ಧಾರ್ಮಿಕ

ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ವೈಭವದ ವರ್ಷಾವಧಿ ನೇಮೋತ್ಸವ

ಪುತ್ತೂರು: ನೆಹರುನಗರ ಸಮೀಪದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಮಂಗಳವಾರ ನಡೆಯಿತು. ಮಂಗಳವಾರ ಬೆಳಗ್ಗೆ 9 ಕ್ಕೆ ಮೂಲಸ್ಥಾನ ಕಾರ್ಜಾಲುಗುತ್ತಿನಲ್ಲಿ ಸ್ಥಳಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ ನಡೆಯಿತು. 11.30 ಕ್ಕೆ ಕಲ್ಲೇಗ ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ ಸೇವೆ, ಬಳಿಕ ನಡೆದ ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ರಾತ್ರಿ 7.30 ಕ್ಕೆ ಶ್ರೀ ದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಟು, […]

ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ವೈಭವದ ವರ್ಷಾವಧಿ ನೇಮೋತ್ಸವ Read More »

ಫೆ.16 : ದ್ವಾರಕಾ ಪ್ರತಿಷ್ಠಾನದಿಂದ ‘ದ್ವಾರಕೋತ್ಸವ-2025’, ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ

ಪುತ್ತೂರು: ದ್ವಾರಕಾ ಪ್ರತಿಷ್ಠಾನದ ವತಿಯಿಂದ ‘ದ್ವಾರಕೋತ್ಸವ-2025’, ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಫೆ.16 ಭಾನುವಾರ ಮುಕ್ರಂಪಾಡಿ ಗೋಕುಲ ಬಡಾವಣೆಯಲ್ಲಿ ನಡೆಯಲಿದೆ ಎಂದು ದ್ವಾರಕಾ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್‍ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ದ್ವಾರಕಾ ಪ್ರತಿಷ್ಠಾನ ವಿವಿಧ ವೈದಿಕ, ಸಾಮಾಜಿಕ, ಸಾಹಿತ್ಯಿಕ, ಸಾಂಸ್ಕೃತಿಕ, ಯಕ್ಷಗಾನ, ಸಂಗೀತ, ಗೋಸೇವೆ ಮುಂತಾದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಾ ಬಂದಿದೆ. ಭಾರತೀಯ ಸಂಸ್ಕೃತಿಯ ಸಂರಕ್ಷಣೆ, ಅನುಷ್ಠಾನ, ಸಂವರ್ಧನೆ ನಮ್ಮ ಧ್ಯೇಯವಾಗಿದೆ.

ಫೆ.16 : ದ್ವಾರಕಾ ಪ್ರತಿಷ್ಠಾನದಿಂದ ‘ದ್ವಾರಕೋತ್ಸವ-2025’, ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ Read More »

ಪುತ್ತೂರು (ಫೆ.11) ನೆಹರು ನಗರ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ವಾರ್ಷಿಕ ಜಾತ್ರೋತ್ಸವ

ಪುತ್ತೂರು: ನೆಹರು ನಗರ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ವಾರ್ಷಿಕ ಜಾತ್ರೋತ್ಸವ ಫೆ. 11ರಂದು ನಡೆಯಿತು. ಬೆಳಗ್ಗೆ ಕಾರ್ಜಾಲು ಗುತ್ತಿನಲ್ಲಿ ಸ್ಥಳ ಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ ನಡೆಯಿತು. ಬೆಳಗ್ಗೆ11-30ಕ್ಕೆ ಕಲ್ಲೇಗ ದೈವಸ್ಥಾನದಲ್ಲಿ ಗಣಹೋಮ ಹಾಗೂ ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ, ಮಧ್ಯಾಹ್ನ 12.30 ರಿಂದ ಕಲ್ಲೇಗ ದೈವಸ್ಥಾನದಲ್ಲಿ ಅನ್ನಸಂತರ್ಪಣಾ ಕಾರ್ಯಕ್ರಮ ನೆರವೇರಿತು. ರಾತ್ರಿ ಗಂಟೆ 7.30ಕ್ಕೆ ಸರಿಯಾಗಿ ಶ್ರೀದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಡಲಿದ್ದು. ರಾತ್ರಿ ಗಂಟೆ 9:30ಕ್ಕೆ ಗೊಂದೊಳು

ಪುತ್ತೂರು (ಫೆ.11) ನೆಹರು ನಗರ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ವಾರ್ಷಿಕ ಜಾತ್ರೋತ್ಸವ Read More »

ಡಿ.27-28-29 : ಶ್ರೀನಿವಾಸ ಕಲ್ಯಾಣೋತ್ಸವ, 100 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಸಮಾರಂಭ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಪುತ್ತಿಲ ಪರಿವಾರ ಸಂಚಾಲಕ ಅರುಣ್ ಕುಮಾರ್ ಪುತ್ತಿಲ

ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಡಿ.27, 28 ಹಾಗೂ 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ 100 ಜೋಡಿಗೆ ಉಚಿತ ವಿವಾಹ ಸಮಾರಂಭದ ಕುರಿತು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ವಿವರ ನೀಡಿದರು. ಸೋಮವಾರ ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿ, ಡಿಸೆಂಬರಿನಲ್ಲಿ ಅದ್ದೂರಿಯಾಗಿ ಶ್ರೀನಿವಾಸ ಕಲ್ಯಾಣೋತ್ಸವ ನಡೆದಿದೆ. ಅದೇ ರೀತಿ ಈ

ಡಿ.27-28-29 : ಶ್ರೀನಿವಾಸ ಕಲ್ಯಾಣೋತ್ಸವ, 100 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಸಮಾರಂಭ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಪುತ್ತಿಲ ಪರಿವಾರ ಸಂಚಾಲಕ ಅರುಣ್ ಕುಮಾರ್ ಪುತ್ತಿಲ Read More »

ಮಹಾಕುಂಭಮೇಳ : 300 ಕಿ.ಮೀ. ಟ್ರಾಫಿಕ್‌ ಜಾಮ್‌

ಭಕ್ತರ ದಟ್ಟಣೆ ನಿಭಾಯಿಸಲಾಗದೆ ರೈಲು ನಿಲ್ದಾಣವೇ ಬಂದ್‌ ಪ್ರಯಾಗ್‌ರಾಜ್‌ : ಮಹಾಕುಂಭಮೇಳಕ್ಕೆ ನಿರೀಕ್ಷೆಗೂ ಮೀರಿ ಜನ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್‌ ಜಾಮ್‌ ದಿನನಿತ್ಯ ಉಂಟಾಗುತ್ತಿದೆ. ಭಾನುವಾರ ಸುಮಾರು 300 ಕಿ.ಮೀ. ಟ್ರಾಫಿಕ್‌ ಜಾಮ್‌ ಆಗಿ ಭಕ್ತರು ಇನ್ನಿಲ್ಲದ ಬವಣೆ ಅನುಭವಿಸಿದ್ದಾರೆ. ಅನೇಕರು ಇದನ್ನು ಜಗತ್ತಿನ ಅತಿದೊಡ್ಡ ಟ್ರಾಫಿಕ್‌ ಜಾಮ್‌ ಎಂದು ಬಣ್ಣಿಸಿದ್ದಾರೆ. ಸಂಗಮಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಿಕ್ಕಿಬಿದ್ದಿದ್ದವು. ಸರತಿ ಸಾಲಿನ ಬಾಲ ಸುಮಾರು 300 ಕಿ.ಮೀ. ದೂರವಿತ್ತು ಎಂದು ಹಲವರು ಅನುಭವ ಹಂಚಿಕೊಂಡಿದ್ದಾರೆ.

ಮಹಾಕುಂಭಮೇಳ : 300 ಕಿ.ಮೀ. ಟ್ರಾಫಿಕ್‌ ಜಾಮ್‌ Read More »

ಮಹಿಳಾ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕೆಡ್ಡಸ ಹಬ್ಬದ ಪ್ರಾತ್ಯಕ್ಷಿಕೆ

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದಿಂದ ಕೆಡ್ಡಸ ಹಬ್ಬದ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಈಶ್ವರಮಂಗಲ ವಲಯದ ಕಾವು ಸಂಜೀವ ಗೌಡರ ಮನೆಯಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ವಾರಿಜಾ ಬೆಳಿಯಪ್ಪ ಗೌಡ ಮಾತನಾಡಿ, ನೆಲ ಅಗೆಯುವುದು ನಿಷೇಧ ಎಂಬ ಅರ್ಥವನ್ನು ಕೊಡುವ ಕೆಡ್ಡಸ ಮೂರು ದಿನಗಳ ಆಚರಣೆಯ ಹಬ್ಬವಾಗಿದೆ. ಪ್ರಕೃತಿ ಹೆಣ್ಣಾಗಿರುವುದರಿಂದ ಆಕೆ ವರ್ಷಕ್ಕೊಮ್ಮೆ ಬಹಿಷ್ಠೆಯಾಗುವ, ಭೂಮಿತಾಯಿ ರಜಸ್ವಲೆಯಾಗುವ ಹಬ್ಬವೇ ಕೆಡ್ಡಸ, ಈ ಹಬ್ಬ ಫೆನ್ನಿ (ಪೊಯಿಂತೆಲ್‍) 27ನೇ

ಮಹಿಳಾ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕೆಡ್ಡಸ ಹಬ್ಬದ ಪ್ರಾತ್ಯಕ್ಷಿಕೆ Read More »

ಬನ್ನೂರು ಶ್ರೀ ಶನೀಶ್ವರ ಸನ್ನಿಧಿಯಲ್ಲಿ 20ನೇ ವರ್ಷದ ಸಾಮೂಹಿಕ ಶನಿಪೂಜೆ

ಪುತ್ತೂರು:ಬನ್ನೂರು ಶಾಲಾ ಬಳಿಯ ಸ್ಪೂರ್ತಿ ಮೈದಾನದಲ್ಲಿರುವ ಶ್ರೀ ಶನೀಶ್ವರ ದೇವರ ಸನ್ನಿಧಿಯಲ್ಲಿ 20ನೇ ವರ್ಷದ ಸಾಮೂಹಿಕ ಶ್ರೀಶನಿಪೂಜೆ ಶನಿವಾರ ನಡೆಯಿತು. ಅರ್ಚಕ ಹರೀಶ್ ಶಾಂತಿಯವರ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಗಣಪತಿಹೋಮ, ಶ್ರೀ ಶನೀಶ್ವರ ದೇವರ ಪೂಜೆ ಆರಂಭ, ಮಧ್ಯಾಹ್ನ ಶ್ರೀದೇವರಿಗೆ ಮಹಾ ಮಂಗಳಾರತಿ, ಶನೀಶ್ವರ ಕುಣಿತ ಭಜನಾ ಮಂಡಳಿಯವರಿಂದ ಕುಣಿತ ಭಜನೆ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಕಣಿಯೂರು ಚಾಮುಂಡೇಶ್ವರಿ ಕ್ಷೇತ್ರ ಶ್ರೀ ಮಹಾಬಲ ಸ್ವಾಮೀಜಿ, ನವಗ್ರಹಗಳಿಗೆ ಶನಿದೇವರು

ಬನ್ನೂರು ಶ್ರೀ ಶನೀಶ್ವರ ಸನ್ನಿಧಿಯಲ್ಲಿ 20ನೇ ವರ್ಷದ ಸಾಮೂಹಿಕ ಶನಿಪೂಜೆ Read More »

ದೈಪಿಲ ಶ್ರೀ ಕ್ಷೇತ್ರದಲ್ಲಿ ಶಿರಾಡಿ ರಾಜನ್ ದೈವ, ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ

ಕಾಣಿಯೂರು: ಗ್ರಾಮದ ಚಾರ್ವಾಕ ದೈಪಿಲ ಸೇವಾ ಪ್ರತಿಷ್ಠಾನದ ವತಿಯಿಂದ ಶ್ರೀ ಶಿರಾಡಿ ರಾಜನ್‍ ದೈವ ಮತ್ತು ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ ಫೆ.7 ಶುಕ್ರವಾರ ಹಾಗೂ ಫೆ.8 ಶನಿವಾರದಂದು ದೈಪಿಲದಲ್ಲಿ ನಡೆಯಿತು. ಫೆ.7 ಶುಕ್ರವಾರ ಬೆಳಿಗ್ಗೆ 8 ಕ್ಕೆ ದೈಪಿಲ ಸ್ಥಾನದಲ್ಲಿ ಸ್ಥಳ ಶುದ್ಧಿ ಹಾಗೂ ಗಣಹೋಮ ನಡೆದು ಸಂಜೆ 6 ಕ್ಕೆ ಭಂಡಾರ ತೆಗೆಯಲಾಯಿತು. ಫೆ.8 ಶನಿವಾರ ಬೆಳಿಗ್ಗೆ 10 ಕ್ಕೆ ಸೇವೆ ಹಾಗೂ ಹರಿಕೆಗಳನ್ನು ಒಪ್ಪಿಸುವವರು ದೈವದ ಸನ್ನಿಧಿಗೆ ಬಂದು ಒಪ್ಪಿಸಿದರು. ಮಧ್ಯಾಹ್ನ 12

ದೈಪಿಲ ಶ್ರೀ ಕ್ಷೇತ್ರದಲ್ಲಿ ಶಿರಾಡಿ ರಾಜನ್ ದೈವ, ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ Read More »

ಶಿವರಾತ್ರಿಗೆ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಮಹತ್ವದ ಸೂಚನೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ. ಅದರಲ್ಲೂ ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಿಸಲು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಲಕ್ಷಾಂತರ ಭಕ್ತರು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುತ್ತಾರೆ. ಇದು ಪ್ರತಿ ವರ್ಷವೂ ನಡೆದುಕೊಂಡು ಬರುತ್ತಿರುವ ಪರಂಪರೆಯಾಗಿದೆ. ಈ ವರ್ಷವೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಲಹೆಗಳು ಹೀಗಿವೆ ಪಾದಯಾತ್ರಿಗಳು

ಶಿವರಾತ್ರಿಗೆ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಮಹತ್ವದ ಸೂಚನೆ Read More »

ನಂದಿಹೋದ 46 ವರ್ಷಗಳಿಂದ ಉರಿಯುತ್ತಿದ್ದ ದೀಪ : ಕೆಡುಕಿನ ಭೀತಿಯಲ್ಲಿ ಜನ

ಎಣ್ಣೆ-ಬತ್ತಿ ಇಲ್ಲದೆ ನಿರಂತರವಾಗಿ ನಾಲ್ಕೂವರೆ ದಶಕ ಉರಿಯುತ್ತಿದ್ದ ಮೂರು ದೀಪಗಳು ಕಾರವಾರ: ದೇವಸ್ಥಾನವೊಂದರಲ್ಲಿ ಸುಮಾರು ನಾಲ್ಕೂವರೆ ದಶಕದಿಂದ ಎಣ್ಣೆ ಮತ್ತು ಬತ್ತಿ ಇಲ್ಲದೆ ನಿರಂತರವಾಗಿ ಉರಿಯುತ್ತಿದ್ದ ಮೂರು ದೀಪಗಳು ಹಠಾತ್‌ ನಂದಿಹೋಗಿದ್ದು, ಇದು ಯಾವುದೋ ಕೆಡುಕಿನ ಸೂಚನೆ ಎಂದು ಈ ಊರಿನ ಜನ ಭಯಭೀತರಾಗಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದ ದೀಪನಾಥೇಶ್ವರ ದೇವಾಲಯದದಲ್ಲಿ ಮೂರು ದೀಪಗಳು ಎಣ್ಣೆ ಮತ್ತು ಬತ್ತಿ ಇಲ್ಲದೆ ಸತತ 46 ವರ್ಷಗಳಿಂದ ಹಗಲು-ರಾತ್ರಿ ನಿರಂತರವಾಗಿ ಉರಿಯುತ್ತಿದ್ದವು. ಕೆಲದಿನಗಳ ಹಿಂದೆ ಏಕಾಏಕಿ

ನಂದಿಹೋದ 46 ವರ್ಷಗಳಿಂದ ಉರಿಯುತ್ತಿದ್ದ ದೀಪ : ಕೆಡುಕಿನ ಭೀತಿಯಲ್ಲಿ ಜನ Read More »

error: Content is protected !!
Scroll to Top