ನಾಳೆ (ಮೇ1) : ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಮಳೆಗಾಗಿ ವಿಶೇಷ ಪೂಜೆ
ಪುತ್ತೂರು: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶೀಘ್ರ ಮಳೆಗಾಗಿ ವಿಶೇಷ ಪೂಜೆ ಮೇ1 ರಂದು ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಬ್ರಹ್ಮಶ್ರೀ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ 12 ಕಾಯಿ ಗಣಪತಿ ಹವನ, ಆಶ್ಲೇಷ ಬಲಿ, ಶತ ರುದ್ರಾಭಿಷೇಕ, ಸೀಯಾಳ ಅಭಿಷೇಕ, ಕಲಶಾಭಿಷೇಕ ಸೇವೆಗಳೊಂದಿಗೆ ಶೀಘ್ರ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಸೀಯಾಳ ಅಭಿಷೇಕ ಹಾಗೂ ಶತರುದ್ರ ಅಭಿಷೇಕ ಸೇವೆಗೆ ಸೀಯಾಳ ಅಗತ್ಯವಿದ್ದು ಆದಷ್ಟು ಸೀಯಾಳವನ್ನು ಇಂದು (ಏ.30) ದೇವಳಕ್ಕೆ […]










