ದೇಶ ಮತ್ತು ಧರ್ಮಕ್ಕಾಗಿ ಜೀವನ ಮುಡಿಪಾಗಿರಲಿ : ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು | ಅಂಬಿಕಾ ವಿದ್ಯಾಲಯದಲ್ಲಿ ದಶಾಂಬಿಕೋತ್ಸವ ಸಮಾರೋಪ, ಗುರುವಂದನಾ ಕಾರ್ಯಕ್ರಮ
ಪುತ್ತೂರು: ದೇಶ ಮತ್ತು ಧರ್ಮಕ್ಕಾಗಿ ನಾವು ನಮ್ಮ ಜೀವನ ನಡೆಸಬೇಕು. ದೇಶವನ್ನು ಬಿಟ್ಟು ಧರ್ಮವಾಗಲೀ, ಧರ್ಮವನ್ನು ಬಿಟ್ಟು ದೇಶವಾಗಲೀ ಇರುವುದಕ್ಕೆ ಸಾಧ್ಯವಿಲ್ಲ. ಅತ್ಯಂತ ಉತ್ಕೃಷ್ಟ ದೇಶ ಹಾಗೂ ಧರ್ಮದಲ್ಲಿ ನಾವು ಜನಿಸಿದ್ದೇವೆ ಎಂಬುದೇ ಹೆಮ್ಮೆ. ಹಾಗಾಗಿ ದೇಶ ಹಾಗೂ ಧರ್ಮ ಎರಡನ್ನೂ ಚೆನ್ನಾಗಿ ಇಟ್ಟುಕೊಂಡಾಗ ಮಾತ್ರ ನಮ್ಮ ಜನ್ಮ ಸಾರ್ಥಕಗೊಳ್ಳುತ್ತದೆ. ಮನುಷ್ಯ ಜನ್ಮ ಎನ್ನುವುದು ನಮಗೆ ದೊರಕುವ ಸುವರ್ಣಾವಕಾಶ. ಇದನ್ನು ವ್ಯರ್ಥ ಮಾಡಬಾರದು ಎಂದು ಶೃಂಗೇರಿಯ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರು ಹೇಳಿದರು. […]










