ಧಾರ್ಮಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ | ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಪುನೀತರಾದ ಲಕ್ಷಾಂತರ ಭಕ್ತರು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಅತ್ಯಂತ ವೈಭವದಿಂದ ನಡೆಯುತ್ತಿದ್ದು, ಜಾತ್ರೋತ್ಸವದ ಅಂಗವಾಗಿ ಬುಧವಾರ ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಕಿರುವಾಳು ಭಂಡಾರ ಆಗಮನವಾಯಿತು. ಲಕ್ಷಾಂತರ ಭಕ್ತಾದಿಗಳು ಈ ಸಂದರ್ಭವನ್ನು ಕಣ್ತುಂಬಿಕೊಂಡರು. ಸಂಜೆ 6 ಗಂಟೆಗೆ ಸೂಟೆ ಬೆಳಕಿನೊಂದಿಗೆ ಹೊರಟ ಕಿರುವಾಳು ಬರುವ ದಾರಿಯುದ್ದಕ್ಕೂ ಅಲ್ಲಲ್ಲಿ ಸ್ಥಳೀಯರು ಪಾನೀಯ ವ್ಯವಸ್ಥೆಗಳನ್ನು ಮಾಡಿದರು. ಈ ಸಂದರ್ಭದಲ್ಲಿ ಭಕ್ತಾದಿಗಳು ಮಲ್ಲಿಗೆ ಅರ್ಪಿಸಿದರು. ರಾತ್ರಿ ಸುಮಾರು 10.30 ಗಂಟೆ ಹೊತ್ತಿಗೆ ಕಿರುವಾಳು ಶ್ರೀ ದೇವಸ್ಥಾನವನ್ನು ತಲುಪಿತು. […]

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ | ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಪುನೀತರಾದ ಲಕ್ಷಾಂತರ ಭಕ್ತರು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಇಂದು ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮನ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಭಂಡಾರ ದೇವಸ್ಥಾನಕ್ಕೆ ಇಂದು ರಾತ್ರಿ ಆಗಮಿಸಲಿದೆ. ಕಿರುವಾಳು ಆಗಮನದ ಅಂಗವಾಗಿ ಇಂದು ಬೆಳಿಗ್ಗೆಯಿಂದಲೇ ಶ್ರೀ ಉಳ್ಳಾಲ್ತಿಗೆ ಮಲ್ಲಿಗೆ ಅರ್ಪಿಸಲು ಅವಕಾಶ ನೀಡಲಾಗಿತ್ತು. ಇದಕ್ಕೂ ಮುಂಚೆ ಶ್ರೀ ದೈವಸ್ಥಾನದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆ ಹಾಗೂ ಸಂಜೆ 3 ಗಂಟೆ ತನಕ ಮಲ್ಲಿಗೆ ಅರ್ಪಿಸಲು ಅವಕಾಶ ನೀಡಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಕಟ್ಟೆಯಲ್ಲಿ ಭಕ್ತಾದಿಗಳು ಸರತಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಇಂದು ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮನ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ವಾಹನ ಸಂಚಾರದಲ್ಲಿ ಬದಲಾವಣೆ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾ ವಧಿ ಜಾತ್ರೆಯ ಪ್ರಯುಕ್ತ ಎ.16ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಆಗಮನದ ದಿನ ಮತ್ತು ಎ.17ರಂದು ಬ್ರಹ್ಮರಥೋತ್ಸವದಂದು ಸಂಜೆ 4.00 ಗಂಟೆಯಿಂದ ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ. ಸಾರಿಗೆ ಬಸ್, ಆಟೋ ರಿಕ್ಷಾ ಸಂಚಾರ ಮಾರ್ಗದ ಬದಲಾವಣೆ ಮತ್ತು ಭಕ್ತಾದಿಗಳ ವಾಹನ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ (ಎ.16, 17ರಂದು) ಪುತ್ತೂರು ಉಪವಿಭಾಗದ ಪೊಲೀಸ್ ಉಪ ಅಧಿಕ್ಷಕರ ಕೋರಿಕೆಯಂತೆ ಪುತ್ತೂರು

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ವಾಹನ ಸಂಚಾರದಲ್ಲಿ ಬದಲಾವಣೆ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ವಿಷುಕಣಿ ಬಲಿ ಉತ್ಸವ –ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ

ಪುತ್ತೂರು: ವಿಷುಕಣಿ ದಿನವಾದ ಸೋಮವಾರ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತಾದಿಗಳ ಗಡಣವೇ ತುಂಬಿತ್ತು. ವಿಷುಕಣಿ ಹಬ್ಬದ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ವಿಶೇಷ ವಿಷುಕಣಿ ಬಲಿ ಉತ್ಸವ ನಡೆಯಿತು. ಬೆಳಿಗ್ಗೆ ಶ್ರೀ ದೇವಸ್ಥಾನದ ಗರ್ಭಗುಡಿಯಲ್ಲಿ ಕಣಿ ಇಡಲಾಯಿತು. ಬಳಿಕ ಒಳಾಂಗಣದಲ್ಲಿ ವಿಷುಕಣಿ ಬಲಿ ಉತ್ಸವ ನಡೆಯಿತು. ಒಳಾಂಗಣದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ತುಂಬಿದ್ದು, ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ದೇವಸ್ಥಾನ್ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‍,

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ವಿಷುಕಣಿ ಬಲಿ ಉತ್ಸವ –ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ Read More »

ಬೆಳ್ಳಿಪ್ಪಾಡಿ ಧರ್ಮ ಶಿಕ್ಷಣ ಸಮಿತಿ ರಚನೆ | ಅಧ್ಯಕ್ಷರಾಗಿ ಜಿನ್ನಪ್ಪ ಪೂಜಾರಿ ಆಯ್ಕೆ

ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನಿರ್ದೇಶನದನ್ವಯ ಪುತ್ತೂರಿನಾದ್ಯಂತ ಧರ್ಮಶಿಕ್ಷಣ ಜಾರಿಗೊಳಿಸುವ ಹಿನ್ನೆಲೆಯಲ್ಲಿ ಗ್ರಾಮಸ ಮಿತಿಗಳು ರೂಪುದಳೆಯುತ್ತಿದ್ದು, ಇದಕ್ಕೆ ಪೂರಕವಾಗಿ ಬೆಳ್ಳಿಪ್ಪಾಡಿ ಧರ್ಮ ಶಿಕ್ಷಣ ಸಮಿತಿಯನ್ನು ರಚಿಸಲಾಯಿತು. ಬೆಳ್ಳಿಪ್ಪಾಡಿಯ ಸುಬ್ರಹ್ಮಣ್ಯ ಭಜನಾ ಮಂಡಳಿ ಕೇಂದ್ರಿತವಾಗಿ ಸಮಿತಿ ರಚಿಸಲಾಗಿದೆ. ಸ್ಥಳೀಯರಾದ ಜಿನ್ನಪ್ಪ ಪೂಜಾರಿ ಅಧ್ಯಕ್ಷರಾಗಿ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ್ ಗೌಡ ಡಿ.ವಿ., ಉಪಾಧ್ಯಕ್ಷರಾಗಿ ಲಕ್ಷ್ಮಣ ಗೌಡ, ಕಾರ್ಯದರ್ಶಿಯಾಗಿ ರಾಮಣ್ಣ ಗೌಡ, ಜತೆ ಕಾರ್ಯದರ್ಶಿಯಾಗಿ ಮೋಹನ್ ಪಕಳ, ಸಂಚಾಲಕರಾಗಿ ವಸಂತ ಕೈಲಾಜೆ, ಖಜಾಂಚಿಯಾಗಿ ಚಂದನ್ ತೆಂಕಪಾಡಿ,

ಬೆಳ್ಳಿಪ್ಪಾಡಿ ಧರ್ಮ ಶಿಕ್ಷಣ ಸಮಿತಿ ರಚನೆ | ಅಧ್ಯಕ್ಷರಾಗಿ ಜಿನ್ನಪ್ಪ ಪೂಜಾರಿ ಆಯ್ಕೆ Read More »

ತುಳುನಾಡಿನಲ್ಲಿ “ಬಿಸು ಪರ್ಬ” | ತುಳುನಾಡಿನ ಹಬ್ಬಗಳಲ್ಲಿ ಬಿಸು ಹಬ್ಬದ ಸಡಗರವೇ ವಿಶೇಷ

ಪರಶುರಾಮನಿಂದ ಸೃಷ್ಟಿಸಲ್ಪಟ್ಟ ತುಳುನಾಡಿನ ಹಬ್ಬಗಳಲ್ಲಿ ಬಿಸು ಹಬ್ಬದ ಸಡಗರವೇ ವಿಶೇಷ . ತುಳುವರ ವರುಷದ ಆದಿಮಾಸ “ಪಗ್ಗು” ತಿಂಗಳ ಮೊದಲ ದಿನವೇ ಬಿಸು. ಈ ದಿನವು ಶುಭಕರವಾದುದರಿಂದ ಜನರು ಹೊಸ ಹೊಸ ಯೋಜನೆಗಳಿಗೆ ಹೆಜ್ಜೆಇಡುತ್ತಾರೆ. ಮಾತ್ರವಲ್ಲ ಭೂಮಿ, ವಾಹನ, ಹೊಸ ವಸ್ತುಗಳ ಖರೀದಿ, ಮಕ್ಕಳಿಗೆ ಕಿವಿ ಚುಚ್ಚುವ ಶಾಸ್ತ್ರಗಳನ್ನು ಮಾಡುತ್ತಾರೆ. ಹಿಂದೆ ನಮ್ಮ ಹಿರಿಯರು, ತಂದೆ ತಾಯಂದಿರು ಮನೆ ಅಥವಾ ಮರಗಳ ನೆರಳು ಹಾಗೂ ಆಕಾಶ ನೋಡಿ ಸಮಯವನ್ನು ನಿರ್ಧರಿಸುತ್ತಿದ್ದರು. ಅದೇ ರೀತಿ ಸೂರ್ಯನು ಮೇಷ ರಾಶಿಗೆ

ತುಳುನಾಡಿನಲ್ಲಿ “ಬಿಸು ಪರ್ಬ” | ತುಳುನಾಡಿನ ಹಬ್ಬಗಳಲ್ಲಿ ಬಿಸು ಹಬ್ಬದ ಸಡಗರವೇ ವಿಶೇಷ Read More »

ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 21ನೇ ಪ್ರತಿಷ್ಠಾ ವಾರ್ಷಿಕೋತ್ಸವ

ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 21ನೇ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಶುಕ್ರವಾರ ಸಂಜೆ ದೀಪಾರಾಧನೆ, ರಾತ್ರಿ ದುರ್ಗಾನಮಸ್ಕಾರ ಪೂಜೆ, ಮಹಾಮಂಗಳಾರತಿ ನಡೆದು ಬಳಿಕ ಅನ್ನಪ್ರಸಾದ ಜರಗಿತು. ಈ ಸಂದರ್ಭ ನೂರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 21ನೇ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ, ಶ್ರೀ ಉಳ್ಳಾಕುಲು ನೇಮೋತ್ಸವ

ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ ಹಾಗೂ ನೇಮೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ಹಾಗೂ ಶುಕ್ರವಾರ ನಡೆಯಿತು. ಗುರುವಾರ ಬೆಳಿಗ್ಗೆ 8 ಕ್ಕೆ ಕವಾಟೋದ್ಘಾಟನೆ, 9 ಕ್ಕೆ ಗಣಹೋಮ, ಕಲಶ ಪೂಜೆ, 10 ಕ್ಕೆ ಪಂಚಾಮೃತಾಭಿಷೇಕ, ಕಲಶಾಭಿಷೇಕ, 11 ಕ್ಕೆ ಬ್ರಹ್ಮರ ಮೂಲಸ್ಥಾನದಲ್ಲಿ ಪೂಜೆ, 11.30 ಕ್ಕೆ ಮೂಲ ನಾಗದ ಕಟ್ಟೆಯಲ್ಲಿ ತಂಬಿಲ ಸೇವೆ, 12 ಕ್ಕೆ ಪರಿವಾರ ದೈವಗಳಿಗೆ ತಂಬಿಲ ಸೇವೆ, 12.30 ಕ್ಕೆ ನಾಗಬ್ರಹ್ಮ ದೇವರ ಪೂಜೆ, ಮಧ್ಯಾಹ್ನ 1 ಕ್ಕೆ

ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ, ಶ್ರೀ ಉಳ್ಳಾಕುಲು ನೇಮೋತ್ಸವ Read More »

ಇಂದಿನಿಂದ ಪುತ್ತೂರು ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಭಕ್ತರ ಜಯಘೋಷದೊಂದಿಗೆ ನೆರವೇರಿದ ಧ್ವಜಾರೋಹಣ | ಸಾವಿರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆ

ಪುತ್ತೂರು: ಏ.10 ರಿಂದ 20 ರ ತನಕ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ ಗುರುವಾರ ಬೆಳಿಗ್ಗೆ ಸಾವಿರಾರು ಭಕ್ತಾದಿಗಳ ಜಯಘೋಷದೊಂದಿಗೆ ನಡೆಯಿತು. ಬೆಳಿಗ್ಗೆ ಶ್ರೀ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ವಿ.ಎಸ್. ಭಟ್ ಅವರು ವೈದಿಕ ವಿಧಾನಗಳನ್ನು ನೆರವೇರಿಸಿದರು. ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು. ಬಳಿಕ ಭಕ್ತಾದಿಗಳ ಜಯಘೋಷದೊಂದಿಗೆ ಧ್ವಜಾರೋಹಣ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ

ಇಂದಿನಿಂದ ಪುತ್ತೂರು ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಭಕ್ತರ ಜಯಘೋಷದೊಂದಿಗೆ ನೆರವೇರಿದ ಧ್ವಜಾರೋಹಣ | ಸಾವಿರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆ Read More »

ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಪ್ರಿವೆಡ್ಡಿಂಗ್‌ ಫೋಟೊಶೂಟ್‌ ನಿಷೇಧ

ಧಾರ್ಮಿಕ ವಾತಾವರಣಕ್ಕೆ ಅಪಚಾರವಾಗುತ್ತಿರುವ ಹಿನ್ನೆಲೆಯಲ್ಲಿ ಪರ್ಯಾಯ ಪುತ್ತಿಗೆ ಮಠ ನಿರ್ಧಾರ ಉಡುಪಿ : ಈಗ ಪ್ರಿವೆಡ್ಡಿಂಗ್‌ ಫೋಟೊಶೂಟ್‌ ಬಹಳ ಜನಪ್ರಿಯವಾಗಿದೆ. ಮದುವೆಗೆ ಮುಂಚಿತವಾಗಿ ಬೇರೆ ಬೇರೆ ತಾಣಗಳಿಗೆ ಹೋಗಿ ಭಾವಿ ಪತಿ-ಪತ್ನಿಯರು ನಾನಾ ಭಂಗಿಗಳಲ್ಲಿ ಫೊಟೊ ತೆಗೆಸಿಕೊಂಡು, ವೀಡಿಯೊ ಮಾಡಿಕೊಂಡು ಸಂಭ್ರಮಿಸುವುದು ಸಾಮಾನ್ಯವಾಗುತ್ತಿದೆ. ಇದಕ್ಕಾಗಿ ಲಕ್ಷಗಟ್ಟಲೆ ಖರ್ಚು ಮಾಡುವವರು ಇದ್ದಾರೆ. ಹಾಗೆಯೇ ಫೋಟೊಶೂಟ್‌ ಮಾಡಿಸಿಕೊಳ್ಳಲು ಬೇರೆ ಬೇರೆ ತಾಣಗಳನ್ನು ಹುಡುಕಾಡಿಕೊಂಡು ಹೋಗುತ್ತಾರೆ. ಈಗ ಪವಿತ್ರ ಧಾರ್ಮಿಕ ಸ್ಥಳವಾಗಿರುವ ಉಡುಪಿಯ ಕೃಷ್ಣ ಮಠದ ಪರಿಸರವೂ ಇಂಥ ತಾಣವಾಗುತ್ತಿರುವುದು ಇಲ್ಲಿನ

ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಪ್ರಿವೆಡ್ಡಿಂಗ್‌ ಫೋಟೊಶೂಟ್‌ ನಿಷೇಧ Read More »

error: Content is protected !!
Scroll to Top