ಧಾರ್ಮಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದಂದು ಡ್ರೋನ್ ಹಾರಾಟಕ್ಕೆ ಅವಕಾಶವಿಲ್ಲ | ವರ್ಷಾವಧಿ ಜಾತ್ರೆಯ ಅಂಗವಾಗಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದಂದು ಯಾವುದೇ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಸುರಕ್ಷತಾ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸ್ಟಾಲ್ ನವರಿಗೆ ಯಾವುದೇ ಕಾರಣ ವಿದ್ಯುತ್ ಸಂಪರ್ಕವಿಲ್ಲ. ದೇವಸ್ಥಾನದ ಆಸುಪಾಸಿನಲ್ಲಿ ಯಾವುದೇ ವಾಹನ ನಿಲುಗಡೆಗೂ ಅವಕಾಶ ಕೊಡುವಂತಿಲ್ಲ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ೧೦ ರಿಂದ ೨೦ ರ ತನಕ ನಡೆಯುವ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ದೇವಸ್ಥಾನದ ವಠಾರದಲ್ಲಿ ನಡೆದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಜನ ಸಂದಣಿತ […]

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದಂದು ಡ್ರೋನ್ ಹಾರಾಟಕ್ಕೆ ಅವಕಾಶವಿಲ್ಲ | ವರ್ಷಾವಧಿ ಜಾತ್ರೆಯ ಅಂಗವಾಗಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ Read More »

SPYSS ಹಾಗೂ ಶ್ರೀ ರಾಮ ಸಮುದಾಯ ಭವನ ಶಾಖೆ ಬೆಳಿಯೂರುಕಟ್ಟೆ ಇದರ ಸಹಯೋಗದಲ್ಲಿ ಮಾತೃ ವಂದನ ಕಾರ್ಯಕ್ರಮ

ಪುತ್ತೂರು : ತಾಲೂಕು ಬೆಳಿಯೂರು ಕಟ್ಟೆಯಲ್ಲಿ ಶ್ರೀರಾಮ ಸಮುದಾಯ ಶಾಖೆಯ ಮಾತೃ ಪೂಜನ, ಮಾತೃ ವಂದನ,ಮಾತೃ ಧ್ಯಾನ ಮತ್ತು ಮಾತೃ ಭೋಜನ ಕಾರ್ಯಕ್ರಮ  ಮಾ.23 ಭಾನುವಾರದಂದು ನಡೆಯಿತು. ಪ್ರಾಂತ ಪ್ರಶಿಕ್ಷಣ ಪ್ರಮುಖರು ಲಕ್ಷ್ಮೀ ನಾರಾಯಣ, ಇವರು ತಾಯಿ ಹೃದಯದ ಅಂತಕರಣದ ವಿವಿಧ ಸ್ತರಗಳನ್ನು ಭಾವುಕರಾಗಿ ತಿಳಿಸಿದ ರೀತಿ  ಜನ್ಮ ಜನ್ಮಾoತರದ ನೆನಪು ಇರುವಂತೆ  ಮೂಡಿಸಿರುತ್ತಾರೆ. ಮಾತ್ರವಲ್ಲ ಮಾತೃ ಧ್ಯಾನದ ಮೂಲಕ ತಾಯಿ ಮತ್ತು ನಮ್ಮ ರಕ್ತ ಸಂಬಂಧವನ್ನು ಮತ್ತೆ ಹಸಿರಾಗಿಸಿ ನಮ್ಮ ಉಸಿರಿನಲ್ಲಿ  ಬೆರೆತಿರುವುದನ್ನು  ಅರಿವಿಗೆ ತಂದರು.

SPYSS ಹಾಗೂ ಶ್ರೀ ರಾಮ ಸಮುದಾಯ ಭವನ ಶಾಖೆ ಬೆಳಿಯೂರುಕಟ್ಟೆ ಇದರ ಸಹಯೋಗದಲ್ಲಿ ಮಾತೃ ವಂದನ ಕಾರ್ಯಕ್ರಮ Read More »

ಕುಕ್ಕೆಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸಾಮೂಹಿಕ ವಿವಾಹ | ದಾಂಪತ್ಯ ಜೀವನಕ್ಕೆ ಕಾಲಿರಿಸಿದ 10 ನವಜೋಡಿಗಳು

ಕಾಣಿಯೂರು : ಕರ್ನಾಟಕ ಸರಕಾರ, ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯಿ ದತ್ತಿ ಇಲಾಖೆ, ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ‘ಮಾಂಗಲ್ಯ ಭಾಗ್ಯ’ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆದಿ ಸುಬ್ರಹ್ಮಣ್ಯದ ಕಲ್ಯಾಣ ಮಂಟಪದಲ್ಲಿ ನಡೆಯಿತು. ಪೂರ್ವಾಹ್ನ ಗಂಟೆ 11ರಿಂದ 12ರ ವೃಷಭ ಲಗ್ನದಲ್ಲಿ ವಿವಾಹ ಮುಹೂರ್ತ ನೆರವೇರಿತು. 10 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಪುರೋಹಿತ ಮಧುಸೂಧನ ಕಲ್ಲೂರಾಯ ಅವರ ನೇತೃತ್ವದಲ್ಲಿ ಅರ್ಚಕ ವರ್ಗದವರು ಧಾರ್ಮಿಕ ವಿಧಿ

ಕುಕ್ಕೆಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸಾಮೂಹಿಕ ವಿವಾಹ | ದಾಂಪತ್ಯ ಜೀವನಕ್ಕೆ ಕಾಲಿರಿಸಿದ 10 ನವಜೋಡಿಗಳು Read More »

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದಾನ | ಇಂದು ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತ

ಪುತ್ತೂರು : ಹತ್ತೂರು ಒಡೆಯ ಪುತ್ತೂರಿನ ಮಹತೋಬಾರ ಶ್ರೀ ಮಹಾಲಿಂಗೇಶ್ವರ ಅನೇಕ ಇತಿಹಾಸವನ್ನು ಒಳಗೊಂಡಿದೆ. ಕಾರಣಿಕ ಕಥೆಯನ್ನು ಹೊಂದಿರುವ  ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದ ಅಗಳುಗಳು ಮುತ್ತಾಗಿರುವ  ಇತಿಹಾಸವಿದೆ. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಈ ಬಾರಿಯ ಜಾತ್ರೆಯಲ್ಲಿ ಭಕ್ತರಿಗೆ ಅನ್ನಪ್ರಸಾದವನ್ನು ದೇವಳದ ಕೆರೆಯ ಬಳಿಯ ವಿಶಾಲವಾದ ಜಾಗದಲ್ಲಿ ವಿತರಣೆ ಮಾಡುವುದೆಂದು ತೀರ್ಮಾನಿಸಿದಂತೆ ಮಾ.24ರಂದು ದೇವಳದ ಕೆರೆಯ ಬಳಿ ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತವನ್ನು ನೆರವೇರಿಸಿದರು. ಇದೀಗ ಈ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದಾನ | ಇಂದು ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತ Read More »

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕುಕ್ಕೆ ಆಡಳಿತ ಮಂಡಳಿಗೆ ಸೇರಿಸುವ ಯತ್ನ : ಜನರ ವಿರೋಧ

ರೌಡಿಶೀಟರ್‌ ಕಾಂಗ್ರೆಸ್‌ ಮುಖಂಡನ ಸೇರ್ಪಡೆಗೆ ಸಚಿವ ದಿನೇಶ್‌ ಗುಂಡೂರಾವ್‌ ಶಿಫಾರಸ್ಸು ಮಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಟ್ಟ ದೇವಸ್ಥಾನಗಳ ಪೈಕಿ ಆದಾಯದಲ್ಲಿ ನಂಬರ್‌ ಒನ್‌ ಸ್ಥಾನದಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ಮಾಜಿ ರೌಡಿಶೀಟರ್‌ ಆಗಿರುವ ಕಾಂಗ್ರೆಸ್‌ ಮುಖಂಡರೊಬ್ಬರನ್ನು ಸೇರಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಮುಂದಾಗಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಈ ಕಾಂಗ್ರೆಸ್‌ ಮುಖಂಡ ಹಿಂದೆ ನಕಲಿ ಚೆಕ್ ನೀಡಿ ಹಣ್ಣುಕಾಯಿ ಟೆಂಡರ್ ಮಾಡಿ ದೇವಸ್ಥಾನಕ್ಕೆ ವಂಚಿಸಿದ ಪ್ರಕರಣವಿದೆ. ಮಾಜಿ ರೌಡಿಶೀಟರ್ ಆಗಿರುವ

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕುಕ್ಕೆ ಆಡಳಿತ ಮಂಡಳಿಗೆ ಸೇರಿಸುವ ಯತ್ನ : ಜನರ ವಿರೋಧ Read More »

ಏ.11-12 : ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 21ನೇ ಪ್ರತಿಷ್ಠಾ ವಾರ್ಷಿಕೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 21 ನೇ ಪ್ರತಿಷ್ಠಾ ವಾರ್ಷಿಕೋತ್ಸವ ಏಪ್ರಿಲ್ 11 ಮತ್ತು 12 ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಮಾಜಿ ವ್ಯವಸ್ಥಾಪನ ಸದಸ್ಯ ಪದ್ಮನಾಭ ಅಳಿಕೆಮಜಲು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಡಿ. ಎಸ್ ವಿದ್ಯಾಧರ, ನಿಕಟಪೂರ್ವ ಅಧ್ಯಕ್ಷ ಡಿ. ಎಸ್ ಪ್ರದೀಪ್, ಗಿರೀಶ್, ದೇವಾಲಯದ ಅರ್ಚಕರಾದ ವಿಶ್ವಾಸ್ ಎಂ. ಭಟ್, ಉತ್ಸವ ಸಮಿತಿ ಅಧ್ಯಕ್ಷ ಕೆ. ಕೆ. ಸೀತಾರಾಮ,

ಏ.11-12 : ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 21ನೇ ಪ್ರತಿಷ್ಠಾ ವಾರ್ಷಿಕೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಮಾ.25-26 : ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ 11ನೇ ವರ್ಷದ ಪ್ರತಿಷ್ಠಾವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ

ಮುಗೇರು : ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಮಾ.25 ಬುಧವಾರದಂದು 11ನೇ ವರ್ಷದ ಪ್ರತಿಷ್ಠಾವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ ಬ್ರಹ್ಮಶ್ರೀ ನೀಲೇಶ್ವರ ಆರೋತ್‍ ಪದ್ಮನಾಭ ತಂತ್ರಿಗಳ ದಿವ್ಯ ನೇತೃತ್ವದಲ್ಲಿ ನಡೆಯಲಿದೆ. ಮಾ.18  ಮಂಗಳವಾರದಂದು ಬೆಳಗ್ಗೆ 10 ಗಂಟೆಗೆ ಗೊನೆ ಮುಹೂರ್ತ ನಡೆದಿದ್ದು, ಮಾ.25 ಮಂಗಳವಾರ ಬೆಳಗ್ಗೆ 6:30ಕ್ಕೆ ಅರ್ಧ ಏಕಾಹ ಭಜನೆ ಪ್ರಾರಂಭ, ಬೆಳಗ್ಗೆ 10 ಗಂಟೆಗೆ ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ, ಬಳಿಕ ಭಕ್ತಾದಿಗಳಿಂದ ಸ್ವಚ್ಛತೆ ಹಾಗೂ ಅಲಂಕಾರ ಸೇವೆ, ಸಂಜೆ 5

ಮಾ.25-26 : ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ 11ನೇ ವರ್ಷದ ಪ್ರತಿಷ್ಠಾವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ Read More »

ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಶ್ವತ್ಥ ಪೂಜಾ ಕಾರ್ಯ

ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಶ್ವತ್ಥ ಪೂಜಾ ಕಾರ್ಯ ಮಾ. 21 ಶುಕ್ರವಾರ ( ಇಂದು ) ನಡೆಯಿತು. ಮಾ. 21, 2025 ಶುಕ್ರವಾರ ಪೂರ್ವಾಹ್ನ ಗಂಟೆ 8.00ರಿಂದ ಅಭಿಷೇಕ,ಗಣಹೋಮ, ಅಶ್ವತ್ಥ ಪೂಜೆ ನೆರವೇರಿತು. ಪೂರ್ವಾಹ್ನ ಗಂಟೆ 9.00ರಿಂದ ಶ್ರೀ ಲಕ್ಷ್ಮೀಪ್ರಿಯ ಭಜನಾ ಮಂಡಳಿ ಬೆಳಂದೂರು ವಲಯ ಇವರಿಂದ ಭಜನಾ ಕಾರ್ಯಕ್ರಮ, ಪೂರ್ವಾಹ್ನ ಗಂಟೆ 11.30ರಿಂದ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು. ಸಂಜೆ 5: 30ರಿಂದ ದುರ್ಗಾಪೂಜೆ ಮತ್ತು ದೀಪಾರಾಧನೆ, ಸಂಜೆ 6.00ರಿಂದ 7.00 ಗಂಟೆಯವರೆಗೆ

ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಶ್ವತ್ಥ ಪೂಜಾ ಕಾರ್ಯ Read More »

ಕಾಯಿಮಣ ಮರಕ್ಕಡ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲ ನೇಮೋತ್ಸವ ಆರಂಭ- ಧ್ವಜಾರೋಹಣ | ಮಾ.24 ರಂದು ರಾತ್ರಿ ಶ್ರೀ ಚಾಮುಂಡಿ ದೈವದ ನೇಮೋತ್ಸವ

ಕಾಣಿಯೂರು: ಕಾಯಿಮಣ ಗ್ರಾಮದ ಮರಕ್ಕಡ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲ ನೇಮೋತ್ಸವ ಮಾ 20ರಂದು ಪ್ರಾರಂಭಗೊಂಡಿತು. ರಾತ್ರಿ ದೈವಗಳ ಭಂಡಾರ ತೆಗೆದು, ಕಲ್ಲಮಾಡದಲ್ಲಿ ಧ್ವಜಾರೋಹಣ ನಡೆಯಿತು. ಮಾ 21ರಂದು ಕಲ್ಲಮಾಡದಲ್ಲಿ ಧ್ವಜಾಪೂಜೆ, ಮಾ 22ರಂದು ಬೆಳಿಗ್ಗೆ ಮಲ್ಲಾರ ದೈವದ ನೇಮೋತ್ಸವ, ದೈಯರ ದೈವದ ನೇಮೋತ್ಸವ, ರಾತ್ರಿ ಭಜನಾ ಕಾರ್ಯಕ್ರಮ ನಡೆಯಲಿದೆ. ಮಾ 23ರಂದು ಮಧ್ಯಾಹ್ನ ಎಲ್ಯಾರ ದೈವದ ನೇಮೋತ್ಸವ, ಬಳಿಕ ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ನಾಯರ್ ದೈವದ ನೇಮೋತ್ಸವ, ರಾತ್ರಿ ಅಂಙಣ ಪಂಜುರ್ಲಿ ಮತ್ತು ಗುಳಿಗ ದೈವದ ನೇಮೋತ್ಸವ

ಕಾಯಿಮಣ ಮರಕ್ಕಡ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲ ನೇಮೋತ್ಸವ ಆರಂಭ- ಧ್ವಜಾರೋಹಣ | ಮಾ.24 ರಂದು ರಾತ್ರಿ ಶ್ರೀ ಚಾಮುಂಡಿ ದೈವದ ನೇಮೋತ್ಸವ Read More »

ಮಾ.22-23 : ಬಾಲ್ಯೊಟ್ಟು ನಮ್ಮ ಮನೆಯಲ್ಲಿ ರಾಜನ್ ದೈವದ ಧರ್ಮನೇಮೋತ್ಸವ

ಪುತ್ತೂರು : ಬಾಲ್ಯೊಟ್ಟು ನಮ್ಮ ಮನೆಯಲ್ಲಿ ರಾಜನ್ ದೈವದ ಧರ್ಮನೇಮ ಮಾ.22 ಶನಿವಾರದಿಂದ ಮಾ. 23 ಭಾನುವಾರದವರೆಗೆ ನಡೆಯಲಿದೆ.ಮಾ.22 ರಂದು ಶನಿವಾರ ಬೆಳಗ್ಗೆ 4ಗಂಟೆಗೆ ಶ್ರೀ ರಣಮಂಗಲ ಸುಬ್ರಹ್ಮಣ್ಯೇಶ್ವರ ಕ್ಷೇತ್ರದಿಂದ ದೈವಗಲ ಭಂಡಾರ ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ಆಗಮಿಸಲಿದೆ. ರಾತ್ರಿ 7ಗಂಟೆಗೆ ಶ್ರೀ ಕ್ಷೇತ್ರದಲ್ಲಿ ದೈವಗಳ ತಂಬಿಲ, ರಾತ್ರಿ 8ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಶ್ರೀ ವಿಷ್ಣುಮೂರ್ತಿ ದೇವರಿಗೆ ರಂಗಪೂಜೆ, ರಾತ್ರಿ 9ಗಂಟೆಗೆ ಶ್ರೀ ಕ್ಷೇತ್ರದಿಂದ ದೈವಗಳ ಭಂಡಾರ ಬಾಲ್ಯೊಟ್ಟು ಮನೆಗೆ ಬರಲಿದೆ. ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಮಾ,23

ಮಾ.22-23 : ಬಾಲ್ಯೊಟ್ಟು ನಮ್ಮ ಮನೆಯಲ್ಲಿ ರಾಜನ್ ದೈವದ ಧರ್ಮನೇಮೋತ್ಸವ Read More »

error: Content is protected !!
Scroll to Top