ಧಾರ್ಮಿಕ

ಶಬರಿಮಲೆ ಯಾತ್ರೆಗೆ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ

ನಿತ್ಯ 80 ಸಾವಿರ ಭಕ್ತರಿಗೆ ಮಾತ್ರ ದರ್ಶನ ಅವಕಾಶ ತಿರುವನಂತಪುರ: ಶಬರಿಮಲೆ ಯಾತ್ರೆಗೈಯ್ಯುವವರು ಈ ಬಾರಿ ಆನ್‌ಲೈನ್‌ ಬುಕ್ಕಿಂಗ್‌ ಮಾಡಿಕೊಳ್ಳುವುದು ಕಡ್ಡಾಯ. ಮಂಡಲ-ಮಕರವಿಳಕ್ಕು ಯಾತ್ರೆಗೆ ಪೂರ್ವಭಾವಿಯಾಗಿ ನಿನ್ನೆ ನಡೆದ ಸಭೆಯಲ್ಲಿ ಕೇರಳ ಸರಕಾರ ಈ ಸಲ ಯಾತ್ರಾರ್ಥಿಗಳಿಗೆ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯಗೊಳಿಸುವ ನಿರ್ಧಾರ ಕೈಗೊಂಡಿದೆ.ಪ್ರತಿದಿನ 80,000 ಭಕ್ತರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ. ಭಕ್ತರು ಶಬರಿ­­­­ಮಲೆ ದೇಗುಲದ ವೆಬ್‌ಸೈಟ್‌ನಲ್ಲಿ ವರ್ಚುವಲ್‌ ಬುಕ್ಕಿಂಗ್‌ ಮಾಡಬೇಕಾಗುತ್ತದೆ. ಈ ವೇಳೆ ಯಾತ್ರಾರ್ಥಿಗಳು ಸಾಗುವ ಮಾರ್ಗವನ್ನೂ ಆಯ್ದುಕೊಳ್ಳುವ ಅವಕಾಶ ಕೂಡ ಇದೆ. […]

ಶಬರಿಮಲೆ ಯಾತ್ರೆಗೆ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ Read More »

ಶಾಂತಿಗೋಡು ವಿಷ್ಣು ಭಜನಾ ಮಂದಿರದಲ್ಲಿ 5ನೇ ವರ್ಷದ ಆಯುಧ ಪೂಜೆ

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣು ಭಜನಾ ಮಂದಿರದ ಆಶ್ರಯದಲ್ಲಿ ಶಾಂತಿಗೋಡು ವಿಕ್ರಂ ಯುವಕ ಮಂಡಲ ಸಹಯೋಗದೊಂದಿಗೆ 5ನೇ ವರ್ಷದ ಆಯುಧ ಪೂಜೆ ಕಾರ್ಯಕ್ರಮ ಆದಿತ್ಯವಾರ ಶಾಂತಿಗೋಡುವಿಷ್ಣು ಭಜನಾ ಮಂದಿರದಲ್ಲಿ ನಡೆಯಿತು. ಅರ್ಚಕ ಮನೋಜ್ ಶಗ್ರಿತಾಯ ಸಮಿ ವೃಕ್ಷಕ್ಕೆ ಪೂಜೆ ನೆರವೇರಿಸಿ ಬಳಿಕ ವಾಹನ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ 40 ಕ್ಕು ಮಿಕ್ಕಿ ವಾಹನ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಹಿರಿಯರದ ಹೋನಪ್ಪ ಗೌಡ ಕೈಂದಾಡಿ, ಬಾಬು ಗೌಡ ಕೈಂದಾಡಿ, ಸೀತಾರಾಮ ಗೌಡ ಓಲಾಡಿ, ಯುವಕ ಮಂಡಲ ಅಧ್ಯಕ್ಷ

ಶಾಂತಿಗೋಡು ವಿಷ್ಣು ಭಜನಾ ಮಂದಿರದಲ್ಲಿ 5ನೇ ವರ್ಷದ ಆಯುಧ ಪೂಜೆ Read More »

ಇಂದು (ಅ.6) : ಪುಣಚ ದೇವಿನಗರದಲ್ಲಿ ‘ಯಕ್ಷ ತೆಲಿಕೆ’ ಯಕ್ಷ ಹಾಸ್ಯ ವೈಭವ | ಪುಣಚ ದೇವಿನಗರ ಶ್ರೀ ಮಹಮ್ಮಾಯೀ ಜೈ ಭಾರತಿ ಮರಾಟಿ ಸಂಘದ ನೇತೃತ್ವ

ಪುತ್ತೂರು: ಕುಸಾಲ್ದ ಗುರಿಕಾರೆ ದಿನೇಶ್‍ ಕೋಡಪದವು ಸಾರಥ್ಯದಲ್ಲಿ ಜಿಲ್ಲೆಯ ಪ್ರಸಿದ್ಧ ಹಾಸ್ಯ ಕಲಾವಿದರ ಸಮಾಗಮದೊಂದಿಗೆ ‘ಯಕ್ಷ ತೆಲಿಕೆ’ ಯಕ್ಷ ಹಾಸ್ಯ ವೈಭವ ಇಂದು ರಾತ್ರಿ 8 ಗಂಟೆಗೆ ಪುಣಚ ದೇವಿನಗರದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಬಂಟ್ವಾಳ ತಾಲೂಕಿನ ಪುಣಚ ದೇವಿನಗರ ಶ್ರೀ ಮಹಮ್ಮಾಯೀ ಜೈ ಭಾರತಿ ಮರಾಟಿ ಸಂಘದ ವತಿಯಿಂದ ನವರಾತ್ರಿ ಪ್ರಯುಕ್ತ ಭಜನೋತ್ಸವದ ಅಂಗವಾಗಿ  ಕಾರ್ಯಕ್ರಮ ನಡೆಯಲಿದೆ. ಯಕ್ಷ ತೆಲಿಕೆ ಕಾರ್ಯಕ್ರಮದಲ್ಲಿ ಭಾಗವತರಾಗಿ ಗಿರೀಶ್‍ ರೈ ಕಕ್ಕೆಪದವು, ಮದ್ದಳೆ ನೆಕ್ಕರೆಮೂಲೆ ಗಣೇಶ್‍ ಭಟ್‍, ಚೆಂಡೆ, ರೋಹಿತ್ ಉಚ್ಚಿಲ,

ಇಂದು (ಅ.6) : ಪುಣಚ ದೇವಿನಗರದಲ್ಲಿ ‘ಯಕ್ಷ ತೆಲಿಕೆ’ ಯಕ್ಷ ಹಾಸ್ಯ ವೈಭವ | ಪುಣಚ ದೇವಿನಗರ ಶ್ರೀ ಮಹಮ್ಮಾಯೀ ಜೈ ಭಾರತಿ ಮರಾಟಿ ಸಂಘದ ನೇತೃತ್ವ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ

ಪುತ್ತೂರು: ನವರಾತ್ರಿಯು ಒಂದು ಮಂಗಳಕರ ಹಿಂದೂ ಹಬ್ಬವಾಗಿದ್ದು, ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ. ಶಕ್ತಿ, ಜ್ಞಾನ, ಸಂಪತ್ತು ಹೀಗೆ ಪ್ರತಿ ದಿನವೂ ಜೀವನದ ವಿವಿಧ ಭಾಗಗಳಲ್ಲಿ ದುರ್ಗೆಯ ಒಂಬತ್ತು ರೂಪಗಳನ್ನು ಸಂಕೇತಿಸುತ್ತದೆ ಒಂಬತ್ತು ದಿನಗಳ ಹಬ್ಬವು ಮಹತ್ತರವಾದ ಅರ್ಥವನ್ನು ಹೊಂದಿದೆ ಮತ್ತು ದೇಶಾದ್ಯಂತ ಆಚರಿಸಲು ಸುದೀರ್ಘ ಇತಿಹಾಸವನ್ನು ಹೊಂದಿದೆ ಎಂದು ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ) ಆಡಳಿತ ಮಂಡಳಿ ಸದಸ್ಯೆ ಶೋಭಾ ಸಿ. ಅಡಿಗ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ Read More »

ಅ.2-12 : ಆಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಕಡಬ: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಅ.2 ಬುಧವಾರದಿಂದ ಅ.12 ಶನಿವಾರದ ತನಕ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಉತ್ಸವದ ಅಂಗವಾಗಿ ಅ.4 ಶುಕ್ರವಾರ ಬೆಳಿಗ್ಗೆ 8 ರಿಂದ ಸಾಮೂಹಿಕ ಚಂಡಿಕಾಯಾಗ, ಅ.11 ಹಾಗೂ 12 ರಂದು ಮಧ್ಯಾಹ್ನ 2 ರಿಂದ ಆಯುಧ ಪೂಜೆ ಜರಗಲಿದೆ. ಅ.12 ಶನಿವಾರ ವಿಜಯದಶಮಿಯಂದು ಬೆಳಿಗ್ಗೆ 8 ರಿಂದ ಶ್ರೀ ಮಹಾಗಣಪತಿ ಹೋಮ, 9 ರಿಂದ ಅಕ್ಷರಾಭ್ಯಾಸ, ಮಧ್ಯಾಹ್ನ 12 ರಿಂದ

ಅ.2-12 : ಆಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ Read More »

ಅ.3-12 : ಪುತ್ತೂರು ಶ್ರೀ ಮಹಾಲಿಂಗೇಶ್ವರ ವಠಾರದ ಶ್ರೀ ಶಾರದಾ ಭಜನಾ ಮಂದಿರದಲ್ಲಿ 90ನೇ ವರ್ಷದ ನವರಾತ್ರಿ ಉತ್ಸವ, ‘ಪುತ್ತೂರು ಶಾರದೋತ್ಸವ’ | ವೈಭವದ ಶೋಭಾಯಾತ್ರೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ ‘ಪುತ್ತೂರು ಶಾರದೋತ್ಸವ’ ಅ.3 ರಿಂದ 12 ರ ತನಕ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶ್ರೀ ಶಾರದಾ ಭಜನಾ ಮಂದಿರದ ಆಡಳಿತ ಮಂಡಳಿ ಗೌರವಾಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 9 ದಶಕಗಳ ಹಿಂದೆ ಆರಂಭಗೊಂಡ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ ಆರಂಭಗೊಂಡಿತ್ತು. 9 ದಶಕಗಳ

ಅ.3-12 : ಪುತ್ತೂರು ಶ್ರೀ ಮಹಾಲಿಂಗೇಶ್ವರ ವಠಾರದ ಶ್ರೀ ಶಾರದಾ ಭಜನಾ ಮಂದಿರದಲ್ಲಿ 90ನೇ ವರ್ಷದ ನವರಾತ್ರಿ ಉತ್ಸವ, ‘ಪುತ್ತೂರು ಶಾರದೋತ್ಸವ’ | ವೈಭವದ ಶೋಭಾಯಾತ್ರೆ Read More »

ಆರ್ಲಪದವು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಜೀರ್ಣೋದ್ದಾರ | ಅನುದಾನ ನೀಡುವಂತೆ ಶಾಸಕ ಅಶೋಕ್ ರೈಯವರಿಂದ ಸಚಿವರಿಗೆ ಮನವಿ

ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಜೀರ್ಣೋದ್ದಾರ ಕಾರ್ಯಗಳು ನಡೆಯುತ್ತಿದ್ದು ದೈವಸ್ಥಾನದ ಅಭಿವೃದ್ದಿ ಕಾರ್ಯಕ್ಕೆ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಮುಜರಾಯಿ ಖಾತೆ ಸಚಿವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಆರ್ಲಪದವು ಕಿನ್ನಿಮಾಣಿ ಪೂಮಾಣಿ ದೈವಸ್ಥಾನ ಅತ್ಯಂತ ಪುರಾತನ ದೈವಸ್ಥಾನವಾಗಿದೆ. ಇದರ ಜೀರ್ಣೋದ್ದಾರ ಕಾರ್ಯಗಳು ಈಗಾಗಲೇ ಪ್ರಾರಂಭಗೊಂಡಿದ್ದು ನಿತ್ಯ ಇಲ್ಲಿಗೆ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ಕ್ಷೇತ್ರದ ಅಭಿವೃದ್ದಿಗೆ 15 ಲಕ್ಷ ಅನುದಾನ ನೀಡುವಂತೆ ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾರೆಡ್ಡಿಯವರಿಗೆ ಮನವಿ

ಆರ್ಲಪದವು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಜೀರ್ಣೋದ್ದಾರ | ಅನುದಾನ ನೀಡುವಂತೆ ಶಾಸಕ ಅಶೋಕ್ ರೈಯವರಿಂದ ಸಚಿವರಿಗೆ ಮನವಿ Read More »

ತಿರುಪತಿ ವಿವಾದ : ವಿಶ್ವ ಹಿಂದೂ ಪರಿಷತ್ ಖಂಡನೆ

ಪುತ್ತೂರು: ತಿರುಪತಿ ದೇವಸ್ಥಾನದ ಲಡ್ಡು ಸಿದ್ಧಪಡಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು ಪತ್ತೆಯಾಗಿರುವುದಕ್ಕೆ ವಿಶ್ವ ಹಿಂದೂ ಪರಿಷತ್ ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ವಿಶ್ವ ಹಿಂದೂ ಪರಿಷತ್ ನ ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಈ ಕುರಿತು ಮಾತನಾಡಿ, ತಿರುಪತಿ ದೇವಸ್ಥಾನ ಹಿಂದೂಗಳ ಒಂದು ಶ್ರದ್ಧಾ ಕೇಂದ್ರ. ಇಲ್ಲಿ ಪ್ರಸಾದ ರೂಪದಲ್ಲಿ ಸಿಗುವಂತ ಲಡ್ಡು ಅತ್ಯಂತ ಮಹತ್ವಪೂರ್ಣವಾದದ್ದು. ಹೀಗಿರುವಾಗ ಪವಿತ್ರವಾದ ಲಡ್ಡು ಪ್ರಸಾದವನ್ನ ಅಪವಿತ್ರಗೊಳಿಸಿದ್ದಂತಹ ಜಗನ್ ಮೋಹನ್ ರೆಡ್ಡಿ ನೇತೃತ್ವದ ಹಿಂದಿನ ಸರ್ಕಾರ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ.

ತಿರುಪತಿ ವಿವಾದ : ವಿಶ್ವ ಹಿಂದೂ ಪರಿಷತ್ ಖಂಡನೆ Read More »

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜಮಹೋತ್ಸವ | ಪೂರ್ವಭಾವಿ ಸಭೆ

ಮಂಗಳೂರು: ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವವನ್ನು ಆಚರಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯ ಸಾನ್ನಿಧ್ಯವನ್ನು ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ವಹಿಸಿದ್ದರು. ಸಭೆಯಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿ , ಪಿ. ಎಸ್ . ಪ್ರಕಾಶ್ , ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು . ಮತ್ತು  ಶ್ರೀಮಠದ ಸದ್ಭಕ್ತರು ಭಾಗವಹಿಸಿದ್ದರು.

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜಮಹೋತ್ಸವ | ಪೂರ್ವಭಾವಿ ಸಭೆ Read More »

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ | ರಾಜ್ಯ ಸರಕಾರದಿಂದ ಆದೇಶ

ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಸಿರುವ ಆರೋಪ ಕೇಳಿ ಬಂದ ಬೆನ್ನಲ್ಲೇ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿದೆ. ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಮುಜರಾಯಿ ದೇವಾಲಯಗಳಲ್ಲಿ ಬಳಸುವಂತೆ ಸೂಚನೆ ನೀಡಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ. ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ | ರಾಜ್ಯ ಸರಕಾರದಿಂದ ಆದೇಶ Read More »

error: Content is protected !!
Scroll to Top