ಧಾರ್ಮಿಕ

ಪುತ್ತೂರು ಒಡೆಯ ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವಕ್ಕೆ ಧ್ವಜಾರೋಹಣ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಬುಧವಾರ ಬೆಳಿಗ್ಗೆ ಧ್ವಜಾರೋಹಣದ ಮೂಲಕ ವೈಭವದ ಚಾಲನೆ ನೀಡಲಾಯಿತು. ಬೆಳಿಗ್ಗೆ 9.25 ನಂತರದ ವೃಷಭ ಲಗ್ನದಲ್ಲಿ ಭಕ್ತಾದಿಗಳ ಜಯಘೋಷದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವಿ.ಎಸ್‍.ಭಟ್ ಹಾಗೂ ವಸಂತ ಕೆದಿಲಾಯವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷರು, ಸದಸ್ಯರು, ಅರ್ಚಕರು, ಸಿಬ್ಬಂದಿಗಳು, ಭಕ್ತಾದಿಗಳು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಜಾತ್ರೋತ್ಸವಕ್ಕೆ ಪೂರ್ವಭಾವಿಯಾಗಿ ಏ.1 ರಂದು ಗೊನೆ ಮುಹೂರ್ತ ನಡೆದಿತ್ತು. ಗೊನೆ ಮುಹೂರ್ತ […]

ಪುತ್ತೂರು ಒಡೆಯ ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವಕ್ಕೆ ಧ್ವಜಾರೋಹಣ Read More »

1300 ವರ್ಷ ಹಳೆಯ ಶಾಸನ ಪತ್ತೆ| ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶಾಸನ- ಶೋಧನ- ಅಧ್ಯಯನ -ಸಂರಕ್ಷಣ ತಂಡದಿಂದ ಕುರುಹುಗಳ ಪರಿಶೀಲನೆ

ಬೆಳ್ಳಾರೆ: ಬೆಳ್ಳಾರೆಯ ಗೌರಿಪುರಂ ಎಂಬಲ್ಲಿ ಶ್ರೀ ರಾಜರಾಜೇಶ್ವರಿ ಸಾನಿಧ್ಯವಿರುವ ಕ್ಷೇತ್ರದ ಪರಿಸರದಲ್ಲಿ ಪತ್ತೆಯಾದ ಕೆಲವು ಶಾಸನ ಇತ್ಯಾದಿ ಪರಿಕರ ಕುರುಹು ಗಳ ಪರಿಶೀಲನೆಗೆ ಶಾಸನ ತಜ್ಞರಾದ ಡಾ.ಉಮಾನಾಥ್ ಶೆಣೈ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ  ಪುತ್ತೂರು ಉಮೇಶ್ ನಾಯಕ್ ಭೇಟಿ ನೀಡಿ  ಪರಿಶೀಲಿಸಿದರು. ಪರಿಶೀಲನೆಯ ಸಮಯದಲ್ಲಿ ಪುರಾತನ ಕಾಲದಲ್ಲಿ ವೈಭವದಲ್ಲಿ ಮೆರೆದ ದೇವಸ್ಥಾನದ ಕುರುಹುಗಳು, ಪಾಣಿಪೀಠ, ಸೋಮಸೂತ್ರ, ಬಲಿಕಲ್ಲು, ಇತ್ಯಾದಿಗಳು ಪತ್ತೆಯಾಗಿವೆ. ಮಾತ್ರವಲ್ಲದೆ ವಿಶೇಷವಾಗಿ   ದೇವಸ್ಥಾನವಿರುವ ಸ್ಥಳದಿಂದ ಸುಮಾರು 300 ಮೀಟರ್ ದೂರದ ದೇವರ

1300 ವರ್ಷ ಹಳೆಯ ಶಾಸನ ಪತ್ತೆ| ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶಾಸನ- ಶೋಧನ- ಅಧ್ಯಯನ -ಸಂರಕ್ಷಣ ತಂಡದಿಂದ ಕುರುಹುಗಳ ಪರಿಶೀಲನೆ Read More »

ನಾಳೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ | ಕುರಿಯ ಏಳ್ನಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿಯಿಂದ ವಿಶೇಷ ಪೂಜೆ, ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ

ಪುತ್ತೂರು: ಕುಡಿಯ ಮಾಡಾವು ಏಳ್ನಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ನಾಳೆ ನಡೆಯುವ ಧ್ವಜಾರೋಹಣದ ಅಂಗವಾಗಿ ಶ್ರೀ ದೇವಸ್ಥಾನದಲ್ಲಿ ಮಹಾಪೂಜೆ, ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ. ಧ್ವಜಾರೋಹಣ ದಿನದಂದು ಪೂರ್ವಶಿಷ್ಠ ಪದ್ಧತಿಯಂತೆ ಕುರಿಯ ಮಾಡಾವು ಏಳ್ನಾಡುಗುತ್ತು ಮನೆತನದ ಶ್ರೇಯಸ್ಸು ಹಾಗೂ ಗೌರವಾರ್ಥವಾಗಿ ನಡೆಯುವ ಕಾರ್ಯಕ್ರಮದ ಅಂಗವಾಗಿ ಈ ವಿಶೇಷ ಪೂಜೆ ನಡೆಯಲಿದೆ. ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಭಗವಂತನ ಅನುಗ್ರಹಕ್ಕೆ

ನಾಳೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ | ಕುರಿಯ ಏಳ್ನಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿಯಿಂದ ವಿಶೇಷ ಪೂಜೆ, ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ Read More »

ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿಗಳ ಭೇಟಿ- ಬಾಲಕೃಷ್ಣ ಶಾಸ್ತ್ರಿ

ಪಂಜ: ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ದ ಹಿರಿಯ ನ್ಯಾಯವಾದಿಗಳಾದ ಬಾಲಕೃಷ್ಣ ಶಾಸ್ತ್ರಿ ಗಟ್ಟಿಗಾರ್ ಇಂದು ಶ್ರೀ ಪರಿವಾರ ಪಂಚಲಿಗೇಶ್ವರ ದೇಗುಲಕ್ಕೆ ಭೇಟಿ ನೀಡಿದರು. ಬಳಿಕ ಪ್ರಸಾದ ಸ್ವೀಕರಿಸಿದರು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾದ ದಾ. ದೇವಿ ಪ್ರಸಾದ್ ಕಾನತ್ತೂರು, ವ್ಯವಸ್ಥಾ ಪನ ಸಮಿತಿ ಸದಸ್ಯ ರಾದ ಕಾಯಂಬಾಡಿ ಸತ್ಯನಾರಾಯಣ ಭಟ್, ಸಂತೋಷ್ ಕುಮಾ‌ರ್ ರೈಬಳ್ಪ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ರಜಿತ್‌ ಭಟ್ ಪಂಜ ಬೀಡು, ಅರ್ಚಕರಾದ ನರೇಶ್ ಕೃಷ್ಣ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿಗಳ ಭೇಟಿ- ಬಾಲಕೃಷ್ಣ ಶಾಸ್ತ್ರಿ Read More »

ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ | ವೈಭವದಿಂದ ನಡೆದ ಬ್ರಹ್ಮರಥೋತ್ಸವ

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ನೂತನವಾಗಿ ಸಮರ್ಪಣೆಗೊಂಡ ಬ್ರಹ್ಮರಥದ ರಥೋತ್ಸವ ಸಾವಿರಾರು ಭಕ್ತಾದಿಗಳ ಜಯಘೋಷದೊಂದಿಗೆ ಭಾನುವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ಭಾನುವಾರ ಬೆಳಿಗ್ಗೆ ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ನವಕ ಕಲಶ ಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಅಪ್ಪಂಗಾಯ, ನವಕ ಕಲಶಾಭಿಷೇಕ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ 7 ರಿಂದ ಶ್ರೀ ದೇವರ ಬಲಿ ಹೊರಟು

ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ | ವೈಭವದಿಂದ ನಡೆದ ಬ್ರಹ್ಮರಥೋತ್ಸವ Read More »

ಎ.6 : ಪಾದೆಬಂಬಿಲ ಶ್ರೀ ದುರ್ಗಾಭಜನಾ ಮಂದಿರದಲ್ಲಿ 24ನೇ ವರ್ಷದ ಶನೈಶ್ಚರ ಪೂಜೆ | ಆಮಂತ್ರಣ ಬಿಡುಗಡೆ

ಸವಣೂರು : ಪಾಲ್ತಾಡಿ ಗ್ರಾಮದ ಪಾದೆಬಂಬಿಲ ಶಕ್ತಿ ನಗರ ಶ್ರೀ ದುರ್ಗಾಭಜನಾ ಮಂಡಳಿಯ ವತಿಯಿಂದ ಎ.6ರಂದು ನಡೆಯಲಿರುವ 24ನೇ ವರ್ಷದ ಶನೈಶ್ಚರ ಪೂಜೆ ಹಾಗೂ ಭಗವದ್ಗೀತೆ ಪಾರಾಯಣ ,ಅರ್ಧ ಏಕಾಹ ಭಜನೆಯ ಆಮಂತ್ರಣ ಬಿಡುಗಡೆ ಶ್ರೀದುರ್ಗಾ ಭಜನಾ ಮಂದಿರದಲ್ಲಿ ನಡೆಯಿತು. ಆಮಂತ್ರಣವನ್ನು ಭಜನಾ ಮಂದಿರದ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ ಹಾಗೂ ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಎ.6 : ಪಾದೆಬಂಬಿಲ ಶ್ರೀ ದುರ್ಗಾಭಜನಾ ಮಂದಿರದಲ್ಲಿ 24ನೇ ವರ್ಷದ ಶನೈಶ್ಚರ ಪೂಜೆ | ಆಮಂತ್ರಣ ಬಿಡುಗಡೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆಮುಹೂರ್ತ ಸೋಮವಾರ ನಡೆಯಿತು. ಏ.10 ರಿಂದ 17 ರ ತನಕ ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ ನಡೆಯಲಿದ್ದು, ಪೂರ್ವಭಾವಿಯಾಗಿ ಇಂದು ಬೆಳಿಗ್ಗೆ ಪೂರ್ವ ಶಿಷ್ಟ ಸಂಪ್ರದಾಯದಂತೆ ದೇವಸ್ಥಾನದ ಗರ್ಭಗುಡಿ ಎದುರು ಪ್ರಾರ್ಥನೆ ಸಲ್ಲಿಸಿದ ಬಳಿ ವಾದ್ಯದೊಂದಿಗೆ ತೆರಳಿ ಗೊನೆ ಮುಹೂರ್ತ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಿ.ಎಸ್‍. ಭಟ್ ಗೊನೆ ಮುಹೂರ್ತ ನೆರವೇರಿಸಿದರು. ಪ್ರಧಾನ ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು. ಈ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ Read More »

ಮಾಯ್‍ ದೇ ದೇವುಸ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

ಪುತ್ತೂರು : ಮಾಯ್ ದೆ ದೇವುಸ್ ಚರ್ಚ್ ನಲ್ಲಿ ಶುಭ ಶುಕ್ರವಾರ (ಗುಡ್ ಫ್ರೈಡೇ) ದಿನವನ್ನು ಆಚರಿಸಲಾಯಿತು. ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ನಲ್ಲಿ ಯೇಸುವಿನ ಕಷ್ಟ ಮರಣದ ಕಥಾಪ್ರಸಂಗವನ್ನು ವಂದನೀಯ ಲೋಹಿತ್ ಅಜಯ್ ಮಸ್ಕರೇನಸ್ , ವಂದನೀಯ ಸ್ಟ್ಯಾನಿ ಪಿಂಟೋ, ವಂದನೀಯ ಅಶೋಕ್ ರಾಯನ್ ಕ್ರಾಸ್ತಾ ರವರು ರಾಗಭರಿತವಾಗಿ ಓದಿದರು. ವಂದನೀಯ ರೂಪೇಶ್ ತೌರೋ ರವರು ತಮ್ಮ ಪ್ರವಚನದಲ್ಲಿ ಶಿಲುಬೆಯ ಮಹತ್ವವನ್ನು ತಿಳಿಸುತ್ತಾ ಯೇಸುವಿನ ಶಿಲುಬೆಯೆ ನಮ್ಮ ಹಾದಿ ಮತ್ತು ನಮ್ಮ ಜೀವನ. ದೇವರು

ಮಾಯ್‍ ದೇ ದೇವುಸ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ Read More »

ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ ಆಚರಣೆ

ಪುತ್ತೂರು: ಪ್ರಪಂಚದಾದ್ಯಂತದ ಕ್ರಿಶ್ಚಿಯನ್ನರು ಈ ವಾರವನ್ನು ಪವಿತ್ರ ವಾರವನ್ನಾಗಿ ಆಚರಿಸುತ್ತಿದ್ದಾರೆ, ಮಾ.24 ರಂದು ಈಸ್ಟರ್ ಮೊದಲು ಗರಿಗಳ ಭಾನುವಾರದಿಂದ  ಪ್ರಾರಂಭವಾಗುತ್ತದೆ. ಮಾ.29 ರಂದು ಶುಭ ಶುಕ್ರವಾರ ಮತ್ತು ಈಸ್ಟರ್ ಮೊದಲು ಬರುವ ಪವಿತ್ರ ಗುರುವಾರವನ್ನು ಆಚರಿಸುತ್ತಾರೆ. ಯೇಸು ಕ್ರಿಸ್ತನು ತನ್ನ ಶಿಷ್ಯರೊಂದಿಗೆ ಕೊನೆಯ ಭೋಜನವನ್ನು ಮಾಡಿದ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಯೇಸು ತನ್ನ ಶಿಷ್ಯರೊಂದಿಗೆ ಊಟ ಮಾಡಿದ ಕೊನೆಯ ಭೋಜನವನ್ನು ಈ ದಿನವು ಗುರುತಿಸುತ್ತದೆ. ನಾವೆಲ್ಲರೂ ಸಮಾನರು ಎಂಬುದರ ಸಂಕೇತವಾಗಿ ನಾವು ವಿನಮ್ರರಾಗಿರಬೇಕು ಮತ್ತು ಪರಸ್ಪರರ

ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ ಆಚರಣೆ Read More »

ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಗೊನೆ ಮುಹೂರ್ತ

ಕಾಣಿಯೂರು: ಪುಣ್ಚತ್ತಾರು ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದಲ್ಲಿ ಎ.3 ಹಾಗೂ 4ರಂದು ನಡೆಯಲಿರುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲದ ಅಂಗವಾಗಿ ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಹಾಗೂ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿ ಬಳಿಕ ಗೊನೆ ಮುಹೂರ್ತ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಮೊಕ್ತಸರ ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ದನ ಆಚಾರ್ಯ ವಿಷ್ಣುಪುರ, ಕೃಷ್ಣ ಆಚಾರ್ಯ

ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಗೊನೆ ಮುಹೂರ್ತ Read More »

error: Content is protected !!
Scroll to Top