ಧಾರ್ಮಿಕ

ಯಕ್ಷ ಭಾರತಿಯಿಂದ ಮಧೂರಿನಲ್ಲಿ  ದೇವದರ್ಶನ ತಾಳಮದ್ದಳೆ

ಮಧೂರು : ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನ ಮಧೂರು ಅಷ್ಟ ಬಂಧ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವಾಗಿ  ಯಕ್ಷ ಭಾರತಿ ರಿ. ಬೆಳ್ತಂಗಡಿ ತಂಡದಿಂದ ಮದವೂರ ವಿಘ್ನೇಶ  ವೇದಿಕೆಯಲ್ಲಿ ದೇವ ದರ್ಶನ ತಾಳಮದ್ದಳೆ ಜರಗಿತು.  ಭಾಗವತರಾಗಿ ನಾರಾಯಣ ಶರ್ಮ ಕಾಟುಕುಕ್ಕೆ,ಹಿಮ್ಮೇಳದಲ್ಲಿ ಲಕ್ಷ್ಮೀಶ ಬೆಂಗರೋಡಿ, ರಾಜೇಂದ್ರ ಪ್ರಸಾದ್  ಪುಂಡಿಕಾಯಿ, ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ , ಅರ್ಥದಾರಿಗಳಾಗಿ ವಾಸುದೇವ ರಂಗಾಭಟ್ ಮಧೂರು (ಬಲರಾಮ ), ಗುರುರಾಜ ಹೊಳ್ಳ ಬಾಯಾರು (ನಾರದ ),  ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀ ಕೃಷ್ಣ ), […]

ಯಕ್ಷ ಭಾರತಿಯಿಂದ ಮಧೂರಿನಲ್ಲಿ  ದೇವದರ್ಶನ ತಾಳಮದ್ದಳೆ Read More »

ಏ.10-20 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಜಾತ್ರೋತ್ಸವಕ್ಕೆ ನಡೆಯಿತು ಗೊನೆ ಮುಹೂರ್ತ

ಪುತ್ತೂರು : ಏ.10 ರಿಂದ 20 ರ ತನಕ ವೈಭವದಿಂದ ನಡೆಯಲಿರುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಮಂಗಳವಾರ ಬೆಳಿಗ್ಗೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯರು ಗರ್ಭಗುಡಿಯಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ವಾದ್ಯದೊಂದಿಗೆ ಸ್ಥಳೀಯ ತೋಟವೊಂದರಲ್ಲಿ ವೆ.ಮೂರ್ತಿ ವಿ.ಎಸ್.ಭಟ್ ಗೊನೆ ಕಡಿಯುವ ಮೂಲಕ ಗೊನೆಮುಹೂರ್ತಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಶಾಸಕ ಅಶೋಕ್ ಕುಮಾರ್ ರೈ,

ಏ.10-20 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಜಾತ್ರೋತ್ಸವಕ್ಕೆ ನಡೆಯಿತು ಗೊನೆ ಮುಹೂರ್ತ Read More »

ಬಾರ್ಯ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆಯ ಅಧ್ಯಕ್ಷರಾದ ಭಾಸ್ಕರ ಬಾರ್ಯ ನೇತ್ರತ್ವದಲ್ಲಿ ದೇವಳದ ಪ್ರಾಂಗಣದಲ್ಲಿ ನಡೆಯಿತು.  2025 ಫೆಬ್ರವರಿಯಲ್ಲಿ ಜರಗಿದ ಜಾತ್ರೆಯ ಆಯವ್ಯಯವನ್ನು  ಮಂಡಿಸಲಾಯಿತು. ಏಪ್ರಿಲ್ 13 ರಂದು ಲೋಕಕಲ್ಯಾಣಕ್ಕಾಗಿ  ದೇವಾಲಯದಲ್ಲಿ ಶ್ರೀ ವಿಷ್ಣು ಸಹಸ್ರನಾಮ ಹೋಮ ಮತ್ತು ಧಾರ್ಮಿಕ ಸಭೆ ನಡೆಸುವುದೆಂದು ನಿರ್ಧರಿಸಲಾಯಿತು. ದೇವಳ ಆಡಳಿತ ಟ್ರಸ್ಟ್  ಕಾರ್ಯದರ್ಶಿ ಪ್ರಶಾಂತ್ ಪೈ , ಉಪಾಧ್ಯಕ್ಷ ನಾರಾಯಣ ಗೌಡ ಮೂರುಗೋಳಿ , ಕೋಶಾಧಿಕಾರಿ ಸೇಸಪ್ಪ ಸಾಲಿಯಾನ್ , ಪವಿತ್ರಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ

ಬಾರ್ಯ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ Read More »

ಅಕ್ಷಯ ಕಾಲೇಜಿನಲ್ಲಿ ಇಫ್ತಾರ್ ಕೂಟ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಫ್ತಾರ ಕೂಟ ಆಚರಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು, ಸಂಪ್ಯದ ಮುಸ್ಲಿಂ ಬಾಂಧವರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು.  ಆದರ್ಶ ಎಲೆಕ್ಟ್ರಾನಿಕ್ಸ್ ಅಂಡ್ ಫರ್ನಿಚರ್ಸ್ ನ ಮಾಲಕ ಅಬ್ದುಲ್ ರಹಮಾನ್ ಇಫ್ತಾರ್ ಕೂಟದಲ್ಲಿ ಭಾಗವಹಿಸಿ, ಇದೊಂದು ಉತ್ತಮವಾದ ಕಾರ್ಯಕ್ರಮವನ್ನು ಕಾಲೇಜು ಆಯೋಜಿಸಿದೆ ಹಾಗೂ ಸರ್ವಧರ್ಮ ಸಮನ್ವಯ ಎನ್ನುವ ಶೀರ್ಷಿಕೆಯಡಿ ಏಕತೆಯನ್ನು ಸಾರುವ ಜಯಂತ ನಡುಬೈಲು ಅವರ ಯೋಚನೆ ಶ್ಲಾಘನೀಯ ಎಂದರು. ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು, ಆಡಳಿತಾಧಿಕಾರಿ

ಅಕ್ಷಯ ಕಾಲೇಜಿನಲ್ಲಿ ಇಫ್ತಾರ್ ಕೂಟ Read More »

ಮನೆ ಬಾಗಿಲಿಗೆ ಬರಲಿದೆ ದೇವರ ಪ್ರಸಾದ

ಕೊಲ್ಲೂರು, ಕುಕ್ಕೆ ಸಹಿತ ಪ್ರಮುಖ ದೇವಸ್ಥಾನಗಳ ಪ್ರಸಾದ ಆನ್‌ಲೈನ್‌ ಮೂಲಕ ವಿತರಣೆ ಬೆಂಗಳೂರು: ಇನ್ನು ಮುಂದೆ ಕರ್ನಾಟಕದ 14 ಪ್ರಮುಖ ದೇವಸ್ಥಾನಗಳ ಪ್ರಸಾದ ಭಕ್ತರ ಮನೆ ಬಾಗಿಲಿಗೆ ಬರಲಿದೆ. ಕಲ್ಲುಸಕ್ಕರೆ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಭಸ್ಮ, ಬಿಲ್ವಪತ್ರೆ, ಕುಂಕುಮ, ಹೂವಿನ ಪ್ರಸಾದವನ್ನು ಭಕ್ತರು ತಾವಿದ್ದಲ್ಲಿಗೆ ತರಿಸಿಕೊಳ್ಳಬಹುದು. ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕಾ ದೇಗುಲ ಸೇರಿದಂತೆ ರಾಜ್ಯದ ಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ದೇಗುಲಗಳ ಪ್ರಸಾದ ಆನ್​ಲೈನ್ ಮೂಲಕ ವಿತರಿಸುವ ಇ-ಪ್ರಸಾದ ಕಾರ್ಯಕ್ರಮಕ್ಕೆ ಗುರುವಾರ ಮುಜರಾಯಿ ‌ಸಚಿವ ರಾಮಲಿಂಗಾರೆಡ್ಡಿ

ಮನೆ ಬಾಗಿಲಿಗೆ ಬರಲಿದೆ ದೇವರ ಪ್ರಸಾದ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದಂದು ಡ್ರೋನ್ ಹಾರಾಟಕ್ಕೆ ಅವಕಾಶವಿಲ್ಲ | ವರ್ಷಾವಧಿ ಜಾತ್ರೆಯ ಅಂಗವಾಗಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದಂದು ಯಾವುದೇ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಸುರಕ್ಷತಾ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸ್ಟಾಲ್ ನವರಿಗೆ ಯಾವುದೇ ಕಾರಣ ವಿದ್ಯುತ್ ಸಂಪರ್ಕವಿಲ್ಲ. ದೇವಸ್ಥಾನದ ಆಸುಪಾಸಿನಲ್ಲಿ ಯಾವುದೇ ವಾಹನ ನಿಲುಗಡೆಗೂ ಅವಕಾಶ ಕೊಡುವಂತಿಲ್ಲ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ೧೦ ರಿಂದ ೨೦ ರ ತನಕ ನಡೆಯುವ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ದೇವಸ್ಥಾನದ ವಠಾರದಲ್ಲಿ ನಡೆದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಜನ ಸಂದಣಿತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದಂದು ಡ್ರೋನ್ ಹಾರಾಟಕ್ಕೆ ಅವಕಾಶವಿಲ್ಲ | ವರ್ಷಾವಧಿ ಜಾತ್ರೆಯ ಅಂಗವಾಗಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ Read More »

SPYSS ಹಾಗೂ ಶ್ರೀ ರಾಮ ಸಮುದಾಯ ಭವನ ಶಾಖೆ ಬೆಳಿಯೂರುಕಟ್ಟೆ ಇದರ ಸಹಯೋಗದಲ್ಲಿ ಮಾತೃ ವಂದನ ಕಾರ್ಯಕ್ರಮ

ಪುತ್ತೂರು : ತಾಲೂಕು ಬೆಳಿಯೂರು ಕಟ್ಟೆಯಲ್ಲಿ ಶ್ರೀರಾಮ ಸಮುದಾಯ ಶಾಖೆಯ ಮಾತೃ ಪೂಜನ, ಮಾತೃ ವಂದನ,ಮಾತೃ ಧ್ಯಾನ ಮತ್ತು ಮಾತೃ ಭೋಜನ ಕಾರ್ಯಕ್ರಮ  ಮಾ.23 ಭಾನುವಾರದಂದು ನಡೆಯಿತು. ಪ್ರಾಂತ ಪ್ರಶಿಕ್ಷಣ ಪ್ರಮುಖರು ಲಕ್ಷ್ಮೀ ನಾರಾಯಣ, ಇವರು ತಾಯಿ ಹೃದಯದ ಅಂತಕರಣದ ವಿವಿಧ ಸ್ತರಗಳನ್ನು ಭಾವುಕರಾಗಿ ತಿಳಿಸಿದ ರೀತಿ  ಜನ್ಮ ಜನ್ಮಾoತರದ ನೆನಪು ಇರುವಂತೆ  ಮೂಡಿಸಿರುತ್ತಾರೆ. ಮಾತ್ರವಲ್ಲ ಮಾತೃ ಧ್ಯಾನದ ಮೂಲಕ ತಾಯಿ ಮತ್ತು ನಮ್ಮ ರಕ್ತ ಸಂಬಂಧವನ್ನು ಮತ್ತೆ ಹಸಿರಾಗಿಸಿ ನಮ್ಮ ಉಸಿರಿನಲ್ಲಿ  ಬೆರೆತಿರುವುದನ್ನು  ಅರಿವಿಗೆ ತಂದರು.

SPYSS ಹಾಗೂ ಶ್ರೀ ರಾಮ ಸಮುದಾಯ ಭವನ ಶಾಖೆ ಬೆಳಿಯೂರುಕಟ್ಟೆ ಇದರ ಸಹಯೋಗದಲ್ಲಿ ಮಾತೃ ವಂದನ ಕಾರ್ಯಕ್ರಮ Read More »

ಕುಕ್ಕೆಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸಾಮೂಹಿಕ ವಿವಾಹ | ದಾಂಪತ್ಯ ಜೀವನಕ್ಕೆ ಕಾಲಿರಿಸಿದ 10 ನವಜೋಡಿಗಳು

ಕಾಣಿಯೂರು : ಕರ್ನಾಟಕ ಸರಕಾರ, ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯಿ ದತ್ತಿ ಇಲಾಖೆ, ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ‘ಮಾಂಗಲ್ಯ ಭಾಗ್ಯ’ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆದಿ ಸುಬ್ರಹ್ಮಣ್ಯದ ಕಲ್ಯಾಣ ಮಂಟಪದಲ್ಲಿ ನಡೆಯಿತು. ಪೂರ್ವಾಹ್ನ ಗಂಟೆ 11ರಿಂದ 12ರ ವೃಷಭ ಲಗ್ನದಲ್ಲಿ ವಿವಾಹ ಮುಹೂರ್ತ ನೆರವೇರಿತು. 10 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಪುರೋಹಿತ ಮಧುಸೂಧನ ಕಲ್ಲೂರಾಯ ಅವರ ನೇತೃತ್ವದಲ್ಲಿ ಅರ್ಚಕ ವರ್ಗದವರು ಧಾರ್ಮಿಕ ವಿಧಿ

ಕುಕ್ಕೆಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸಾಮೂಹಿಕ ವಿವಾಹ | ದಾಂಪತ್ಯ ಜೀವನಕ್ಕೆ ಕಾಲಿರಿಸಿದ 10 ನವಜೋಡಿಗಳು Read More »

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದಾನ | ಇಂದು ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತ

ಪುತ್ತೂರು : ಹತ್ತೂರು ಒಡೆಯ ಪುತ್ತೂರಿನ ಮಹತೋಬಾರ ಶ್ರೀ ಮಹಾಲಿಂಗೇಶ್ವರ ಅನೇಕ ಇತಿಹಾಸವನ್ನು ಒಳಗೊಂಡಿದೆ. ಕಾರಣಿಕ ಕಥೆಯನ್ನು ಹೊಂದಿರುವ  ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದ ಅಗಳುಗಳು ಮುತ್ತಾಗಿರುವ  ಇತಿಹಾಸವಿದೆ. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಈ ಬಾರಿಯ ಜಾತ್ರೆಯಲ್ಲಿ ಭಕ್ತರಿಗೆ ಅನ್ನಪ್ರಸಾದವನ್ನು ದೇವಳದ ಕೆರೆಯ ಬಳಿಯ ವಿಶಾಲವಾದ ಜಾಗದಲ್ಲಿ ವಿತರಣೆ ಮಾಡುವುದೆಂದು ತೀರ್ಮಾನಿಸಿದಂತೆ ಮಾ.24ರಂದು ದೇವಳದ ಕೆರೆಯ ಬಳಿ ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತವನ್ನು ನೆರವೇರಿಸಿದರು. ಇದೀಗ ಈ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದಾನ | ಇಂದು ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತ Read More »

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕುಕ್ಕೆ ಆಡಳಿತ ಮಂಡಳಿಗೆ ಸೇರಿಸುವ ಯತ್ನ : ಜನರ ವಿರೋಧ

ರೌಡಿಶೀಟರ್‌ ಕಾಂಗ್ರೆಸ್‌ ಮುಖಂಡನ ಸೇರ್ಪಡೆಗೆ ಸಚಿವ ದಿನೇಶ್‌ ಗುಂಡೂರಾವ್‌ ಶಿಫಾರಸ್ಸು ಮಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಟ್ಟ ದೇವಸ್ಥಾನಗಳ ಪೈಕಿ ಆದಾಯದಲ್ಲಿ ನಂಬರ್‌ ಒನ್‌ ಸ್ಥಾನದಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ಮಾಜಿ ರೌಡಿಶೀಟರ್‌ ಆಗಿರುವ ಕಾಂಗ್ರೆಸ್‌ ಮುಖಂಡರೊಬ್ಬರನ್ನು ಸೇರಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಮುಂದಾಗಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಈ ಕಾಂಗ್ರೆಸ್‌ ಮುಖಂಡ ಹಿಂದೆ ನಕಲಿ ಚೆಕ್ ನೀಡಿ ಹಣ್ಣುಕಾಯಿ ಟೆಂಡರ್ ಮಾಡಿ ದೇವಸ್ಥಾನಕ್ಕೆ ವಂಚಿಸಿದ ಪ್ರಕರಣವಿದೆ. ಮಾಜಿ ರೌಡಿಶೀಟರ್ ಆಗಿರುವ

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕುಕ್ಕೆ ಆಡಳಿತ ಮಂಡಳಿಗೆ ಸೇರಿಸುವ ಯತ್ನ : ಜನರ ವಿರೋಧ Read More »

error: Content is protected !!
Scroll to Top