ಧಾರ್ಮಿಕ

ಮಾ. 9 :  ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವ  ಹಾಗೂ ಸಪರಿವಾರ ದೈವಗಳ ನೇಮೋತ್ಸವ 

ಕುದ್ಮಾರು : ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವ ಹಾಗೂ ಸಪರಿವಾರ ದೈವಗಳ ನೇಮೋತ್ಸವವು ಮಾ. 9 ಭಾನುವಾರದಂದು ಕುದ್ಮಾರು ಗ್ರಾಮದ ಅನ್ಯಾಡಿಯಲ್ಲಿ ಕಟ್ಟತ್ತಾರು ಕಟ್ಟೆ ಯಲ್ಲಿ ನಡೆಯಲಿದೆ. ನೇಮೋತ್ಸವದಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಸಂಜೆ 7 ಗಂಟೆಗೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್‍ ದೈವದ ದೈವಸ್ಥಾನ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯುವುದು. ರಾತ್ರಿ 8:30 ಕ್ಕೆ ದೈವಕ್ಕೆ ಎಣ್ಣೆ ಬೂಳ್ಯ ನೀಡುವುದು. ರಾತ್ರಿ 9 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 10 ಗಂಟೆಗೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್‍ ದೈವದ ಹಾಗೂ […]

ಮಾ. 9 :  ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವ  ಹಾಗೂ ಸಪರಿವಾರ ದೈವಗಳ ನೇಮೋತ್ಸವ  Read More »

ಕರಾವಳಿಯಲ್ಲಿ ರಮ್ಜಾನ್‌ ಉಪವಾಸ ಆರಂಭ

ನಿನ್ನೆ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಇಂದಿನಿಂದ ಒಂದು ತಿಂಗಳು ಪವಿತ್ರ ವ್ರತ ಬೆಂಗಳೂರು: ಅಮವಾಸ್ಯೆಯ ಹಿಂದಿನ ದಿನ ಚಂದ್ರನ ದರ್ಶನವಾದ ಹಿನ್ನಲೆಯಲ್ಲಿ ಭಾನುವಾರದಿಂದ ದೇಶಾದ್ಯಂತ ರಮ್ಜಾನ್ ಉಪವಾಸ ಆರಂಭಗೊಂಡಿದೆ. ನಿನ್ನೆ ಕೇರಳದಲ್ಲಿ ಚಂದ್ರದರ್ಶನವಾಗಿದ್ದು, ಹೀಗಾಗಿ ಕರಾವಳಿಯಲ್ಲೂ ಇಂದಿನಿಂದಲೇ ಮುಸ್ಲಿಮರು ಉಪವಾಸ ವ್ರತ ಆರಂಭಿಸಿದ್ದಾರೆ.ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಆಗಿರುವಂತ ಎಸ್‌ಎಂ ರಶೀದ್ ಕರಾವಳಿಯಲ್ಲಿ ಚಂದ್ರನ ದರ್ಶನವಾಗಿದೆ. ಹೀಗಾಗಿ ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಮಾಸ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ,

ಕರಾವಳಿಯಲ್ಲಿ ರಮ್ಜಾನ್‌ ಉಪವಾಸ ಆರಂಭ Read More »

ಕಾಣಿಯೂರು ಶ್ರೀ ರಾಮತೀರ್ಥ ಮಠದ ಜಾತ್ರೋತ್ಸವ

ಕಾಣಿಯೂರು : ಕಾಣಿಯೂರು  ಶ್ರೀ ಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನಮ್ ಉಡುಪಿ, ಕಾಣಿಯೂರು ಶ್ರೀ ರಾಮತೀರ್ಥ ಮಠದ ಜಾತ್ರೆಯು ಫೆ. 28ರಂದು ಪ್ರಾರಂಭಗೊಂಡಿದೆ.   ಫೆ.28ರಂದು ಸಂಜೆ ಕಾಣಿಯೂರು ಮಠದಲ್ಲಿ ರಂಗಪೂಜೆ, ರಾತ್ರಿ ಉಳ್ಳಾಕುಲು ದೈವಗಳ ಭಂಡಾರ ತೆಗೆದು ಶ್ರೀ ಕಾಣಿಯೂರು ಉಳ್ಳಾಕುಲು ಮಾಡದಲ್ಲಿ ಧ್ವಜಾರೋಹಣ ನಡೆಯಿತು.  ಈ ಸಂದರ್ಭದಲ್ಲಿ ಕಾಣಿಯೂರು ಮಠದ ವ್ಯವಸ್ಥಾಪಕರಾದ ಶ್ರೀನಿಧಿ ಆಚಾರ್ಯ, ಅರ್ಚಕ ಬಾಲಕೃಷ್ಣ ಅಸ್ರಣ್ಣ ಹಾಗೂ ಉತ್ಸವ ಸಮಿತಿ ಪದಾಧಿಕಾರಿಗಳು, ಕೊಡುಕಟ್ಟಿನವರು, ಗ್ರಾಮಸ್ಥರು, ಭಕ್ತಾಧಿಗಳು ಉಪಸ್ಥಿತರಿದ್ದರು. ಮಾ.1ರಂದು ಬೆಳಿಗ್ಗೆ ಕಾಣಿಯೂರು ಮಾಡದಲ್ಲಿ

ಕಾಣಿಯೂರು ಶ್ರೀ ರಾಮತೀರ್ಥ ಮಠದ ಜಾತ್ರೋತ್ಸವ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಕಂಬಳ ಕರೆಗೆ ಹಾಲು ಎರೆದು, ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದ ಈಶ್ವರ ಭಟ್‍ ಪಂಜಿಗುಡ್ಡೆ | ರಾಜ್ಯಮಟ್ಟದ ಕೆಸರುಗದ್ದೆ ಓಟಕ್ಕೆ ಚಾಲನೆ

ಪುತ್ತೂರು : ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ  ನಡೆಯುವ 32ನೇ ವರ್ಷದ ಇತಿಹಾಸ ಪ್ರಸಿದ್ಧ ಜಾನಪದ ಕ್ರೀಡೆಗಳಲ್ಲೊಂದಾದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಶನಿವಾರ ಬೆಳಿಗ್ಗೆ ಅದ್ದೂರಿ ಚಾಲನೆ ನೀಡಲಾಯಿತು. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ನಡೆಯುವ ಕಂಬಳಕ್ಕೆ ಶ್ರೀಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಕಂಬಳ ಸಮಿತಿ ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ ಕಂಬಳ ಕರೆಗೆ ಹಾಲು ಎರೆದು, ತೆಂಗಿನಕಾಯಿ

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಕಂಬಳ ಕರೆಗೆ ಹಾಲು ಎರೆದು, ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದ ಈಶ್ವರ ಭಟ್‍ ಪಂಜಿಗುಡ್ಡೆ | ರಾಜ್ಯಮಟ್ಟದ ಕೆಸರುಗದ್ದೆ ಓಟಕ್ಕೆ ಚಾಲನೆ Read More »

ಬಜ್ಪೆಯಲ್ಲಿ ಕಾಂತೇರಿ ಜುಮಾದಿ V/S ಎಂಎಸ್‌ಇಝಡ್‌ ಕಂಪನಿ : ದೈವಸ್ಥಾನ ಉಳಿಸಲು ಹೋರಾಟ

800 ವರ್ಷ ಪುರಾತನ ದೈವಸ್ಥಾನದ ಆರಾಧನೆಗೆ ತಡೆಯೊಡ್ಡಿದ ಅಧಿಕಾರಿಗಳ ವಿರುದ್ಧ ಭುಗಿಲೆದ್ದ ಆಕ್ರೋಶ ಮಂಗಳೂರು : ಬಜ್ಪೆ ಸಮೀಪ ಇರುವ ಕಾಂತೇರಿ ಜುಮಾದಿ ದೈವಸ್ಥಾನದಲ್ಲಿ ಆರಾಧನೆಗೆ ತಡೆಯೊಡ್ಡಿರುವ ಮಂಗಳೂರು ವಿಶೇಷ ಆರ್ಥಿಕ ವಲಯ (ಎಂಎಸ್‌ಇಝಡ್‌) ಅಧಿಕಾರಿಗಳ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಾಂತೇರಿ ಜುಮಾದಿ ದೈವಸ್ಥಾನ ಉಳಿಸಿ ಹೋರಾಟಕ್ಕೆ ತಯಾರಿ ನಡೆಯುತ್ತಿದೆ. ನಿನ್ನೆ ಮೊನ್ನೆ ಬಂದ ಎಂಎಸ್‌ಇಝಡ್‌ ಅಧಿಕಾರಿಗಳು 800 ವರ್ಷಕ್ಕೂ ಹಿಂದಿನ ದೈವದ ಆಚರಣೆ ಮತ್ತು ಆರಾಧನೆಗೆ ತಡೆಯೊಡ್ಡಿರುವುದು ಜನರ ಧಾರ್ಮಿಕ ನಂಬಿಕೆಯನ್ನು ಘಾಸಿಗೊಳಿಸಿದೆ. ಕಂಪನಿಯ

ಬಜ್ಪೆಯಲ್ಲಿ ಕಾಂತೇರಿ ಜುಮಾದಿ V/S ಎಂಎಸ್‌ಇಝಡ್‌ ಕಂಪನಿ : ದೈವಸ್ಥಾನ ಉಳಿಸಲು ಹೋರಾಟ Read More »

ಮಾ.1-2 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಮೇಳೈಸಲಿದೆ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ | ಚಲನಚಿತ್ರ ನಟಿ-ನಟಿಯರ ಮೆರುಗು | ಪ್ರಥಮ ಬಾರಿಗೆ ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ

ಪುತ್ತೂರು : 32ನೇ ವರ್ಷದ ಪುತ್ತೂರಿನ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಮಾ.1 ಹಾಗೂ 2 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹ ಆಶೀರ್ವಾದಗಳಿಂದ, ಪದ್ಮವಿಭೂಷಣ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಕೀರ್ತಿಶೇಷ ಜಯಂತ ರೈ ಹಾಗೂ ಮಾಜಿ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್

ಮಾ.1-2 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಮೇಳೈಸಲಿದೆ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ | ಚಲನಚಿತ್ರ ನಟಿ-ನಟಿಯರ ಮೆರುಗು | ಪ್ರಥಮ ಬಾರಿಗೆ ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ Read More »

ಮಹಾಕುಂಭಮೇಳಕ್ಕೆ ವೈಭವದ ತೆರೆ : 66 ಕೋಟಿಗೂ ಅಧಿಕ ಜನರಿಂದ ಪುಣ್ಯಸ್ನಾನ

183 ದೇಶಗಳ ಪ್ರತಿನಿಧಿಗಳು ಭಾಗಿ; 4 ಲಕ್ಷ ಕೋಟಿ ರೂಪಾಯಿಯಷ್ಟು ವ್ಯವಹಾರ ಪ್ರಯಾಗರಾಜ್ : ಮಕರ ಸಂಕ್ರಾಂತಿಯಂದು ಶುರುವಾಗಿ ಮಹಾಶಿವರಾತ್ರಿ ತನಕ 45 ದಿನಗಳ ಕಾಲ ನಡೆದ ವಿಶ್ವದ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಮಹಾಕುಂಭಮೇಳದಲ್ಲಿ 66 ಕೋಟಿಗೂ ಹೆಚ್ಚು ಜನ ತ್ರಿವೇಣಿ ಸಂಗಮದಲ್ಲಿ ತೀರ್ಥ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮಹಾಶಿವರಾತ್ರಿಯ ಸ್ನಾನದೊಂದಿಗೆ ವೈಭವದ ಮಹಾಕುಂಭಮೇಳ ಮುಕ್ತಾಯಗೊಂಡಿದೆ. ಮಹಾಕುಂಭದಲ್ಲಿ 5 ಪವಿತ್ರ ಸ್ನಾನಗಳು ನಡೆದವು. ಅವುಗಳಲ್ಲಿ ಮೂರು ಅಮೃತ ಸ್ನಾನಗಳು.

ಮಹಾಕುಂಭಮೇಳಕ್ಕೆ ವೈಭವದ ತೆರೆ : 66 ಕೋಟಿಗೂ ಅಧಿಕ ಜನರಿಂದ ಪುಣ್ಯಸ್ನಾನ Read More »

ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಜಾತ್ರೋತ್ಸವ

ಕಾಣಿಯೂರು: ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ವರ್ಷಾವಧಿ ಜಾತ್ರೋತ್ಸವವು ಫೆ24, 25ರಂದು ನಡೆಯಿತು. ಫೆ 25ರಂದು ಬೆಳಿಗ್ಗೆ ಬ್ರಹ್ಮಶ್ರೀ ನಿಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಗಣಪತಿ ಹವನ, ಜಂಬಶುದ್ದಿ, ಕಲಶ ಪೂಜೆ, ಕಲಶಾಭಿಷೇಕ, ನಾಗತಂಬಿಲ, ಕಲ್ಲುರ್ಟಿ ತಂಬಿಲ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ದೀಪರಾಧನೆ, ಮಹಾಪೂಜೆ, ರಾತ್ರಿ ಶ್ರೀ ದೇವರ ಬಲಿ ಉತ್ಸವ, ಕಟ್ಟೆ ಪೂಜೆ, ಬಟ್ಟಲು ಕಾಣಿಕೆ. ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಿತು. ಬಳಿಕ ಮಂಗಳೂರು

ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಜಾತ್ರೋತ್ಸವ Read More »

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ | ನೆರವೇರಿದ ಮಹಾರುದ್ರಯಾಗ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು | ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆ

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮಹಾರುದ್ರಯಾಗ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಿತು. ಮಹಾಶಿವರಾತ್ರಿ ಉತ್ಸವದ ವಿಶೇಷವಾಗಿ ಬೆಳಗ್ಗೆ 7:30ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ಗಂಟೆಗೆ ಶತರುದ್ರಾಭಿಷೇಕ ನಡೆಯಿತು. ವಿಶೇಷವಾಗಿ ದೇವಸ್ಥಾನದ ಒಳಾಂಗಣದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಮೂರ್ತಿಗೆ ಭಕ್ತಾದಿಗಳಿಂದ ಬಿಲ್ವಾರ್ಚನೆ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬೆಳಿಗ್ಗೆಯಿಂದಲೇ ಮಹಾಶಿವರಾತ್ರಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ | ನೆರವೇರಿದ ಮಹಾರುದ್ರಯಾಗ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು | ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆ Read More »

ಮಹಾಕುಂಭಮೇಳದಲ್ಲಿ ಇಂದು ಕೊನೆಯ ಪುಣ್ಯಸ್ನಾನ : ಜಗತ್ತಿನ ಬೃಹತ್‌ ಧಾರ್ಮಿಕ ಕಾರ್ಯಕ್ರಮಕ್ಕೆ ತೆರೆ

ಇದುವರೆಗೆ ಸುಮಾರು 64 ಕೋಟಿ ಜನರಿಂದ ಪುಣ್ಯಸ್ನಾನ ಪ್ರಯಾಗರಾಜ್: ಮಹಾಶಿವರಾತ್ರಿ ಪವಿತ್ರ ದಿನವಾದ ಇಂದು ಮಹಾಕುಂಭಮೇಳದಲ್ಲಿ ಕೊನೆಯ ಪುಣ್ಯಸ್ನಾನ ನಡೆಯಲಿದ್ದು, ಇದರೊಂದಿಗೆ ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಮುಕ್ತಾಯವಾಗಲಿದೆ. ಫೆಬ್ರವರಿ 25ರಂದು ರಾತ್ರಿ 8 ಗಂಟೆಯವರೆಗೆ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ 1.24 ಕೋಟಿಗೂ ಹೆಚ್ಚು ಜನರು ಪವಿತ್ರ ಸ್ನಾನ ಮಾಡಿದರು. ಇದರೊಂದಿಗೆ ಜನವರಿ 13ರಿಂದ ಮಹಾಕುಂಭದಲ್ಲಿ ಸ್ನಾನ ಮಾಡಿದ ಒಟ್ಟು ಭಕ್ತರ ಸಂಖ್ಯೆ 64 ಕೋಟಿ ಮೀರಿದೆ.ಇಂದು ನಡೆಯಲಿರುವ ಮಹಾಶಿವರಾತ್ರಿಯ

ಮಹಾಕುಂಭಮೇಳದಲ್ಲಿ ಇಂದು ಕೊನೆಯ ಪುಣ್ಯಸ್ನಾನ : ಜಗತ್ತಿನ ಬೃಹತ್‌ ಧಾರ್ಮಿಕ ಕಾರ್ಯಕ್ರಮಕ್ಕೆ ತೆರೆ Read More »

error: Content is protected !!
Scroll to Top