ಧಾರ್ಮಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ | ಪುನೀತರಾದ ಲಕ್ಷಾಂತರ ಭಕ್ತರು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ ಲಕ್ಷಾಂತರ ಭಕ್ತ ಜಯಘೋಷಗಳೊಂದಿಗೆ ಗುರುವಾರ ರಾತ್ರಿ ನಡೆಯಿತು. ಸಂಜೆ ಶ್ರಿ ದೇವಸ್ಥಾನದ ಒಳ ಹಾಗೂ ಹೊರಾಂಗಣದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆದು ಬಳಿಕ ಶ್ರೀ ದೇವರು ರಥಬೀದಿಗೆ ಬಂದು, ಬಳಿಕ ಶ್ರೀ ಮಹಾಲಿಂಗೇಶ್ವರ ದೇವರು ರಥಾರೋಢರಾದರು. ಬಳಿಕ ಸಿಡಿಮದ್ದು ಪ್ರದರ್ಶನ ಪ್ರಾರಂಭಗೊಂಡು ಸುಮಾರು ಒಂದು ಗಂಟೆಗಳ ಕಾಲ ಸಿಡಿಮದ್ದು ಪ್ರದರ್ಶನ ಬಾನೆತ್ತರದಲ್ಲಿ ಬೆಳಕಿನ ಚಿತ್ತಾರವನ್ನೇ ಮೂಡಿಸಿತು. ಇದನ್ನು ವೀಕ್ಷಿಸಿದ ಲಕ್ಷಾಂತರ ಭಕ್ತರು ಹರ್ಷೋದ್ದಾರವಾದರು. […]

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ | ಪುನೀತರಾದ ಲಕ್ಷಾಂತರ ಭಕ್ತರು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಇಂದು ರಾತ್ರಿ ವಿಜ್ರಂಭಣೆಯಿಂದ ನೆರವೇರಲಿದೆ ಬ್ರಹ್ಮರಥೋತ್ಸವ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಕಳೆದ ಎಂಟು ದಿನಗಳಿಂದ ವೈಭವದಿಂದ ನಡೆಯುತ್ತಿದ್ದು, ಇಂದು ರಾತ್ರಿ ವೈಭವದ ಬ್ರಹ್ಮರಥೋತ್ಸವ ನಡೆಯಲಿದೆ. ಸಂಜೆ ಶ್ರಿ ದೇವಸ್ಥಾನದ ಒಳ ಹಾಗೂ ಹೊರಾಂಗಣದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆದು, ಬಳಿಕ ಶ್ರೀ ದೇವರು ರಥಬೀದಿಗೆ ಬರುವರು. ಆನಂತರ ಶ್ರೀ ಮಹಾಲಿಂಗೇಶ್ವರ ದೇವರು ರಥಾರೋಢರಾಗುವರು. ಈ ಹೊತ್ತಿನಲ್ಲಿ ಸಿಡಿಮದ್ದು ಪ್ರದರ್ಶನ ಪ್ರಾರಂಭಗೊಂಡು ಸುಮಾರು ಒಂದೂವರೆ ಗಂಟೆಗಳ ಕಾಲ ಸಿಡಿಮದ್ದು ಪ್ರದರ್ಶನ ನಡೆದ ಬಳಿಕ ಸಾವಿರಾರು ಭಕ್ತಾದಿಗಳ ಕೈಗಳ ಜಯಘೋಷಗಳೊಂದಿಗೆ ಬ್ರಹ್ಮರಥವನ್ನು ಎಳೆಯುತ್ತಾರೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಇಂದು ರಾತ್ರಿ ವಿಜ್ರಂಭಣೆಯಿಂದ ನೆರವೇರಲಿದೆ ಬ್ರಹ್ಮರಥೋತ್ಸವ Read More »

ಕುಕ್ಕೆ ಕ್ಷೇತ್ರದ ವಾರ್ಷಿಕ ಆದಾಯ 155.95 ಕೋ.ರೂ. ಏರಿಕೆ

ಹಿಂದಿನ ವರ್ಷಕ್ಕಿಂತ 9.94 ಕೋ.ರೂ. ಹೆಚ್ಚಳ ಸುಬ್ರಹ್ಮಣ್ಯ: ರಾಜ್ಯದಲ್ಲೇ ಅತಿಹೆಚ್ಚು ಆದಾಯವಿರುವ ಪುಣ್ಯಕ್ಷೇತ್ರವಾಗಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಕಳೆದ ಹಣಕಾಸು ಸಾಲಿನಲ್ಲೂ ಭಾರಿ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ.ಗೆ ಏರಿಕೆ ಆಗಿದೆ. ಹಿಂದಿನ ವರ್ಷದ ಆದಾಯ 146.01 ಕೋಟಿ ರೂ. ಆಗಿತ್ತು. ಹಿಂದಿನ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ

ಕುಕ್ಕೆ ಕ್ಷೇತ್ರದ ವಾರ್ಷಿಕ ಆದಾಯ 155.95 ಕೋ.ರೂ. ಏರಿಕೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ | ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಪುನೀತರಾದ ಲಕ್ಷಾಂತರ ಭಕ್ತರು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಅತ್ಯಂತ ವೈಭವದಿಂದ ನಡೆಯುತ್ತಿದ್ದು, ಜಾತ್ರೋತ್ಸವದ ಅಂಗವಾಗಿ ಬುಧವಾರ ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಕಿರುವಾಳು ಭಂಡಾರ ಆಗಮನವಾಯಿತು. ಲಕ್ಷಾಂತರ ಭಕ್ತಾದಿಗಳು ಈ ಸಂದರ್ಭವನ್ನು ಕಣ್ತುಂಬಿಕೊಂಡರು. ಸಂಜೆ 6 ಗಂಟೆಗೆ ಸೂಟೆ ಬೆಳಕಿನೊಂದಿಗೆ ಹೊರಟ ಕಿರುವಾಳು ಬರುವ ದಾರಿಯುದ್ದಕ್ಕೂ ಅಲ್ಲಲ್ಲಿ ಸ್ಥಳೀಯರು ಪಾನೀಯ ವ್ಯವಸ್ಥೆಗಳನ್ನು ಮಾಡಿದರು. ಈ ಸಂದರ್ಭದಲ್ಲಿ ಭಕ್ತಾದಿಗಳು ಮಲ್ಲಿಗೆ ಅರ್ಪಿಸಿದರು. ರಾತ್ರಿ ಸುಮಾರು 10.30 ಗಂಟೆ ಹೊತ್ತಿಗೆ ಕಿರುವಾಳು ಶ್ರೀ ದೇವಸ್ಥಾನವನ್ನು ತಲುಪಿತು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ | ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಪುನೀತರಾದ ಲಕ್ಷಾಂತರ ಭಕ್ತರು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಇಂದು ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮನ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಭಂಡಾರ ದೇವಸ್ಥಾನಕ್ಕೆ ಇಂದು ರಾತ್ರಿ ಆಗಮಿಸಲಿದೆ. ಕಿರುವಾಳು ಆಗಮನದ ಅಂಗವಾಗಿ ಇಂದು ಬೆಳಿಗ್ಗೆಯಿಂದಲೇ ಶ್ರೀ ಉಳ್ಳಾಲ್ತಿಗೆ ಮಲ್ಲಿಗೆ ಅರ್ಪಿಸಲು ಅವಕಾಶ ನೀಡಲಾಗಿತ್ತು. ಇದಕ್ಕೂ ಮುಂಚೆ ಶ್ರೀ ದೈವಸ್ಥಾನದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆ ಹಾಗೂ ಸಂಜೆ 3 ಗಂಟೆ ತನಕ ಮಲ್ಲಿಗೆ ಅರ್ಪಿಸಲು ಅವಕಾಶ ನೀಡಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಕಟ್ಟೆಯಲ್ಲಿ ಭಕ್ತಾದಿಗಳು ಸರತಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಇಂದು ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮನ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ವಾಹನ ಸಂಚಾರದಲ್ಲಿ ಬದಲಾವಣೆ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾ ವಧಿ ಜಾತ್ರೆಯ ಪ್ರಯುಕ್ತ ಎ.16ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಆಗಮನದ ದಿನ ಮತ್ತು ಎ.17ರಂದು ಬ್ರಹ್ಮರಥೋತ್ಸವದಂದು ಸಂಜೆ 4.00 ಗಂಟೆಯಿಂದ ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ. ಸಾರಿಗೆ ಬಸ್, ಆಟೋ ರಿಕ್ಷಾ ಸಂಚಾರ ಮಾರ್ಗದ ಬದಲಾವಣೆ ಮತ್ತು ಭಕ್ತಾದಿಗಳ ವಾಹನ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ (ಎ.16, 17ರಂದು) ಪುತ್ತೂರು ಉಪವಿಭಾಗದ ಪೊಲೀಸ್ ಉಪ ಅಧಿಕ್ಷಕರ ಕೋರಿಕೆಯಂತೆ ಪುತ್ತೂರು

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ವಾಹನ ಸಂಚಾರದಲ್ಲಿ ಬದಲಾವಣೆ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ವಿಷುಕಣಿ ಬಲಿ ಉತ್ಸವ –ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ

ಪುತ್ತೂರು: ವಿಷುಕಣಿ ದಿನವಾದ ಸೋಮವಾರ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತಾದಿಗಳ ಗಡಣವೇ ತುಂಬಿತ್ತು. ವಿಷುಕಣಿ ಹಬ್ಬದ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ವಿಶೇಷ ವಿಷುಕಣಿ ಬಲಿ ಉತ್ಸವ ನಡೆಯಿತು. ಬೆಳಿಗ್ಗೆ ಶ್ರೀ ದೇವಸ್ಥಾನದ ಗರ್ಭಗುಡಿಯಲ್ಲಿ ಕಣಿ ಇಡಲಾಯಿತು. ಬಳಿಕ ಒಳಾಂಗಣದಲ್ಲಿ ವಿಷುಕಣಿ ಬಲಿ ಉತ್ಸವ ನಡೆಯಿತು. ಒಳಾಂಗಣದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ತುಂಬಿದ್ದು, ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ದೇವಸ್ಥಾನ್ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‍,

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ವಿಷುಕಣಿ ಬಲಿ ಉತ್ಸವ –ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ Read More »

ಬೆಳ್ಳಿಪ್ಪಾಡಿ ಧರ್ಮ ಶಿಕ್ಷಣ ಸಮಿತಿ ರಚನೆ | ಅಧ್ಯಕ್ಷರಾಗಿ ಜಿನ್ನಪ್ಪ ಪೂಜಾರಿ ಆಯ್ಕೆ

ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನಿರ್ದೇಶನದನ್ವಯ ಪುತ್ತೂರಿನಾದ್ಯಂತ ಧರ್ಮಶಿಕ್ಷಣ ಜಾರಿಗೊಳಿಸುವ ಹಿನ್ನೆಲೆಯಲ್ಲಿ ಗ್ರಾಮಸ ಮಿತಿಗಳು ರೂಪುದಳೆಯುತ್ತಿದ್ದು, ಇದಕ್ಕೆ ಪೂರಕವಾಗಿ ಬೆಳ್ಳಿಪ್ಪಾಡಿ ಧರ್ಮ ಶಿಕ್ಷಣ ಸಮಿತಿಯನ್ನು ರಚಿಸಲಾಯಿತು. ಬೆಳ್ಳಿಪ್ಪಾಡಿಯ ಸುಬ್ರಹ್ಮಣ್ಯ ಭಜನಾ ಮಂಡಳಿ ಕೇಂದ್ರಿತವಾಗಿ ಸಮಿತಿ ರಚಿಸಲಾಗಿದೆ. ಸ್ಥಳೀಯರಾದ ಜಿನ್ನಪ್ಪ ಪೂಜಾರಿ ಅಧ್ಯಕ್ಷರಾಗಿ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ್ ಗೌಡ ಡಿ.ವಿ., ಉಪಾಧ್ಯಕ್ಷರಾಗಿ ಲಕ್ಷ್ಮಣ ಗೌಡ, ಕಾರ್ಯದರ್ಶಿಯಾಗಿ ರಾಮಣ್ಣ ಗೌಡ, ಜತೆ ಕಾರ್ಯದರ್ಶಿಯಾಗಿ ಮೋಹನ್ ಪಕಳ, ಸಂಚಾಲಕರಾಗಿ ವಸಂತ ಕೈಲಾಜೆ, ಖಜಾಂಚಿಯಾಗಿ ಚಂದನ್ ತೆಂಕಪಾಡಿ,

ಬೆಳ್ಳಿಪ್ಪಾಡಿ ಧರ್ಮ ಶಿಕ್ಷಣ ಸಮಿತಿ ರಚನೆ | ಅಧ್ಯಕ್ಷರಾಗಿ ಜಿನ್ನಪ್ಪ ಪೂಜಾರಿ ಆಯ್ಕೆ Read More »

ತುಳುನಾಡಿನಲ್ಲಿ “ಬಿಸು ಪರ್ಬ” | ತುಳುನಾಡಿನ ಹಬ್ಬಗಳಲ್ಲಿ ಬಿಸು ಹಬ್ಬದ ಸಡಗರವೇ ವಿಶೇಷ

ಪರಶುರಾಮನಿಂದ ಸೃಷ್ಟಿಸಲ್ಪಟ್ಟ ತುಳುನಾಡಿನ ಹಬ್ಬಗಳಲ್ಲಿ ಬಿಸು ಹಬ್ಬದ ಸಡಗರವೇ ವಿಶೇಷ . ತುಳುವರ ವರುಷದ ಆದಿಮಾಸ “ಪಗ್ಗು” ತಿಂಗಳ ಮೊದಲ ದಿನವೇ ಬಿಸು. ಈ ದಿನವು ಶುಭಕರವಾದುದರಿಂದ ಜನರು ಹೊಸ ಹೊಸ ಯೋಜನೆಗಳಿಗೆ ಹೆಜ್ಜೆಇಡುತ್ತಾರೆ. ಮಾತ್ರವಲ್ಲ ಭೂಮಿ, ವಾಹನ, ಹೊಸ ವಸ್ತುಗಳ ಖರೀದಿ, ಮಕ್ಕಳಿಗೆ ಕಿವಿ ಚುಚ್ಚುವ ಶಾಸ್ತ್ರಗಳನ್ನು ಮಾಡುತ್ತಾರೆ. ಹಿಂದೆ ನಮ್ಮ ಹಿರಿಯರು, ತಂದೆ ತಾಯಂದಿರು ಮನೆ ಅಥವಾ ಮರಗಳ ನೆರಳು ಹಾಗೂ ಆಕಾಶ ನೋಡಿ ಸಮಯವನ್ನು ನಿರ್ಧರಿಸುತ್ತಿದ್ದರು. ಅದೇ ರೀತಿ ಸೂರ್ಯನು ಮೇಷ ರಾಶಿಗೆ

ತುಳುನಾಡಿನಲ್ಲಿ “ಬಿಸು ಪರ್ಬ” | ತುಳುನಾಡಿನ ಹಬ್ಬಗಳಲ್ಲಿ ಬಿಸು ಹಬ್ಬದ ಸಡಗರವೇ ವಿಶೇಷ Read More »

ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 21ನೇ ಪ್ರತಿಷ್ಠಾ ವಾರ್ಷಿಕೋತ್ಸವ

ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 21ನೇ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಶುಕ್ರವಾರ ಸಂಜೆ ದೀಪಾರಾಧನೆ, ರಾತ್ರಿ ದುರ್ಗಾನಮಸ್ಕಾರ ಪೂಜೆ, ಮಹಾಮಂಗಳಾರತಿ ನಡೆದು ಬಳಿಕ ಅನ್ನಪ್ರಸಾದ ಜರಗಿತು. ಈ ಸಂದರ್ಭ ನೂರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 21ನೇ ಪ್ರತಿಷ್ಠಾ ವಾರ್ಷಿಕೋತ್ಸವ Read More »

error: Content is protected !!
Scroll to Top