ಧಾರ್ಮಿಕ

ಡಿ.12 ರಿಂದ 15 : ಶಾಂತಿಮೊಗರು ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಕುದ್ಮಾರು: ಶಾಂತಿಮೊಗರು ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಡಿ.14 ರಿಂದ ಡಿ.15 ರ ತನಕ ನಡೆಯಲಿರುವ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಶಾಂತಿಮೊಗರಿನಲ್ಲಿ ನಡೆಯಿತು. ಬೆಳ್ತಂಗಡಿ ಲಾಯಿಲದ ದೀಕ್ಷಿತ ಕೆ.ಯುವರಾಜ ಗುರುಸ್ವಾಮಿ ಅವರ ಶುಭಾಶೀರ್ವಾದದೊಂದಿಗೆ, ದೀಕ್ಷಿತ ಮೇದಪ್ಪ ಗುರುಸ್ವಾಮಿ ಮತ್ತು ಆಲಂಕಾರು ಅಯ್ಯಪ್ಪ ಭಕ್ತವೃಂದದ ಹಿರಿತನದಲ್ಲಿ ಜನಾರ್ದನ ಗುರುಸ್ವಾಮಿಯವರ ನೇತೃತ್ವದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ನಡೆಯಲಿದೆ. ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭ ಶಾಂತಿಮೊಗರು ಶ್ರೀ ಅಯ್ಯಪ್ಪ ಭಕ್ತವೃಂದದವರು ಉಪಸ್ಥಿತರಿದ್ದರು.

ಡಿ.12 ರಿಂದ 15 : ಶಾಂತಿಮೊಗರು ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಸೊಂಪಾಡಿ ಶ್ರೀ ಮಾರಿಯಮ್ಮ ಕ್ಷೇತ್ರದ ಜೀರ್ಣೋದ್ದಾರ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಸವಣೂರು:  ಸೊಂಪಾಡಿ ಶ್ರೀ ಮಾರಿಯಮ್ಮ ಕ್ಷೇತ್ರದ ಜೀರ್ಣೋದ್ದಾರ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಗೌರವಾಧ್ಯಕ್ಷರಾಗಿ ಸುದರ್ಶನ್‍ ನ್ಯಾಕ್ ಕಂಪ, ಗಿರಿಶಂಕರ ಸುಲಾಯ, ಸತೀಶ್‍ ಕುಮಾರ್‍ ಕೆಡೆಂಜಿ, ಅಧ್ಯಕ್ಷರಾಗಿ ಸುಳ್ಯ ಶಾಸಕರಾದ ಕು. ಭಾಗಿರಥಿ ಮುರುಳ್ಯ, ಕಾರ್ಯಧ್ಯಕ್ಷರಾಗಿ ರಾಕೇಶ್‍ ರೈ ಕೆಡೆಂಜಿ, ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‍ ಕೆ. ಸವಣೂರು, ಜತೆ ಕಾರ್ಯದರ್ಶಿಯಾಗಿ ತಾರಾನಾಥ ಕಾಯರ್ಗ, ಕೋಶಾಧಿಕಾರಿಯಾಗಿ ವಿಜಯನ್‍  ಸೊಂಪಾಡಿ ಆಯ್ಕೆಯಾದರು.

ಸೊಂಪಾಡಿ ಶ್ರೀ ಮಾರಿಯಮ್ಮ ಕ್ಷೇತ್ರದ ಜೀರ್ಣೋದ್ದಾರ ಸಮಿತಿಗೆ ಪದಾಧಿಕಾರಿಗಳ ಆಯ್ಕೆ Read More »

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ, ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ಪಟ್ಟಾಭಿಷೇಕ | ನ.26, ಜ.1.2 ರಂದು ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ

ಮಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಮತ್ತು ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಅಂಗವಾಗಿ ನ.26 ಹಾಗೂ ಜನವರಿ 1 ಮತ್ತು 2ರಂದು ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ನುಡಿದರು. ಅವರು ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಶ್ವ ಭೂಪಟದಲ್ಲಿ ಶಿಕ್ಷಣ ಕಾಶಿ, ಸಾಂಸ್ಕೃತಿಕ ಶ್ರದ್ಧಾ ಕೇಂದ್ರ ಎಂದು

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ, ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ಪಟ್ಟಾಭಿಷೇಕ | ನ.26, ಜ.1.2 ರಂದು ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ Read More »

ಕೇವಲ ಎರಡು ತಾಸಿನಲ್ಲಿ ಸಿಗಲಿದೆ ತಿಮ್ಮಪ್ಪನ ದರ್ಶನ

ತಿರುಪತಿಯಲ್ಲಿ ತಾಸುಗಟ್ಟಲೆ ಕ್ಯೂ ನಿಲ್ಲುವ ಬವಣೆ ತಪ್ಪಿಸಲು ಹೊಸ ವ್ಯವಸ್ಥೆ ತಿರುಪತಿ: ವಿಶ್ವಪ್ರಸಿದ್ಧ ತಿರುಪತಿ ದೇಗುಲದಲ್ಲಿ ದೇವರ ದರ್ಶನಕ್ಕಾಗಿ ತಾಸುಗಟ್ಟಲೆ ಸರತಿ ಸಾಲಿನಲ್ಲಿ ಕಾದುನಿಲ್ಲುವ ಬವಣೆ ತಪ್ಪಲಿದೆ. ಎಲ್ಲ ಭಕ್ತರಿಗೆ ಕ್ಷಿಪ್ರವಾಗಿ ತಿಮ್ಮಪ್ಪನ ದರ್ಶನ ಸಿಗುವಂತಾಗಲು ದೇವಳದ ಆಡಳಿತ ನೋಡಿಕೊಳ್ಳುತ್ತಿರುವ ಟಿಟಿಡಿ ಹೊಸ ವ್ಯವಸ್ಥೆ ಮಾಡಲು ಮುಂದಾಗಿದೆ. ಈ ವ್ಯವಸ್ಥೆ ಜಾರಿಗೆ ಬಂದ ಬಳಿಕ ಎಷ್ಟೇ ರಶ್‌ ಇದ್ದರೂ ಕೇವಲ ಎರಡರಿಂದ ಮೂರು ಗಂಟೆಗಳಲ್ಲಿ ಸಾಮಾನ್ಯ ಭಕ್ತರಿಗೂ ದೇವರ ದರ್ಶನ ಮಾಡಲು ಸಾಧ್ಯವಾಗಲಿದೆ.ಕೇವಲ 2ರಿಂದ 3 ಗಂಟೆಯೊಳಗೆ

ಕೇವಲ ಎರಡು ತಾಸಿನಲ್ಲಿ ಸಿಗಲಿದೆ ತಿಮ್ಮಪ್ಪನ ದರ್ಶನ Read More »

ಡಿ.28-29 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಶ್ರೀನಿವಾಸ ಕಲ್ಯಾಣೋತ್ಸವ | ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಡಿ.28 ಹಾಗೂ 29 ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ, ಭೂಮಿಯಲ್ಲಿ ಅತ್ಯಂತ ಶ್ರೇಷ್ಠ ಸನ್ನಿಧಿಯಿದ್ದರೆ ಅದು ತಿರುಪತಿ ಕ್ಷೇತ್ರ. ಸಪ್ರಗಿರಿವಾಸ ಹೆಸರಿನೊಂದಿಗೆ ತಿರುಪತಿ

ಡಿ.28-29 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಶ್ರೀನಿವಾಸ ಕಲ್ಯಾಣೋತ್ಸವ | ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಕನಕದಾಸ ಜಯಂತಿ

ಪುತ್ತೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಕನಕದಾಸ ಜಯಂತಿ ಸೋಮವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಉಪತಹಸೀಲ್ದಾರ್ ಸುಲೋಚನಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ಕನಕದಾಸರು ದಾಸ ಸಾಹಿತ್ಯದಲ್ಲಿ ಮೈಲಿಗಲ್ಲು ಸ್ಥಾಪಿಸಿದವರು. ಸಾಹಿತ್ಯವನ್ನು ಮುಂದಿಟ್ಟು ಕೀರ್ತನೆಗಳ ಮೂಲಕ ಜೀವನದಲ್ಲಿ ಮುಕ್ತಿ ಮಾರ್ಗವನ್ನು ಕಂಡುಕೊಂಡು ಸಮಾಜಕ್ಕೆ ಕೊಡುಗೆಗಳನ್ನು ನೀಡಿದವರು. ಸಮಾಜಕ್ಕೆ ಕೆಡುಕು ಮಾಡದೇ ಯಾವ ರೀತಿ ಬದುಕು ಸಾಗಿಸಬಹುದು ಎಂಬುದನ್ನು ತನ್ನ ಸಂದೇಶದ ಮೂಲಕ ಸಾರಿದರು. ಶೈಕ್ಷಣಿಕ, ಧಾರ್ಮಿಕ, ಸಾಹಿತ್ಯಿಕವಾಗಿ ಜಗದ

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಕನಕದಾಸ ಜಯಂತಿ Read More »

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಂಪನ್ನ

ಪುತ್ತೂರು: ಶ್ರೀಕ್ಷೇತ್ರ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವದ ಕ್ಷೇತ್ರದ ಪರಿವಾರ ಸಾನಿಧ್ಯಗಳಾದ ಧೂಮಾವತಿ ದೈವದ ನೇಮ ಹಾಗೂ ಅಪರಾಹ್ನ ವ್ಯಾಘ್ರಚಾಮುಂಡಿ ಹುಲಿಭೂತ ನೇಮೋತ್ಸವದೊಂದಿಗೆ ಈ ವರ್ಷದ ಮೊದಲ ಜಾತ್ರೋತ್ಸವ ಭಾನುವಾರ ಸಂಪನ್ನಗೊಂಡಿತು. ವರ್ಷದ ಆದಿಯ ಜಾತ್ರೆ ಎಂದು ಪ್ರಸಿದ್ದಿ ಪಡೆದಿರುವ ಕ್ಷೇತ್ರದ ಜಾತ್ರೋತ್ಸವದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಉತ್ಸವ ಬಲಿ, ದರ್ಶನ ಬಲಿ ನಡೆದು ಬಟ್ಟಲು ಕಾಣಿಕೆ, ರಾಜಾಂಗಣದಲ್ಲಿ ಪ್ರಸಾದ ವಿತರಣೆ, ಮಂತ್ರಾಕ್ಷತೆಯಾಗಿ ಮಹಾಪೂಜೆ ಹಾಗೂ

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಂಪನ್ನ Read More »

ಡಿ.28-29 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಶ್ರೀನಿವಾಸ ಕಲ್ಯಾಣೋತ್ಸವ | ವಿವಿಧ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಡಿ.28 ಹಾಗೂ 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ಪೂರ್ವಭಾವಿ ಮುಕ್ರಂಪಾಡಿ ಸುಭದ್ರಾ ಕಲ್ಯಾಣ ಮಂಟಪದ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ನೂತನ ಪಧಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಚಾಲಕರಾಗಿ ಅರುಣ್ ಕುಮಾರ್ ಪುತ್ತಿಲ, ಗೌರವಾಧ್ಯಕ್ಷರುಗಳಾಗಿ ಡಾ। ಸುರೇಶ್ ಪುತ್ತೂರಾಯ, ಚಂದಪ್ಪ ಮೂಲ್ಯ, ಶಶಾಂಕ್ ಕೋಟೇಚಾ, ಗೋಪಾಲಕೃಷ್ಣ ಭಟ್,  ಬೂಡಿಯಾರ್ ರಾಧಾಕೃಷ್ಣ ರೈ ಅವರುಗಳು ಆಯ್ಕೆಯಾದರು. ಅಧ್ಯಕ್ಷರಾಗಿ ಶಿವಪ್ರಸಾದ್

ಡಿ.28-29 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಶ್ರೀನಿವಾಸ ಕಲ್ಯಾಣೋತ್ಸವ | ವಿವಿಧ ಸಮಿತಿಗೆ ಪದಾಧಿಕಾರಿಗಳ ಆಯ್ಕೆ Read More »

ನಾಳೆ ತೆರೆಯಲಿದೆ ಶಬರಿಮಲೆ ಸನ್ನಿಧಾನದ ಬಾಗಿಲು | ಶನಿವಾರದಿಂದ ಮಂಡಲ ಯಾತ್ರೆ ಶುರು

ಶಬರಿಮಲೆ : ವಾರ್ಷಿಕ ಮಂಡಲ ಮತ್ತು ಮಕರ ಜ್ಯೋತಿ ಯಾತ್ರೆಗಾಗಿ ಶಬರಿಮಲೆ ಅಯ್ಯಪ್ಪ ದೇಗುಲದ ಬಾಗಿಲನ್ನು ನ.15ರಂದು ತೆರೆಯಲಾಗುವುದು. ನ.16ರಿಂದ ಭಕ್ತರಿಗೆ ಅಯ್ಯಪ್ಪನ ದರ್ಶನ ಲಭ್ಯವಾಗಲಿದೆ. ಈ ಋತುವಿನ ಯಾತ್ರೆಗಾಗಿ ಅನೇಕ ಬದಲಾವಣೆಗಳೊಂದಿಗೆ ಕೇರಳ ಸರಕಾರ ಸರ್ವ ಸಿದ್ಧತೆಗಳನ್ನು ನಡೆಸಿದೆ.ನಾಳೆ ಸಂಜೆ 4 ಗಂಟೆಗೆ ಮುಖ್ಯಮೇಲ್‌ಶಾಂತಿ ಪಿ.ಎನ್‌.ಮಹೇಶ್‌ ನಂಬೂದಿರಿಯವರು ಶಬರಿಮಲೆ ಗರ್ಭಗೃಹದ ಬಾಗಿಲು ತೆರೆದು ಪೂಜೆ ನೆರವೇರಿಸುವುದರೊಂದಿಗೆ ಈ ವರ್ಷದ ಯಾತ್ರೆ ವಿದ್ಯುಕ್ತವಾಗಿ ಆರಂಭವಾಗಲಿದ್ದು ನಂತರ 62 ದಿನ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸಲಿದ್ದಾರೆ.ಶನಿವಾರ ನಸುಕಿನ

ನಾಳೆ ತೆರೆಯಲಿದೆ ಶಬರಿಮಲೆ ಸನ್ನಿಧಾನದ ಬಾಗಿಲು | ಶನಿವಾರದಿಂದ ಮಂಡಲ ಯಾತ್ರೆ ಶುರು Read More »

ಜೆ.ಕೆ.ಕನ್‍ ಸ್ಟ್ರಕ್ಷನ್‍ ಕಚೇರಿಯಲ್ಲಿ ಮೂರನೇ ವರ್ಷದ ಪೂಜಾ ಸಂಭ್ರಮ

ಪುತ್ತೂರು: ಏಳ್ಮುಡಿಯ ಮುಖ್ಯರಸ್ತೆಯಲ್ಲಿರುವ ಪ್ರಾವಿಡೆನ್ಸ್ ಕಾಂಪ್ಲೆಕ್ಸ್‍ ನ ಎರಡನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಜೆ.ಕೆ.ಕನ್‍ ಸ್ಟ್ರಕ್ಷನ್ ಮೂರನೇ ವರ್ಷದ ಪೂಜಾ ಸಂಭ್ರಮ ಬುಧವಾರ ನಡೆಯಿತು. ಈ ಪ್ರಯುಕ್ತ ಕಚೇರಿಯಲ್ಲಿ ಪೂಜಾ ವಿಧಿವಿಧಾನ ಬುಧವಾರ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಜಯಕುಮಾರ್ ನಾಯರ್, ಪತ್ನಿ ಸುನಿತಾ ಜೆ.ಕೆ. ನಾಯರ್, ಪುತ್ರ ಸಿದ್ಧಾರ್ಥ್‍ ಜೆ.ಕೆ.ನಾಯರ್, ಪುತ್ರಿ ಶಿಂಧ್ಯ ಜೆ.ಕೆ.ನಾಯರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ನ್ಯೂಸ್ ಪುತ್ತೂರು ಕಾರ್ಯನಿರ್ವಾಹಕ ನಿರ್ದೇಶಕ ನಾಗೇಶ್‍ ಕೆಡೆಂಜಿ, ಉದ್ಯಮಿ ಶಿವರಾಮ

ಜೆ.ಕೆ.ಕನ್‍ ಸ್ಟ್ರಕ್ಷನ್‍ ಕಚೇರಿಯಲ್ಲಿ ಮೂರನೇ ವರ್ಷದ ಪೂಜಾ ಸಂಭ್ರಮ Read More »

error: Content is protected !!
Scroll to Top