ಧಾರ್ಮಿಕ

ಶಬರಿಮಲೆಯಲ್ಲಿ ಭಕ್ತರ ಭಾರಿ ದಟ್ಟಣೆ : ಸ್ಪಾಟ್‌ ಬಿಕ್ಕಿಂಗ್‌ಗೆ ಮಿತಿ ಹಾಕಲು ತೀರ್ಮಾನ

ಯಾತ್ರೆ ಆರಂಭದ ದಿನದಿಂದಲೇ ಸಾಲುಗಟ್ಟಿ ಬರುತ್ತಿರುವ ಅಯ್ಯಪ್ಪ ವ್ರತಧಾರಿಗಳು ಶಬರಿಮಲೆ: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಮಂಡಲ-ಮಕರ ವಿಳಕ್ಕು ಯಾತ್ರೆ ಸೋಮವಾರದಿಂದ ವಿಧ್ಯುಕ್ತವಾಗಿ ಆರಂಭವಾಗಿದ್ದು, ಆರಂಭದಿಂದಲೇ ಸಿಕ್ಕಾಪಟ್ಟೆ ದಟ್ಟಣೆಯಿದೆ. ಮೊದಲ ದಿನವೇ 1.36 ಲಕ್ಷ ಭಕ್ತರು ಅಯ್ಯಪ್ಪನ ದರ್ಶನ ಪಡೆದರು. ಭಕ್ತರ ದಟ್ಟಣೆಯನ್ನು ನಿಯಂತ್ರಿಸಲು ಸ್ಥಳೀಯ ಪೊಲೀಸರು ಹೆಣಗಾಡುತ್ತಿದ್ದಾರೆ. ಆನ್‌ಲೈನ್‌ ಮತ್ತು ಸ್ಪಾಟ್‌ ಬುಕ್ಕಿಂಗ್‌ ಎಂಬೆರಡು ಸೌಲಭ್ಯಗಳ ಮೂಲಕ ಮಾತ್ರ ದರ್ಶನಕ್ಕೆ ಅವಕಾಶ ಇದ್ದರೂ ಭಕ್ತರು ಅನಿಯಮಿತವಾಗಿ ಬರುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ. ಹೀಗಾಗಿ […]

ಶಬರಿಮಲೆಯಲ್ಲಿ ಭಕ್ತರ ಭಾರಿ ದಟ್ಟಣೆ : ಸ್ಪಾಟ್‌ ಬಿಕ್ಕಿಂಗ್‌ಗೆ ಮಿತಿ ಹಾಕಲು ತೀರ್ಮಾನ Read More »

ಶಬರಿಮಲೆ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭ

ಮುಂಜಾನೆ 3 ಗಂಟೆಗೆ ತೆರೆದ ದೇಗುಲದ ಬಾಗಿಲು, ಸಾವಿರಾರು ಭಕ್ತರಿಂದ ಅಯ್ಯಪ್ಪ ದರ್ಶನ ಶಬರಿಮಲೆ : ಈ ವರ್ಷದ ಮಂಡಲ ಮತ್ತು ಮಕರ ವಿಳಕ್ಕು ಯಾತ್ರಾ ಋತುವಿಗಾಗಿ ಶಬರಿಮಲೆ ದೇಗುಲದ ಬಾಗಿಲು ಇಂದು ತೆರೆದಿದೆ. ಅಯ್ಯಪ್ಪ ದೇಗುಲದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಇಂದಿನಿಂದ ಆರಂಭವಾಗಿದ್ದು, ಇಂದು ನಸುಕಿನ 3 ಗಂಟೆಗೆ ದೇಗುಲದ ಬಾಗಿಲು ತೆರೆಯಲಾಗಿದೆ. ಸಾವಿರಾರು ಭಕ್ತರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಮೇಲ್‌ಶಾಂತಿ ಅರುಣ್‌ಕುಮಾರ್‌ ನಂಬೂದಿರಿಯವರು ಇಂದು ನಸುಕಿನ 3 ಗಂಟೆಗೆ ತಂತ್ರಿ ಮಹೇಶ್‌ ಮೋಹನಾರು ಮತ್ತು

ಶಬರಿಮಲೆ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭ Read More »

ಶ್ರೀ ಪುಣ್ಯ ಕುಮಾರ ದೈವಸ್ಥಾನ ಮಾಡತ್ತಾರು ಕಲ್ಲೇಗ: ವಾರ್ಷಿಕ ನೇಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಕಲ್ಲೇಗ ಮಾಡತ್ತಾರುವಿನ ಶ್ರೀ ಪುಣ್ಯ ಕುಮಾರ ಹಾಗೂ ಧರ್ಮದೈವಗಳ ವರ್ಷಾವಧಿ ನೇಮದ ಜನವರಿ 2 ಮತ್ತು 3 ರಂದು ನಡೆಯಲಿದ್ದು, ಪುಣ್ಯಕುಮಾರ ದೈವಸ್ಥಾನ ಚಾವಡಿಯಲ್ಲಿ ಅಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಅರ್ಚಕ ಕೃಷ್ಣ ಶೇವಿರೆ, ಅಧ್ಯಕ್ಷ ಶ್ರೀಧರ್ ಹೆಗ್ಡೆ ಉಳಿಯ, ಕಾರ್ಯದರ್ಶಿ ಉಮೇಶ್ ಆಚಾರ್ಯ, ಗೌರವಾಧ್ಯಕ್ಷ ಜೀವಂಧರ್ ಜೈನ್, ಮಾಜಿ ಕಾರ್ಯದರ್ಶಿ ನಾರಾಯಣ ಗೌಡ ಕಲ್ಲೇಗ, ಉಪಾಧ್ಯಕ್ಷ ಜೀನಪ್ಪ ಪೂಜಾರಿ ಮುರ, ಖಜಾಂಚಿ ಗಣೇಶ್ ನ್ಯಾಕ್ ಪದ್ಮಡ್ಕ, ಜೊತೆ ಕಾರ್ಯದರ್ಶಿ ಚಂದಪ್ಪ ಕುಲಾಲ್, ಸಮಿತಿಯ

ಶ್ರೀ ಪುಣ್ಯ ಕುಮಾರ ದೈವಸ್ಥಾನ ಮಾಡತ್ತಾರು ಕಲ್ಲೇಗ: ವಾರ್ಷಿಕ ನೇಮದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕಂಬಳಕ್ಕೆ ರಾಜ್ಯ ಸರ್ಕಾರದಿಂದ ಬೆಂಬಲ: ಹತ್ತು ಕಂಬಳ ಕೂಟಗಳಿಗೆ ತಲಾ 5 ಲಕ್ಷ ರೂ. ಅನುದಾನ

ಪುತ್ತೂರು: ಕರಾವಳಿ ಜಿಲ್ಲೆಗಳ ಜಾನಪದ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಸರ್ಕಾರ ಕೊಡುಗೆ ನೀಡಿದ್ದು, 10 ಕಂಬಳ ಕೂಟಗಳಿಗೆ ‌ತಲಾ 5 ಲಕ್ಷ ರೂ. ಗಳಂತೆ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಮಾಹಿತಿ ನೀಡಿದ್ದಾರೆ. ಈ ಅನುದಾನವನ್ನು ಪ್ರವಾಸೋದ್ಯಮ ಇಲಾಖೆಯ ಮೂಲಕ ಬಿಡುಗಡೆ ಮಾಡಲಾಗಿದೆ. ಪುತ್ತೂರು, ಉಪ್ಪಿನಂಗಡಿ, ಜಪ್ಪು, ಬಂಟ್ವಾಳ, ಮೂಲ್ಕಿ, ವೇಣೂರು, ನರಿಂಗಾಣ, ಮಂಗಳೂರು, ಮೂಡಬಿದ್ರೆ, ಐಕಳ ಗಳಲ್ಲಿ ನಡೆಯುವ ಕಂಬಳಗಳಿಗೆ ‌ಸಂಬಂಧಿಸಿದ ಹಾಗೆ ಈ ಅನುದಾನ ಬಿಡುಗಡೆ ಮಾಡಲಾಗಿದೆ. ಅಶೋಕ್

ಕಂಬಳಕ್ಕೆ ರಾಜ್ಯ ಸರ್ಕಾರದಿಂದ ಬೆಂಬಲ: ಹತ್ತು ಕಂಬಳ ಕೂಟಗಳಿಗೆ ತಲಾ 5 ಲಕ್ಷ ರೂ. ಅನುದಾನ Read More »

ಸುಬ್ಬಪ್ಪನಿಗೆ ಪ್ರಥಮ ಬೆಳ್ಳಿರಥ ಸೇವೆ

ಸುಬ್ರಹ್ಮಣ್ಯ: ಸುಳ್ಯದ ಕುರುಂಜಿಯ ಕುಡಿ, ಧಾರ್ಮಿಕ ಶ್ರದ್ಧಾಳು ಆಗಿರುವ ಡಾಕ್ಟರ್ ಕೆ.ವಿ. ರೇಣುಕಾಪ್ರಸಾದ್ ಮತ್ತು ಅವರ ಕುಟುಂಬದರು ಸುಬ್ರಹ್ಮಣ್ಯಾಧೀಶ ಸುಬ್ಬಪ್ಪನಿಗೆ ಹರಕೆ ಸೇವೆಯಾಗಿ ಸಲ್ಲಿಸಿರುವ ಬೆಳ್ಳಿರಥಕ್ಕೆ ಅವರಿಂದಲೇ ಪ್ರಥಮ ಬೆಳ್ಳಿರಥ ಸೇವೆ ನಿನ್ನೆ ರಾತ್ರಿ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಉಪಸ್ಥಿತರಿದ್ದು ರಥಸೇವೆಯಲ್ಲಿ ಪಾಲ್ಗೊಂಡರು. ರೇಣುಕಾಪ್ರಸಾದ್ – ಜ್ಯೋತಿ ಆರ್. ಪ್ರಸಾದ್ ಮತ್ತು ಮನೆಯವರು ರಥ ಎಳೆಯಲು ಕೈ ಜೋಡಿಸಿದ್ದು ವಿಶೇಷವಾಗಿತ್ತು.

ಸುಬ್ಬಪ್ಪನಿಗೆ ಪ್ರಥಮ ಬೆಳ್ಳಿರಥ ಸೇವೆ Read More »

ತಿರುಪತಿ ಬೆಟ್ಟದಲ್ಲಿ ಮಾಂಸಾಹಾರ ಸೇವನೆ: ಇಬ್ಬರು ಸಿಬ್ಬಂದಿ ವಜಾ

ತಿರುಪತಿ: ತಿರುಮಲ ದೇಗುಲದ ಸಿಬ್ಬಂದಿ ಪವಿತ್ರ ಬೆಟ್ಟಗಳಲ್ಲಿ ಮಾಂಸಾಹಾರ ಸೇವನೆ ಮಾಡಿರುವ ವಿಡಿಯೋ ವೈರಲ್ ಆಗಿದ್ದು, ಹಿಂದೂಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅಲಿಪಿರಿ ‌ಕಾಲುದಾರಿಯ ಸಮೀಪ ಮಾಂಸಾಹಾರ ಸೇವನೆ ಮಾಡಿರುವ ಆಪಾದನೆ ಮೇಲೆ ಇಬ್ಬರು ಹೊರಗುತ್ತಿಗೆ ಸಿಬ್ಬಂದಿಯನ್ನು ದೇವಾಲಯದ ಆಡಳಿತ ಮಂಡಳಿ ವಜಾ ಮಾಡಿದೆ. ಈ ಬಗ್ಗೆ ತಿರುಮಲದ ಎರಡು ಟೌನ್ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ. ಮಾಂಸಾಹಾರ ಸೇವನೆ ಮಾಡಿದವರನ್ನು ರಾಮಸ್ವಾಮಿ, ಸರಸಮ್ಮ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಟಿಟಿಡಿ ಮಾಹಿತಿ ನೀಡಿದೆ.

ತಿರುಪತಿ ಬೆಟ್ಟದಲ್ಲಿ ಮಾಂಸಾಹಾರ ಸೇವನೆ: ಇಬ್ಬರು ಸಿಬ್ಬಂದಿ ವಜಾ Read More »

ಡಾ.ರೇಣುಕಾಪ್ರಸಾದ್ ಕೆ.ವಿ. ಅವರಿಂದ ಬೆಳ್ಳಿ ರಥ ಸಮರ್ಪಣೆ

ಸುಬ್ರಹ್ಮಣ್ಯ: ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಷನ್ ಕಮಿಟಿ ‘ಬಿ’ ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ.ವಿ. ಅವರು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ ಮಾಡಿದರು. ಭಕ್ತಿ ಸಂಭ್ರಮದ ಮಧ್ಯೆ ನ.10ರಂದು ಪೂ. 11ಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ರಜತ ರಥ ಸಮರ್ಪಣೆ ಮಾಡಿದರು. ಡಾ. ರೇಣುಕಾ ಪ್ರಸಾದ್ ಕೆ.ವಿ. ಅವರ ಕುಟುಂಬದವರು, ಪ್ರಮುಖರು ಸೇರಿ ಸಾವಿರಾರು ಮಂದಿ ದಿವ್ಯ ಮುಹೂರ್ತಕ್ಕೆ ಸಾಕ್ಷಿಗಳಾದರು. ಸೇವಾ ರೂಪದಲ್ಲಿ ಅವರು ಬೆಳ್ಳಿ

ಡಾ.ರೇಣುಕಾಪ್ರಸಾದ್ ಕೆ.ವಿ. ಅವರಿಂದ ಬೆಳ್ಳಿ ರಥ ಸಮರ್ಪಣೆ Read More »

ವಿಜೃಂಭಣೆಯಿಂದ ಜರುಗಿದ ಬೆಳ್ಳಿರಥ ಸಮರ್ಪಣೆಯ ಪೂರ್ವಭಾವಿ ಪೂಜೆ

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯನಿಗೆ ಶ್ರದ್ಧಾಪೂರ್ವಕವಾಗಿ ಡಾ. ರೇಣುಕಾಪ್ರಸಾದ್ ಕೆ.ವಿ. ಮತ್ತು ಮನೆಯವರು ಇಂದು ಸಮರ್ಪಿಸಲಿರುವ ಅತಿ ಸುಂದರವಾದ 18 ಅಡಿಗಳ ಎತ್ತರದ, ರೂ. ಎರಡು ಕೋಟಿಗೂ ಮಿಕ್ಕಿದ ಮೌಲ್ಯವುಳ್ಳ, ವಾಸ್ತುಶುದ್ಧಿಯುಳ್ಳ ಬೆಳ್ಳಿರಥಕ್ಕೆ ನಿನ್ನೆ ಸಂಜೆ ಗಂಟೆ 6ಕ್ಕೆ ಶುದ್ದಿ ಕಲಶ, ವಾಸ್ತುಪೂಜೆ, ವಾಸ್ತುಬಲಿ ಮತ್ತು ರಾಕ್ಷೋಘ್ನ ಹೋಮಗಳು ಪುರೋಹಿತವರ್ಯರಾದ ಎಡಪಡಿತ್ತಾಯರ ನೇತೃತ್ವದಲ್ಲಿ ನಡೆದವು. ವಿಜಯ ಸಂಕೇಶ್ವರ ಹಾಜರ್ಪೂರ್ವಭಾವಿ ವೈದಿಕ ವಿಧಿಗಳ ಸಂದರ್ಭದಲ್ಲಿ ಪ್ರಖ್ಯಾತ ಪತ್ರಕರ್ತರೂ, ಉದ್ಯಮಿಯವರೂ ಆಗಿರುವ ವಿಜಯ ಸಂಕೇಶ್ವರ ಭೇಟಿ ನೀಡಿ ಡಾ. RPಯವರಿಗೆ ಅಭಿನಂದನೆ

ವಿಜೃಂಭಣೆಯಿಂದ ಜರುಗಿದ ಬೆಳ್ಳಿರಥ ಸಮರ್ಪಣೆಯ ಪೂರ್ವಭಾವಿ ಪೂಜೆ Read More »

ಗಮ್ಯಸ್ಥಾನ ತಲುಪಿದ ಡಾ. ರೇಣುಕಾಪ್ರಸಾದ್ ಕೊಡುಗೆಯ ಬೆಳ್ಳಿರಥ

ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಸುಳ್ಯದ ರೇಣುಕಾಪ್ರಸಾದ್ ಕುರುಂಜಿ ಮತ್ತು ಕುಟುಂಬದವರು ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ದೇವರಿಗೆ ಸಮರ್ಪಿಸಲಿರುವ ಬೆಳ್ಳಿರಥವು ಕೋಟೇಶ್ವರದಿಂದ ಮೆರವಣಿಗೆಯ ಮೂಲಕ ನವೆಂಬರ್ 4ರಂದು ಹೊರಟಿದ್ದು ನಿನ್ನೆ ನವೆಂಬರ್ 5ಕ್ಕೆ ತನ್ನ ಗಮ್ಯಸ್ಥಾನವಾದ ಶ್ರೀಕ್ಷೇತ್ರ ಸುಬ್ರಹ್ಮಣ್ಯಕ್ಕೆ ತಲುಪಿತು. ಕಟೀಲ್ ಮತ್ತು ಮುರುಳ್ಯ ಭಾಗಿನಿನ್ನೆ ಪೂರ್ವಾಹ್ನ ಸುಳ್ಯದ ಕೆವಿಜಿ ಸರ್ಕಲ್ ಬಳಿ ಬೆಳ್ಳಿರಥದ ಭವ್ಯ ಮೆರವಣಿಗೆ ಆರಂಭವಾಗಿತ್ತು. ಈ ಸಂದರ್ಭದಲ್ಲಿ ಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ

ಗಮ್ಯಸ್ಥಾನ ತಲುಪಿದ ಡಾ. ರೇಣುಕಾಪ್ರಸಾದ್ ಕೊಡುಗೆಯ ಬೆಳ್ಳಿರಥ Read More »

ನ.17ರಿಂದ ಶಬರಿಮಲೆ ಯಾತ್ರೆ ಶುರು

ಡಿ.27ರಂದು ಮಂಡಲ ಪೂಜೆ ; ಜ.14ಕ್ಕೆ ಮಕರ ಜ್ಯೋತಿ ದರ್ಶನ ಶಬರಿಮಲೆ : ಶಬರಿಮಲೆಯಲ್ಲಿ ಈ ಬಾರಿಯ ಮಂಡಲ ಮಹೋತ್ಸವಕ್ಕೆ ಸಿದ್ಧತೆ ಶುರುವಾಗಿದ್ದು, ಈಗಾಗಲೇ ಭಕ್ತರು ಮಾಲೆ ಧರಿಸಿ ವ್ರತಾಚರಣೆ ಶುರು ಮಾಡಿದ್ದಾರೆ. ಅಯ್ಯಪ್ಪನ ದರ್ಶನಕ್ಕಾಗಿ ಶಬರಿಮಲೆ ಶ್ರೀ ಧರ್ಮಶಾಸ್ತ್ರಾ ದೇವಸ್ಥಾನದ ಗರ್ಭಗುಡಿಯ ಬಾಗಿಲು ನ.17ರಂದು ತೆರೆಯಲಿದೆ. ಡಿ.27ರಂದು ಮಂಡಲ ಪೂಜೆ ನಡೆಯಲಿದ್ದು, 2026ರ ಜ.14ರಂದು ಮಕರ ಸಂಕ್ರಮಣ ಮಹೋತ್ಸವ ನಡೆಯಲಿದೆ. ಶಬರಿಮಲೆ ಮಂಡಲ ಮಹೋತ್ಸವಕ್ಕೆ ಆನ್‌ಲೈನ್ ಬುಕ್ಕಿಂಗ್ ಆರಂಭಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 70 ಸಾವಿರ

ನ.17ರಿಂದ ಶಬರಿಮಲೆ ಯಾತ್ರೆ ಶುರು Read More »

error: Content is protected !!
Scroll to Top