ಧಾರ್ಮಿಕ

ವಿಜೃಂಭಣೆಯಿಂದ ನಡೆದ ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ವಾರ್ಷಿಕೋತ್ಸವ

ಪುತ್ತೂರು: ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ವಾರ್ಷಿಕೋತ್ಸವ ಹಾಗೂ ನೇಮೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆ, ನಾಗದೇವರಿಗೆ ತಂಬಿಲ ಸೇವೆ ಜರಗಿ ಮಧ್ಯಾಹ್ನ ಸಾವಿರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರಗಿತು. ಸಂಜೆ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಅಶೋಕ್‍ ಕುಮಾರ್ ರೈ ಮಾತನಾಡಿ, ಆಧುನಿಕ ಯುಗದಲ್ಲಿ ನಮ್ಮ ಸಂಸ್ಕೃತಿಯನ್ನು ನಾವು ಮರೆಯುತ್ತಿದ್ದೇವೆ. ಇದು ಮುಂದಿನ ದಿನಗಳಲ್ಲಿ ಗಂಡಾಂತರಕ್ಕೆ ಕಾರಣವಾಗಲಿದೆ. ಈ ನಿಟ್ಟಿನಲ್ಲಿ ಯುವ ಜನಾಂಗ ಧಾರ್ಮಿಕ ಪ್ರಜ್ಞೆಯೊಂದಿಗೆ ನಡೆದಲ್ಲಿ ಗಂಡಾಂತರಗಳಿಂದ ಪಾರಾಗಬಹುದು […]

ವಿಜೃಂಭಣೆಯಿಂದ ನಡೆದ ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ವಾರ್ಷಿಕೋತ್ಸವ Read More »

ಮಾ.9 : ಪಾಲ್ತಾಡು ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯ ಪ್ರತಿಷ್ಠಾ ವಾರ್ಷಿಕೋತ್ಸವ, ಶ್ರೀ ರಾಜಗುಳಿಗ ದೈವದ ಕೋಲ

ಪುತ್ತೂರು : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ  ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವದಕೋಲವು ಮಾ.9 ರಂದು ನಡೆಯಲಿದೆ. ಮಾ.9 ರಂದು ಬೆಳಿಗ್ಗೆ 8ಕ್ಕೆ ದೇವತಾ ಪ್ರಾರ್ಥನೆ, ಸ್ಥಳ ಶುದ್ದಿ, ಶ್ರೀ ಮಹಾಗಣಪತಿ ಹೋಮ ನಡೆಯಲಿದೆ. ಸಂಜೆ 6 ಗಂಟೆಗೆ ದೈವಕ್ಕೆ ಎಣ್ಣೆ ವೀಳ್ಯ ಕೊಡುವುದು, ರಾತ್ರಿ 7 ರಿಂದ ಶ್ರೀರಾಜಗುಳಿಗ ದೈವದ ನರ್ತನ ಸೇವೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀ ರಾಜಗುಳಿಗ ಸೇವಾ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಮಾ.9 : ಪಾಲ್ತಾಡು ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯ ಪ್ರತಿಷ್ಠಾ ವಾರ್ಷಿಕೋತ್ಸವ, ಶ್ರೀ ರಾಜಗುಳಿಗ ದೈವದ ಕೋಲ Read More »

ಮಾ.8-9-10 : ಮರಕ್ಕೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ರಂಗಪೂಜೆ, ಜೀರ್ಣೋದ್ಧಾರ ಪ್ರಯುಕ್ತ ಪ್ರಾಯಶ್ಚಿತ್ತ ಕಾರ್ಯಕ್ರಮಗಳು

ಪುತ್ತೂರು: ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಶಾಂತಿಗೋಡು ಗ್ರಾಮದ ಮರಕ್ಕೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ರಂಗಪೂಜೆ, ಶ್ರೀ ಸತ್ಯನಾರಾಯಣ ಪೂಜೆ, ಬಲಿವಾಡು ಕೂಟ ಹಾಗೂ ಜೀರ್ಣೋದ್ಧಾರ ಪ್ರಯುಕ್ತ ಪ್ರಾಯಶ್ಚಿತ್ತ ಕಾರ್ಯಕ್ರಮಗಳು ಮಾ.8, 9 ಹಾಗೂ 10 ರಂದು ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಗೌರವ ಸಲಹೆಗಾರ ರತ್ನಾಕರ ಪಿ.ಎಸ್‍. ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 800 ವರ್ಷಗಳ ಹಿಂದೆ ಈ ದೇವಸ್ಥಾನಕ್ಕೆ ಬೆಂಕಿ ಬಿದ್ದಿದ್ದು, ಸಂಪೂರ್ಣ ನಾಶಗೊಂಡಿತ್ತು. ಬಳಿಕ ಮೊದಲು ದೇವಸ್ಥಾನ ಇದ್ದ

ಮಾ.8-9-10 : ಮರಕ್ಕೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ರಂಗಪೂಜೆ, ಜೀರ್ಣೋದ್ಧಾರ ಪ್ರಯುಕ್ತ ಪ್ರಾಯಶ್ಚಿತ್ತ ಕಾರ್ಯಕ್ರಮಗಳು Read More »

ಭರದಿಂದ ಸಾಗುತ್ತಿರುವ ಜಟ್ಟಿ ಮನೆತನದ ಶ್ರೀ ದುರ್ಗಾಮಲ್ಲಿಕಾರ್ಜುನ ತರವಾಡು ಮನೆ | ಪ್ರಥಮ ಹಂತದ ನಾಗ ಪ್ರತಿಷ್ಠೆ ವೈದಿಕ ವಿಧಿವಿಧಾನಗಳೊಂದಿಗೆ ಸಂಪನ್ನ

ಪುತ್ತೂರು: ಕೇರಳ ರಾಜ್ಯದ ಕಾಂಞಗಾಡ್ ಚಿತ್ತಾರಿ ಕೊಟ್ಲಂಗಾಡ್ ಜಟ್ಟಿ ಮನೆತನದ ಶ್ರೀ ದುರ್ಗಾಮಲ್ಲಿಕಾರ್ಜುನ ತರವಾಡು ಮನೆಯ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು, ಪ್ರಥಮ ಹಂತದ ಕಾರ್ಯಕ್ರಮವಾಗಿ ನಾಗ ಪ್ರತಿಷ್ಠೆ ಪೂಜಾ ಕಾರ್ಯಕ್ರಮ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಮಂಗಳವಾರ ನಡೆಯಿತು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕವಲೇದುರ್ಗ ಮಠದ ರಾಜಗುರು ಶ್ರೀ ಮರುಳಸಿದ್ಧ ಶಿವಾಚಾರ್ಯ ಮಹಾಸ್ವಾಮೀಜಿಗಳ ಶುಭಾಶೀರ್ವಾದಗಳೊಂದಿಗೆ ಬ್ರಹ್ಮಶ್ರೀ ಪಿ.ಎಸ್‍.ಶಂಕರನಾರಾಯಣನ್ ನಂಬೂರಿ ಅವರ ನೇತೃತ್ವದಲ್ಲಿ ಬೆಳಗ್ಗೆ 12.30 ರ ಶುಭ ಮುಹೂರ್ತದಲ್ಲಿ ನಾಗ ಪ್ರತಿಷ್ಠೆ ನಡೆಯಿತು. ಬಳಿಕ ಮಹಾಪೂಜೆ

ಭರದಿಂದ ಸಾಗುತ್ತಿರುವ ಜಟ್ಟಿ ಮನೆತನದ ಶ್ರೀ ದುರ್ಗಾಮಲ್ಲಿಕಾರ್ಜುನ ತರವಾಡು ಮನೆ | ಪ್ರಥಮ ಹಂತದ ನಾಗ ಪ್ರತಿಷ್ಠೆ ವೈದಿಕ ವಿಧಿವಿಧಾನಗಳೊಂದಿಗೆ ಸಂಪನ್ನ Read More »

ಇಂದು ಮೊಗಪ್ಪೆ ಮನೆಯಲ್ಲಿ ಶ್ರೀ ಕಲ್ಲುರ್ಟಿ, ಶ್ರೀ ಕೊರಗಜ್ಜ ದೈವಗಳ ನೇಮೋತ್ಸವ

ಪುತ್ತೂರು: 3ನೇ ವರ್ಷದ ಶ್ರೀ ಕಲ್ಲುರ್ಟಿ ಹಾಗೂ ಶ್ರೀ ಕೊರಗಜ್ಜ ದೈವದ ನೇಮೋತ್ಸವ ಇಂದು ಮೊಗಪ್ಪೆ ಮನೆಯಲ್ಲಿ ನಡೆಯಲಿದೆ. ಸಂಜೆ 6 ಗಂಟೆಗೆ ಭಂಡಾರ ತೆಗೆದು ಬಳಿಕ ವಿಜೃಂಭಣೆಯ ನೇಮೋತ್ಸವ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ದೈವಗಳ ಗಂಧಪ್ರಸಾದ ಸ್ವೀಕರಿಸಿ, ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಕುಟುಂಬದ ಮುಖ್ಯಸ್ಥರು ತಿಳಿಸಿದ್ದಾರೆ. ಪ್ರತೀ ಸಂಕ್ರಮಣದಂದು ಅಗೇಲು ಸೇವೆ ಮಾಡಿಸುವವರು ಮೊ: 9740487418 ನಂಬರ್ ಕರೆ ಮಾಡಿ ತಿಳಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಇಂದು ಮೊಗಪ್ಪೆ ಮನೆಯಲ್ಲಿ ಶ್ರೀ ಕಲ್ಲುರ್ಟಿ, ಶ್ರೀ ಕೊರಗಜ್ಜ ದೈವಗಳ ನೇಮೋತ್ಸವ Read More »

ಮಾ.7 : ಮಂಚಿ ಪುಚ್ಚೆಕೆರೆ ಮನೆಯಲ್ಲಿ ನೇಮೋತ್ಸವ

ಬಂಟ್ವಾಳ: ತಾಲೂಕಿನ ಮಂಚಿ ಗ್ರಾಮದ ಪುಚ್ಚೆಕೆರೆ ಮನೆಯಲ್ಲಿ ಶ್ರೀ ರುದ್ರಾಂಡಿ ಧರ್ಮದೈವ, ಕಲ್ಲುರ್ಟಿ, ಪಂಜುರ್ಲಿ ಹಾಗೂ ರಾಹುಗುಳಿಗ ದೈವಗಳಿಗೆ ನೇಮೋತ್ಸವ ಸೇವೆ ಮಾ.7 ಗುರುವಾರ ರಾತ್ರಿ 8:30ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬಸ್ಥರು ಪಾಲ್ಗೊಂಡು ಗಂಧ ಪ್ರಸಾದ ಸ್ವೀಕರಿಸಿ, ಶ್ರೀ ದೈವಗಳ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಪುಚ್ಚೆಕೆರೆ ಮನೆಯ ಸೀತಾರಾಮ ಗೌಡ ತಿಳಿಸಿದ್ದಾರೆ.

ಮಾ.7 : ಮಂಚಿ ಪುಚ್ಚೆಕೆರೆ ಮನೆಯಲ್ಲಿ ನೇಮೋತ್ಸವ Read More »

ಮಾ.8 : ಕಜೆಮೂಲೆ ಕುಟುಂಬಸ್ಥರ ಶ್ರೀ ನಾಗದೇವರು ಹಾಗೂ ಭೂಮಿ ದೈವಗಳ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ | ನೇಮೋತ್ಸವ

ಸುಳ್ಯ: ಕಜೆಮೂಲೆ ಕುಟುಂಬಸ್ಥರ ಭೂಮಿ ದೈವಗಳ ದೈವಸ್ಥಾನದಲ್ಲಿ ಶ್ರೀ ನಾಗದೇವರು ಹಾಗೂ ಭೂಮಿ ದೈವಗಳಾದ ಕುಪ್ಪೆ ಪಂಜುರ್ಲಿ, ಪಾಷಾಣಮೂರ್ತಿ, ಗುಳಿಗ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ ಮಾ.8 ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ 7.30 ರಿಂದ ಗಣಪತಿ ಹೋಮ, ಶುದ್ಧಕಲಶ, ನಾಗ ತಂಬಿಲ, ದೈವಗಳಿಗೆ ತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ರಾತ್ರಿ 7 ಕ್ಕೆ ದೈವಗಳ ಭಂಡಾರ ತೆಗೆಯುವುದು, ರಾತ್ರಿ 8.30

ಮಾ.8 : ಕಜೆಮೂಲೆ ಕುಟುಂಬಸ್ಥರ ಶ್ರೀ ನಾಗದೇವರು ಹಾಗೂ ಭೂಮಿ ದೈವಗಳ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ | ನೇಮೋತ್ಸವ Read More »

ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದಲ್ಲಿ ಗೊನೆ ಮುಹೂರ್ತ

ಕೆದಿಲ: ಮಾ.11 ರಂದು ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದಲ್ಲಿ ನಡೆಯಲಿರುವ ವಾರ್ಷಿಕ ನೇಮೋತ್ಸವಕ್ಕೆ ಗೊನೆಮುಹೂರ್ತ ಸೋಮವಾರ ನಡೆಯಿತು. ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಜೈ ಕೃಷ್ಣ ಭಟ್ ಕೇಶವ ಕೃಪ ಮೀರಾವನರವರು ದೈವದ ನಡೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಗೊನೆ ಮುಹೂರ್ತ ನಡೆಯಿತು. ಅರ್ಚಕ ಈಶ್ವರ ಪ್ರಕಾಶ್ ಪಂಜಿಬಲ್ಲೆ ವೈದಿಕ ವಿಧಿ ವಿಧಾನ ನೆರವೇರಿಸಿದರು ಈ ಸಂದರ್ಭದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಜನಾರ್ಧನ ಕುಲಾಲ್ ಗಾನದಕೊಟ್ಯ, ಕುದುಂಬ್ಲಾಡಿ ಗುತ್ತು ಬಾಳಪ್ಪ ಗೌಡ,

ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದಲ್ಲಿ ಗೊನೆ ಮುಹೂರ್ತ Read More »

ಶ್ರೀ ಆದಿಚುಂಚನಗಿರಿ ಮಠಕ್ಕೆ ದ.ಕ.ಜಿಲ್ಲಾ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಮಂಗಳೂರು: ದ.ಕ.ಜಿಲ್ಲೆ ಒಕ್ಕಲಿಗರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿದರು. ಸಂಘದ ಪದಾಧಿಕಾರಿಗಳನ್ನು ಶ್ರೀಗಳು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಡಾ. ಧರ್ಮ ಪಾಲನಾಥ ಸ್ವಾಮೀಜಿಯವರು ಉಪಸ್ಥಿತರಿದ್ದರು.

ಶ್ರೀ ಆದಿಚುಂಚನಗಿರಿ ಮಠಕ್ಕೆ ದ.ಕ.ಜಿಲ್ಲಾ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ Read More »

ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಶ್ರೀ ಕೊರಗಜ್ಜ ದೈವದ ವರ್ಷಾವಧಿ ಮತ್ತು ಹರಕೆ ನೇಮೋತ್ಸವ

ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಶ್ರೀ ಕೊರಗಜ್ಜ ದೈವದ ವರ್ಷಾವಧಿ ಮತ್ತು ಹರಕೆ ನೇಮೋತ್ಸವ ಇಂದು ರಾತ್ರಿ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಪ್ರತಿ ತಿಂಗಳು ಅಗೇಲು ಸೇವೆ ನಡೆಯುತ್ತಿದ್ದು, ಪ್ರತೀ ದಿನ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಹಣ್ಣುಕಾಯಿ, ಊದುಬತ್ತಿ, ಕರ್ಪೂರ, ಸೀಯಾಳ, ಎಳ್ಳೆಣ್ಣೆ, ತೆಂಗಿನ ಎಣ್ಣೆ, ಅಮೃತ, ಕಲಶ, ಬೀಡ, ಚಕ್ಕುಲಿ, ಹೂವು, ಹಾಲು ಹಾಗೂ ಹರಿಕೆ ಸಂಬಂಧ

ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಶ್ರೀ ಕೊರಗಜ್ಜ ದೈವದ ವರ್ಷಾವಧಿ ಮತ್ತು ಹರಕೆ ನೇಮೋತ್ಸವ Read More »

error: Content is protected !!
Scroll to Top