ಧಾರ್ಮಿಕ

ಫೆ.22: ಮಾಡತ್ತಾರು ಸಪರಿವಾರ ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ

ಪೆರ್ನೆ: ಪೆರ್ನೆ ಗ್ರಾಮದ ಮಾಡತ್ತಾರು ಕೊರತಿಕಟ್ಟೆ ಸಪರಿವಾರ ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನದಲ್ಲಿ ಫೆ.22 ಗುರುವಾರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವವು ಹಲವು ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಸಪರಿವಾರ ಶ್ರೀ ವ್ಯಾಘ್ರಚಾಮುಂಡಿ, ಉಳ್ಳಾಕ್ಲು, ಕೊರತಿದೈವ ಮತ್ತು ಗುಳಿಗ ದೈವ ಹಾಗೂ ನಾಗ ಸನ್ನಿಧಿಯಲ್ಲಿ  ಫೆ.22 ರಂದು ಬೆಳಿಗ್ಗೆ 8.30 ಕ್ಕೆ ದೇವತಾಪ್ರಾರ್ಥನೆ, ಆಚಾರ್ಯವರಣೆ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಸಾನಿಧ್ಯ ಕಲಶ ಪೂಜೆ, ಕಲಶಾಭಿಷೇಕ, ತಂಬಿಲ ಸೇವೆ , ನಾಗಬನದಲ್ಲಿ […]

ಫೆ.22: ಮಾಡತ್ತಾರು ಸಪರಿವಾರ ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ Read More »

ಫೆ.21-22 : ಕೋಡಿಯಡ್ಕ ತರವಾಡು ಕುಟುಂಬ ದೈವಗಳ ಧರ್ಮ ನಡಾವಳಿ

ಸುಳ್ಯ: ಕೋಡಿಯಡ್ಕ ಕುಟುಂಬದ ದೈವಗಳ ಧರ್ಮ ನಡಾವಳಿಯು ಫೆ.21 ರಿಂದ 22 ರವರೆಗೆ ನಡೆಯಲಿದೆ. ಧರ್ಮ ನಡಾವಳಿಯ ಅಂಗವಾಗಿ ಫೆ.21 ರಂದು ಬೆಳಿಗ್ಗೆ 8 ಕ್ಕೆ ಗಣಹೋಮ, ಮಧ್ಯಾಹ್ನ 11 ಕ್ಕೆ ವೆಂಕಟ್ರಮಣ ದೇವರ ಹರಿಸೇವೆ, ಸಂಜೆ 6.30 ಕ್ಕೆ ಧರ್ಮದೈವ ಮತ್ತು ಪರಿವಾರ ದೈವಗಳ ಭಂಡಾರ ತೆಗೆಯುವುದು, ರಾತ್ರಿ 8 ಕ್ಕೆ ಜಾವತೆ ದೈವದ ನೇಮ, ರಾತ್ರಿ 9 ಕ್ಕೆ ಅನ್ನಸಂತರ್ಪಣೆ, ರಾತ್ರಿ 10 ಕ್ಕೆ ವರ್ಣಾರ ಪಂಜುರ್ಲಿ, ಕಲ್ಲುರ್ಟಿ, ಕುಪ್ಪೆ ಪಂಜುರ್ಲಿ ನೇಮ ನಡೆಯಲಿದೆ.

ಫೆ.21-22 : ಕೋಡಿಯಡ್ಕ ತರವಾಡು ಕುಟುಂಬ ದೈವಗಳ ಧರ್ಮ ನಡಾವಳಿ Read More »

ಪೆರ್ನೆ ನೇಂಜದಲ್ಲಿ ಸರ್ಪ ಸಂಸ್ಕಾರ

ಪೆರ್ನೆ: ಕಳೆದ ಕೆಲವು ದಿನಗಳ ಹಿಂದೆ ಪೆರ್ನೆ ಜೀವನ್ ಜ್ಯೋತಿ ಅಂಗಡಿ ಮುಂಭಾಗದ ನೇಂಜ ಮಾರ್ಗದಲ್ಲಿ ಆಕಸ್ಮಿಕ ದುರ್ಮರಣಕ್ಕೀಡಾದ ನಾಗರ ಹಾವಿನ ಬಗ್ಗೆ ಪರಿಸರ ಕಲ್ಯಾಣ, ದೋಷ ತಡೆಗಾಗಿ ಸರ್ಪ ಸಂಸ್ಕಾರ ಪಿಂಡ ಪ್ರಧಾನ ಕ್ರಿಯೆ ಶುಕ್ರವಾರ ನಡೆಯಿತು. ವಿದ್ವಾಂಸರಾದ ಕಶೆಕೋಡಿ ಸೂರ್ಯನಾರಾಯಣ ಭಟ್  ನೇತೃತ್ವದಲ್ಲಿ ಬೆಳಿಗ್ಗೆ 8:00 ಗಂಟೆಗೆ ಆರಂಭಿಸಿ ಮಧ್ಯಾಹ್ನ 12:30ಕ್ಕೆ ಮಹಾಮಂಗಳಾರತಿ ನಂತರ ಅನ್ನ ಪ್ರಸಾದ ಸ್ವೀಕಾರದೊಂದಿಗೆ  ಸಂಪನ್ನಗೊಂಡಿತು. ಈ ಪುಣ್ಯ ಕ್ರಿಯೆಯಲ್ಲಿ ಗ್ರಾಮಸ್ಥರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪೆರ್ನೆ ವಲಯ ಮೇಲ್ವಿಚಾರಕರು

ಪೆರ್ನೆ ನೇಂಜದಲ್ಲಿ ಸರ್ಪ ಸಂಸ್ಕಾರ Read More »

ಮಾ.3-4: ಕರ್ಮಲ ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ, ಪ್ರತಿಷ್ಠಾ ವರ್ಧಂತಿ

ಪುತ್ತೂರು: ಬನ್ನೂರು ಗ್ರಾಮದ ಕರ್ಮಲ ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ಹಾಗೂ ಪ್ರತಿಷ್ಠಾವರ್ಧಂತಿ ಮಾ.3 ಹಾಗೂ 4 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಅನುಗ್ರಹದೊಂದಿಗೆ ಮಾ.3 ಭಾನುವಾರ ವೇ. ಮೂ. ಮಿತ್ತೂರು ತಿರುಮಲೇಶ್ವರ ಭಟ್ಟರ ನೇತೃತ್ವದಲ್ಲಿ ಮೂಡಪ್ಪಸೇವೆ ನಡೆಯಲಿದೆ. ಸಂಜೆ 4 ರಿಂದ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮ, ರಾತ್ರಿ 7 ರಿಂದ ಸಂಕಲ್ಪ, ಮೂಡಪ್ಪ ಸಮರ್ಪಣೆ, ರಾತ್ರಿ 9 ರಿಂದ ರಂಗಪೂಜೆ, ಕಲ್ಪೋಕ್ತ

ಮಾ.3-4: ಕರ್ಮಲ ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ, ಪ್ರತಿಷ್ಠಾ ವರ್ಧಂತಿ Read More »

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಚಾಲನೆ |ಉಗ್ರಾಣ ಮುಹೂರ್ತ, ಪಾಕಶಾಲೆ, ಕಾರ್ಯಾಲಯ ಉದ್ಘಾಟನೆ

ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಏಕೈಕ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೊತ್ಸವಕ್ಕೆ ಇಂದು ವೈಭವದ ಚಾಲನೆ ನೀಡಲಾಯಿತು. ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಫೆ.16ರಂದು ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ, ಪಾಕಶಾಲೆ ಉದ್ಘಾಟನೆ, ಕಾರ್ಯಾಲಯ ಉದ್ಘಾಟನೆ ,ಗೊನೆ ಮುಹೂರ್ತ ನೆರವೇರಿತು. ಬೆಳಿಗ್ಗೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಅರ್ಚಕರಾದ ಶ್ರೀನಿವಾಸ್‌ ಹೆಬ್ಬಾರ್‌ ,ಪ್ರವೀಣ್‌ ಭಟ್‌ ಅವರ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.ಬಳಿಕ ಉಗ್ರಾಣ ಮುಹೂರ್ತದ ದೀಪ ಪ್ರಜ್ವಲನೆಯನ್ನು ಪೆರುವಾಜೆ

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಚಾಲನೆ |ಉಗ್ರಾಣ ಮುಹೂರ್ತ, ಪಾಕಶಾಲೆ, ಕಾರ್ಯಾಲಯ ಉದ್ಘಾಟನೆ Read More »

ಫೆ.16-21: ಮಾಣಿಲಬೀಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬಂಟ್ವಾಳ: ತಾಲೂಕಿನ ವಿಟ್ಲ ಮಾಣಿಲಬೀಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಇಂದಿನಿಂದ ಫೆ.21 ರ ವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಉಳಿತ್ತಾಯ ವಿಷ್ಣು ಅಸ್ರ ಅವರ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ವಿಷ್ಣುಮೂರ್ತಿ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಶ್ರೀ ವಿಷ್ಣುಮೂರ್ತಿ ಕ್ಷೇತ್ರಾಡಳಿತ ಸೇವಾ ಸಮಿತಿ, ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಫೆ.16-21: ಮಾಣಿಲಬೀಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಕುದ್ಮಾರು ಗ್ರಾಮದ ದೈವ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಣಿಯೂರು: ಕುದ್ಮಾರು ಗ್ರಾಮದ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ನೇಮೊತ್ಸವದ ಆಮಂತ್ರಣ ಪತ್ರಿಕೆಯನ್ನು ಗುರುವಾರ ಬಿಡುಗಡೆ ಮಾಡಲಾಯಿತು. ಶ್ರೀ ದೈವಸ್ಥಾನದಲ್ಲಿ ಮಾ.9 ರಂದು ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿಯವರು, ಅರ್ಚಕರು, ಭಕ್ತಾದಿಗಳು ಉಪಸ್ಥಿತರಿದ್ದರು.

ಕುದ್ಮಾರು ಗ್ರಾಮದ ದೈವ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಉತ್ಸವಕ್ಕೆ ಚಾಲನೆ | ಕುಮಾರಧಾರಾ ನದಿಯಲ್ಲಿ ಗಂಗಾಪೂಜೆ, ಕಲಶ ಜಲ ಮೆರವಣಿಗೆ

ವೀರಮಂಗಲ: ಪುತ್ತೂರು ತಾಲೂಕಿನ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ಚಾಲನೆ ನೀಡಲಾಯಿತು. ಉತ್ಸವದ ಅಂಗವಾಗಿ ಬೆಳಿಗ್ಗೆ 11 ಗಂಟೆಗೆ ಕುಮಾರಧಾರಾ ನದಿಯಲ್ಲಿ  ಶ್ರೀ ದೇವಸ್ಥಾನದ ಅರ್ಚಕ ರಾಧಾಕೃಷ್ಣ ಶಗ್ರಿತ್ತಾಯರು ಗಂಗಾಪೂಜೆ ಗಂಗಾಪೂಜೆ ನೆರವೇರಿಸಿದರು. ಬಳಿಕ ಕಲಶ ಜಲ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಶಿವರಾಮ ಭಟ್ ಬಾವ, ಸದಸ್ಯರು, ವಿಶ್ವಸ್ಥ ಮಂಡಳಿ ಅಧ್ಯಕ್ಷ ಉಮೇಶ ಕೋಡಿಬೈಲು, ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಉತ್ಸವಕ್ಕೆ ಚಾಲನೆ | ಕುಮಾರಧಾರಾ ನದಿಯಲ್ಲಿ ಗಂಗಾಪೂಜೆ, ಕಲಶ ಜಲ ಮೆರವಣಿಗೆ Read More »

ಫೆ.17- 24: ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ

ಪುತ್ತೂರು: ಹುತ್ತಕ್ಕೆ ಪೂಜೆ ಸಲ್ಲಿಸುವ ಕ್ಷೇತ್ರ ಎಂದೇ ಪ್ರಸಿದ್ಧಿಯಾದ ಕೊಳ್ತಿಗೆ ಗ್ರಾಮದ ಪಾಲ್ತಾಡು ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಫೆ.17 ರಿಂದ ಫೆ.24 ರ ತನಕ ವಿವಿಧ ವೈದಿಕ, ಧಾರ್ಮಿಕ, ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳಿಲು ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಇರುವ ದೇವಸ್ಥಾನದ ಆರಂಭದಲ್ಲಿ ಮುಳಿಹುಲ್ಲಿನಿಂದ

ಫೆ.17- 24: ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ Read More »

ಫೆ.18-19 : ಒಡಿಯೂರು ಕ್ಷೇತ್ರದಲ್ಲಿ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು ಹೊರೆಕಾಣಿಕೆ ಕಾರ್ಯಾಲಯ

ಪುತ್ತೂರು: ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ ನಲ್ಲಿ ಫೆ.18 ಮತ್ತು 19ರಂದು ನಡೆಯುವ ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಫೆ.16ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹೊರಡುವ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಪೂರ್ವಭಾವಿಯಾಗಿ ಫೆ.14ರಂದು ದೇವಳದ ವಠಾರದಲ್ಲಿ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಸಂಸ್ಥಾನಮ್‌ ನಲ್ಲಿಅರ್ಚಕ ವೇ. ಮೂ. ವಿ. ಎಸ್ ಭಟ್ ಅವರು ದೀಪ ಪ್ರಜ್ವಲನೆ ಮಾಡಿದರು. ಈ ಸಂದರ್ಭ

ಫೆ.18-19 : ಒಡಿಯೂರು ಕ್ಷೇತ್ರದಲ್ಲಿ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು ಹೊರೆಕಾಣಿಕೆ ಕಾರ್ಯಾಲಯ Read More »

error: Content is protected !!
Scroll to Top