ಧಾರ್ಮಿಕ

ಕೊಂಡಾಟದ ಕೋಣಗಳಿಂದ ದೇವರಿಗೆ ನಮನ; ಕರೆಗಿಳಿದ ಕೋಣಗಳಿಗೆ ಕಂಬಳಾಭಿಮಾನಿಗಳ ಸ್ವಾಗತ | ಹೀಗೆ ನೀಡಲಾಯ್ತು ಪುತ್ತೂರು ಕಂಬಳಕ್ಕೆ ಚಾಲನೆ

ಪುತ್ತೂರು: ಐತಿಹಾಸಿಕ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳಕ್ಕೆ ಶನಿವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ದೇವರಮಾರು ಗದ್ದೆಯಲ್ಲಿ ನಿರ್ಮಿಸಲಾದ ಅಚ್ಚುಕಟ್ಟಿನ ಕೋಟಿ – ಚೆನ್ನಯ ಕರೆಯಲ್ಲಿ ತೆಂಗಿನಕಾಯಿ ಒಡೆಯುವ ಮೂಲಕ ಎರಡು ದಿನದ ಹೊನಲು ಬೆಳಕಿನ ಕಂಬಳ ಉದ್ಘಾಟನೆಗೊಂಡಿತು. ಇನ್ನೊಂದೆಡೆ ಕಂಬಳಕ್ಕೆ ಆಗಮಿಸುತ್ತಿದ್ದ ಕೋಣಗಳನ್ನು ಶ್ರೀ ಮಹಾಲಿಂಗೇಶ್ವರ ದೇವರ ಮುಂಭಾಗಕ್ಕೆ ಕೊಂಡೊಯ್ದು, ದೇವರಿಗೆ ನಮಿಸಿ ಪ್ರಾರ್ಥನೆ ಸಲ್ಲಿಸುವ ದೃಶ್ಯ ಕಂಡುಬರುತ್ತಿದೆ. ಕೋಣಗಳು ಎರಡು ಮೊಣಕಾಲುಗಳನ್ನು ಊರಿ ದೇವರಿಗೆ ನಮಿಸುವುದನ್ನು ನೋಡುವುದೇ ಚಂದ. ಉದ್ಘಾಟನೆ ಬಳಿಕ ಕಂಬಳ […]

ಕೊಂಡಾಟದ ಕೋಣಗಳಿಂದ ದೇವರಿಗೆ ನಮನ; ಕರೆಗಿಳಿದ ಕೋಣಗಳಿಗೆ ಕಂಬಳಾಭಿಮಾನಿಗಳ ಸ್ವಾಗತ | ಹೀಗೆ ನೀಡಲಾಯ್ತು ಪುತ್ತೂರು ಕಂಬಳಕ್ಕೆ ಚಾಲನೆ Read More »

ಜ್ಞಾನವಾಪಿ ಮಸೀದಿ: ಎಎಸ್ಐ ಸಮೀಕ್ಷೆ ವರದಿ ಬಹಿರಂಗ

ವಾರಣಾಸಿ: ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಸಮೀಕ್ಷಾ ವರದಿಯನ್ನು ಭಾರತೀಯ ಪುರಾತತ್ವ ಇಲಾಖೆ(ಎಎಸ್ಐ) ಬಹಿರಂಗಪಡಿಸಿದ್ದು, ಮೊದಲೇ ಅಸ್ತಿತ್ವದಲ್ಲಿರುವ ದೇವಾಲಯದ ಅವಶೇಷಗಳ ಮೇಲೆ ಮಸೀದಿ ನಿರ್ಮಿಸಲಾಗಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಗುರುವಾರ ಹೇಳಿದ್ದಾರೆ. 839 ಪುಟಗಳ ಸಮೀಕ್ಷಾ ವರದಿಯ ಪ್ರತಿಗಳನ್ನು ಗುರುವಾರ ತಡರಾತ್ರಿ ನ್ಯಾಯಾಲಯವು ಸಂಬಂಧಪಟ್ಟ ಕಕ್ಷಿದಾರರಿಗೆ ನೀಡಿದೆ ಎಂದು ಜೈನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಹಿಂದೆ ಇದ್ದ ದೇವಸ್ಥಾನವನ್ನು ಕೆಡವಿದ ಅವಶೇಷಗಳ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಸಮೀಕ್ಷೆಯ

ಜ್ಞಾನವಾಪಿ ಮಸೀದಿ: ಎಎಸ್ಐ ಸಮೀಕ್ಷೆ ವರದಿ ಬಹಿರಂಗ Read More »

ಜ.27 ರಂದು ಕೊಕ್ಕಪುಣಿ ಶ್ರೀ ಅರಸು ಕುರಿಯಾಡಿತ್ತಾಯ ಚಾವಡಿಯಲ್ಲಿ ಪಂಚಮ ವರ್ಷದ ಪ್ರತಿಷ್ಠಾ ವರ್ಧಂತಿ

ಪುತ್ತೂರು: ಬೋಳಂತೂರು ಗ್ರಾಮದ ಕೊಕ್ಕಪುಣಿ ಶ್ರೀ ಅರಸು ಕುರಿಯಾಡಿತ್ತಾಯ ಚಾವಡಿಯಲ್ಲಿ ಪಂಚಮ ವರ್ಷದ ಪ್ರತಿಷ್ಠಾ ವರ್ಧಂತಿ ಜ.27 ಶನಿವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 7 ಕ್ಕೆ ಗಣಹೋಮ, ಸಂಜೆ 3.30 ರಿಂದ 4 ರ ವರೆಗೆ ತುಳಸೀವನ ಶ್ರೀ ಸಿದ್ಧಿ ವಿನಾಯಕ ಭಜನಾ ಮಂಡಳಿ, 5 ರಿಂದ 6 ರ ವರೆಗೆ ಗುಂಡಿಮಜಲು ಶೃಂಗಗಿರಿ ಶ್ರೀ ಶಾರದಾಂಬಾ ಭಜನಾ ಮಂಡಳಿ ವತಿಯಿಂದ ಕುಣಿತ ಭಜನೆ ನಡೆಯಲಿದೆ. ರಾತ್ರಿ 7.30 ರಿಂದ ದೈವಗಳಿಗೆ

ಜ.27 ರಂದು ಕೊಕ್ಕಪುಣಿ ಶ್ರೀ ಅರಸು ಕುರಿಯಾಡಿತ್ತಾಯ ಚಾವಡಿಯಲ್ಲಿ ಪಂಚಮ ವರ್ಷದ ಪ್ರತಿಷ್ಠಾ ವರ್ಧಂತಿ Read More »

ಜ. 27ರಂದು ಶಿವಸುಜ್ಞಾನ ತೀರ್ಥ ಶ್ರೀಗಳಿಂದ ಪುತ್ತೂರು ವಲಯ ಭಕ್ತರ ಸಮಾಲೋಚನಾ ಸಭೆ

ಪುತ್ತೂರು: ಅರೆಮಾದನಹಳ್ಳಿ ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳ ನೇತೃತ್ವದಲ್ಲಿ ಇಲ್ಲಿನ ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಜ. 27ರಂದು ಪುತ್ತೂರು ವಲಯ ಭಕ್ತರ ಸಮಾಲೋಚನಾ ಸಭೆ ನಡೆಯಲಿದೆ. ಸಂಜೆ 4 ಗಂಟೆಗೆ ಸರಿಯಾಗಿ ನಡೆಯುವ ಸಭೆಯಲ್ಲಿ ಮಹಾಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಅಲ್ಲದೇ, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಕಜ್ಕೆಯ ಶಾಖಾ ಮಠದಲ್ಲಿ ನಿರ್ಮಾಣಗೊಂಡಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಬಗ್ಗೆಯೂ ಶ್ರೀಗಳು ಮಾತನಾಡಲಿದ್ದಾರೆ. ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನದ ಪುನರ್ ನಿರ್ಮಾಣಕ್ಕೆ

ಜ. 27ರಂದು ಶಿವಸುಜ್ಞಾನ ತೀರ್ಥ ಶ್ರೀಗಳಿಂದ ಪುತ್ತೂರು ವಲಯ ಭಕ್ತರ ಸಮಾಲೋಚನಾ ಸಭೆ Read More »

ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ

ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನ ವಾರ್ಷಿಕ ನೇಮೋತ್ಸವದ ಅಂಗವಾಗಿ ವಿವಿಧ ವೈದಿಕ ಕಾರ್ಯಕ್ರಮ ಬುಧವಾರ ನಡೆಯಿತು. ನೇಮೋತ್ಸವದ ಅಂಗವಾಗಿ ಬೆಳಿಗ್ಗೆ ಕಾರ್ಜಾಲುಗುತ್ತಿನಲ್ಲಿ ಸ್ಥಳಶುದ್ಧಿ ಹೋಮ, ಕಲಶ ಪ್ರತಿಷ್ಠೆ, ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ, ನಾಗತಂಬಿಲ ನಡೆಯಿತು. ಬಳಿಕ ಮಧ್ಯಾಹ್ನ ಸುಮಾರು 10 ಸಾವಿರ ಮಂದಿಗೆ ಅನ್ನಸಂತರ್ಪಣೆ ಜರಗಿತು. ರಾತ್ರಿ 7 ಗಂಟೆಗೆ ಶ್ರೀ ದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರು ಬಂದು, 9 ಗಂಟೆಗೆ ಗೊಂದಳ ಪೂಜೆ, ರಾತ್ರಿ 12 ಕ್ಕೆ

ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ Read More »

ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀರಾಮ ರಕ್ಷಾಸ್ತ್ರೋತ್ರ ಮಂತ್ರ ಪಠಣ | ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರಾಣಪ್ರತಿಷ್ಠೆ ನೆನಪಿಗಾಗಿ ಬಿಲ್ವಪತ್ರೆ, ಪಾರಿಜಾತ ಗಿಡ ನಾಟಿ

ಚಾರ್ವಾಕ: ಅಯೋಧ್ಯ ಶ್ರೀ ರಾಮ ಜನ್ಮ ಭೂಮಿ ಪ್ರಾಣ ಪ್ರತಿಷ್ಠೆ ಅಂಗವಾಗಿ ಚಾರ್ವಕ ನಾಣಿಲ ಉಪವಾಸತಿ ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ರಾಮ ರಕ್ಷಾ ಸ್ತೋತ್ರ ಮಂತ್ರ ಪಠಣ, ನಾಲ್ಕಂಭ ಉಳ್ಳಾಲ್ತಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಅಯೋಧ್ಯೆ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅವಿಸ್ಮರಣೀಯ ನೆನಪಿಗಾಗಿ ಪವಿತ್ರ ಬಿಲ್ವಪತ್ರೆ ಹಾಗೂ ಪಾರಿಜಾತ ಗಿಡ ನೆಡಲಾಯಿತು. ಈ ಸಂದರ್ಭದಲ್ಲಿ ಅಯೋಧ್ಯೆ ಶ್ರೀ ರಾಮನ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರವನ್ನು ಭಕ್ತಾದಿಗಳು ವೀಕ್ಷಿಸಿ ಪುನೀತರಾದರು. ಮಧ್ಯಾಹ್ನ

ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀರಾಮ ರಕ್ಷಾಸ್ತ್ರೋತ್ರ ಮಂತ್ರ ಪಠಣ | ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರಾಣಪ್ರತಿಷ್ಠೆ ನೆನಪಿಗಾಗಿ ಬಿಲ್ವಪತ್ರೆ, ಪಾರಿಜಾತ ಗಿಡ ನಾಟಿ Read More »

ನಾಳೆ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಬಂಟಿಂಗ್ಸ್, ತಳಿರು ತೋರಣ, ವಿದ್ಯುತ್ ದೀಪಗಳಿಂದ ಸಿಂಗರಿಸಲ್ಪಟ್ಟ ದೈವಸ್ಥಾನ | ವಾಹನ ಸಂಚಾರದಲ್ಲಿ ಬದಲಾವಣೆ

ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನ ವಾರ್ಷಿಕ ನೇಮೋತ್ಸವ ಜ.24 ಬುಧವಾರ ನಡೆಯಲಿದ್ದು, ಎಲ್ಲಾ ಸಿದ್ಧತೆಗಳು ನಡೆದಿದೆ. ದೈವಸ್ಥಾನ ಹಾಗೂ ಮುಖ್ಯರಸ್ತೆಯಲ್ಲಿ ಸುಮಾರು 500 ಮೀ.ನಷ್ಟು ಉದ್ದಕ್ಕೆ ತಳಿರು ತೋರಣ, ಕೇಸರಿ ಬಂಟಿಂಗ್ಸ್, ವಿದ್ಯುತ್ ಬಲ್ಬುಗಳಿಂದ ಈಗಾಗಲೇ ಸಿಂಗರಿಸಲಾಗಿದೆ. ನೇಮೋತ್ಸವದ ಅಂಗವಾಗಿ ಬೆಳಿಗ್ಗೆ ಕಾರ್ಜಾಲುಗುತ್ತಿನಲ್ಲಿ ಸ್ಥಳಶುದ್ಧಿ ಹೋಮ, ಕಲಶ ಪ್ರತಿಷ್ಠೆ, ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ, ನಾಗತಂಬಿಲ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ಜರಗಲಿದೆ. ರಾತ್ರಿ 7 ಗಂಟೆಗೆ ಶ್ರೀ ದೈವಗಳ ಮೂಲನೆಲೆ ಕಾರ್ಜಾಲು

ನಾಳೆ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಬಂಟಿಂಗ್ಸ್, ತಳಿರು ತೋರಣ, ವಿದ್ಯುತ್ ದೀಪಗಳಿಂದ ಸಿಂಗರಿಸಲ್ಪಟ್ಟ ದೈವಸ್ಥಾನ | ವಾಹನ ಸಂಚಾರದಲ್ಲಿ ಬದಲಾವಣೆ Read More »

ಸಾಕೇತನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ | ಕರಸೇವಕರಿಗೆ ಗೌರವಾರ್ಪಣೆ

ಕೆದಿಲ: ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾನ ಪ್ರಾಣಪ್ರತಿಷ್ಟೆ ಅಂಗವಾಗಿ ಕೆದಿಲ ಸಾಕೇತನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ರಾಮ ಭಕ್ತರಿಂದ ಭಜನೆ, ಬಳಿಕ ಶ್ರೀ ರಾಮ ಕಲ್ಪೋಕ್ತ ಪೂಜೆ, ಸಾಮೂಹಿಕ ರಾಮತಾರಕ ಮಂತ್ರ ನಡೆಯಿತು. ಕಾರ್ಯಕ್ರಮದಲ್ಲಿ ಕರಸೇವಕರಿಗೆ ಗೌರವಾರ್ಪಣೆ ನಡೆಯಿತು. ಮೈರ ಕೃಷ್ಣ ಭಟ್ ಕರಸೇವೆಗೆ  ತೆರಳಿದವರನ್ನು ಪ್ರಶಂಸಿಸಿದರು. ಕರಸೇವೆಯ ಸಮಯದಲ್ಲಿ ಭಾಗವಹಿಸಿದವರು ಅನುಭವವನ್ನು ನಮ್ಮೊಂದಿಗೆ ಹಂಚಿಕೊಂಡರು. ಅಯೋಧ್ಯೆಯಲ್ಲಿ ನಡೆದ ಕಾರ್ಯಕ್ರಮವನ್ನು ಪರದೆಯ ಮೂಲಕ ಸುಮಾರು 500ಕ್ಕೂ ಮಿಕ್ಕಿ ರಾಮಭಕ್ತರು ವೀಕ್ಷಿಸಿದರು.

ಸಾಕೇತನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ | ಕರಸೇವಕರಿಗೆ ಗೌರವಾರ್ಪಣೆ Read More »

ಎಣ್ಮೂರು ಶ್ರೀ ಸೀತಾರಾಮಚಂದ್ರ ಸೇವಾ ಪ್ರತಿಷ್ಠಾನದಿಂದ ಎಣ್ಮೂರು ಶ್ರೀರಾಮ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ | ಕರಸೇವಕರಿಗೆ ಗೌರವ ಸನ್ಮಾನ

ಕಡಬ: ಎಣ್ಮೂರು ಕೋಟಿ-ಚೆನ್ನಯ ನಗರದ ಶ್ರೀ ಸೀತಾರಾಮಚಂದ್ರ ಸೇವಾ ಪ್ರತಿಷ್ಠಾನ ವತಿಯಿಂದ ಅಯೋಧ್ಯ ಪ್ರಭು ಶ್ರೀ ರಾಮಚಂದ್ರನ ಪ್ರಾಣಪ್ರತಿಷ್ಠೆಯ ಪ್ರಯುಕ್ತ ಎಮ್ಮೂರಿನ ಶ್ರೀರಾಮ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಬೆಳಗ್ಗೆ ಗಣಪತಿ ಹವನ, ಶ್ರೀರಾಮನಾಮ ತಾರಕ ಹೋಮ, ವಿವಿಧ ಭಜನಾ ತಂಡಗಳಿಂದ ಭಜನೆ, ಶ್ರೀರಾಮ ದೇವರಿಗೆ ಕಲಶಾಭಿಷೇಕ ನಡೆದು, ಮಧ್ಯಾಹ್ನ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಹಿಂದು ಜಾಗರಣ ವೇದಿಕೆ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ಗಣರಾಜ ಕೆದಿಲ ಹಾಗೂ ಯತೀಶ್ ರೈ ದುಗಲಡ್ಕ, ಪ್ರಫುಲ್ಲಚಂದ್ರ

ಎಣ್ಮೂರು ಶ್ರೀ ಸೀತಾರಾಮಚಂದ್ರ ಸೇವಾ ಪ್ರತಿಷ್ಠಾನದಿಂದ ಎಣ್ಮೂರು ಶ್ರೀರಾಮ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ | ಕರಸೇವಕರಿಗೆ ಗೌರವ ಸನ್ಮಾನ Read More »

ಹಿರೇಬಂಡಾಡಿ ಮಂಜುಶ್ರೀ ಭಜನಾ ಮಂದಿರದಲ್ಲಿ ರಾಮ ತಾರಕ ಮಂತ್ರ ಜಪ, ಭಜನೆ | ಕರಸೇವಕರಿಗೆ ಗೌರವಾರ್ಪಣೆ

ಉಪ್ಪಿನಂಗಡಿ: ಹಿರೇಬಂಡಾಡಿ ಮಂಜುಶ್ರೀ ಭಜನಾ ಮಂದಿರದಲ್ಲಿ ಅಯೋಧ್ಯ ಶ್ರೀ ರಾಮ ಪ್ರಾಣ ಪ್ರತಿಷ್ಠೆ ಪ್ರಯುಕ್ತ ರಾಮ ತಾರಕ ಮಂತ್ರ ಜಪ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 10 ರಿಂದ ಎಲ್‍.ಇ.ಡಿ. ಪರದೆಯಲ್ಲಿ ಅಯೋಧ್ಯೆ ಶ್ರೀ ರಾಮಚಂದ್ರನ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರ ನಡೆಯಿತು. ಇದೇ ಸಂದರ್ಭ ಕರಸೇವಕರಿಗೆ ಗೌರವಾರ್ಪಣೆ ನಡೆಯಿತು.

ಹಿರೇಬಂಡಾಡಿ ಮಂಜುಶ್ರೀ ಭಜನಾ ಮಂದಿರದಲ್ಲಿ ರಾಮ ತಾರಕ ಮಂತ್ರ ಜಪ, ಭಜನೆ | ಕರಸೇವಕರಿಗೆ ಗೌರವಾರ್ಪಣೆ Read More »

error: Content is protected !!
Scroll to Top