ಧಾರ್ಮಿಕ

ಎ.6 : ಪಾದೆಬಂಬಿಲ ಶ್ರೀ ದುರ್ಗಾಭಜನಾ ಮಂದಿರದಲ್ಲಿ 24ನೇ ವರ್ಷದ ಶನೈಶ್ಚರ ಪೂಜೆ | ಆಮಂತ್ರಣ ಬಿಡುಗಡೆ

ಸವಣೂರು : ಪಾಲ್ತಾಡಿ ಗ್ರಾಮದ ಪಾದೆಬಂಬಿಲ ಶಕ್ತಿ ನಗರ ಶ್ರೀ ದುರ್ಗಾಭಜನಾ ಮಂಡಳಿಯ ವತಿಯಿಂದ ಎ.6ರಂದು ನಡೆಯಲಿರುವ 24ನೇ ವರ್ಷದ ಶನೈಶ್ಚರ ಪೂಜೆ ಹಾಗೂ ಭಗವದ್ಗೀತೆ ಪಾರಾಯಣ ,ಅರ್ಧ ಏಕಾಹ ಭಜನೆಯ ಆಮಂತ್ರಣ ಬಿಡುಗಡೆ ಶ್ರೀದುರ್ಗಾ ಭಜನಾ ಮಂದಿರದಲ್ಲಿ ನಡೆಯಿತು. ಆಮಂತ್ರಣವನ್ನು ಭಜನಾ ಮಂದಿರದ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ ಹಾಗೂ ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಎ.6 : ಪಾದೆಬಂಬಿಲ ಶ್ರೀ ದುರ್ಗಾಭಜನಾ ಮಂದಿರದಲ್ಲಿ 24ನೇ ವರ್ಷದ ಶನೈಶ್ಚರ ಪೂಜೆ | ಆಮಂತ್ರಣ ಬಿಡುಗಡೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆಮುಹೂರ್ತ ಸೋಮವಾರ ನಡೆಯಿತು. ಏ.10 ರಿಂದ 17 ರ ತನಕ ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ ನಡೆಯಲಿದ್ದು, ಪೂರ್ವಭಾವಿಯಾಗಿ ಇಂದು ಬೆಳಿಗ್ಗೆ ಪೂರ್ವ ಶಿಷ್ಟ ಸಂಪ್ರದಾಯದಂತೆ ದೇವಸ್ಥಾನದ ಗರ್ಭಗುಡಿ ಎದುರು ಪ್ರಾರ್ಥನೆ ಸಲ್ಲಿಸಿದ ಬಳಿ ವಾದ್ಯದೊಂದಿಗೆ ತೆರಳಿ ಗೊನೆ ಮುಹೂರ್ತ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಿ.ಎಸ್‍. ಭಟ್ ಗೊನೆ ಮುಹೂರ್ತ ನೆರವೇರಿಸಿದರು. ಪ್ರಧಾನ ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು. ಈ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ Read More »

ಮಾಯ್‍ ದೇ ದೇವುಸ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

ಪುತ್ತೂರು : ಮಾಯ್ ದೆ ದೇವುಸ್ ಚರ್ಚ್ ನಲ್ಲಿ ಶುಭ ಶುಕ್ರವಾರ (ಗುಡ್ ಫ್ರೈಡೇ) ದಿನವನ್ನು ಆಚರಿಸಲಾಯಿತು. ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ನಲ್ಲಿ ಯೇಸುವಿನ ಕಷ್ಟ ಮರಣದ ಕಥಾಪ್ರಸಂಗವನ್ನು ವಂದನೀಯ ಲೋಹಿತ್ ಅಜಯ್ ಮಸ್ಕರೇನಸ್ , ವಂದನೀಯ ಸ್ಟ್ಯಾನಿ ಪಿಂಟೋ, ವಂದನೀಯ ಅಶೋಕ್ ರಾಯನ್ ಕ್ರಾಸ್ತಾ ರವರು ರಾಗಭರಿತವಾಗಿ ಓದಿದರು. ವಂದನೀಯ ರೂಪೇಶ್ ತೌರೋ ರವರು ತಮ್ಮ ಪ್ರವಚನದಲ್ಲಿ ಶಿಲುಬೆಯ ಮಹತ್ವವನ್ನು ತಿಳಿಸುತ್ತಾ ಯೇಸುವಿನ ಶಿಲುಬೆಯೆ ನಮ್ಮ ಹಾದಿ ಮತ್ತು ನಮ್ಮ ಜೀವನ. ದೇವರು

ಮಾಯ್‍ ದೇ ದೇವುಸ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ Read More »

ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ ಆಚರಣೆ

ಪುತ್ತೂರು: ಪ್ರಪಂಚದಾದ್ಯಂತದ ಕ್ರಿಶ್ಚಿಯನ್ನರು ಈ ವಾರವನ್ನು ಪವಿತ್ರ ವಾರವನ್ನಾಗಿ ಆಚರಿಸುತ್ತಿದ್ದಾರೆ, ಮಾ.24 ರಂದು ಈಸ್ಟರ್ ಮೊದಲು ಗರಿಗಳ ಭಾನುವಾರದಿಂದ  ಪ್ರಾರಂಭವಾಗುತ್ತದೆ. ಮಾ.29 ರಂದು ಶುಭ ಶುಕ್ರವಾರ ಮತ್ತು ಈಸ್ಟರ್ ಮೊದಲು ಬರುವ ಪವಿತ್ರ ಗುರುವಾರವನ್ನು ಆಚರಿಸುತ್ತಾರೆ. ಯೇಸು ಕ್ರಿಸ್ತನು ತನ್ನ ಶಿಷ್ಯರೊಂದಿಗೆ ಕೊನೆಯ ಭೋಜನವನ್ನು ಮಾಡಿದ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಯೇಸು ತನ್ನ ಶಿಷ್ಯರೊಂದಿಗೆ ಊಟ ಮಾಡಿದ ಕೊನೆಯ ಭೋಜನವನ್ನು ಈ ದಿನವು ಗುರುತಿಸುತ್ತದೆ. ನಾವೆಲ್ಲರೂ ಸಮಾನರು ಎಂಬುದರ ಸಂಕೇತವಾಗಿ ನಾವು ವಿನಮ್ರರಾಗಿರಬೇಕು ಮತ್ತು ಪರಸ್ಪರರ

ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ ಆಚರಣೆ Read More »

ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಗೊನೆ ಮುಹೂರ್ತ

ಕಾಣಿಯೂರು: ಪುಣ್ಚತ್ತಾರು ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದಲ್ಲಿ ಎ.3 ಹಾಗೂ 4ರಂದು ನಡೆಯಲಿರುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲದ ಅಂಗವಾಗಿ ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಹಾಗೂ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿ ಬಳಿಕ ಗೊನೆ ಮುಹೂರ್ತ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಮೊಕ್ತಸರ ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ದನ ಆಚಾರ್ಯ ವಿಷ್ಣುಪುರ, ಕೃಷ್ಣ ಆಚಾರ್ಯ

ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಗೊನೆ ಮುಹೂರ್ತ Read More »

ದೇವರಲ್ಲಿ ದೃಢವಾದ ಭಕ್ತಿಯಿಂದ ಮುಕ್ತಿ ಸಾಧ್ಯ : ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ | ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಪುತ್ತೂರು: ನಾವು ತಾದಾತ್ಮ್ಯದಿಂದ ದೇವರನ್ನು ನಂಬಿಕೊಂಡು ಹೋದರೆ ಯಾವುದೇ ಸಂದರ್ಭದಲ್ಲಿ ದೇವರು ಅನುಗ್ರಹ ಮಾಡುತ್ತಾನೆ ಎಂದು ಎಡನೀರು ಮಠಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳು ನುಡಿದರು. ಅವರು ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ನೂತನ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮದ ಅಂಗವಾಗಿ ಸೋಮವಾರ ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಜನರಿಗೆ ಬಹಳ ಹತ್ತಿರವಾದ ಸ್ವಾಮಿ ಜನಾರ್ದನ ಸ್ವಾಮಿ. ಪ್ರಸ್ತುತ ದೇವಸ್ಥಾನದ ಕಾರ್ಯಕ್ರಮಗಳಲ್ಲಿ ಮಧ್ಯ ವಯಸ್ಸಿನ

ದೇವರಲ್ಲಿ ದೃಢವಾದ ಭಕ್ತಿಯಿಂದ ಮುಕ್ತಿ ಸಾಧ್ಯ : ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ | ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ Read More »

ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ಜನಾರ್ದನ ದೇವರು ಸಹಿತ ಶ್ರೀ ಶಾಸ್ತಾರ ದೇವರ ಪುನಃ ಪ್ರತಿಷ್ಠೆ

ಪುತ್ತೂರು: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಪುತ್ತೂರು ತಾಲೂಕಿನ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸೋಮವಾರ ಶ್ರೀ ಜನಾರ್ದನ ದೇವರ ಪುನಃ ಪ್ರತಿಷ್ಠೆ, ಶ್ರೀ ಶಾಸ್ತಾರ ದೇವರ ಪುನಃ ಪ್ರತಿಷ್ಠೆ ನಡೆಯಿತು. ಸೋಮವಾರ ಮುಂಜಾನೆ 5 ರಿಂದ ತಂತ್ರಿ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮಹಾಗಣಪತಿ ಹೋಮ, ಅಲ್ಪಪ್ರಾಸಾದ ಶುದ್ದಿ, ಪ್ರಾಸಾದ ಪ್ರತಿಷ್ಠೆ, ನಾಂದೀಪುಣ್ಯಾಹ, ನಪುಂಸಕ ಶಿಲಾ ಪ್ರತಿಷ್ಠೆ, ರತ್ನನ್ಯಾಸಾದಿ ಪೀಠ ಪ್ರತಿಷ್ಠೆ, ಶಯ್ಯಾ ಮಂಟಪದಿಂದ ಜೀವಕಲಶ ಬಿಂಬ, ನಿದ್ರಾ ಕಲಶಾಧಿಗಳನ್ನು ಗರ್ಭಗೃಹದ ಒಳಗೆ ಒಯ್ಯುವುದು ನಡೆದ ಬಳಿಕ

ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ಜನಾರ್ದನ ದೇವರು ಸಹಿತ ಶ್ರೀ ಶಾಸ್ತಾರ ದೇವರ ಪುನಃ ಪ್ರತಿಷ್ಠೆ Read More »

ಮೇಲಿನ ಮುಕ್ಕೂರು ತರವಾಡು ಕ್ಷೇತ್ರ : ಜೀರ್ಣೋದ್ಧಾರದ ಪೂರ್ವಭಾವಿ ಸಭೆ | ಎ.18 : ಗಣಹೋಮ, ಮೃತ್ಯುಂಜಯ ಹೋಮ, ಸತ್ಯನಾರಾಯಣ ಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ

ಮುಕ್ಕೂರು : ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಾರಣಿಕ ಶಕ್ತಿಯ ಐತಿಹ್ಯವುಳ್ಳ ದೇವಿ-ದೈವ ಶಕ್ತಿಗಳ ಸಾನಿಧ್ಯದ ನೆಲೆ ಮೇಲಿನ ಮುಕ್ಕೂರು ತರವಾಡು ಕ್ಷೇತ್ರದಲ್ಲಿ ಅಷ್ಟಮಂಗಲ ಚಿಂತನೆಯ ಪ್ರಕಾರ ಊರವರ ಸಹಕಾರದೊಂದಿಗೆ ಸ್ಥಳ ಸಾನಿಧ್ಯಗಳ ಜೀರ್ಣೋದ್ಧಾರ ಕಾರ್ಯಕ್ಕೆ ಸಂಕಲ್ಪ ತೊಡಲಾಗಿದ್ದು ಇದರ ಭಾಗವಾಗಿ ಶ್ರೀ ಕ್ಷೇತ್ರದಲ್ಲಿ ಎ.18 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಮೇಲಿನ ಮುಕ್ಕೂರು ತರವಾಡು ಕ್ಷೇತ್ರದ ಮುಖ್ಯಸ್ಥ ಮೋಹನ ಬೈಪಡಿತ್ತಾಯ, ವಸಂತ ಬೈಪಡಿತ್ತಾಯ, ಲಕ್ಷ್ಮೀಶ ಬೈಪಡಿತ್ತಾಯ ಅವರು  ದೈವ ಸಾನಿಧ್ಯಗಳ ಜೀರ್ಣೋದ್ಧಾರ ಕುರಿತಂತೆ ಮಾ.24

ಮೇಲಿನ ಮುಕ್ಕೂರು ತರವಾಡು ಕ್ಷೇತ್ರ : ಜೀರ್ಣೋದ್ಧಾರದ ಪೂರ್ವಭಾವಿ ಸಭೆ | ಎ.18 : ಗಣಹೋಮ, ಮೃತ್ಯುಂಜಯ ಹೋಮ, ಸತ್ಯನಾರಾಯಣ ಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ Read More »

ಧರ್ಮದ ಅರಿವು ಮನೆಯಿಂದಲೇ ಆಗಬೇಕು : ಡಾ.ಈಶ್ವರಚಂದ್ರ ಜೋಯಿಸ | ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸಂಭ್ರಮದ ಬ್ರಹ್ಮಕಲಶೋತ್ಸವ

ಪುತ್ತೂರು : ಧಾರ್ಮಿಕ ಉಪನ್ಯಾಸ ನೀಡಿ, ಹಿರಿಯರ ತ್ಯಾಗದ ಫಲವಾಗಿ ದೇಶ ಇಂದು ಪ್ರಜ್ವಲಿಸುತ್ತಿದೆ. ಧರ್ಮದ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಧರ್ಮದ ಅರಿವು ಮನೆಯಿಂದಲೇ ಆಗಬೇಕು ಎಂದು ಡಾ.ಈಶ್ವರಚಂದ್ರ ಜೋಯಿಸ ಹೇಳಿದರು. ಅವರು ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಕಲಿಯುಗದಲ್ಲಿ ಭಜನೆಗೆ ಅಪಾರ ಶಕ್ತಿಯಿದೆ. ಭಜನೆಯಿಂದ ಭಗವಂತನ ಅನುಸಂಧಾನದ ಜತೆಗೆ ಸಮಾಜದ ಜಾಗೃತಿ

ಧರ್ಮದ ಅರಿವು ಮನೆಯಿಂದಲೇ ಆಗಬೇಕು : ಡಾ.ಈಶ್ವರಚಂದ್ರ ಜೋಯಿಸ | ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸಂಭ್ರಮದ ಬ್ರಹ್ಮಕಲಶೋತ್ಸವ Read More »

ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ವೈಭವದ ಬ್ರಹ್ಮಕಲಶೋತ್ಸವ : ವಿವಿಧ ವೈದಿಕ ಕಾರ್ಯಕ್ರಮಗಳು

ಪುತ್ತೂರು: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಪುತ್ತೂರು ತಾಲೂಕಿನ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಶ್ರೀ ಚಕ್ರ ಪೂಜೆ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಿತು. ಬ್ರಹ್ಮಕಲಶೋತ್ಸವದ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಉಷಃಪೂಜೆ, ಮಹಾಗಣಪತಿ ಹೋಮ, ಅಂಕುರಪೂಜೆ, ಶ್ವಾನಶಾಂತಿ, ಅದ್ಭುತ ಶಾಂತಿ, ಚೋರಶಾಂತಿ ಹೋಮಾದಿಗಳು ಜರಗಿತು. ಮಧ್ಯಾಹ್ನ 12 ಕ್ಕೆ ಕಲಶಾಭಿಷೇಕ, ಮಹಾಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಸಂಜೆ 5.30 ರಿಂದ ಅಂಕುರಪೂಜೆ, ಶ್ರೀ ಚಕ್ರಪೂಜೆ, ಮಂಟಪ ಸಂಸ್ಕಾರ, ಮಹಾಪೂಜೆ ಮುಂತಾದ ವಿವಿಧ ವೈದಿಕ ಕಾರ್ಯಕ್ರಮಗಳು

ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ವೈಭವದ ಬ್ರಹ್ಮಕಲಶೋತ್ಸವ : ವಿವಿಧ ವೈದಿಕ ಕಾರ್ಯಕ್ರಮಗಳು Read More »

error: Content is protected !!
Scroll to Top