ಧಾರ್ಮಿಕ

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ

ವೀರಮಂಗಲ : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದಲ್ಲಿ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಯವರ ಹಿರಿತನದಲ್ಲಿ ವರ್ಷಾವದಿ ವಿಷ್ಣುಮೂರ್ತಿ ದೇವರ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ಕಾರ್ಯಕ್ರಮ ಫೆ.15ರಂದು ನಡೆಯಲಿದೆ. ಬೆಳಗ್ಗೆ 6ರಿಂದ ಗಣಪತಿ ಹೋಮ, ಸಿಯಾಳಭಿಷೇಕ, ಪವಮಾನಾಭಿಷೇಕ, ನವಕ ಕಲಶಾಭಿಷೇಕ ನಡೆಯಲಿದೆ. ಬೆಳಗ್ಗೆ 11ರಿಂದ ಶ್ರೀ ಲಕ್ಷ್ಮೀ ಪ್ರಿಯ ಭಜನಾ ಮಂಡಳಿ ಬೆಳಂದೂರು ಇವರಿಂದ ಭಜನಾ ಕಾರ್ಯಕ್ರಮ ನೆರವೇರಲಿದೆ.  ಮದ್ಯಾಹ್ನ 12:30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ. ಸಂಜೆ 5 ಗಂಟೆಗೆ ದೈವಗಳ ಭಂಡಾರ […]

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ Read More »

ಫೆ.17 : ಲೋಕಕಲ್ಯಾಣಾರ್ಥವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವರಿಗೆ ಶತರುದ್ರಾಭಿಷೇಕ ಸೇವೆ | ಸಂಸದ ಕ್ಯಾ. ಬ್ರಿಜೇಶ್‍ ಚೌಟ ಭಾಗಿ

ಉಪ್ಪಿನಂಗಡಿ: ಬಿಜೆಪಿ ಉಪ್ಪಿನಂಗಡಿ ಹಾಗೂ ಕಣಿಯೂರು ಮಹಾಶಕ್ತಿ ಕೇಂದ್ರದ ವತಿಯಿಂದ ಲೋಕಕಲ್ಯಾಣಾರ್ಥವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವರಿಗೆ ಶತರುದ್ರಾಭಿಷೇಕ ಸೇವೆ ಫೆ.17 ಸೋಮವಾರ ನಡೆಯಲಿದೆ. ಬೆಳಿಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಅಭಿವೃದ್ಧಿ ಕುರಿತು ಇತಿಹಾಸದಲ್ಲೇ ಮೊದಲ ಬಾರಿಗೆ ಸಂಸತ್ತಿನಲ್ಲಿ ಧ್ವನಿ ಎತ್ತಿ, ಸ್ವಯಂ ಪ್ರೇರಿತರಾಗಿ 50 ಕೋಟಿ ರೂ. ವೆಚ್ಚದ ಪ್ರಸ್ತಾವನೆ ಸಲ್ಲಿಸಿದ ದ.ಕ. ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ಪಾಲ್ಗೊಳ್ಳಲಿದ್ದಾರೆ. ಪಕ್ಷ ಹಾಗೂ ಸಂಘಟನೆಯ ದೇವದುರ್ಲಭ ಕಾರ್ಯಕರ್ತರ ಆಶಯದಂತೆ ನಡೆಯುವ

ಫೆ.17 : ಲೋಕಕಲ್ಯಾಣಾರ್ಥವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವರಿಗೆ ಶತರುದ್ರಾಭಿಷೇಕ ಸೇವೆ | ಸಂಸದ ಕ್ಯಾ. ಬ್ರಿಜೇಶ್‍ ಚೌಟ ಭಾಗಿ Read More »

ಕಾಣಿಯೂರು ಮಠದಲ್ಲಿ ವಾರ್ಷಿಕ ಉತ್ಸವಾದಿಗಳಿಗೆ ಗೊನೆ ಮುಹೂರ್ತ

ಕಾಣಿಯೂರು :  ಕಾಣಿಯೂರು ಮಠದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಗುರುವಾರ ಬೆಳಿಗ್ಗೆ ನಡೆಯಿತು. ಮೊದಲಿಗೆ ಕಾಣಿಯೂರು ಮಠದಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ 9 ಗಂಟೆಗೆ ಗೊನೆ ಮುಹೂರ್ತ ನೆರವೇರಿಸಲಾಯಿತು. ಜಾತ್ರೋತ್ಸವದ ಅಂಗವಾಗಿ ಫೆ.26 ರಂದು ಜಾತ್ರೋತ್ಸವ ಆರಂಭಗೊಳ್ಳಲಿದ್ದು, ಮಾ.4 ರ ವರೆಗೆ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಕಾಣಿಯೂರು ಮಠದಲ್ಲಿ ವಾರ್ಷಿಕ ಉತ್ಸವಾದಿಗಳಿಗೆ ಗೊನೆ ಮುಹೂರ್ತ Read More »

ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ವೈಭವದ ವರ್ಷಾವಧಿ ನೇಮೋತ್ಸವ

ಪುತ್ತೂರು: ನೆಹರುನಗರ ಸಮೀಪದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಮಂಗಳವಾರ ನಡೆಯಿತು. ಮಂಗಳವಾರ ಬೆಳಗ್ಗೆ 9 ಕ್ಕೆ ಮೂಲಸ್ಥಾನ ಕಾರ್ಜಾಲುಗುತ್ತಿನಲ್ಲಿ ಸ್ಥಳಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ ನಡೆಯಿತು. 11.30 ಕ್ಕೆ ಕಲ್ಲೇಗ ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ ಸೇವೆ, ಬಳಿಕ ನಡೆದ ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ರಾತ್ರಿ 7.30 ಕ್ಕೆ ಶ್ರೀ ದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಟು,

ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ವೈಭವದ ವರ್ಷಾವಧಿ ನೇಮೋತ್ಸವ Read More »

ಫೆ.16 : ದ್ವಾರಕಾ ಪ್ರತಿಷ್ಠಾನದಿಂದ ‘ದ್ವಾರಕೋತ್ಸವ-2025’, ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ

ಪುತ್ತೂರು: ದ್ವಾರಕಾ ಪ್ರತಿಷ್ಠಾನದ ವತಿಯಿಂದ ‘ದ್ವಾರಕೋತ್ಸವ-2025’, ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಫೆ.16 ಭಾನುವಾರ ಮುಕ್ರಂಪಾಡಿ ಗೋಕುಲ ಬಡಾವಣೆಯಲ್ಲಿ ನಡೆಯಲಿದೆ ಎಂದು ದ್ವಾರಕಾ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್‍ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ದ್ವಾರಕಾ ಪ್ರತಿಷ್ಠಾನ ವಿವಿಧ ವೈದಿಕ, ಸಾಮಾಜಿಕ, ಸಾಹಿತ್ಯಿಕ, ಸಾಂಸ್ಕೃತಿಕ, ಯಕ್ಷಗಾನ, ಸಂಗೀತ, ಗೋಸೇವೆ ಮುಂತಾದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಾ ಬಂದಿದೆ. ಭಾರತೀಯ ಸಂಸ್ಕೃತಿಯ ಸಂರಕ್ಷಣೆ, ಅನುಷ್ಠಾನ, ಸಂವರ್ಧನೆ ನಮ್ಮ ಧ್ಯೇಯವಾಗಿದೆ.

ಫೆ.16 : ದ್ವಾರಕಾ ಪ್ರತಿಷ್ಠಾನದಿಂದ ‘ದ್ವಾರಕೋತ್ಸವ-2025’, ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ Read More »

ಪುತ್ತೂರು (ಫೆ.11) ನೆಹರು ನಗರ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ವಾರ್ಷಿಕ ಜಾತ್ರೋತ್ಸವ

ಪುತ್ತೂರು: ನೆಹರು ನಗರ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ವಾರ್ಷಿಕ ಜಾತ್ರೋತ್ಸವ ಫೆ. 11ರಂದು ನಡೆಯಿತು. ಬೆಳಗ್ಗೆ ಕಾರ್ಜಾಲು ಗುತ್ತಿನಲ್ಲಿ ಸ್ಥಳ ಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ ನಡೆಯಿತು. ಬೆಳಗ್ಗೆ11-30ಕ್ಕೆ ಕಲ್ಲೇಗ ದೈವಸ್ಥಾನದಲ್ಲಿ ಗಣಹೋಮ ಹಾಗೂ ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ, ಮಧ್ಯಾಹ್ನ 12.30 ರಿಂದ ಕಲ್ಲೇಗ ದೈವಸ್ಥಾನದಲ್ಲಿ ಅನ್ನಸಂತರ್ಪಣಾ ಕಾರ್ಯಕ್ರಮ ನೆರವೇರಿತು. ರಾತ್ರಿ ಗಂಟೆ 7.30ಕ್ಕೆ ಸರಿಯಾಗಿ ಶ್ರೀದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಡಲಿದ್ದು. ರಾತ್ರಿ ಗಂಟೆ 9:30ಕ್ಕೆ ಗೊಂದೊಳು

ಪುತ್ತೂರು (ಫೆ.11) ನೆಹರು ನಗರ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ವಾರ್ಷಿಕ ಜಾತ್ರೋತ್ಸವ Read More »

ಡಿ.27-28-29 : ಶ್ರೀನಿವಾಸ ಕಲ್ಯಾಣೋತ್ಸವ, 100 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಸಮಾರಂಭ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಪುತ್ತಿಲ ಪರಿವಾರ ಸಂಚಾಲಕ ಅರುಣ್ ಕುಮಾರ್ ಪುತ್ತಿಲ

ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಡಿ.27, 28 ಹಾಗೂ 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ 100 ಜೋಡಿಗೆ ಉಚಿತ ವಿವಾಹ ಸಮಾರಂಭದ ಕುರಿತು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ವಿವರ ನೀಡಿದರು. ಸೋಮವಾರ ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿ, ಡಿಸೆಂಬರಿನಲ್ಲಿ ಅದ್ದೂರಿಯಾಗಿ ಶ್ರೀನಿವಾಸ ಕಲ್ಯಾಣೋತ್ಸವ ನಡೆದಿದೆ. ಅದೇ ರೀತಿ ಈ

ಡಿ.27-28-29 : ಶ್ರೀನಿವಾಸ ಕಲ್ಯಾಣೋತ್ಸವ, 100 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಸಮಾರಂಭ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಪುತ್ತಿಲ ಪರಿವಾರ ಸಂಚಾಲಕ ಅರುಣ್ ಕುಮಾರ್ ಪುತ್ತಿಲ Read More »

ಮಹಾಕುಂಭಮೇಳ : 300 ಕಿ.ಮೀ. ಟ್ರಾಫಿಕ್‌ ಜಾಮ್‌

ಭಕ್ತರ ದಟ್ಟಣೆ ನಿಭಾಯಿಸಲಾಗದೆ ರೈಲು ನಿಲ್ದಾಣವೇ ಬಂದ್‌ ಪ್ರಯಾಗ್‌ರಾಜ್‌ : ಮಹಾಕುಂಭಮೇಳಕ್ಕೆ ನಿರೀಕ್ಷೆಗೂ ಮೀರಿ ಜನ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್‌ ಜಾಮ್‌ ದಿನನಿತ್ಯ ಉಂಟಾಗುತ್ತಿದೆ. ಭಾನುವಾರ ಸುಮಾರು 300 ಕಿ.ಮೀ. ಟ್ರಾಫಿಕ್‌ ಜಾಮ್‌ ಆಗಿ ಭಕ್ತರು ಇನ್ನಿಲ್ಲದ ಬವಣೆ ಅನುಭವಿಸಿದ್ದಾರೆ. ಅನೇಕರು ಇದನ್ನು ಜಗತ್ತಿನ ಅತಿದೊಡ್ಡ ಟ್ರಾಫಿಕ್‌ ಜಾಮ್‌ ಎಂದು ಬಣ್ಣಿಸಿದ್ದಾರೆ. ಸಂಗಮಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಿಕ್ಕಿಬಿದ್ದಿದ್ದವು. ಸರತಿ ಸಾಲಿನ ಬಾಲ ಸುಮಾರು 300 ಕಿ.ಮೀ. ದೂರವಿತ್ತು ಎಂದು ಹಲವರು ಅನುಭವ ಹಂಚಿಕೊಂಡಿದ್ದಾರೆ.

ಮಹಾಕುಂಭಮೇಳ : 300 ಕಿ.ಮೀ. ಟ್ರಾಫಿಕ್‌ ಜಾಮ್‌ Read More »

ಮಹಿಳಾ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕೆಡ್ಡಸ ಹಬ್ಬದ ಪ್ರಾತ್ಯಕ್ಷಿಕೆ

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದಿಂದ ಕೆಡ್ಡಸ ಹಬ್ಬದ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಈಶ್ವರಮಂಗಲ ವಲಯದ ಕಾವು ಸಂಜೀವ ಗೌಡರ ಮನೆಯಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ವಾರಿಜಾ ಬೆಳಿಯಪ್ಪ ಗೌಡ ಮಾತನಾಡಿ, ನೆಲ ಅಗೆಯುವುದು ನಿಷೇಧ ಎಂಬ ಅರ್ಥವನ್ನು ಕೊಡುವ ಕೆಡ್ಡಸ ಮೂರು ದಿನಗಳ ಆಚರಣೆಯ ಹಬ್ಬವಾಗಿದೆ. ಪ್ರಕೃತಿ ಹೆಣ್ಣಾಗಿರುವುದರಿಂದ ಆಕೆ ವರ್ಷಕ್ಕೊಮ್ಮೆ ಬಹಿಷ್ಠೆಯಾಗುವ, ಭೂಮಿತಾಯಿ ರಜಸ್ವಲೆಯಾಗುವ ಹಬ್ಬವೇ ಕೆಡ್ಡಸ, ಈ ಹಬ್ಬ ಫೆನ್ನಿ (ಪೊಯಿಂತೆಲ್‍) 27ನೇ

ಮಹಿಳಾ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕೆಡ್ಡಸ ಹಬ್ಬದ ಪ್ರಾತ್ಯಕ್ಷಿಕೆ Read More »

ಬನ್ನೂರು ಶ್ರೀ ಶನೀಶ್ವರ ಸನ್ನಿಧಿಯಲ್ಲಿ 20ನೇ ವರ್ಷದ ಸಾಮೂಹಿಕ ಶನಿಪೂಜೆ

ಪುತ್ತೂರು:ಬನ್ನೂರು ಶಾಲಾ ಬಳಿಯ ಸ್ಪೂರ್ತಿ ಮೈದಾನದಲ್ಲಿರುವ ಶ್ರೀ ಶನೀಶ್ವರ ದೇವರ ಸನ್ನಿಧಿಯಲ್ಲಿ 20ನೇ ವರ್ಷದ ಸಾಮೂಹಿಕ ಶ್ರೀಶನಿಪೂಜೆ ಶನಿವಾರ ನಡೆಯಿತು. ಅರ್ಚಕ ಹರೀಶ್ ಶಾಂತಿಯವರ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಗಣಪತಿಹೋಮ, ಶ್ರೀ ಶನೀಶ್ವರ ದೇವರ ಪೂಜೆ ಆರಂಭ, ಮಧ್ಯಾಹ್ನ ಶ್ರೀದೇವರಿಗೆ ಮಹಾ ಮಂಗಳಾರತಿ, ಶನೀಶ್ವರ ಕುಣಿತ ಭಜನಾ ಮಂಡಳಿಯವರಿಂದ ಕುಣಿತ ಭಜನೆ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಕಣಿಯೂರು ಚಾಮುಂಡೇಶ್ವರಿ ಕ್ಷೇತ್ರ ಶ್ರೀ ಮಹಾಬಲ ಸ್ವಾಮೀಜಿ, ನವಗ್ರಹಗಳಿಗೆ ಶನಿದೇವರು

ಬನ್ನೂರು ಶ್ರೀ ಶನೀಶ್ವರ ಸನ್ನಿಧಿಯಲ್ಲಿ 20ನೇ ವರ್ಷದ ಸಾಮೂಹಿಕ ಶನಿಪೂಜೆ Read More »

error: Content is protected !!
Scroll to Top