ಧಾರ್ಮಿಕ

ಡಿ. 25: ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸತ್ಯನಾರಾಯಣ ಪೂಜೆ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಪುತ್ತೂರು ಇದರ ವಾರ್ಷಿಕ ಸಮಾವೇಶ, ಗಣಪತಿ ಹವನ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ತಾಲೂಕು ಸಮಿತಿಗಳ ಪದಪ್ರಧಾನ ಸಮಾರಂಭ ಡಿ. 25 ರಂದು ತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಪೂರ್ವಾಹ್ನ 9.30 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 10. 30 ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾ ಮಠ ಮಂಗಳೂರಿನ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. […]

ಡಿ. 25: ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸತ್ಯನಾರಾಯಣ ಪೂಜೆ Read More »

ಕುಕ್ಕೆ ಕಿರುಷಷ್ಠಿ ಉತ್ಸವಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ

ಸರ್ಕಾರದ ಶಿಷ್ಟಾಚಾರದಂತೆ ಆಹ್ವಾನ ಪತ್ರದಲ್ಲಿ ಅನ್ಯಧರ್ಮದ ಜನಪ್ರತಿನಿಧಿಗಳ ಹೆಸರು ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರದಿಂದ ನಡೆಯಲಿರುವ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಇಂದಿನಿಂದ ಡಿ.26ರವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಶಿಷ್ಟಾಚಾರದಂತೆ ಅನ್ಯಧರ್ಮೀಯರನ್ನೂ ಆಹ್ವಾನಿಸಲಾಗಿದೆ. ಹಿಂದೂ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದು ಸರಿಯಲ್ಲ, ತಕ್ಷಣ ಅದನ್ನ ತಡೆಯಬೇಕೆಂದು ಕ್ಷೇತ್ರ ಸಂರಕ್ಷಣಾ ವೇದಿಕೆಯಿಂದ ಕ್ಷೇತ್ರದ ಆಡಳಿತಾಧಿಕಾರಿಗೆ ಮನವಿ ನೀಡಲಾಗಿದೆ. ಆಹ್ವಾನ ವಾಪಸ್ ಪಡೆಯದೇ ಇದ್ದರೆ ಡಿ.22ರಂದು ಆಡಳಿತ ಕಚೇರಿ

ಕುಕ್ಕೆ ಕಿರುಷಷ್ಠಿ ಉತ್ಸವಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವತಿಯಿಂದ ಕ್ಷೇತ್ರ ಭೇಟಿ, ಸಭೆ

ಮೆಲ್ಕಾರ್: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ರಿ. ಬಂಟ್ವಾಳ ನೇತೃತ್ವದಲ್ಲಿ, ಪುತ್ತೂರು ಘಟಕದ ಸಹಯೋಗದೊಂದಿಗೆ ಒಂದು ದಿನದ ಕ್ಷೇತ್ರ ಭೇಟಿ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಿಂದ ಪ್ರಾರಂಭಗೊಂಡು ಶ್ರೀ ಕ್ಷೇತ್ರ ಪಾವಂಜೆ, ಸಿಗಂದೂರು, ಕೊಲ್ಲೂರು ಮತ್ತು ಕಾಪು ಮಾರಿಯಮ್ಮ ದೇವಸ್ಥಾನಗಳನ್ನು ಸಂದರ್ಶಿಸಲಾಯಿತು. ಕೊಲ್ಲೂರು ದೇವಳದ ಪ್ರಧಾನ ಅರ್ಚಕ ನರಸಿಂಹ ಅಡಿಗರ ಸಮಕ್ಷಮದಲ್ಲಿ ಪ್ರತಿಷ್ಠಾನದ ಮಾಸಿಕ ಸಭೆ ನಡೆಸಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಕೆಯ್ಯೂರು ನಾರಾಯಣ ಭಟ್ ಪ್ರತಿವರ್ಷ ನಡೆಯುವ ಕ್ಷೇತ್ರ ಭೇಟಿಯಂತೆ ಈ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವತಿಯಿಂದ ಕ್ಷೇತ್ರ ಭೇಟಿ, ಸಭೆ Read More »

ಪುತ್ತೂರು ದೇವಸ್ಥಾನದಲ್ಲಿ ವಿಶೇಷ ಮೂಡಪ್ಪ ಸೇವೆ: ಸೇವಾ ರಶೀದಿ ಪುಸ್ತಕ ಬಿಡುಗಡೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜ. 6 ರಂದು ಅಂಗಾರಕ ಸಂಕಷ್ಟ ಚತುರ್ಥಿಯ ಪ್ರಯುಕ್ತ 108 ಕಾಯಿ ಗಣಪತಿ ಹೋಮ, ಸಂಜೆ 6 ಗಂಟೆಗೆ ಬಾಲಗಣಪತಿಗೆ ಮೂಡಪ್ಪ ಸೇವೆ ಸೇರಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆ ಪ್ರಯುಕ್ತ ಸಿದ್ಧಪಡಿಸಲಾದ ಸೇವಾ ರಶೀದಿ ಪುಸ್ತಕವನ್ನು ಡಿ. 15 ರಂದು ಶ್ರೀ ಮಹಾಲಿಂಗೇಶ್ವರ ಮತ್ತು ಗಣಪತಿ ದೇವರುಗಳಿಗೆ ಪ್ರಾರ್ಥನೆ ಸಲ್ಲಿಸಿ ಬಳಿಕ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್

ಪುತ್ತೂರು ದೇವಸ್ಥಾನದಲ್ಲಿ ವಿಶೇಷ ಮೂಡಪ್ಪ ಸೇವೆ: ಸೇವಾ ರಶೀದಿ ಪುಸ್ತಕ ಬಿಡುಗಡೆ Read More »

ಈ ವರ್ಷವೂ ಭಾರಿ ಸಂಖ್ಯೆಯಲ್ಲಿ ಭಕ್ತರಿಂದ ಶಬರಿಮಲೆ ಯಾತ್ರೆ

ಅರವಣ ಪಾಯಸಂ, ಅಪ್ಪಂ ಪ್ರಸಾದಕ್ಕೆ ವಿಪರೀತ ಬೇಡಿಕೆ ಶಬರಿಮಲೆ: ಈ ವರ್ಷದ ಶಬರಿಮಲೆ ತೀರ್ಥಯಾತ್ರೆ ಋತು ಪ್ರಾರಂಭವಾದ ಕಳೆದ 28 ದಿನಗಳಲ್ಲಿ 25 ಲಕ್ಷಕ್ಕೂ ಹೆಚ್ಚು ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದಾರೆ. ಈ ವರ್ಷವೂ ಭಕ್ತರ ದಟ್ಟಣೆ ಅಧಿಕವಾಗಿದ್ದು, ಆನ್‌ಲೈನ್‌ ಬುಕ್ಕಿಂಗ್‌ ಮೂಲಕ ವರ್ಚುವಲ್‌ ಕ್ಯೂ ಪದ್ಧತಿ ಪಾಲಿಸುತ್ತಿರುವುದರಿಂದ ಅಯ್ಯಪ್ಪನ ದರ್ಶನ ಗೊಂದಲವಿಲ್ಲದೆ ನಡೆಯುತ್ತಿದೆ. ಕಳೆದ ವಾರಕ್ಕೆ ಹೋಲಿಸಿದರೆ ಭಾನುವಾರ ದಟ್ಟಣೆ ಸ್ವಲ್ಪ ಕಡಿಮೆಯಾಗಿತ್ತು. ಪಂಪಾದಿಂದ ಸನ್ನಿಧಾನ ತನಕ ಎಲ್ಲೂ ಕಾಯದೆ ಭಕ್ತರು ನೇರವಾಗಿ ದರ್ಶನ ಪಡೆದಿದ್ದಾರೆ.

ಈ ವರ್ಷವೂ ಭಾರಿ ಸಂಖ್ಯೆಯಲ್ಲಿ ಭಕ್ತರಿಂದ ಶಬರಿಮಲೆ ಯಾತ್ರೆ Read More »

ಡಿ. 13: ದ.ಕ.ಜಿ.ಪಂ.ಉನ್ನತೀಕರಿಸಿದ ಹಿ.ಪ್ರಾ. ಶಾಲೆ ಕುದ್ಮಾರು ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಜಂಟಿ ವಾರ್ಷಿಕೋತ್ಸವ

ಕಡಬ: ದ.ಕ.ಜಿ.ಪಂ.ಉ.ಹಿ.ಪ್ರಾ. ಶಾಲೆ ಕುದ್ಮಾರು ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಜಂಟಿ ವಾರ್ಷಿಕೋತ್ಸವ ಸಮಾರಂಭವು ಡಿ. 13 ರಂದು ನಡೆಯಲಿದೆ. ಬೆಳಗ್ಗೆ 10 ಕ್ಕೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ ಅಬೀರ ‌ವಹಿಸಲಿದ್ದಾರೆ. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ದೇವರಾಜ್ ನೂಜಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ ‌ಅವರು ಶೌಚಾಲಯ ಮತ್ತು ಕೈ ತೊಳೆಯುವ ಘಟಕಗಳ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳಂದೂರು ಗ್ರಾ.ಪಂ. ಸದಸ್ಯರುಗಳಾದ

ಡಿ. 13: ದ.ಕ.ಜಿ.ಪಂ.ಉನ್ನತೀಕರಿಸಿದ ಹಿ.ಪ್ರಾ. ಶಾಲೆ ಕುದ್ಮಾರು ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಜಂಟಿ ವಾರ್ಷಿಕೋತ್ಸವ Read More »

ಬೊಳುವಾರು ಆಂಜನೇಯ ಯಕ್ಷಗಾನ ಸಂಘದ 57 ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಡಿ. 25ರಂದು ಪುತ್ತೂರಿನ ನಟರಾಜ ವೇದಿಕೆಯಲ್ಲಿ ಜರಗಲಿರುವ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಇದರ *ಶ್ರೀ ಆಂಜನೇಯ -57 ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಢೆ ಬಿಡುಗಡೆಗೊಳಿಸಿ ಸಮಾರಂಭಕ್ಕೆ ಸಹಕಾರವನ್ನು ನೀಡುವುದಾಗಿ ತಿಳಿಸಿದರು. ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿದಿಯಲ್ಲಿ ಕಾರ್ಯಕ್ರಮದ ಯಶಸ್ವಿಗೆ ಶ್ರೀ ಆಂಜನೇಯ ಉಭಯ ಸಂಘಗಳ ಸದಸ್ಯರು ಪ್ರಾರ್ಥನೆ ಸಲ್ಲಿಸಿದರು. ಬಳಿಕ ಜರಗಿದ ಪಂಚವಟಿ ತಾಳಮದ್ದಳೆಯಲ್ಲಿ ಭಾಗವತರಾಗಿ ಯಲ್. ಯನ್. ಭಟ್

ಬೊಳುವಾರು ಆಂಜನೇಯ ಯಕ್ಷಗಾನ ಸಂಘದ 57 ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಶಬರಿಮಲೆಗೆ ಮಂಗಳೂರಿನಿಂದ ವಿಶೇಷ ರೈಲು

ಪ್ರತಿ ಭಾನುವಾರ ಮಂಗಳೂರಿನಿಂದ ಹೊರಡಲಿರುವ ರೈಲು ಮಂಗಳೂರು : ಶಬರಿಮಲೆ ಯಾತ್ರಾರ್ಥಿಗಳ ದಟ್ಟಣೆಯ ಹಿನ್ನೆಲೆಯಲ್ಲಿ ಮಂಗಳೂರು ಜಂಕ್ಷನ್‌ ಮತ್ತು ತಿರುವನಂತಪುರ ನಾರ್ತ್‌ ನಿಲ್ದಾಣಗಳ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ಮಂಗಳೂರು ಜಂಕ್ಷನ್‌-ತಿರುವನಂತಪುರ ನಾರ್ತ್‌ ವೀಕ್ಲಿ ಎಕ್ಸ್‌ಪ್ರೆಸ್‌ ಸ್ಪೆಷಲ್‌ (ನಂ. 06041) ರೈಲು ಡಿ.7ರಿಂದ ಜ.18ರ ವರೆಗೆ ಪ್ರತಿ ಭಾನುವಾರ ಸಂಜೆ 6ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಮರುದಿನ ಬೆಳಗ್ಗೆ 6.30ಕ್ಕೆ ತಿರುವನಂತಪುರ ನಾರ್ತ್‌ ತಲುಪಲಿದೆ. ಅದೇ ರೀತಿ ತಿರುವನಂತಪುರ ನಾರ್ತ್‌-ಮಂಗಳೂರು ಜಂಕ್ಷನ್‌ ವೀಕ್ಲಿ ಎಕ್ಸ್‌ಪ್ರೆಸ್‌ ಸ್ಪೆಷಲ್‌ (ನಂ.06042)

ಶಬರಿಮಲೆಗೆ ಮಂಗಳೂರಿನಿಂದ ವಿಶೇಷ ರೈಲು Read More »

ಡಿ.7ರಂದು ಉಡುಪಿ ಕೃಷ್ಣ ಮಠಕ್ಕೆ ಪವನ್‌ ಕಲ್ಯಾಣ್‌ ಆಗಮನ

ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿರುವ ಆಂಧ್ರದ ಉಪಮುಖ್ಯಮಂತ್ರಿ ಉಡುಪಿ: ಡಿಸೆಂಬರ್‌ 7ರಂದು ಶ್ರೀಕೃಷ್ಣಮಠದ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ಜನಪ್ರಿಯ ನಟ ಪವನ್‌ ಕಲ್ಯಾಣ್‌ ಭಾಗವಹಿಸಲಿದ್ದಾರೆ. ಪರ್ಯಾಯ ಶ್ರೀ ಪುತ್ತಿಗೆ ಮಠದ ಆಯೋಜನೆಯ ಗೀತೋತ್ಸವ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಪವನ್‌ ಕಲ್ಯಾಣ್‌ ಆಗಮಿಸಲಿದ್ದಾರೆ. ನ.8ರಂದು ಪೇಜಾವರ ಶ್ರೀಗಳಿಂದ ಗೀತೋತ್ಸವ ಉದ್ಘಾಟನೆಗೊಂಡಿತ್ತು. ಲಕ್ಷಕಂಠ ಗೀತಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಗೀತೋತ್ಸವ ಸಮಾರೋಪದಲ್ಲಿ ಆಂಧ್ರದ ಡಿಸಿಎಂ ಭಾಗಿಯಾಗಲಿದ್ದಾರೆ.

ಡಿ.7ರಂದು ಉಡುಪಿ ಕೃಷ್ಣ ಮಠಕ್ಕೆ ಪವನ್‌ ಕಲ್ಯಾಣ್‌ ಆಗಮನ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ಪುತ್ತೂರೊಡೆಯನಿಗೆ ಕಾಣಿಕೆ ಸಮರ್ಪಣೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇಗುಲಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ಬೆಲ್ಲ, ಅಕ್ಕಿ, ಕಡ್ಲೆ ಬೇಳೆ, ತೊಗರಿ ಬೇಳೆ ನೀಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಹರಿಪ್ರಸಾದ್ ನೆಲ್ಲಿಕಟ್ಟೆ ಅವರು ಮಾತನಾಡಿ, ಕೆಲವು ಲೋಪ ದೋಷಗಳು ಕಂಡು ಬಂದಾಗ ಅದನ್ನು ಸರಿಪಡಿಸುವ ಕೆಲಸವನ್ನು ಮಾಡುತ್ತಾ ಬಂದೆವು. ಅವೆಲ್ಲವೂ ದೇವರ ಕೃಪೆಯಿಂದ ಸರಿಯಾಗುತ್ತಾ ಬಂತು. ಹಾಗೆಯೇ ಸಮಿತಿಯ ವತಿಯಿಂದ ದೇವರಿಗೆ ಕಾಣಿಕೆ ಸಲ್ಲಿಸುವ ಸಂಕಲ್ಪ ಮಾಡಿದೆವು. ಅದರಂತೆ ಈಗ ಮೂರನೇ ಬಾರಿಗೆ ಕಾಣಿಕೆ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ಪುತ್ತೂರೊಡೆಯನಿಗೆ ಕಾಣಿಕೆ ಸಮರ್ಪಣೆ Read More »

error: Content is protected !!
Scroll to Top