ಧಾರ್ಮಿಕ

ಜ.22:  ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯಿಂದ 108 ರಾಮ ಮಂತ್ರ ಜಪಿಸಿ ಭಜನೆ

ಪುತ್ತೂರು: ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ ನಡೆಯುವ ದಿನದಂದು ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ 108 ರಾಮ ಮಂತ್ರ ಜಪಿಸಿ ಭಜನಾ ಕಾರ್ಯಕ್ರಮ ನಡೆಯಲಿದೆ. ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ವತಿಯಿಂದ ಬೆಳಿಗ್ಗೆ 10.30 ರಿಂದ 11.30 ರ ತನಕ ಭಜನಾ ಕಾರ್ಯಕ್ರಮ ನಡೆಯಲಿದೆ. ರಾಮಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

ಜ.22:  ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯಿಂದ 108 ರಾಮ ಮಂತ್ರ ಜಪಿಸಿ ಭಜನೆ Read More »

ಜ.22 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ | ಪುತ್ತೂರಿನಲ್ಲಿ ನಡೆಯಿತು ಶ್ರೀ ರಾಮಶ್ವ ಯಾತ್ರೆಗೆ ಚಾಲನೆ

ಪುತ್ತೂರು: ಜ.22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶ್ರೀ ರಾಮನ ದಿಗ್ವಿಜಯದ ಸಂಕೇತವಾಗಿ ಶ್ರೀ ರಾಮಶ್ವ ಯಾತ್ರೆಗೆ ಶುಕ್ರವಾರ ದೇವಸ್ಥಾನದ ರಥಬೀದಿಯಲ್ಲಿ ಚಾಲನೆ ನೀಡಲಾಯಿತು. ಪುತ್ತೂರು ಸೀಮೆಗೆ ಸಂಬಂಧಿಸಿ ಮೂರು ದಿನಗಳ ಕಾಲ ಸಂಚರಿಸಲಿರುವ ಈ ಯಾತ್ರೆಯನ್ನು ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಶೇಖರ್ ನಾರಾವಿ, ಬಿ.ಐತ್ತಪ್ಪ

ಜ.22 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ | ಪುತ್ತೂರಿನಲ್ಲಿ ನಡೆಯಿತು ಶ್ರೀ ರಾಮಶ್ವ ಯಾತ್ರೆಗೆ ಚಾಲನೆ Read More »

ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠೆಯನ್ನು ದೀಪಾವಳಿ ರೀತಿ ಆಚರಿಸಿ | ಪತ್ರಿಕಾಗೋಷ್ಠಿಯಲ್ಲಿ ಡಾ.ಕೃಷ್ಣಪ್ರಸನ್ನ ಕರೆ

ಪುತ್ತೂರು: ಜ.22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠೆ ಮಧ್ಯಾಹ್ನ 12.20 ರ ಶುಭ ಮುಹೂರ್ತದಲ್ಲಿ ವಿದ್ಯುಕ್ತವಾಗಿ ನಡೆಯಲಿದ್ದು, ಅಂದು ಪ್ರತೀ ಹಿಂದೂ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ ದೀಪಾವಳಿ ಆಚರಣೆ ರೀತಿಯಲ್ಲಿ ಶ್ರೀರಾಮನನ್ನು ಆರಾಧಿಸುವಂತೆ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ ವಿನಂತಿ ಮಾಡಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಾಣಪ್ರತಿಷ್ಠೆ ದಿನ ಹಿಂದೂ ಬಾಂಧವರು ಕನಿಷ್ಠ ಐದು ದೀಪಗಳನ್ನು ಉತ್ತರಾಭಿಮುಖವಾಗಿ ಬೆಳಗಿಸಿ, ಆರತಿ ಬೆಳಗಿ ಶ್ರೀರಾಮ಻ನನ್ನು ಆರಾಧಿಸಬೇಕು. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ

ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠೆಯನ್ನು ದೀಪಾವಳಿ ರೀತಿ ಆಚರಿಸಿ | ಪತ್ರಿಕಾಗೋಷ್ಠಿಯಲ್ಲಿ ಡಾ.ಕೃಷ್ಣಪ್ರಸನ್ನ ಕರೆ Read More »

ಜ.22: ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಶ್ರೀ ರಾಮ ಪೂಜಾ ಮಹೋತ್ಸವ | ಕರಸೇವಕರಿಗೆ ಗೌರವಾರ್ಪಣೆ

ವೀರಕಂಭ: ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಶ್ರೀರಾಮ ಪೂಜಾ ಮಹೋತ್ಸವ ಜ.22 ರಂದು ಕೆಲಿಂಜ ಶ್ರೀನಿಕೇತನ ಮಂದಿರದಲ್ಲಿ ನಡೆಯಲಿದೆ. ಅಯೋಧ್ಯ ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ನಡೆಯುವ ಪೂಜಾ ಕಾರ್ಯಕ್ರಮವನ್ನು ಪುರೋಹಿತ ಉದಯ ಭಟ್ ನಂದಾವರ ನಡೆಸಿಕೊಡಲಿದ್ದಾರೆ. ಬೆಳಿಗ್ಗೆ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ಸತ್ಯಸುಂದರ ಭಟ್ ಕಲ್ಮಲೆ ದೀಪ ಬೆಳಗಿಸುವರು. ಕೆಲಿಂಜ ಶ್ರೀ ಕೆಲಿಂಜೇಶ್ವರಿ ಭಜನಾ ಮಂಡಳಿ, ವೀರಕಂಭ ಶ್ರೀ ಶಾರದಾ ಭಜನಾ ಮಂಡಳಿ, ಅಜ್ಜಿನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯವರಿಂದ

ಜ.22: ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಶ್ರೀ ರಾಮ ಪೂಜಾ ಮಹೋತ್ಸವ | ಕರಸೇವಕರಿಗೆ ಗೌರವಾರ್ಪಣೆ Read More »

ಭಕ್ತರೊಬ್ಬರಿಂದ ನಿರ್ಮಾಣವಾಯಿತು ಪಾರ್ಲೆ-ಜಿ ಬಿಸ್ಕೆಟ್‍ ನಿಂದ ರಾಮ ಮಂದಿರ ಪ್ರತಿಕೃತಿ | 20 ಕೆ.ಜಿ. ಬಿಸ್ಕೆಟ್ ಬಳಕೆ

20 ಕೆ.ಜಿ.ಪಾರ್ಲೆ-ಜಿ ಬಿಸ್ಕೆಟ್ ಬಳಸಿ ಅಯೋಧ್ಯೆ ರಾಮ ಮಂದಿರದ ಪ್ರತಿಕೃತಿ ನಿರ್ಮಿಸುವ ಮೂಲಕ ವ್ಯಕ್ತಿಯೊಬ್ಬರು ರಾಮಭಕ್ತಿ ತೋರಿಸಿದ್ದಾರೆ. ಪಶ್ಚಿಮ ಬಂಗಾಳದ ದುರ್ಗಾಪುರ ಜಿಲ್ಲೆಯ ಛೋಟಾನ್ ಘೋಷ್ ಎಂಬವರು ಪಾರ್ಲೆ- ಜಿ ಬಿಸ್ಕೆಟ್ ಬಳಸಿ ನಾಲ್ಕು ಅಡಿ ಎತ್ತರದ ರಾಮಮಂದಿರ ಪ್ರತಿಕೃತಿ ರಚಿಸಿದ್ದಾರೆ. ಐದು ದಿನಗಳಲ್ಲಿ ಈ ಕೆಲಸ ಪೂರ್ಣಗೊಳಿಸಿದ್ದು, ನಿರ್ಮಾಣಕ್ಕೆ ಪ್ಲೈವುಡ್, ಅಂಟು ಬಳಸಲಾಗಿದೆ.  ಸ್ನೇಹಿತರು ಸಹಾಯ ಮಾಡಿದ್ದಾರೆ ಎಂದಿದ್ದಾರೆ ಛೋಟಾನ್ ಘೋಷ್

ಭಕ್ತರೊಬ್ಬರಿಂದ ನಿರ್ಮಾಣವಾಯಿತು ಪಾರ್ಲೆ-ಜಿ ಬಿಸ್ಕೆಟ್‍ ನಿಂದ ರಾಮ ಮಂದಿರ ಪ್ರತಿಕೃತಿ | 20 ಕೆ.ಜಿ. ಬಿಸ್ಕೆಟ್ ಬಳಕೆ Read More »

ಜ. 25: ಕೈಂದಾಡಿ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನೇಮೋತ್ಸವ | ಯಶಸ್ಸಿಗಾಗಿ ನಡೆಯಿತು ಪೂರ್ವಭಾವಿ ಸಭೆ

ಪುತ್ತೂರು:: ಶಾಂತಿಗೋಡು ಗ್ರಾಮದ ಕೈಂದಾಡಿ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಜ. 25ರಂದು ನಡೆಯಲಿರುವ ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ದೈವಸ್ಥಾನದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ನೇಮೋತ್ಸವವನ್ನು ಯಶಸ್ವಿಯಾಗಿ ನಡೆಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಕೂಸಪ್ಪ ಗೌಡ ಕಲ್ಕಾರು, ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಸುಬ್ರಹ್ಮಣ್ಯ ಭಟ್ ತೊಳ್ಪಾಡಿ, ಶ್ಯಾಮ್ ಭಟ್ ಕೈಂದಾಡಿ, ಮೋಹನ್ ಗೌಡ ಪಾದೆ, ದೇವಪ್ಪ ಓಲಾಡಿ, ಸೀತಾರಾಮ ಓಲಾಡಿ, ಹೋನಪ್ಪ ಗೌಡ ಕೈಂದಾಡಿ,

ಜ. 25: ಕೈಂದಾಡಿ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನೇಮೋತ್ಸವ | ಯಶಸ್ಸಿಗಾಗಿ ನಡೆಯಿತು ಪೂರ್ವಭಾವಿ ಸಭೆ Read More »

ಅಮರ ಕಾಸ್ಪಾಡಿ ಶ್ರೀ ಇರ್ವೆರ್ ಉಳ್ಳಾಕುಲು ದೈವಗಳಿಗೆ ಬಂಡಿ ಸಮರ್ಪಣೆ

ಪುತ್ತೂರು: ಚಾರ್ವಾಕ ಅಮರ ಕಾಸ್ಪಾಡಿ ಶ್ರೀ ಇರ್ವೆರ್ ಉಳ್ಳಾಕುಲು ದೈವಗಳಿಗೆ 125 ವರ್ಷದ ನಂತರ ಬಂಡಿ ಸಮರ್ಪಣೆಯಾಗಿದೆ. ಮಂಗಳವಾರ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಪ್ರಾರ್ಥನೆ ನೆರವೇರಿಸಿ ಬಂಡಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತಿತರರು ಉಪಸ್ಥಿತರಿದ್ದರು.

ಅಮರ ಕಾಸ್ಪಾಡಿ ಶ್ರೀ ಇರ್ವೆರ್ ಉಳ್ಳಾಕುಲು ದೈವಗಳಿಗೆ ಬಂಡಿ ಸಮರ್ಪಣೆ Read More »

ವಿಟ್ಲ ಜಾತ್ರೋತ್ಸವದಲ್ಲಿ ಸಮರ್ಪಣ್ ವಿಟ್ಲ ಅರ್ಪಿಸುವ ಶಾಂಭವಿ ನಾಟಕ ಪ್ರದರ್ಶನ | ಸಮರ್ಪಣ್ ವಿಟ್ಲದ ಸಾಮಾಜಿಕ ಕಾರ್ಯ ಶ್ಲಾಘನೀಯ: ರಾಜೇಂದ್ರ ಪ್ರಸಾದ್ ಶೆಟ್ಟಿ

ವಿಟ್ಲ: ಇಲ್ಲಿನ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸಮರ್ಪಣ್ ವಿಟ್ಲ ಅರ್ಪಿಸುವ ಶಾಂಭವಿ ತುಳು ಹಾಸ್ಯಮಯ ನಾಟಕದ ಹಿನ್ನೆಲೆಯಲ್ಲಿ ಸಭಾ ಕಾರ್ಯಕ್ರಮ ಜ. 15ರಂದು ರಾತ್ರಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ ಮಾತನಾಡಿ, ಸಾಮಾಜಿಕ ಚಟುವಟಿಕೆಗೆ ಹಿನ್ನಡೆ ಆಗುತ್ತಿರುವ ಇಂದಿನ ಕಾಲದಲ್ಲಿ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಸಮರ್ಪಣ್ ವಿಟ್ಲ ಇದರ ಕಾರ್ಯ ಮೆಚ್ಚುವಂತಹದ್ದು. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿ, ಅವರ ಸೇವೆಯನ್ನು ಗುರುತಿಸಿ

ವಿಟ್ಲ ಜಾತ್ರೋತ್ಸವದಲ್ಲಿ ಸಮರ್ಪಣ್ ವಿಟ್ಲ ಅರ್ಪಿಸುವ ಶಾಂಭವಿ ನಾಟಕ ಪ್ರದರ್ಶನ | ಸಮರ್ಪಣ್ ವಿಟ್ಲದ ಸಾಮಾಜಿಕ ಕಾರ್ಯ ಶ್ಲಾಘನೀಯ: ರಾಜೇಂದ್ರ ಪ್ರಸಾದ್ ಶೆಟ್ಟಿ Read More »

ಜ.22 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ

ಪುತ್ತೂರು: ಜ.22 ರಂದು ಆಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಅಂಗವಾಗಿ ಪುತ್ತೂರು ರಾಮಕ್ಷತ್ರೀಯ ಸಮಾಜ ಬಾಂಧವರಿಂದ ಪುತ್ತೂರು ಕೆಮ್ಮಿಂಜೆಯಲ್ಲಿರುವ ಶ್ರೀರಾಮ ಭಜನಾ ಮಂದಿರದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಈ ಕುರಿತು ಪೂರ್ವಭಾವಿ ಸಭೆ ಸೋಮವಾರ ಕೆಮ್ಮಿಂಜೆ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 10 ಗಂಟೆಗೆ ಶ್ರೀ ರಾಮರಕ್ಷಾಸ್ತ್ರೋತ್ರ ವಿಷ್ಣು ಸಹಸ್ರನಾಮ, 11 ಗಂಟೆಯಿಂದ ಭಜನೆ ಭಜನೆ, ಮಧ್ಯಾಹ್ನ ಮಹಾಪೂಜೆ, ಬಳಿಕ ಅನ್ನಸಂತರ್ಪಣೆ ನಡೆಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ರಾಮಕ್ಷತ್ರೀಯ ಸಂಘದ ಅಧ್ಯಕ್ಷ ಸುರೇಶ್ ಕೆಮ್ಮಿಂಜೆ,

ಜ.22 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ Read More »

ರಾಮನ ಪ್ರತಿಷ್ಠೆಯಂದು ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮ ಪಡಬೇಕು | ಕಥನ ಶ್ರೀರಾಮ ಕಥಾವೈಭವ ಕಾರ್ಯಕ್ರಮ ಉದ್ಘಾಟಿಸಿ ಡಾ.ಕಲ್ಲಡ್ಕ ಪ್ರಭಾಕರ ಭಟ್

ಪುತ್ತೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದ್ದು, ರಾಮ ಪ್ರತಿಷ್ಠೆಯಂದು ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮ ಪಡಬೇಕು. ರಾಮ ಪ್ರತಿಷ್ಠೆಯಿಂದ ಮನುಷ್ಯನ ಜತೆ ಜೀವ ಸಂಕುಲಕ್ಕೂ ಒಳಿತಾಗಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ತೆಂಕಿಲದಲ್ಲಿ ಶ್ರೀರಾಮ ಕಥಾವೈಭವ ಸಾಂಸ್ಕೃತಿಕ ಸಮಿತಿ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವೈಭವದ ಅಯೋಧ್ಯೆಯ ಸಮಗ್ರ ಕಥನ ಶ್ರೀರಾಮ ಕಥಾವೈಭವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬೆಂಗಳೂರು ಎಂ.ಆರ್. ಜಿ. ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ

ರಾಮನ ಪ್ರತಿಷ್ಠೆಯಂದು ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮ ಪಡಬೇಕು | ಕಥನ ಶ್ರೀರಾಮ ಕಥಾವೈಭವ ಕಾರ್ಯಕ್ರಮ ಉದ್ಘಾಟಿಸಿ ಡಾ.ಕಲ್ಲಡ್ಕ ಪ್ರಭಾಕರ ಭಟ್ Read More »

error: Content is protected !!
Scroll to Top