ಧಾರ್ಮಿಕ

ದೇವರಲ್ಲಿ ದೃಢವಾದ ಭಕ್ತಿಯಿಂದ ಮುಕ್ತಿ ಸಾಧ್ಯ : ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ | ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಪುತ್ತೂರು: ನಾವು ತಾದಾತ್ಮ್ಯದಿಂದ ದೇವರನ್ನು ನಂಬಿಕೊಂಡು ಹೋದರೆ ಯಾವುದೇ ಸಂದರ್ಭದಲ್ಲಿ ದೇವರು ಅನುಗ್ರಹ ಮಾಡುತ್ತಾನೆ ಎಂದು ಎಡನೀರು ಮಠಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳು ನುಡಿದರು. ಅವರು ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ನೂತನ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮದ ಅಂಗವಾಗಿ ಸೋಮವಾರ ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಜನರಿಗೆ ಬಹಳ ಹತ್ತಿರವಾದ ಸ್ವಾಮಿ ಜನಾರ್ದನ ಸ್ವಾಮಿ. ಪ್ರಸ್ತುತ ದೇವಸ್ಥಾನದ ಕಾರ್ಯಕ್ರಮಗಳಲ್ಲಿ ಮಧ್ಯ ವಯಸ್ಸಿನ […]

ದೇವರಲ್ಲಿ ದೃಢವಾದ ಭಕ್ತಿಯಿಂದ ಮುಕ್ತಿ ಸಾಧ್ಯ : ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ | ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ Read More »

ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ಜನಾರ್ದನ ದೇವರು ಸಹಿತ ಶ್ರೀ ಶಾಸ್ತಾರ ದೇವರ ಪುನಃ ಪ್ರತಿಷ್ಠೆ

ಪುತ್ತೂರು: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಪುತ್ತೂರು ತಾಲೂಕಿನ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸೋಮವಾರ ಶ್ರೀ ಜನಾರ್ದನ ದೇವರ ಪುನಃ ಪ್ರತಿಷ್ಠೆ, ಶ್ರೀ ಶಾಸ್ತಾರ ದೇವರ ಪುನಃ ಪ್ರತಿಷ್ಠೆ ನಡೆಯಿತು. ಸೋಮವಾರ ಮುಂಜಾನೆ 5 ರಿಂದ ತಂತ್ರಿ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮಹಾಗಣಪತಿ ಹೋಮ, ಅಲ್ಪಪ್ರಾಸಾದ ಶುದ್ದಿ, ಪ್ರಾಸಾದ ಪ್ರತಿಷ್ಠೆ, ನಾಂದೀಪುಣ್ಯಾಹ, ನಪುಂಸಕ ಶಿಲಾ ಪ್ರತಿಷ್ಠೆ, ರತ್ನನ್ಯಾಸಾದಿ ಪೀಠ ಪ್ರತಿಷ್ಠೆ, ಶಯ್ಯಾ ಮಂಟಪದಿಂದ ಜೀವಕಲಶ ಬಿಂಬ, ನಿದ್ರಾ ಕಲಶಾಧಿಗಳನ್ನು ಗರ್ಭಗೃಹದ ಒಳಗೆ ಒಯ್ಯುವುದು ನಡೆದ ಬಳಿಕ

ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ಜನಾರ್ದನ ದೇವರು ಸಹಿತ ಶ್ರೀ ಶಾಸ್ತಾರ ದೇವರ ಪುನಃ ಪ್ರತಿಷ್ಠೆ Read More »

ಮೇಲಿನ ಮುಕ್ಕೂರು ತರವಾಡು ಕ್ಷೇತ್ರ : ಜೀರ್ಣೋದ್ಧಾರದ ಪೂರ್ವಭಾವಿ ಸಭೆ | ಎ.18 : ಗಣಹೋಮ, ಮೃತ್ಯುಂಜಯ ಹೋಮ, ಸತ್ಯನಾರಾಯಣ ಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ

ಮುಕ್ಕೂರು : ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಾರಣಿಕ ಶಕ್ತಿಯ ಐತಿಹ್ಯವುಳ್ಳ ದೇವಿ-ದೈವ ಶಕ್ತಿಗಳ ಸಾನಿಧ್ಯದ ನೆಲೆ ಮೇಲಿನ ಮುಕ್ಕೂರು ತರವಾಡು ಕ್ಷೇತ್ರದಲ್ಲಿ ಅಷ್ಟಮಂಗಲ ಚಿಂತನೆಯ ಪ್ರಕಾರ ಊರವರ ಸಹಕಾರದೊಂದಿಗೆ ಸ್ಥಳ ಸಾನಿಧ್ಯಗಳ ಜೀರ್ಣೋದ್ಧಾರ ಕಾರ್ಯಕ್ಕೆ ಸಂಕಲ್ಪ ತೊಡಲಾಗಿದ್ದು ಇದರ ಭಾಗವಾಗಿ ಶ್ರೀ ಕ್ಷೇತ್ರದಲ್ಲಿ ಎ.18 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಮೇಲಿನ ಮುಕ್ಕೂರು ತರವಾಡು ಕ್ಷೇತ್ರದ ಮುಖ್ಯಸ್ಥ ಮೋಹನ ಬೈಪಡಿತ್ತಾಯ, ವಸಂತ ಬೈಪಡಿತ್ತಾಯ, ಲಕ್ಷ್ಮೀಶ ಬೈಪಡಿತ್ತಾಯ ಅವರು  ದೈವ ಸಾನಿಧ್ಯಗಳ ಜೀರ್ಣೋದ್ಧಾರ ಕುರಿತಂತೆ ಮಾ.24

ಮೇಲಿನ ಮುಕ್ಕೂರು ತರವಾಡು ಕ್ಷೇತ್ರ : ಜೀರ್ಣೋದ್ಧಾರದ ಪೂರ್ವಭಾವಿ ಸಭೆ | ಎ.18 : ಗಣಹೋಮ, ಮೃತ್ಯುಂಜಯ ಹೋಮ, ಸತ್ಯನಾರಾಯಣ ಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ Read More »

ಧರ್ಮದ ಅರಿವು ಮನೆಯಿಂದಲೇ ಆಗಬೇಕು : ಡಾ.ಈಶ್ವರಚಂದ್ರ ಜೋಯಿಸ | ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸಂಭ್ರಮದ ಬ್ರಹ್ಮಕಲಶೋತ್ಸವ

ಪುತ್ತೂರು : ಧಾರ್ಮಿಕ ಉಪನ್ಯಾಸ ನೀಡಿ, ಹಿರಿಯರ ತ್ಯಾಗದ ಫಲವಾಗಿ ದೇಶ ಇಂದು ಪ್ರಜ್ವಲಿಸುತ್ತಿದೆ. ಧರ್ಮದ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಧರ್ಮದ ಅರಿವು ಮನೆಯಿಂದಲೇ ಆಗಬೇಕು ಎಂದು ಡಾ.ಈಶ್ವರಚಂದ್ರ ಜೋಯಿಸ ಹೇಳಿದರು. ಅವರು ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಕಲಿಯುಗದಲ್ಲಿ ಭಜನೆಗೆ ಅಪಾರ ಶಕ್ತಿಯಿದೆ. ಭಜನೆಯಿಂದ ಭಗವಂತನ ಅನುಸಂಧಾನದ ಜತೆಗೆ ಸಮಾಜದ ಜಾಗೃತಿ

ಧರ್ಮದ ಅರಿವು ಮನೆಯಿಂದಲೇ ಆಗಬೇಕು : ಡಾ.ಈಶ್ವರಚಂದ್ರ ಜೋಯಿಸ | ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸಂಭ್ರಮದ ಬ್ರಹ್ಮಕಲಶೋತ್ಸವ Read More »

ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ವೈಭವದ ಬ್ರಹ್ಮಕಲಶೋತ್ಸವ : ವಿವಿಧ ವೈದಿಕ ಕಾರ್ಯಕ್ರಮಗಳು

ಪುತ್ತೂರು: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಪುತ್ತೂರು ತಾಲೂಕಿನ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಶ್ರೀ ಚಕ್ರ ಪೂಜೆ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಿತು. ಬ್ರಹ್ಮಕಲಶೋತ್ಸವದ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಉಷಃಪೂಜೆ, ಮಹಾಗಣಪತಿ ಹೋಮ, ಅಂಕುರಪೂಜೆ, ಶ್ವಾನಶಾಂತಿ, ಅದ್ಭುತ ಶಾಂತಿ, ಚೋರಶಾಂತಿ ಹೋಮಾದಿಗಳು ಜರಗಿತು. ಮಧ್ಯಾಹ್ನ 12 ಕ್ಕೆ ಕಲಶಾಭಿಷೇಕ, ಮಹಾಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಸಂಜೆ 5.30 ರಿಂದ ಅಂಕುರಪೂಜೆ, ಶ್ರೀ ಚಕ್ರಪೂಜೆ, ಮಂಟಪ ಸಂಸ್ಕಾರ, ಮಹಾಪೂಜೆ ಮುಂತಾದ ವಿವಿಧ ವೈದಿಕ ಕಾರ್ಯಕ್ರಮಗಳು

ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ವೈಭವದ ಬ್ರಹ್ಮಕಲಶೋತ್ಸವ : ವಿವಿಧ ವೈದಿಕ ಕಾರ್ಯಕ್ರಮಗಳು Read More »

ವಿವಾದಾತ್ಮಕ ದೇವಾಲಯಗಳ ತೆರಿಗೆ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರಿಂದ ನಿರಾಕರಣೆ

ವಿವಾದಾತ್ಮಕ ದೇವಾಲಯಗಳ ತೆರಿಗೆ ಮಸೂದೆಗೆ ರಾಜ್ಯಪಾಲರು ಸಹಿ ಹಾಕಲು ನಿರಾಕರಿಸಿದ್ದು, ಈ ಕುರಿತು ರಾಜ್ಯ ಸರಕಾರದ ಎದುರು ಹಲವು ಪ್ರಶ್ನೆಗಳನ್ನು ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ ಎಂಬ ವರದಿಯನ್ನು ರಾಷ್ಟ್ರೀಯ ದೃಶ್ಯ ಮಾಧ್ಯಮವೊಂದು ಬಿತ್ತರಿಸಿದೆ. ದೇವಾಲಯಗಳಿಗೆ ಮಾತ್ರ ಯಾಕೆ ತೆರಿಗೆ, ಇತರ ಧಾರ್ಮಿಕ ಸಂಸ್ಥೆಗಳಿಗೆ ತೆರಿಗೆ ಯಾಕೆ ವಿಧಿಸಬಾರದು ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ದತ್ತಿಗಳ ಮಸೂದೆ-2024 ನ್ನು ಸಿದ್ಧರಾಮಯ್ಯ

ವಿವಾದಾತ್ಮಕ ದೇವಾಲಯಗಳ ತೆರಿಗೆ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರಿಂದ ನಿರಾಕರಣೆ Read More »

ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆಯಿತು ದರ್ಶನ ಬಲಿ, ಬಟ್ಟಲು ಕಾಣಿಕೆ

ಕಡಬ: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಉತ್ಸವ ಮಾ.14 ರಿಂದ ಆರಂಭಗೊಂಡಿದ್ದು, ವೈಭವದಿಂದ ನಡೆಯುತ್ತಿದೆ. ಜಾತ್ರೋತ್ಸವದ ಅಂಗವಾಗಿ ಮಾ.21 ಗುರುವಾರ ಬೆಳಿಗ್ಗೆ 8.30 ಕ್ಕೆ ಬಲಿ ಹೊರಟು ಉತ್ಸವ, ಮಧ್ಯಾಹ್ನ 12 ಕ್ಕೆ ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಮಹಾ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಗೋಪಾಲ ಕೆ., ಭಕ್ತಾದಿಗಳು ಪಾಲ್ಗೊಂಡಿದ್ದರು. ನಾಳೆ ದೇವಸ್ಥಾನದಲ್ಲಿ : ಮಾ.22  ಶುಕ್ರವಾರ ಬೆಳಿಗ್ಗೆ ಬಲಿ ಹೊರಟು

ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆಯಿತು ದರ್ಶನ ಬಲಿ, ಬಟ್ಟಲು ಕಾಣಿಕೆ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ | ಏ.21 ರಿಂದ 28 ರ ತನಕ ವೈಭವದ ಬ್ರಹ್ಮಕಲಶೋತ್ಸವ

ಪುತ್ತೂರು: ಏ.21 ರಿಂದ 28 ರ ತನಕ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳವಾರ ಸಂಜೆ ಶ್ರೀ ದೇವಸ್ಥಾನದಲ್ಲಿ ನಡೆಯಿತು. ಆರಂಭದಲ್ಲಿ ದೇವಸ್ಥಾನ ಬಾಲಾಲಯದ ಎದುರು ಪ್ರಾರ್ಥನೆ ಸಲ್ಲಿಸಿ, ವಿಶೇಷ ಪೂಜೆ ನಡೆದು ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ,, ಶಾಸಕ ಅಶೋಕ್ ಕುಮಾರ್ ರೈ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ದೇವಸ್ಥಾನದ ಅಭಿವೃದ್ಧಿ ಸಹಿತ ಬ್ರಹ್ಮಕಲಶೋತ್ಸವದಂತಹ ಪುಣ್ಯ ಕಾರ್ಯದಲ್ಲಿ ರಾಜಕೀಯ ಹೊರಗಿಟ್ಟು

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ | ಏ.21 ರಿಂದ 28 ರ ತನಕ ವೈಭವದ ಬ್ರಹ್ಮಕಲಶೋತ್ಸವ Read More »

ಸರ್ವೆ ರಕ್ತೇಶ್ವರಿ ಹಿಂದೂ ಜಾಗರಣ ವೇದಿಕೆಯಿಂದ ಆಶ್ಲೇಷ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಸರ್ವೆ ರಕ್ತೇಶ್ವರಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಮಾ.30 ರಂದು ಸರ್ವೆ ರಕ್ತೇಶ್ವರಿ ಕಟ್ಟೆಯಲ್ಲಿ ನಡೆಯುವ 11ನೇ ವರ್ಷದ ಆಶ್ಲೇಷ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸರ್ವೆ ರಕ್ತೇಶ್ವರಿ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಜಯಂತ್ ಭಕ್ತಕೋಡಿ, ಕಾರ್ಯದರ್ಶಿ ಲಕ್ಷ್ಮೀಶ್  ರೈ, ಬೆಳಿಯಪ್ಪ ಗೌಡ ಸರ್ವೆ, ಪದ್ಮನಾಭ ಗೌಡ, ಪ್ರವೀಣ್ ನಾಯ್ಕ್ ನೇಕಿತಡ್ಕ, ನವೀನ್ ರೈ, ಯೋಗೀಶ್ ಟಿ., ಗೌತಮ್ ರೈ, ಭರತ್ ಸರ್ವೆ, ಜನಾರ್ಧನ

ಸರ್ವೆ ರಕ್ತೇಶ್ವರಿ ಹಿಂದೂ ಜಾಗರಣ ವೇದಿಕೆಯಿಂದ ಆಶ್ಲೇಷ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಸಹಿತ ಮೂರು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗೆ ತಾತ್ಕಾಲಿಕ ತಡೆ | ಧಾರ್ಮಿಕದತ್ತಿ ಇಲಾಖೆ ಆಯುಕ್ತರಿಂದ ಆದೇಶ

ಪುತ್ತೂರು: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚಿಸಿ ಹೊರಡಿಸಲಾದ ಆದೇಶಕ್ಕೆ ಸರಕಾರ ತಾತ್ಕಾಲಿಕ ತಡೆ ನೀಡಿ ಮತ್ತೊಂದು ಆದೇಶ ಹೊರಡಿಸಿದೆ. ಎ ಗ್ರೇಡೆ ದೇವಸ್ಥಾನವಾಗಿರುವ ಪಂಜ ದೇವಸ್ಥಾನಕ್ಕೆ ಡಾ.ದೇವಿಪ್ರಸಾದ್ ಕಾನತ್ತೂರು ಹಾಗೂ ಇತರರನ್ನು ಸದಸ್ಯರಾಗಿ ನೇಮಿಸಿ ಎರಡು ದಿನಗಳ ಹಿಂದೆ ಧಾರ್ಮಿಕದತ್ತಿ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದರು. ಆದೇಶ ಬಂದ ಬೆನ್ನಲ್ಲೇ ವ್ಯವಸ್ತಾಪನಾ ಸಮಿತಿ ಸದಸ್ಯರು ಸಭೆ ಸೇರಿ ದೇವಿಪ್ರಸಾದ್ ಕಾನತ್ತೂರು ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಪದಗ್ರಹಣವೂ ನಡೆದಿತ್ತು. ಇದೀಗ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಸಹಿತ ಮೂರು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗೆ ತಾತ್ಕಾಲಿಕ ತಡೆ | ಧಾರ್ಮಿಕದತ್ತಿ ಇಲಾಖೆ ಆಯುಕ್ತರಿಂದ ಆದೇಶ Read More »

error: Content is protected !!
Scroll to Top