ಧಾರ್ಮಿಕ

ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ದೇವಿಗೆ ಸೂರ್ಯರಶ್ಮಿಯ ಸ್ಪರ್ಶ, ದೇವಿಗೆ ವಿಶೇಷ ಪೂಜೆ

ಪುತ್ತೂರು: ಪುತ್ತೂರು ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶುಕ್ರವಾರ ಮೀನ ಸಂಕ್ರಮಣದಂದು ಮುಂಜಾನೆ ಸೂರ್ಯನ ಕಿರಣಗಳು ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ ಗರ್ಭಗುಡಿಯಲ್ಲಿ ನೆಲೆಯಾಗಿರುವ ದೇವಿಯ ಬಿಂಬಕ್ಕೆ ಸ್ಪರ್ಶವಾಯಿತು. ಕ್ಷೇತ್ರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮೀನ ಸಂಕ್ರಮಣದ ದಿನ ಗರ್ಭಗುಡಿಯಲ್ಲಿರುವ ಮಹಾಲಕ್ಷ್ಮೀ ದೇವಿಯ ಬಿಂಬಕ್ಕೆ ಮುಂಜಾನೆ ಸೂರ್ಯ ರಶ್ಮಿಯ ಸ್ಪರ್ಶವಾಯಿತು.. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿ ಎನ್.ಐತ್ತಪ್ಪ ಸಪಲ್ಯರ ನೇತೃತ್ವದಲ್ಲಿ ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆ ನೆರವೇರಿತು. ವೈದಿಕರಿಂದ ವೇದ, ಘೋಷ […]

ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ದೇವಿಗೆ ಸೂರ್ಯರಶ್ಮಿಯ ಸ್ಪರ್ಶ, ದೇವಿಗೆ ವಿಶೇಷ ಪೂಜೆ Read More »

ನೆಲ್ಲಿದಡಿ ಗುತ್ತು ಉಳಿಸಿ ಪಾದಯಾತ್ರೆ ತಾತ್ಕಾಲಿಕ ರದ್ದು

ದೈವಾರಾಧನೆಗೆ ಅಡ್ಡಿಪಡಿಸಿದವರ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆ ಮಂಗಳೂರು : ನೆಲ್ಲಿದಡಿ ಗುತ್ತು ಕಾಂತೇರಿ ಜುಮಾದಿ ದೈವದ ಆರಾಧನೆಗೆ ಅಡ್ಡಿಪಡಿಸಿದ ವಿಶೇಷ ಆರ್ಥಿಕ ವಲಯ (ಎಂಎಸ್‌ಇಝಡ್‌)ದ ವಿರುದ್ಧ ಮಾ.18ರಂದು ನಡೆಸುದ್ದೇಶಿಸಿದ್ದ ಬೃಹತ್‌ ಪಾದಯಾತ್ರೆ ತಾತ್ಕಾಲಿಕವಾಗಿ ರದ್ದಾಗಿದೆ. ಬಜ್ಪೆಯ ಪೇಜಾವರ ಮಾಗಣೆಯ ನೆಲ್ಲಿದಡಿ ಗುತ್ತಿನ ಪ್ರಸಿದ್ಧ ಕಾಂತೇರಿ ಜುಮಾದಿ ದೈವದ ಆರಾಧನೆಗೆ ಸರಕಾರಿ ಕಂಪನಿ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ನಿಟ್ಟಿನಲ್ಲಿ ಮಾ. 18ರಂದು ಬಜಪೆ-ನೆಲ್ಲಿದಡಿಗುತ್ತು ಪಾದಯಾತ್ರೆಯನ್ನು ಆಯೋಜಿಸಲಾಗಿತ್ತು. ಆದರೆ, ದೈವಸ್ಥಾನದ ಧಾರ್ಮಿಕ ವಿಧಿವಿಧಾನಗಳನ್ನು ಪಾಲಿಸುವ

ನೆಲ್ಲಿದಡಿ ಗುತ್ತು ಉಳಿಸಿ ಪಾದಯಾತ್ರೆ ತಾತ್ಕಾಲಿಕ ರದ್ದು Read More »

ಮಾ.16 : ಗೋ ಆಧಾರಿತ ಕೃಷಿ ಬಗ್ಗೆ ಜಾಗೃತಿ, ಗೋ ರಕ್ಷಣೆಗಾಗಿ ನಂದಿ ರಥಯಾತ್ರೆ ಪುತ್ತೂರಿಗೆ ಆಗಮನ | ನೀನ್ಯಾರಿಗಾದೆಯೋ ಎಲೆ ಮಾನವ ಪುಣ್ಯ ಕೋಟಿಯ ನೃತ್ಯರೂಪಕ ಪ್ರದರ್ಶನ

ಪುತ್ತೂರು: ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಮತ್ತು ಗೋ ರಕ್ಷಣೆಗಾಗಿ ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್, ಪುತ್ತೂರು ನಂದಿ ರಥಯಾತ್ರೆ ಸಂಚಾಲನ ಸಮಿತಿ ವತಿಯಿಂದ ನಂದಿ ರಥ ಯಾತ್ರೆ ಮಾ.16 ರಂದು ಪುತ್ತೂರಿಗೆ ಆಗಮಿಸಲಿದೆ ಎಂದು ನಂದಿ ರಥಯಾತ್ರೆಯ ಸಂಚಾಲನ ಸಮಿತಿ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಸಂಜೆ 4 ಗಂಟೆಗೆ ದರ್ಬೆ ವೃತ್ತದಿಂದ ನಂದಿ ರಥಯಾತ್ರೆಗೆ

ಮಾ.16 : ಗೋ ಆಧಾರಿತ ಕೃಷಿ ಬಗ್ಗೆ ಜಾಗೃತಿ, ಗೋ ರಕ್ಷಣೆಗಾಗಿ ನಂದಿ ರಥಯಾತ್ರೆ ಪುತ್ತೂರಿಗೆ ಆಗಮನ | ನೀನ್ಯಾರಿಗಾದೆಯೋ ಎಲೆ ಮಾನವ ಪುಣ್ಯ ಕೋಟಿಯ ನೃತ್ಯರೂಪಕ ಪ್ರದರ್ಶನ Read More »

ಇನ್ನು ದೇವಳಗಳ ರೂಮ್‌ ಮಾಹಿತಿ ವೆಬ್‌ಸೈಟಿನಲ್ಲಿ ಲಭ್ಯ

ಭಕ್ತರ ಅನುಕೂಲಕ್ಕಾಗಿ 400 ದೇವಸ್ಥಾನ, ಛತ್ರಗಳ ಮಾಹಿತಿ ಅಪ್‌ಲೋಡ್‌ ಬೆಂಗಳೂರು: ಮುಜರಾಯಿ ಇಲಾಖೆ ಅಧೀನದಲ್ಲಿರುವ ರಾಜ್ಯದ ದೇವಾಲಯಗಳು ಮತ್ತು ಹೊರರಾಜ್ಯಗಳ ಛತ್ರಗಳಲ್ಲಿ ಲಭ್ಯವಿರುವ ಕೊಠಡಿಗಳ ಮಾಹಿತಿ ಇನ್ನು ವೆಬ್‌ಸೈಟಿನಲ್ಲಿ ಸಿಗಲಿದೆ. ಹಬ್ಬ, ಹರಿದಿನಗಳಂದು ಜನ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ತೆರಳುತ್ತಾರೆ. ಈ ವೇಳೆ ದೇವಸ್ಥಾನ ಪರಿಸರದಲ್ಲಿ ಉಳಿದುಕೊಳ್ಳಲು ಕೊಠಡಿ ಸಿಗುವುದಿಲ್ಲ. ಈ ಸಮಸ್ಯೆ ಬಗೆಹರಿಸಲು ವೆಬ್‌ಸೈಟ್‌ನಲ್ಲಿ ಕೊಠಡಿಗಳ ಮಾಹಿತಿ ನೀಡಲು ಮುಜರಾಯಿ ಇಲಾಖೆ ನಿರ್ಧರಿಸಿದೆ.ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಜರಾಯಿ ಹಾಗೂ ಧಾರ್ಮಿಕ ಧತ್ತಿ ಇಲಾಖೆಗೆ

ಇನ್ನು ದೇವಳಗಳ ರೂಮ್‌ ಮಾಹಿತಿ ವೆಬ್‌ಸೈಟಿನಲ್ಲಿ ಲಭ್ಯ Read More »

ಏ17 ರಿಂದ 20 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ | ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವವರು ಹೆಸರು ನೋಂದಾಯಿಸಬಹುದು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಸಂದರ್ಭ ಎ.10 ರಿಂದ 20ರ ತನಕ ನಡೆಯುವ ವಿವಿಧ ಕಾರ್ಯಕ್ರಮದಲ್ಲಿ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವವರು ಮಾ.20ರ ಒಳಗೆ ದೇವಳದ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸುವಂತೆ ತಿಳಿಸಲಾಗಿದೆ. ದೇವಳದ ವತಿಯಿಂದ ದೇವಳದ ಗದ್ದೆಯಲ್ಲಿ ಎ.17ರ ಬ್ರಹ್ಮರಥೋತ್ಸವದ ಸಂದರ್ಭ ಬಿಟ್ಟು ಉಳಿದ ದಿನ ಎ.10 ರಿಂದ 20ರ ತನಕ ಪ್ರತಿ ದಿನ ಸಂಜೆಯಿಂದ ರಾತ್ರಿಯ ತನಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ದೇವಳದ ವತಿಯಿಂದ

ಏ17 ರಿಂದ 20 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ | ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವವರು ಹೆಸರು ನೋಂದಾಯಿಸಬಹುದು Read More »

ಏ.10 ರಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ : ಆಮಂತ್ರಣ ಪತ್ರ ಬಿಡುಗಡೆ – ಬ್ರಹ್ಮರಥೋತ್ಸವದ ಪ್ರಥಮ ಸೇವೆ ರಶೀದಿಗೆ ಚಾಲನೆ

ಪುತ್ತೂರು: ಏ.10 ರಿಂದ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಅಂಗವಾಗಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಬುಧವಾರ ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಬಿಡುಗಡೆಗೊಳಿಸಲಾಯಿತು. ವರ್ಷಾವದಿ ಜಾತ್ರೆಗೆ ಸಂಬಂಧಿಸಿ ಏ.1 ರಂದು ರಂದು ನಡೆಯುವ ಗೊನೆ ಮುಹೂರ್ತದಿಂದ ಹಿಡಿದು ಜಾತ್ರೆ ಸಂಪನ್ನಗೊಳ್ಳುವಲ್ಲಿ ಶ್ರೀ ದೇವರು ಯಶಸ್ವಿಯಾಗಿ ನಡೆಸಿಕೊಡುವಂತೆ ಮತ್ತು ಜಾತ್ರೆಯ ಸಂದರ್ಭ ಅನ್ನದಾನ ಅಕ್ಷಯವಾಗಿ ಬೆಳಗುವಂತೆ ಹಾಗು ಅಭಿವೃದ್ಧಿ ಕಾರ್ಯಗಳಿಗೆ ಶ್ರೀ ದೇವರ ಪೂರ್ಣಾನುಗ್ರಹ ಸಿಗುವಂತೆ

ಏ.10 ರಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ : ಆಮಂತ್ರಣ ಪತ್ರ ಬಿಡುಗಡೆ – ಬ್ರಹ್ಮರಥೋತ್ಸವದ ಪ್ರಥಮ ಸೇವೆ ರಶೀದಿಗೆ ಚಾಲನೆ Read More »

ಗ್ರಾಮ  ದೈವ  ಶ್ರೀ  ಶಿರಾಡಿ  ರಾಜನ್ ದೈವ  ಹಾಗೂ  ಸಪರಿವಾರ  ದೈವಗಳ ನೇಮೋತ್ಸವ 

ಕುದ್ಮಾರು : ಗ್ರಾಮ ದೈವ  ಶ್ರೀ  ಶಿರಾಡಿ  ರಾಜನ್ ದೈವ ಹಾಗೂ ಸಪರಿವಾರ  ದೈವಗಳ  ನೇಮೋತ್ಸವವು  ಮಾ.  9 ಭಾನುವಾರದಂದು  ಕುದ್ಮಾರು  ಗ್ರಾಮದ  ಅನ್ಯಾಡಿಯಲ್ಲಿ  ಕಟ್ಟತ್ತಾರು ಕಟ್ಟೆ ಯಲ್ಲಿ ನಡೆಯಿತು. ನೇಮೋತ್ಸವದ ಅಂಗವಾಗಿ ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಸಂಜೆ 7 ಗಂಟೆಗೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್‍ ದೈವದ ದೈವಸ್ಥಾನ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯಲಾಯಿತು.. ರಾತ್ರಿ 8:30 ಕ್ಕೆ ದೈವಕ್ಕೆ ಎಣ್ಣೆ ಬೂಳ್ಯ ನೀಡಲಾಯಿತು. ರಾತ್ರಿ 9 ಗಂಟೆಗೆ

ಗ್ರಾಮ  ದೈವ  ಶ್ರೀ  ಶಿರಾಡಿ  ರಾಜನ್ ದೈವ  ಹಾಗೂ  ಸಪರಿವಾರ  ದೈವಗಳ ನೇಮೋತ್ಸವ  Read More »

ಪುಣ್ಯಕ್ಞೇತ್ರಗಳ 500 ಮೀಟರ್‌ ವ್ಯಾಪ್ತಿಯಲ್ಲಿ ಸೋಪ್‌, ಶ್ಯಾಂಪೂ ಮಾರಾಟ ನಿಷೇಧ

ಜಲಮೂಲ ಮಲಿನಗೊಳಿಸುವುದನ್ನು ತಡೆಯಲು ಸರಕಾರ ಸೂಚನೆ ಬೆಂಗಳೂರು: ಪುಣ್ಯಕ್ಷೇತ್ರಗಳ ಬಳಿಯಿರುವ ನದಿ, ಸರೋವರ, ಕಲ್ಯಾಣಿ, ಸ್ನಾನಘಟ್ಟಗಳಿಗೆ ತ್ಯಾಜ್ಯ ಎಸೆದು ಅಪವಿತ್ರಗೊಳಿಸುವುದನ್ನು ತಡೆಯಲು ಸರಕಾರ ಮುಂದಾಗಿದ್ದು, ಇಂಥ ಸ್ಥಳಗಳ 500 ಮೀಟರ್ ವ್ಯಾಪ್ತಿಯ ಸುತ್ತಮುತ್ತ ಸೋಪ್‌, ಶ್ಯಾಂಪೂ ಮಾರಾಟವನ್ನು ನಿಷೇಧಿಸಲು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಪುಣ್ಯಕ್ಷೇತ್ರಗಳ ಬಳಿ ಇರುವ ಜಲಮೂಲಗಳಲ್ಲಿ ಭಕ್ತರು, ಪ್ರವಾಸಿಗರು ಸ್ನಾನಮಾಡಿ ಉಳಿದ ಶ್ಯಾಂಪೂ ಮತ್ತು ಸೋಪಿನ ಸ್ಯಾಷೆಗಳನ್ನು ದಂಡೆಯಲ್ಲಿ ಎಸೆದು

ಪುಣ್ಯಕ್ಞೇತ್ರಗಳ 500 ಮೀಟರ್‌ ವ್ಯಾಪ್ತಿಯಲ್ಲಿ ಸೋಪ್‌, ಶ್ಯಾಂಪೂ ಮಾರಾಟ ನಿಷೇಧ Read More »

ಮೊಗಪೆ ಮನೆಯಲ್ಲಿ ಶ್ರೀ ಕಲ್ಲುರ್ಟಿ ಮತ್ತು ಶ್ರೀ ಕೊರಗಜ್ಜ ದೈವದ ನೇಮೋತ್ಸವ

ಮೊಗಪೆ ಮನೆಯಲ್ಲಿ ಮಾ. 6 ಗುರುವಾರ ಶ್ರೀ ಕಲ್ಲುರ್ಟಿ ಮತ್ತು ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಆರ್ ಪಿ ಕ್ರಿಯೆಷನ್ ಅರ್ಪಿಸುವ ಕೇಪುಲ ಪ್ರಿಯೆ ತುಳು ಭಕ್ತಿ ಗೀತೆಯನ್ನು ಬಿಡುಗಡೆಗೊಳಿಸಲಾಯಿತು. ಶ್ರೀ ಕಲ್ಲುರ್ಟಿ ಮತ್ತು ಶ್ರೀ ಕೊರಗಜ್ಜ ದೈವದ ನೇಮೋತ್ಸವಕ್ಕೆ ಭಕ್ತಾದಿಗಳು ಆಗಮಿಸಿ, ದೈವದೇವರ ಪ್ರಸಾದವನ್ನು ಸ್ವೀಕರಿಸಿದರು.

ಮೊಗಪೆ ಮನೆಯಲ್ಲಿ ಶ್ರೀ ಕಲ್ಲುರ್ಟಿ ಮತ್ತು ಶ್ರೀ ಕೊರಗಜ್ಜ ದೈವದ ನೇಮೋತ್ಸವ Read More »

ಮಾ. 9 :  ಗ್ರಾಮ ದೈವ  ಶ್ರೀ ಶಿರಾಡಿ  ರಾಜನ್ ದೈವ  ಹಾಗೂ  ಸಪರಿವಾರ  ದೈವಗಳ ನೇಮೋತ್ಸವ 

ಕುದ್ಮಾರು : ಗ್ರಾಮ ದೈವ  ಶ್ರೀ  ಶಿರಾಡಿ  ರಾಜನ್ ದೈವ ಹಾಗೂ ಸಪರಿವಾರ  ದೈವಗಳ  ನೇಮೋತ್ಸವವು  ಮಾ.  9 ಭಾನುವಾರದಂದು  ಕುದ್ಮಾರು  ಗ್ರಾಮದ  ಅನ್ಯಾಡಿಯಲ್ಲಿ  ಕಟ್ಟತ್ತಾರು ಕಟ್ಟೆ ಯಲ್ಲಿ ನಡೆಯಲಿದೆ. ನೇಮೋತ್ಸವದಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಸಂಜೆ 7 ಗಂಟೆಗೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್‍ ದೈವದ ದೈವಸ್ಥಾನ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯುವುದು. ರಾತ್ರಿ 8:30 ಕ್ಕೆ ದೈವಕ್ಕೆ ಎಣ್ಣೆ ಬೂಳ್ಯ ನೀಡುವುದು. ರಾತ್ರಿ 9 ಗಂಟೆಗೆ ಅನ್ನಸಂತರ್ಪಣೆ

ಮಾ. 9 :  ಗ್ರಾಮ ದೈವ  ಶ್ರೀ ಶಿರಾಡಿ  ರಾಜನ್ ದೈವ  ಹಾಗೂ  ಸಪರಿವಾರ  ದೈವಗಳ ನೇಮೋತ್ಸವ  Read More »

error: Content is protected !!
Scroll to Top