ಧಾರ್ಮಿಕ

ಕುದ್ಮಾರು ಕೆಲಂಬೀರಿ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ 49ನೇ ವರ್ಷದ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವ | ಸಭಾ ಕಾರ್ಯಕ್ರಮ

ಪುತ್ತೂರು: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಕೆಲಂಬೀರಿ ಶ್ರೀ ಬ್ರಹ್ಮ ಬೈದೆರುಗಳ ಗರಡಿ ಯಲ್ಲಿ 49ನೇ ವರ್ಷದ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವ ನಡೆಯಿತು. ಈ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಮಾತನಾಡಿ, ಕಳೆದ 48 ವರ್ಷಗಳಿಂದ ಬೈದೆರುಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯುವುದರ ಜತೆಗೆ ಊರಿನ ಎಲ್ಲಾ ಸಮುದಾಯದವರು ಕ್ಷೇತ್ರದ ಭಕ್ತರಾಗಿ ಕ್ಷೇತ್ರ ಅಭಿವೃದ್ಧಿಯಾಗಿದೆ. ತೊಂದರೆಗೊಳಗಾದವರಿಗೆ ಕೋಟಿ-ಚೆನ್ನಯರ ಅಭಯ ನೀಡಿದೆ. ಇಲ್ಲಿ ಬೇರೆ […]

ಕುದ್ಮಾರು ಕೆಲಂಬೀರಿ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ 49ನೇ ವರ್ಷದ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವ | ಸಭಾ ಕಾರ್ಯಕ್ರಮ Read More »

ಎ.2-3 : ಶಾಂತಿಗೋಡು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವ | ಭಕ್ತರ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆ

ಪುತ್ತೂರು: ಶಾಂತಿಗೋಡು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಎ.2 ಹಾಗೂ 3 ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಜಾತ್ರೋತ್ಸವದ ಯಶಸ್ಸಿಗಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ತೊಲ್ಪಾಡಿ, ದೇವಸ್ಥಾನದ ಅರ್ಚಕ ರಾಮಕೃಷ್ಣ ಭಟ್, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಹೊನ್ನಪ್ಪ ಗೌಡ ಕೈಂದಾಡಿ, ಸುಬ್ರಮಣ್ಯ ಹೆಬ್ಬಾರ್ ಸೇರಾಜೆ, ಉದಯ ಶಂಕರ್ ಭಟ್, ನಾಗೇಶ್ ಸರಕಾರೆ, ಹರೀಶ್ ಕೈಂದಾಡಿ, ಬಾಬು ಗೌಡ ಕೈಂದಾಡಿ, ವಿಶ್ವನಾಥ ಬಲ್ಯಾಯ ಮುಂದೋಡಿ, ಬಾಲಕೃಷ್ಣ ಗೌಡ ತೋಟ,

ಎ.2-3 : ಶಾಂತಿಗೋಡು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವ | ಭಕ್ತರ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆ Read More »

ನಳೀಲು: ಶ್ರೀ ಸುಬ್ರಹ್ಮಣ್ಯ ದೇವರಿಗೆ ವೈಭವದ ಬ್ರಹ್ಮಕಲಶಾಭಿಷೇಕ

ಪುತ್ತೂರು: ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವರಿಗೆ ಗುರುವಾರ ಬ್ರಹ್ಮಕಲಶಾಭಿಷೇಕ ನಡೆಯಿತು. ಬೆಳಿಗ್ಗೆ ಮಹಾಗಣಪತಿಗೆ ಹೋಮ ಬಳಿಕ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹಕಲಶಾಭಿಷೇಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಮತ್ತು ಕಾರ್ತಿಕ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಭೂತ ಬಲಿ, ವೈದಿಕ ಮಂತ್ರಾಕ್ಷತೆ ಹಾಗೂ ಪ್ರಸಾದ ವಿತರಣೆ ನಡೆಯಿತು. ಬೆಳಂದೂರು ವಿಷ್ಣುಪ್ರಿಯ ಮಹಿಳಾ ಭಜನಾ ಮಂಡಳಿ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ವತಿಯಿಂದ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ

ನಳೀಲು: ಶ್ರೀ ಸುಬ್ರಹ್ಮಣ್ಯ ದೇವರಿಗೆ ವೈಭವದ ಬ್ರಹ್ಮಕಲಶಾಭಿಷೇಕ Read More »

ಬನ್ನೂರು ಗ್ರಾಮದ ದೈಯರ ಮಾಡ ನಡಿಮಾರುನಲ್ಲಿ ಶ್ರೀ ಇಷ್ಟದೇವತೆ, ಅಣ್ಣಪ್ಪ ಪಂಜುರ್ಲಿ, ರಕ್ತೇಶ್ವರಿ ಸಾನಿಧ್ಯದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಪುತ್ತೂರು: ಸಂತಾನ ಭಾಗ್ಯ ಸಹಿತ ಇಷ್ಟಾರ್ಥಗಳನ್ನು ಈಡೇರಿಸುವ ಶಕ್ತಿಯಾಗಿ ಗೋಚರಿಸಿದ ಬನ್ನೂರು ಗ್ರಾಮದ ದೈಯರ ಮಾಡ ನಡಿಮಾರು ಮತ್ತು ಆನೆಮಜಲು ನ್ಯಾಯಾಲಯದ ಸಂಕೀರ್ಣದಲ್ಲಿರುವ ಶ್ರೀ ಇಷ್ಟದೇವತೆ, ಅಣ್ಣಪ್ಪ ಪಂಜುರ್ಲಿ, ರಕ್ತೇಶ್ವರಿ ಸಾನಿಧ್ಯದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಕುಂಟಾರು ವಾಸುದೇವ ತಂತ್ರಿಯವರ ವೈದಿಕತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ನಡೆಯಿತು. ಗುರುವಾರ ಬೆಳಿಗ್ಗೆ ಗಣಪತಿ ಹವನ, ಬಾವುದ ಕೆರೆಯ ಬಳಿ ನಾಗತಂಬಿಲ, ದೈಯ್ಯೆರೆ ಮಾಡದಲ್ಲಿ ಬ್ರಹ್ಮಕಲಶಪೂಜೆ ಬಳಿಕ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ,

ಬನ್ನೂರು ಗ್ರಾಮದ ದೈಯರ ಮಾಡ ನಡಿಮಾರುನಲ್ಲಿ ಶ್ರೀ ಇಷ್ಟದೇವತೆ, ಅಣ್ಣಪ್ಪ ಪಂಜುರ್ಲಿ, ರಕ್ತೇಶ್ವರಿ ಸಾನಿಧ್ಯದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ. ವೀಣಾ ಸಂತೋಷ್ ರೈ ಅವರಿಂದ ಚಿನ್ನದ ಕವಚ ಸಮರ್ಪಣೆ ಮೂಲಕ ಪತಿಯ ಸಂಕಲ್ಪ ಈಡೇರಿಸಿದ ಪತ್ನಿ | ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ವೈಭವದ ಬ್ರಹ್ಮಕಲಶೋತ್ಸವ

ಪುತ್ತೂರು: ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಶ್ರೀ ದೇವರಿಗೆ ಚಿನ್ನದ ಕವಚವನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಅವರ ಪತ್ನಿ ಡಾ. ವೀಣಾ ಸಂತೋಷ್ ರೈ ಸಮರ್ಪಿಸಿದ್ದಾರೆ.  ಪತಿಯ ಆಶಯದಂತೆ ಈ ಸೇವೆ ನೀಡಲಾಗಿದೆ. ಸೇವೆಯನ್ನು ಬುಧವಾರ ಸಂತೋಷ್ ಕುಮಾರ್ ರೈ ಅವರು ಪತ್ನಿ ಮಗಳು ಸಮೇತರಾಗಿ ಶ್ರೀ ದೇವರಿಗೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪತ್ನಿ ನಮ್ಮ ಮದುವೆಯಾದ ಸಂದರ್ಭದಲ್ಲಿ ಇದೊಂದು ಸಣ್ಣ ದೇವಸ್ಥಾನವಾಗಿತ್ತು.

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ. ವೀಣಾ ಸಂತೋಷ್ ರೈ ಅವರಿಂದ ಚಿನ್ನದ ಕವಚ ಸಮರ್ಪಣೆ ಮೂಲಕ ಪತಿಯ ಸಂಕಲ್ಪ ಈಡೇರಿಸಿದ ಪತ್ನಿ | ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ವೈಭವದ ಬ್ರಹ್ಮಕಲಶೋತ್ಸವ Read More »

ನಳೀಲು ಕ್ಷೇತ್ರ ಅದ್ಭುತವಾಗಿ ಬೆಳೆದಿದೆ-ಸುಬ್ರಹ್ಮಣ್ಯ ಶ್ರೀ | ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ

ಪುತ್ತೂರು :  ನಮ್ಮ ಹಿರಿಯರು ಹಾಕಿಕೊಟ್ಟ ಜೀವನ ಪದ್ದತಿಯನ್ನು ನಾವು ಪಾಲಿಸಬೇಕು. ಕಣ್ಣಿಗೆ ಕಾಣದ ಶಕ್ತಿಗಳು ನಮ್ಮನ್ನು ರಕ್ಷಿಸುತ್ತದೆ ಎಂದು ನಂಬಿಕೊಂಡು ಪರೋಪಕರಿಯಾಗಿ ನಿಸ್ವಾರ್ಥತೆಯಿಂದ ಬದುಕುವುದರ ಮೂಲಕ ಧರ್ಮವನ್ನು ಗಟ್ಟಿಗೊಳಿಸಬೇಕು ಎಂದು ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ  ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು. ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ನಳೀಲು ಕ್ಷೇತ್ರದಲ್ಲಿ 20 ವರ್ಷಗಳ ಹಿಂದೆ ನಡೆದ ಬ್ರಹ್ಮಕಲಶೋತ್ಸವದ ಗೌರವಾಧ್ಯಕ್ಷನಾಗುವ ಅವಕಾಶವನ್ನು

ನಳೀಲು ಕ್ಷೇತ್ರ ಅದ್ಭುತವಾಗಿ ಬೆಳೆದಿದೆ-ಸುಬ್ರಹ್ಮಣ್ಯ ಶ್ರೀ | ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ Read More »

ಫೆ.21-22 : ಕುಂಟ್ಯಾನ ಕುಟುಂಬದ ದುಗಲಾಯ, ಧರ್ಮದೈವ ರುದ್ರಾಂಡಿ, ಪರಿವಾರ ದೈವಗಳ ನೇಮ ನಡಾವಳಿ

ಪುತ್ತೂರು: ಬನ್ನೂರು ಗ್ರಾಮದ ಕುಂಟ್ಯಾನ ಕುಟುಂಬದ ದುಗಲಾಯ, ಧರ್ಮದೈವ ರುದ್ರಾಂಡಿ ಮತ್ತು ಪರಿವಾರ ದೈವಗಳ ನಡಾವಳಿ ಫೆ.21 ಹಾಗೂ 22 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಧರ್ಮ ನಡಾವಳಿ ಅಂಗವಾಗಿ ಫೆ.21 ರಂದು ಬೆಳಿಗ್ಗೆ 8 ಕ್ಕೆ ಗಣಹೋಮ, ಸಂಜೆ 4 ಕ್ಕೆ ದುಗಲಾಯ, ಧರ್ಮದೈವ ಹಾಗೂ ಪರಿವಾರ ದೈವಗಳ ಭಂಡಾರ ತೆಗೆಯುವುದು. ಸಂಜೆ 6 ಕ್ಕೆ ದುಗಲಾಯ ದೈವದ ನೇಮ, ರಾತ್ರಿ 9 ಕ್ಕೆ ಅನ್ನಸಂತರ್ಪಣೆ, ವರ್ಣಾರ ಪಂಜುರ್ಲಿ, ಜಾವತೆ, ಕಲ್ಲುರ್ಟಿ, ಕುಪ್ಪೆ ಪಂಜುರ್ಲಿ,

ಫೆ.21-22 : ಕುಂಟ್ಯಾನ ಕುಟುಂಬದ ದುಗಲಾಯ, ಧರ್ಮದೈವ ರುದ್ರಾಂಡಿ, ಪರಿವಾರ ದೈವಗಳ ನೇಮ ನಡಾವಳಿ Read More »

ಫೆ.21-22 : ಬನ್ನೂರು ಆನೆಮಜಲು  ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಪುತ್ತೂರು: ಬನ್ನೂರು ಆನೆಮಜಲು  ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಫೆ.21 ಹಾಗೂ 22 ರಂದು ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಗೌಡ ಅಯೋಧ್ಯಾನಗರ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬ್ರಹ್ಮಕಲಶೋತ್ಸವದ ಅಂಗವಾಗಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಫೆ.21 ಬುಧವಾರ ಬೆಳಿಗ್ಗೆ 11 ಕ್ಕೆ ಹಸಿರುವಾಣಿ ಸಮರ್ಪಣೆ, ಸಂಜೆ 7 ರಿಂದ

ಫೆ.21-22 : ಬನ್ನೂರು ಆನೆಮಜಲು  ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ನ್ಯೂಸ್ ಪುತ್ತೂರು ತಂಡದಿಂದ ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವಾ ಕಾರ್ಯ | ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ನಳಿಲು ದೇವಸ್ಥಾನ

ಪುತ್ತೂರು: ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಯಾಚರಿಸುತ್ತಿರುವ ನ್ಯೂಸ್ ಪುತ್ತೂರು ಸಂಸ್ಥೆಯ ಮೂಲಕ ಟ್ರಸ್ಟ್ ಅಧ್ಯಕ್ಷರು ಹಾಗೂ ನಿರ್ದೇಶಕರಿಂದ ಕೊಳ್ತಿಗೆ ಗ್ರಾಮದ ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಸೇವಾ ಕಾರ್ಯ ನಡೆಯಿತು. ಭಾನುವಾರ ಸಂಜೆ ಬ್ರಹ್ಮಕಲಶೋತ್ಸವದ ಅನ್ನಸಂತರ್ಪಣೆಗಾಗಿ ತರಕಾರಿ ಹಚ್ಚುವ ಕೆಲಸದೊಂದಿಗೆ ಸೇವಾ ಕಾರ್ಯ ಮಾಡಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ ರಾಜೇಂದ್ರ ಪ್ರಸಾದ್ ಶೆಟ್ಟಿ ಹಾಗೂ ಎಲ್ಲಾ ನಿರ್ದೇಶಕರು ಮತ್ತು ನ್ಯೂಸ್ ಪುತ್ತೂರಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸೇವಾ ಕಾರ್ಯಕ್ಕೆ ಬ್ರಹ್ಮಕಲಶೋತ್ಸವ

ನ್ಯೂಸ್ ಪುತ್ತೂರು ತಂಡದಿಂದ ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವಾ ಕಾರ್ಯ | ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ನಳಿಲು ದೇವಸ್ಥಾನ Read More »

ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು : ಶ್ರದ್ದಾ ಕೇಂದ್ರಗಳ ಅಭಿವೃದ್ದಿಯಾದರೆ ಆ ಊರು ಸುಭಿಕ್ಷೆಯಾಗುತ್ತದೆ. ದೇವಾಲಯಗಳ ಬ್ರಹ್ಮಕಲಶೋತ್ಸವದಲ್ಲಿ ಪ್ರತಿಯೊಬ್ಬರು  ಭಾಗವಹಿಸಿ ತನ್ನದೆ ಆದ ಸೇವೆ ನೀಡಿದಾಗ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಬ್ರಹ್ಮಕಲಶೋತ್ಸವ ಗೌರವಾಧ್ಯಕ್ಷ, ಶಾಸಕ ಆಶೋಕ್ ಕುಮಾರ್ ರೈ ಹೇಳಿದರು.  ಅವರು  ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಶನಿವಾರ ರಾತ್ರಿ  ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಧಾರ್ಮಿಕ ಕೇಂದ್ರಗಳಲ್ಲಿನ ನಿರಂತರ ಧಾರ್ಮಿಕ ಚಟುವಟಿಕೆ  ಧರ್ಮದ ಉಳಿವಿಗೆ ಕಾರಣವಾಗುತ್ತದೆ. ಸನ್ಮಾರ್ಗದಲ್ಲಿ ನಡೆಯುತ್ತಾ   ದೇವರ ಕಾರ್ಯದಲ್ಲಿ ತನ್ನನ್ನು

ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ Read More »

error: Content is protected !!
Scroll to Top