ದೇವರಲ್ಲಿ ದೃಢವಾದ ಭಕ್ತಿಯಿಂದ ಮುಕ್ತಿ ಸಾಧ್ಯ : ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ | ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ
ಪುತ್ತೂರು: ನಾವು ತಾದಾತ್ಮ್ಯದಿಂದ ದೇವರನ್ನು ನಂಬಿಕೊಂಡು ಹೋದರೆ ಯಾವುದೇ ಸಂದರ್ಭದಲ್ಲಿ ದೇವರು ಅನುಗ್ರಹ ಮಾಡುತ್ತಾನೆ ಎಂದು ಎಡನೀರು ಮಠಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳು ನುಡಿದರು. ಅವರು ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ನೂತನ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮದ ಅಂಗವಾಗಿ ಸೋಮವಾರ ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಜನರಿಗೆ ಬಹಳ ಹತ್ತಿರವಾದ ಸ್ವಾಮಿ ಜನಾರ್ದನ ಸ್ವಾಮಿ. ಪ್ರಸ್ತುತ ದೇವಸ್ಥಾನದ ಕಾರ್ಯಕ್ರಮಗಳಲ್ಲಿ ಮಧ್ಯ ವಯಸ್ಸಿನ […]










