ಧಾರ್ಮಿಕ

ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಜಾತ್ರೋತ್ಸವ

ಕಾಣಿಯೂರು: ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ವರ್ಷಾವಧಿ ಜಾತ್ರೋತ್ಸವವು ಫೆ24, 25ರಂದು ನಡೆಯಿತು. ಫೆ 25ರಂದು ಬೆಳಿಗ್ಗೆ ಬ್ರಹ್ಮಶ್ರೀ ನಿಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಗಣಪತಿ ಹವನ, ಜಂಬಶುದ್ದಿ, ಕಲಶ ಪೂಜೆ, ಕಲಶಾಭಿಷೇಕ, ನಾಗತಂಬಿಲ, ಕಲ್ಲುರ್ಟಿ ತಂಬಿಲ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ದೀಪರಾಧನೆ, ಮಹಾಪೂಜೆ, ರಾತ್ರಿ ಶ್ರೀ ದೇವರ ಬಲಿ ಉತ್ಸವ, ಕಟ್ಟೆ ಪೂಜೆ, ಬಟ್ಟಲು ಕಾಣಿಕೆ. ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಿತು. ಬಳಿಕ ಮಂಗಳೂರು […]

ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಜಾತ್ರೋತ್ಸವ Read More »

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ | ನೆರವೇರಿದ ಮಹಾರುದ್ರಯಾಗ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು | ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆ

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮಹಾರುದ್ರಯಾಗ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಿತು. ಮಹಾಶಿವರಾತ್ರಿ ಉತ್ಸವದ ವಿಶೇಷವಾಗಿ ಬೆಳಗ್ಗೆ 7:30ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ಗಂಟೆಗೆ ಶತರುದ್ರಾಭಿಷೇಕ ನಡೆಯಿತು. ವಿಶೇಷವಾಗಿ ದೇವಸ್ಥಾನದ ಒಳಾಂಗಣದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಮೂರ್ತಿಗೆ ಭಕ್ತಾದಿಗಳಿಂದ ಬಿಲ್ವಾರ್ಚನೆ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬೆಳಿಗ್ಗೆಯಿಂದಲೇ ಮಹಾಶಿವರಾತ್ರಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ | ನೆರವೇರಿದ ಮಹಾರುದ್ರಯಾಗ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು | ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆ Read More »

ಮಹಾಕುಂಭಮೇಳದಲ್ಲಿ ಇಂದು ಕೊನೆಯ ಪುಣ್ಯಸ್ನಾನ : ಜಗತ್ತಿನ ಬೃಹತ್‌ ಧಾರ್ಮಿಕ ಕಾರ್ಯಕ್ರಮಕ್ಕೆ ತೆರೆ

ಇದುವರೆಗೆ ಸುಮಾರು 64 ಕೋಟಿ ಜನರಿಂದ ಪುಣ್ಯಸ್ನಾನ ಪ್ರಯಾಗರಾಜ್: ಮಹಾಶಿವರಾತ್ರಿ ಪವಿತ್ರ ದಿನವಾದ ಇಂದು ಮಹಾಕುಂಭಮೇಳದಲ್ಲಿ ಕೊನೆಯ ಪುಣ್ಯಸ್ನಾನ ನಡೆಯಲಿದ್ದು, ಇದರೊಂದಿಗೆ ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಮುಕ್ತಾಯವಾಗಲಿದೆ. ಫೆಬ್ರವರಿ 25ರಂದು ರಾತ್ರಿ 8 ಗಂಟೆಯವರೆಗೆ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ 1.24 ಕೋಟಿಗೂ ಹೆಚ್ಚು ಜನರು ಪವಿತ್ರ ಸ್ನಾನ ಮಾಡಿದರು. ಇದರೊಂದಿಗೆ ಜನವರಿ 13ರಿಂದ ಮಹಾಕುಂಭದಲ್ಲಿ ಸ್ನಾನ ಮಾಡಿದ ಒಟ್ಟು ಭಕ್ತರ ಸಂಖ್ಯೆ 64 ಕೋಟಿ ಮೀರಿದೆ.ಇಂದು ನಡೆಯಲಿರುವ ಮಹಾಶಿವರಾತ್ರಿಯ

ಮಹಾಕುಂಭಮೇಳದಲ್ಲಿ ಇಂದು ಕೊನೆಯ ಪುಣ್ಯಸ್ನಾನ : ಜಗತ್ತಿನ ಬೃಹತ್‌ ಧಾರ್ಮಿಕ ಕಾರ್ಯಕ್ರಮಕ್ಕೆ ತೆರೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ “ರಜತ ಪಥ” | ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ, ಕುಣಿತ ಭಜನೆ | ಶ್ರೀ ದೇವರಿಗೆ ರಜತ ಕವಚ ಸಮರ್ಪಣೆ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ ಉತ್ಸವ ‘ರಜತ ಪಥ’ ಫೆ.26 ಬುಧವಾರ ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಬೆಳಿಗ್ಗೆ 6.30 ರಿಂದ ಸಂಜೆ 6.30 ರ ತನಕ ಅರ್ಧ ಏಕಾಹ ಭಜನೆ, ಬೆಳಿಗ್ಗೆ 7.30 ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಏಕಾದಶ ರುದ್ರಾಭಿಷೇಕ, ಶ್ರೀ ಪಂಚಲಿಂಗೇಶ್ವರ ದೇವರಿಗೆ ರಜತ ಕವಚ ಸಮರ್ಪಣೆ, ಶ್ರೀ ರುದ್ರಯಾಗದ ಪ್ರಾರಂಭ, ಮಧ್ಯಾಹ್ನ

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ “ರಜತ ಪಥ” | ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ, ಕುಣಿತ ಭಜನೆ | ಶ್ರೀ ದೇವರಿಗೆ ರಜತ ಕವಚ ಸಮರ್ಪಣೆ Read More »

ದಾವಣಗೆರೆಯ ಮಠಕ್ಕೆ ನಟ ಸುನಿಲ್‌ ಶೆಟ್ಟಿಯಿಂದ ರೋಬೋಟಿಕ್‌ ಆನೆ ಕೊಡುಗೆ

ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರೆಕೆರೆಯ ಶಿಲಾಮಠಕ್ಕೆ ಬಾಲಿವುಡ್‌ ನಟ ಸುನಿಲ್‌ ಶೆಟ್ಟಿ ರೋಬೋಟಿಕ್​ ಆನೆಯೊಂದನ್ನು ಕೊಡುಗೆಯಾಗಿ ನೀಡಿದ್ದಾರೆ. ಭಾನುವಾರ ಶ್ರೀಮಠಕ್ಕೆ ಆಗಮಿಸಿದ ಆನೆಯನ್ನು ಸ್ವಾಮೀಜಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ರೋಬೋಟಿಕ್ ಆನೆಗೆ ಉಮಾಮಹೇಶ್ವರ ಎಂದು ನಾಮಕರಣ ಮಾಡಲಾಯಿತು. ಗ್ರಾಮಸ್ಥರೆಲ್ಲರೂ ಸೇರಿ ಆನೆಯ ಮೆರವಣಿಗೆ ಮಾಡಿ ಸಂಭ್ರಮಿಸಿದ್ದಾರೆ. ರೋಬೋಟಿಕ್ ಆನೆಯ ಪಕ್ಕದಲ್ಲಿ ನಿಂತು ಫೋಟೋ ತೆಗೆಸಿಕೊಳ್ಳಲು ಜನರು ಮುಗಿಬಿದ್ದರು.ಮುಂಬೈನ ಕುಪಾ ಆ್ಯಂಡ್ ಪೀಠಾ ಇಂಡಿಯಾ ಎಂಬ ಸಂಸ್ಥೆ ವತಿಯಿಂದ ನಟ ಸುನೀಲ್ ಶೆಟ್ಟಿ ಅವರು ರೋಬೋಟಿಕ್​ ಆನೆಯನ್ನು

ದಾವಣಗೆರೆಯ ಮಠಕ್ಕೆ ನಟ ಸುನಿಲ್‌ ಶೆಟ್ಟಿಯಿಂದ ರೋಬೋಟಿಕ್‌ ಆನೆ ಕೊಡುಗೆ Read More »

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ಅಷ್ಠಮಿ ಒಂದನೇ ಮಖೆ ಜಾತ್ರೆ | ದರ್ಶನ ಬಲಿ ಉತ್ಸವ

ಉಪ್ಪಿನಂಗಡಿ :  ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ಅಷ್ಠಮಿ ಒಂದನೇ ಮಖೆ ಜಾತ್ರೆಯ ಪ್ರಯುಕ್ತ ಗುರುವಾರದಂದು ರಾತ್ರಿ ಭಕ್ತಿ ಸಡಗರದ ರಥೋತ್ಸವವು ಜರಗಿತು. ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ದೇವಳದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆದು, ಬಲಿ ಉತ್ಸವವು ಜರುಗಿತು. ಬಳಿಕ ಶ್ರೀ ದೇವರು ರಥಾರೂಢರಾಗಿ ರಥ ಬೀದಿಯಲ್ಲಿ ರಥೋತ್ಸವವು ನಡೆಯಿತು. ಬಳಿಕ ಬಲಿ ಉತ್ಸವ ಜರುಗಿ ಮಹಾಪೂಜೆ ನಡೆಯಿತು. ಶುಕ್ರವಾರ ನಸುಕಿನಿಂದಲೇ ನದಿ ಸಂಗಮ ಸ್ಥಳದಲ್ಲಿ ಮಖೆ ತೀರ್ಥ ಸ್ನಾನವು ನೂರಾರು ಭಕ್ತರಿಂದ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ಅಷ್ಠಮಿ ಒಂದನೇ ಮಖೆ ಜಾತ್ರೆ | ದರ್ಶನ ಬಲಿ ಉತ್ಸವ Read More »

ಪುತ್ತೂರು (ಫೆ. 26):  ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಜ್ರಂಭನೆಯ ಮಹಾಶಿವರಾತ್ರಿ ಉತ್ಸವ

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಫೆ.26ರಂದು ರಾತ್ರಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಹಾಶಿವರಾತ್ರಿ ಉತ್ಸವದ ವಿಶೇಷವಾಗಿ ಬೆಳಗ್ಗೆ 7:30ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ಗಂಟೆಗೆ ಶತರುದ್ರಾಭಿಷೇಕ, ಬಿಲ್ವಾರ್ಚನೆ ಸೇವೆ ಹಾಗೂ ಭಜನಾ ಕಾರ್ಯಕ್ರಮ ನೆರವೇರಲಿದೆ.  ಬಳಿಕ ಸಂಜೆ 7:30ಕ್ಕೆ ಮಹಾಶಿವರಾತ್ರಿ ಉತ್ಸವ ಜರುಗಲಿದೆ. ಭಕ್ತರು ಹೆಚ್ಚಿನ ಸಂಖೆಯಲ್ಲಿ ಉತ್ಸವದಲ್ಲಿ ಭಾಗವಹಿಸಿ ಎಂದು ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್‍ ಪಂಜಿಗುಡ್ಡೆ  ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪುತ್ತೂರು (ಫೆ. 26):  ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಜ್ರಂಭನೆಯ ಮಹಾಶಿವರಾತ್ರಿ ಉತ್ಸವ Read More »

ಕೈದಿಗಳಿಗೂ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನದ ಭಾಗ್ಯ

90 ಸಾವಿರ ಕೈದಿಗಳಿಗಾಗಿ ಜೈಲಿಗೆ ಹರಿಯಲಿದೆ ತ್ರಿವೇಣಿ ಸಂಗಮದ ಜಲ ಪ್ರಯಾಗ್‌ರಾಜ್‌: ಉತ್ತರ ಪ್ರದೇಶ ಸರ್ಕಾರ ರಾಜ್ಯದ ವಿವಿಧ ಜೈಲುಗಳಲ್ಲಿ ಸೆರೆವಾಸದಲ್ಲಿರುವ ಕೈದಿಗಳಿಗೂ ಪವಿತ್ರ ಸ್ನಾನ ಮಾಡುವ ಅವಕಾಶ ಕಲ್ಪಿಸುವ ಮಹತ್ವದ ಹೆಜ್ಜೆ ಇಟ್ಟಿದೆ. ಈ ಮೂಲಕ ಕೈದಿಗಳಿಗೂ ಮಹಾಕುಂಭ ಮೇಳದಲ್ಲಿ ಭಾಗವಹಿಸುವ ಅವಕಾಶ ನೀಡಲಿದೆ. ಉತ್ತರ ಪ್ರದೇಶದ ಜೈಲು ಆಡಳಿತ ರಾಜ್ಯದಲ್ಲಿರುವ 75 ಜೈಲುಗಳಿಗೆ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಿಂದ ಪವಿತ್ರ ನೀರನ್ನು ತರಲು ವ್ಯವಸ್ಥೆ ಮಾಡುತ್ತಿದೆ. ಉತ್ತರ ಪ್ರದೇಶದ ಸಚಿವ ದಾರಾ ಸಿಂಗ್ ಚೌಹಾಣ್ ಅವರ

ಕೈದಿಗಳಿಗೂ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನದ ಭಾಗ್ಯ Read More »

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಬೋಳ್ನಡ್ಕ, ಕೊಂಬಾರುವಿನಲ್ಲಿ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ

ಕೊಂಬಾರು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಬೋಳ್ನಡ್ಕ, ಕೊಂಬಾರುವಿನಲ್ಲಿ ಫೆ.13 ರಿಂದ ಫೆ. 21ರವರೆಗೆ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಫೆ.13ರಂದು ಶ್ರೀ ದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ನಡೆಯಿತು. ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಶ್ರೀ ಸುಬ್ರಹ್ಮಣ್ಯ ಮಠ ಹಾಗೂ ಪರಮಪೂಜ್ಯ ರಾಜರ್ಷಿ ಡಾ| ಶ್ರೀ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಹಾಗೂ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಬೋಳ್ನಡ್ಕ, ಕೊಂಬಾರುವಿನಲ್ಲಿ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ Read More »

ಬೆಲೆಬಾಳುವ ಪಾರ್ಸಲನ್ನು ಅಪರಿಚಿತ ವ್ಯಕ್ತಿಯ ಕೈಗೊಪ್ಪಿಸಿದ ಫಾಲ್ಗುಣಿ ಬಸ್ ಡ್ರೈವರ್

ವಿಟ್ಲ : ಖಾಸಗಿ ಬಸ್‌ನಲ್ಲಿ ಹಾಕಿದ ಬೆಲೆಬಾಳುವ ಪಾರ್ಸೆಲ್‌ವೊಂದನ್ನು ಅಪರಿಚಿತರು ಬಸ್ ಡ್ರೈವರ್ ಬಳಿ ಕೇಳಿ ಕೊಂಡೊಯ್ದ ಘಟನೆ ವಿಟ್ಲದಲ್ಲಿ ನಡೆದಿದೆ. ಫೆ 13 ರಂದು ಬಿಸಿ ರೋಡಿನಿಂದ 12:45 ಕ್ಕೆ ಹೊರಡುವ ಫಾಲ್ಗುಣಿ (KA 20 AC 0719) ಬಸ್ಸಲ್ಲಿ ಬಿ ಸಿ ರೋಡ್ ಏಜೆಂಟ್ ಆದ ಭಾಸ್ಕರ್ ನ ಮುಖಾಂತರ ಸಂತೋಷ್ ಕೆಲಿಂಜ ಎಂಬವರ 15000 ಬೆಲೆಬಾಳುವ ಒಂದು ಪಾರ್ಸೆಲ್ ಕೆಲಿಂಜಕ್ಕೆ ಕಳುಹಿಸಲಾಗಿತ್ತು 1.15 ಕ್ಕೆ ಮುಟ್ಟಬೇಕಾದ ಬಸ್ 1.05 ಕ್ಕೆ ಕೆಲಿಂಜ ಮಾರ್ಗದಲ್ಲಿ

ಬೆಲೆಬಾಳುವ ಪಾರ್ಸಲನ್ನು ಅಪರಿಚಿತ ವ್ಯಕ್ತಿಯ ಕೈಗೊಪ್ಪಿಸಿದ ಫಾಲ್ಗುಣಿ ಬಸ್ ಡ್ರೈವರ್ Read More »

error: Content is protected !!
Scroll to Top