿ ಪಂಜುರ್ಲಿ, ಚಾಮುಂಡಿ-ಗುಳಿಗ ರಾಹು-ಗುಳಿಗ ದೈವಗಳಿಗೆ ಗಗ್ಗರ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರು, ಸ್ಥಳೀಯರು ಉಪಸ್ಥಿತರಿದ್ದರು. ಇಂದು ರಾತ್ರಿ ದೈವಗಳಿಗೆ ವರ್ಷಾವಧಿ ಅಗೇಲು

ಕರ್ತಕೋಡಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರ ದೈವಗಳ ಗಗ್ಗರ ಸೇವೆ Read More »

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ,  ಸಾಮೂಹಿಕ ಕುಂಕುಮಾರ್ಚನೆ

ಪುತ್ತೂರು: ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆ ಸಿಂಧೂರ, ಈ ಸಿಂಧೂರದ ಕುರಿತಾದ ಮಹತ್ವವನ್ನು ತಿಳಿಸುವ ಹಿನ್ನೆಲೆಯಲ್ಲಿ, ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕಿ ಕೃಷ್ಣವೇಣಿ ಮುಳಿಯ ಅವರ ಮುತುವರ್ಜಿಯಲ್ಲಿ, ಕಾಸರಗೋಡಿನ  ಲೇಖಕಿ ಶೀಲಾ ಲಕ್ಷ್ಮೀ ಅವರು ಬರೆದ ಕೃತಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ ಏ.27 ಆದಿತ್ಯವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಬಳಿಯಲ್ಲಿರುವ ಅನ್ನ ಛತ್ರದಲ್ಲಿ ಬೆಳಗ್ಗೆ  9:30 ಕ್ಕೆ  ಲೋಕಾರ್ಪಣೆ ಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಮಹಿಳೆಯರಿಂದ  ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. ಮಂಗಳೂರು ದೇವಾಲಯ

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ,  ಸಾಮೂಹಿಕ ಕುಂಕುಮಾರ್ಚನೆ Read More »

ಅಂಬುಲ ತರವಾಡು ಮನೆಯಲ್ಲಿ ನಡೆದ ನಾಗದೇವರ, ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ಪುನಃಪ್ರತಿಷ್ಠೆ ಕಾರ್ಯಕ್ರಮ

ಅಂಬುಲ ತರವಾಡು ಮನೆ ಇವರಿಂದ ನಾಗದೇವರ, ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ಪುನಃಪ್ರತಿಷ್ಠೆ ಕಾರ್ಯಕ್ರಮ ಏ, 20ರಿಂದ ಏ,23ರವರೆಗೆ ನಡೆಯಿತು. ಏ.20 ಭಾನುವಾರ ಸಂಜೆ 6 ಗಂಟೆಗೆ ನಾಗನ ಕಟ್ಟೆಯಲ್ಲಿ ಪ್ರಾಸಾದ ಪರಿಗ್ರಹ, ಪ್ರಾರ್ಥನೆ, ಸ್ಥಳಶುದ್ದಿ, ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ಬಿಂಬಾದಿ ವಾಸ ಕಾರ್ಯಕ್ರಮ ನೆರವೇರಿತು. ಏ.21 ಸೋಮವಾರ ಬೆಳಗ್ಗೆ 7 ಗಂಟೆಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಬೆಳಗ್ಗೆ 9:30ರ ಶುಭ ಮುಹೂರ್ತದಲ್ಲಿ ನಾಗಪ್ರತಿಷ್ಠೆ, ನಾಗರಕ್ತೇಶ್ವರಿ,

ಅಂಬುಲ ತರವಾಡು ಮನೆಯಲ್ಲಿ ನಡೆದ ನಾಗದೇವರ, ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ಪುನಃಪ್ರತಿಷ್ಠೆ ಕಾರ್ಯಕ್ರಮ Read More »

ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಧ್ವಜಾವರೋಹಣದೊಂದಿಗೆ ಸಂಪನ್ನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಧ್ವಜಾವರೋಹಣದೊಂದಿಗೆ ಶನಿವಾರ ಬೆಳಿಗ್ಗೆ ಸಂಪನ್ನಗೊಂಡಿತು. ಶುಕ್ರವಾರ ಸಂಜೆ ಶ್ರೀ ದೇವರು ದೂರದ ವೀರಮಂಗಲಕ್ಕೆ ಅವಭೃತ ಸವಾರಿ ನಡೆಸಿ ಶನಿವಾರ ಮುಂಜಾನೆ ತಲುಪಿ ವೀರಮಂಗಲ ಶ್ರಿ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಇರುವ ಕುಮಾರಧಾರ ನದಿಯಲ್ಲಿ ಅವಭೃತ ಸ್ನಾನ ಮುಗಿಸಿದರು. ಬಳಿಕ ಸುಮಾರು 11 ಗಂಟೆಗೆ ಶ್ರೀ ದೇವರು ದೇವಸ್ಥಾನ ತಲುಪಿ ಬಳಿಕ ಗರ್ಭಗುಡಿ ಪ್ರವೇಶಿಸಿ ಪೂಜೆ ನಡೆದ ಬಳಿಕ ಸಹಸ್ರಾರು ಭಕ್ತಾದಿಗಳ ಜಯಘೋಷಗಳೊಂದಿಗೆ ಧ್ವಜಾವರೋಹಣ ನಡೆಯಿತು. ಇಂದು

ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಧ್ವಜಾವರೋಹಣದೊಂದಿಗೆ ಸಂಪನ್ನ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅವಭೃತ ಸ್ನಾನ ಸಂಪನ್ನ | ಶ್ರೀ ದೇವರೊಂದಿಗೆ ತೆರಳಿದ ಸಹಸ್ರಾರು ಭಕ್ತಾದಿಗಳು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸವಾರಿ ಶನಿವಾರ ಮುಂಜಾನೆ ಅತ್ಯಂತ ವೈಭವದಿಂದ ಸಂಪನ್ನಗೊಂಡಿತು. ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಇರುವ ಕುಮಾರಧಾರ ನದಿಯಲ್ಲಿ ಶನಿವಾರ ಶುಕ್ರವಾರ ಮುಂಜಾನೆ ಅವಭೃತ ಸ್ನಾನ ಮುಗಿಸಿದರು. ಶುಕ್ರವಾರ ಸಂಜೆ ಶ್ರೀ ದೇವರ ಬಲಿ ಉತ್ಸವ ನಡೆದು ಬಳಿಕ ರಕ್ತೇಶ್ವರಿ ದೈವಗಳೊಂದಿಗೆ ನುಡಿಗಟ್ಟು ನಡೆದು ಬಳಿಕ ರಥಬೀದಿಯಿಂದ ಅವಭೃತ ಸವಾರಿಗೆ ಹೊರಟರು. ಶ್ರೀ ದೇವರೊಂದಿಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ತೆರಳಿದರು. ದಾರಿಯುದ್ದಕ್ಕೂ ಸುಮಾರು 54 ಕಟ್ಟೆಗಳಲ್ಲಿ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅವಭೃತ ಸ್ನಾನ ಸಂಪನ್ನ | ಶ್ರೀ ದೇವರೊಂದಿಗೆ ತೆರಳಿದ ಸಹಸ್ರಾರು ಭಕ್ತಾದಿಗಳು Read More »

ಮುರಿದು ಬಿದ್ದ ಬಪ್ಪನಾಡು ದೇವಿಯ ಬ್ರಹ್ಮರಥ

ವಾರ್ಷಿಕ ಜಾತ್ರೆ ವೇಳೆ ಸಂಭವಿಸಿದ ದುರ್ಘಟನೆ ಮಂಗಳೂರು: ಕರಾವಳಿಯ ಇತಿಹಾಸ ಪ್ರಸಿದ್ಧ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ವಾರ್ಷಿಕ ಉತ್ಸವದ ವೇಳೆ ರಥ ಮುರಿದು ಬಿದ್ದ ದುರ್ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ವರ್ಷಾವಧಿ ಜಾತ್ರೆಯ ವೇಳೆ ಬ್ರಹ್ಮರಥೋತ್ಸವ ನಡೆಯುತ್ತಿರುವಾಗ ರಥದ ಮೇಲ್ಭಾಗ ಮುರಿದು ಬಿದ್ದಿದೆ. ರಾತ್ರಿ ಸುಮಾರು 2 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಕ್ಷೇತ್ರದಲ್ಲಿ ಸಾಕಷ್ಟು ಭಕ್ತರು ಇದ್ದರು. ಅರ್ಚಕರು ರಥದಲ್ಲೇ ಇದ್ದರು. ಆದರೆ ಯಾರಿಗೂ ಯಾವುದೇ ಹಾನಿ ಸಂಭವಿಸಿಲ್ಲ.

ಮುರಿದು ಬಿದ್ದ ಬಪ್ಪನಾಡು ದೇವಿಯ ಬ್ರಹ್ಮರಥ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ | ಪುನೀತರಾದ ಲಕ್ಷಾಂತರ ಭಕ್ತರು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ ಲಕ್ಷಾಂತರ ಭಕ್ತ ಜಯಘೋಷಗಳೊಂದಿಗೆ ಗುರುವಾರ ರಾತ್ರಿ ನಡೆಯಿತು. ಸಂಜೆ ಶ್ರಿ ದೇವಸ್ಥಾನದ ಒಳ ಹಾಗೂ ಹೊರಾಂಗಣದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆದು ಬಳಿಕ ಶ್ರೀ ದೇವರು ರಥಬೀದಿಗೆ ಬಂದು, ಬಳಿಕ ಶ್ರೀ ಮಹಾಲಿಂಗೇಶ್ವರ ದೇವರು ರಥಾರೋಢರಾದರು. ಬಳಿಕ ಸಿಡಿಮದ್ದು ಪ್ರದರ್ಶನ ಪ್ರಾರಂಭಗೊಂಡು ಸುಮಾರು ಒಂದು ಗಂಟೆಗಳ ಕಾಲ ಸಿಡಿಮದ್ದು ಪ್ರದರ್ಶನ ಬಾನೆತ್ತರದಲ್ಲಿ ಬೆಳಕಿನ ಚಿತ್ತಾರವನ್ನೇ ಮೂಡಿಸಿತು. ಇದನ್ನು ವೀಕ್ಷಿಸಿದ ಲಕ್ಷಾಂತರ ಭಕ್ತರು ಹರ್ಷೋದ್ದಾರವಾದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ | ಪುನೀತರಾದ ಲಕ್ಷಾಂತರ ಭಕ್ತರು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಇಂದು ರಾತ್ರಿ ವಿಜ್ರಂಭಣೆಯಿಂದ ನೆರವೇರಲಿದೆ ಬ್ರಹ್ಮರಥೋತ್ಸವ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಕಳೆದ ಎಂಟು ದಿನಗಳಿಂದ ವೈಭವದಿಂದ ನಡೆಯುತ್ತಿದ್ದು, ಇಂದು ರಾತ್ರಿ ವೈಭವದ ಬ್ರಹ್ಮರಥೋತ್ಸವ ನಡೆಯಲಿದೆ. ಸಂಜೆ ಶ್ರಿ ದೇವಸ್ಥಾನದ ಒಳ ಹಾಗೂ ಹೊರಾಂಗಣದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆದು, ಬಳಿಕ ಶ್ರೀ ದೇವರು ರಥಬೀದಿಗೆ ಬರುವರು. ಆನಂತರ ಶ್ರೀ ಮಹಾಲಿಂಗೇಶ್ವರ ದೇವರು ರಥಾರೋಢರಾಗುವರು. ಈ ಹೊತ್ತಿನಲ್ಲಿ ಸಿಡಿಮದ್ದು ಪ್ರದರ್ಶನ ಪ್ರಾರಂಭಗೊಂಡು ಸುಮಾರು ಒಂದೂವರೆ ಗಂಟೆಗಳ ಕಾಲ ಸಿಡಿಮದ್ದು ಪ್ರದರ್ಶನ ನಡೆದ ಬಳಿಕ ಸಾವಿರಾರು ಭಕ್ತಾದಿಗಳ ಕೈಗಳ ಜಯಘೋಷಗಳೊಂದಿಗೆ ಬ್ರಹ್ಮರಥವನ್ನು ಎಳೆಯುತ್ತಾರೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಇಂದು ರಾತ್ರಿ ವಿಜ್ರಂಭಣೆಯಿಂದ ನೆರವೇರಲಿದೆ ಬ್ರಹ್ಮರಥೋತ್ಸವ Read More »

ಕುಕ್ಕೆ ಕ್ಷೇತ್ರದ ವಾರ್ಷಿಕ ಆದಾಯ 155.95 ಕೋ.ರೂ. ಏರಿಕೆ

ಹಿಂದಿನ ವರ್ಷಕ್ಕಿಂತ 9.94 ಕೋ.ರೂ. ಹೆಚ್ಚಳ ಸುಬ್ರಹ್ಮಣ್ಯ: ರಾಜ್ಯದಲ್ಲೇ ಅತಿಹೆಚ್ಚು ಆದಾಯವಿರುವ ಪುಣ್ಯಕ್ಷೇತ್ರವಾಗಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಕಳೆದ ಹಣಕಾಸು ಸಾಲಿನಲ್ಲೂ ಭಾರಿ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ.ಗೆ ಏರಿಕೆ ಆಗಿದೆ. ಹಿಂದಿನ ವರ್ಷದ ಆದಾಯ 146.01 ಕೋಟಿ ರೂ. ಆಗಿತ್ತು. ಹಿಂದಿನ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ

ಕುಕ್ಕೆ ಕ್ಷೇತ್ರದ ವಾರ್ಷಿಕ ಆದಾಯ 155.95 ಕೋ.ರೂ. ಏರಿಕೆ Read More »

error: Content is protected !!
Scroll to Top