ಧರ್ಮ ರಕ್ಷಣೆಯ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಕಾರ್ತಿಕ ತಂತ್ರಿ
ಪುತ್ತೂರು: ಧರ್ಮ ರಕ್ಷಣೆಯ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ದೇವರ ಆರಾದನೆ ದೇವಸ್ಥಾನದಲ್ಲಿ ಮಾತ್ರವಲ್ಲ. ಪ್ರತಿ ಮನೆಯಲ್ಲಿ ನಡೆಯಬೇಕು. ಧರ್ಮ ರಕ್ಷಣೆಯೇ ಉಪಾಸನೆಯ ಅಂಗ. ಯಾವುದೇ ಕ್ಷೇತ್ರದಲ್ಲಿ ನಷ್ಟವಾದ ಚೈತನ್ಯ ತುಂಬಿಸುವುದೇ ಬ್ರಹ್ಮಕಲಶ. ಬ್ರಹ್ಮಕಲಶದ ಬಳಿಕ ಚೈತನ್ಯ ಬೆಳಗಲಿದೆ. ಧರ್ಮದ ಆಚರಣೆ ಮಾಡಿದಾಗ ಮನುಷ್ಯ ಜನ್ಮ ಸಾಥಕ. ಉತ್ತಮ ಕಾರ್ಯಗಳು, ಉತ್ತಮ ಸ್ಥಾನ ಲಭಿಸಲಿದೆ ಎಂದು ಕೆಮ್ಮಿಂಜೆ ಕಾರ್ತಿಕ ತಂತ್ರಿಯವರು ಹೇಳಿದರು. ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ […]










