ಧಾರ್ಮಿಕ

ಕೆಮ್ಮಾಯಿ ಶ್ರೀ ವಿಷ್ಣು ಯುವಕ ಮಂಡಲದ 27ನೇ ವಾರ್ಷಿಕೋತ್ಸವ | ಅಶ್ವತ್ಥ ಮಹೋತ್ಸವ

ಪುತ್ತೂರು: ಕೆಮ್ಮಾಯಿ ಶ್ರೀ ವಿಷ್ಣು ಯವಕ ಮಂಡಲದ 27ನೇ ವರ್ಷದ ವಾರ್ಷಿಕೋತ್ಸವ, ಅಶ್ವತ್ಥ ಮಹೋತ್ಸವ ಹಾಗೂ ಶನೈಶ್ಚರ ಗ್ರಹವೃತ ಕಲ್ಪೋಕ್ತ ಪೂಜೆ ಸೋಮವಾರ ಬೆಳಿಗ್ಗೆಯಿಂದ ನಡೆಯುತ್ತಿದೆ. ವೈದಿಕರು ವೈದಿಕ ಕಾರ್ಯಕ್ರಮಗಳೊಂದಿಗೆ ಪೂಜಾ ವಿವಿಧಾನಗಳನ್ನು ನೆರವೇರಿಸಿದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಭಜನಾ ಮಂಡಳಿಗಳಿಂದ ಕುಣಿತ ಭಜನಾ ಕಾರ್ಯಕ್ರಮ ನೆರೆದಿದ್ದವರ ಕಣ್ಮನ ಸೆಳೆದವು.

ಕೆಮ್ಮಾಯಿ ಶ್ರೀ ವಿಷ್ಣು ಯುವಕ ಮಂಡಲದ 27ನೇ ವಾರ್ಷಿಕೋತ್ಸವ | ಅಶ್ವತ್ಥ ಮಹೋತ್ಸವ Read More »

ಆರ್ಲಪದವು ಪೂಮಾಣಿ- ಕಿನ್ನಿಮಾಣಿ-ಪಿಲಿಭೂತ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಸಭೆ

ಪುತ್ತೂರು: ಪಾಣಾಜೆ ಆರ್ಲಪದವು ಪೂಮಾಣಿ- ಕಿನ್ನಿಮಾಣಿ-  ಪಿಲಿಭೂತ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಸಭೆ ಪಾಣಾಜೆ ಶ್ರೀ ರಣಮಂಗಳ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಭಾನುವಾರ ನಡೆಯಿತು. ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ, ಶಾಸಕ ಅಶೋಕ್ ರೈ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಭಕ್ತಾದಿಗಳ ಸಹಕಾರದಿಂದ ಜೀರ್ಣೋದ್ದಾರ ಕಾರ್ಯ ನಡೆಯಲಿದೆ. ಪಾಣಾಜೆ, ಬೆಟ್ಟಂಪಾಡಿ ಮತ್ತು ನಿಡ್ಪಳ್ಳಿ ಗ್ರಾಮಗಳು ನನ್ನ ಗ್ರಾಮಗಳು. ಶಾಸಕನಾಗುವ ಮೊದಲೇ ನಾನು ಈ ಮೂರುಗ್ರಾಮಗಳ ಗ್ರಾಮಸ್ಥರ ಜೊತೆ ಅತಿ ಹತ್ತಿರದ ಸಂಪರ್ಕ ಹೊಂದಿದ್ದೇನೆ. ಯಾವುದೇ ಲೋಪದೋಷಗಳಿಲ್ಲದೆ ಜೀರ್ಣೋದ್ದಾರ

ಆರ್ಲಪದವು ಪೂಮಾಣಿ- ಕಿನ್ನಿಮಾಣಿ-ಪಿಲಿಭೂತ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಸಭೆ Read More »

ಧ್ವಜಾರೋಹಣದ ಮೂಲಕ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಧ್ವಜಾರೋಹಣದ ಮೂಲಕ ಭಾನುವಾರ ಚಾಲನೆ ನೀಡಲಾಯಿತು. ಜ.21 ರ ತನಕ ನಡೆಯುವ ಜಾತ್ರೋತ್ಸವದ ಅಂಗವಾಗಿ ಜ.14 ರಂದು ಬೆಳಿಗ್ಗೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಇಂದು ರಾತ್ರಿ 8.30 ಕ್ಕೆ ಶ್ರೀ ದೇವರಿಗೆ ಲಕ್ಷದೀಪೋತ್ಸವ, ಉತ್ಸವ ಬಲಿ, ಕಟ್ಟೆಪೂಜೆ ಜರಗಲಿದೆ. ಸಂಜೆ 6 ಕ್ಕೆ ಅರಸು ಮುಂಡಲತ್ತಾಯ ದೈವದ ಭಂಡಾರ ಕ್ಷೇತ್ರಕ್ಕೆ ಆಗಮನವಾಗಲಿದೆ. 6.30 ರಿಂದ ಭಜನ್ ಸಂಧ್ಯಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7.30 ರಿಂದ ಚಾ ಪರ್ಕ

ಧ್ವಜಾರೋಹಣದ ಮೂಲಕ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ Read More »

ಮನುಷ್ಯನನ್ನು ದೇವರಾಗಿಸುವ ನೀತಿಯೇ ರಾಮನೀತಿ: ರಾಧಾಕೃಷ್ಣ ಕಲ್ಚಾರ್ | ಶ್ರೀರಾಮೋತ್ಸವ – ಶ್ರೀರಾಮ ಭಾವ ಪೂಜೆಯ ಉದ್ಘಾಟನಾ ಸಮಾರಂಭ

ಪುತ್ತೂರು: ನೈತಿಕತೆ ಬೇರೆ ಅಲ್ಲ, ಶ್ರೀರಾಮ ಬೇರೆ ಅಲ್ಲ. ರಾಮನ ವ್ಯಕ್ತಿತ್ವ ಎಲ್ಲರಿಗಿಂತ ವ್ಯತ್ಯಸ್ತವಾಗಿ, ಜನರಿಗೆ ಆದರ್ಶವಾಗಿ ಕಾಣಿಸಿಕೊಳ್ಳುತ್ತದೆ ಎಂದು ಯಕ್ಷಗಾನ ಅರ್ಥಧಾರಿ, ಪ್ರಾಧ್ಯಾಪಕ ರಾಧಾಕೃಷ್ಣ ಕಲ್ಚಾರ್ ಹೇಳಿದರು. ಅವರು ಶನಿವಾರ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ನಡೆದ ಶ್ರೀರಾಮೋತ್ಸವ – ಶ್ರೀರಾಮಭಾವ ಪೂಜೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ವೈಚಾರಿಕತೆ ಎಂದರೆ ಸರಿಯಾಗಿ ಅಧ್ಯಯನ ಮಾಡಿ,

ಮನುಷ್ಯನನ್ನು ದೇವರಾಗಿಸುವ ನೀತಿಯೇ ರಾಮನೀತಿ: ರಾಧಾಕೃಷ್ಣ ಕಲ್ಚಾರ್ | ಶ್ರೀರಾಮೋತ್ಸವ – ಶ್ರೀರಾಮ ಭಾವ ಪೂಜೆಯ ಉದ್ಘಾಟನಾ ಸಮಾರಂಭ Read More »

ಜ.16: ಕಾರ್ಪಾಡಿ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ: ಪೂರ್ವಭಾವಿ ಸಭೆ

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಕಿರುಷಷ್ಠಿ ಉತ್ಸವದ ಕುರಿತು ಪೂರ್ವಭಾವಿ ಸಭೆ ನಡೆಯಿತು. ದೇವಸ್ಥಾನದ ಆಡಳಿತಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವರ್ಷಾವಧಿ ಜಾತ್ರೋತ್ಸವದ ದಿನದಂದು ವಿಶೇಷ ಪೂಜೆ, ಅನ್ನಸಂತರ್ಪಣೆ ನಡೆಸುವುದೆಂದು ತೀರ್ಮಾನಿಸಲಾಯಿತು. ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಪ್ರತೀ ವರ್ಷ ಕಿರುಷಷ್ಠಿಗೆ ಜಾತ್ರೋತ್ಸವ ನಡೆಯುವ ಪದ್ದತಿ. ಈ ವರ್ಷ ದೇವರನ್ನು ಬಾಲಾಲಯದಲ್ಲಿ ಪ್ರತಿಷ್ಟಾಪಿಸಲಾಗಿದೆ. ಜೀರ್ಣೋದ್ಧಾರ ಕಾರ್ಯ ನಡೆಯುತ್ತಿರುವುದರಿಂದ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನವ ಕಲಶ, ಗಣಹೋಮ ನಡೆಸಿ ಭಕ್ತಾಧಿಗಳಿಗೆ ಮಧ್ಯಾಹ್ನ ಅನ್ನಸಂತರ್ಪಣೆ ಮಾಡುವ ಬಗ್ಗೆ

ಜ.16: ಕಾರ್ಪಾಡಿ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ: ಪೂರ್ವಭಾವಿ ಸಭೆ Read More »

ಜ. 25ರಿಂದ ಅಯೋಧ್ಯೆಗೆ ದೇಶದ 430 ಕಡೆಯಿಂದ 35 ರೈಲು ಸಂಚಾರ!

ನವದೆಹಲಿ: ದೇಶದ 430 ಕಡೆಯಿಂದ ಆಯೋಧ್ಯೆಗೆ ರೈಲು ಸೇವೆ ನೀಡಲು ನಿರ್ಧರಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಜನವರಿ 25 ರಿಂದ 60 ದಿನಗಳ ಕಾಲ ವಿಶೇಷ ಹಾಗೂ ಹೆಚ್ಚುವರಿ ರೈಲುಗಳು ಆಯೋಧ್ಯೆಯತ್ತ ಸಂಚರಿಸಲಿವೆ. ಪ್ರತಿ ದಿನ 35 ರೈಲುಗಳು ಆಯೋಧ್ಯೆ ತೆರಳುವ ಭಕ್ತರಿಗೆ ಸೇವೆ ನೀಡಲಿವೆ ಎಂದು ಬಿಜೆಪಿ ಸಭೆಯಲ್ಲಿ ಹೇಳಿದರು. ಈ‌ ಮೂಲಕ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಶ್ರೀರಾಮ ಮಂದಿರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಿದೆ. ದೇಶಾದ್ಯಂತ ದೀಪಾವಳಿ ಸಡಗರ ಮನೆ

ಜ. 25ರಿಂದ ಅಯೋಧ್ಯೆಗೆ ದೇಶದ 430 ಕಡೆಯಿಂದ 35 ರೈಲು ಸಂಚಾರ! Read More »

ಶ್ರೀ ದೇವಿ ಮಹಾತ್ಮೆ ಇನ್ನು ಪೂರ್ಣ ರಾತ್ರಿ ಪ್ರದರ್ಶನ | ಕಟೀಲು ಮೇಳಕ್ಕೆ ಹೈಕೋರ್ಟ್ ಅನುಮತಿ!

ಕಾಲಮಿತಿಯಲ್ಲಿ ನಡೆಯುತ್ತಿದ್ದ ಕಟೀಲು ಮೇಳದ ಯಕ್ಷಗಾನ ಇನ್ನು ಪೂರ್ಣರಾತ್ರಿ ನಡೆಯಲಿದೆ. ಹಳೆ ಪದ್ಧತಿಯಂತೆ ರಾತ್ರಿಯಿಡೀ ಯಕ್ಷಗಾನ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಯಕ್ಷಗಾನ ಪ್ರಿಯರ ಸಂತಸಕ್ಕೆ ಕಾರಣವಾಗಿದೆ. ಜ. 14ರಿಂದ ಮತ್ತೆ ಹಿಂದಿನಂತೆ ಪೂರ್ಣರಾತ್ರಿ ಪ್ರದರ್ಶನ ನೀಡಲು ಕಟೀಲಿನ 6 ಮೇಳಗಳು ಸಿದ್ಧವಾಗಿವೆ. ಶಬ್ದಮಾಲಿನ್ಯ ಮಿತಿಯ ನಿಯಮದಿಂದಾಗಿ ಕಳೆದ ವರ್ಷದಿಂದ ಕಾಲಮಿತಿಗೆ ಒಳಪಟ್ಟಿದ್ದ ಕಟೀಲು ಮೇಳ ಈ ಬಾರಿಯೂ ಸುಮಾರು ಒಂದೂವರೆ ತಿಂಗಳ ಕಾಲ ಕಾಲಮಿತಿಯಲ್ಲಿ ಪ್ರದರ್ಶನ ನೀಡಿದೆ. ಹೈಕೋರ್ಟ್‌ ಆದೇಶ ಮತ್ತು ಶ್ರೀ ಕ್ಷೇತ್ರದ ಭಕ್ತರ

ಶ್ರೀ ದೇವಿ ಮಹಾತ್ಮೆ ಇನ್ನು ಪೂರ್ಣ ರಾತ್ರಿ ಪ್ರದರ್ಶನ | ಕಟೀಲು ಮೇಳಕ್ಕೆ ಹೈಕೋರ್ಟ್ ಅನುಮತಿ! Read More »

ರಾಮಮಂದಿರ ಉದ್ಘಾಟನೆಯಂದು ಮೌನ ವ್ರತ ಮುರಿಯಲಿದ್ದಾರೆ ಮೌನಿ ಮಾತಾ!!

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ ಮೌನ ಮುರಿಯುತ್ತೇನೆ ಎಂದು ಶಪಥಗೈದಿದ್ದ ಮಹಿಳೆಯೊಬ್ಬರು ಬರೋಬ್ಬರಿ 30 ವರ್ಷದ ನಂತರ ಮಾತನಾಡಲಿದ್ದಾರೆ. ಜಾರ್ಖಂಡ್ನ 85 ವರ್ಷದ ಸರಸ್ವತಿ ದೇವಿ 1992ರ ಡಿ. 6ರಂದು ಜನ್ಮಸ್ಥಾನದಲ್ಲಿ ದಾಳಿಕೋರರು ನಿರ್ಮಿಸಿದ್ದ ಕಟ್ಟಡ ಕರಸೇವಕರಿಂದ ನೆಲಸಮವಾಗಿದ್ದು, ಅಂದು ಸರಸ್ವತಿ ದೇವಿ ಮೌನವ್ರತ ಕೈಗೊಂಡಿದ್ದರು. ಜ.22 ರಂದು ಸರಸ್ವತಿ ದೇವಿ ಅಗರ್ವಾಲ್ ತಮ್ಮ ಕನಸು ನನಸಾಗುತ್ತಿರುವುದರಿಂದ ಅಂದಿನಿಂದ ಮತ್ತೆ ಮಾತನಾಡಲು ತೀರ್ಮಾನಿಸಿದ್ದಾರೆ. 30 ವರ್ಷದ ಅವರ ಮೌನ ದೀಕ್ಷೆ ಕೊನೆಗೊಳ್ಳುವ ಕಾಲ ರಾಮಮಂದಿರ ನಿರ್ಮಾಣದೊಂದಿಗೆ ಸನ್ನಿಹಿತವಾಗಿದೆ.

ರಾಮಮಂದಿರ ಉದ್ಘಾಟನೆಯಂದು ಮೌನ ವ್ರತ ಮುರಿಯಲಿದ್ದಾರೆ ಮೌನಿ ಮಾತಾ!! Read More »

ಧಾರ್ಮಿಕ ಕಾರ್ಯಕ್ರಮ ಸಮಾಜಕ್ಕೆ ಶಕ್ತಿ: ಪುತ್ತಿಲ

ಕಾವು: ಇಲ್ಲಿನ ಪುತ್ತಿಲ ಪರಿವಾರದ ವತಿಯಿಂದ ಕಾವು ಶ್ರೀ ಪಂಚಲಿಂಗೇಶ್ವರ ದೇವರಿಗೆ ಸೋಮವಾರ ಪೂಜೆ ನೆರವೇರಿಸಲಾಯಿತು. ನೇತೃತ್ವ ವಹಿಸಿದ್ದ ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಗೌರವ ಸ್ವೀಕರಿಸಿ ಮಾತನಾಡಿ, ನಾವು ಒಗ್ಗಟ್ಟಿನಿಂದ ನಡೆಸುವ ಧಾರ್ಮಿಕ ಕಾರ್ಯಕ್ರಮಗಳು  ಹಿಂದೂ ಸಮಾಜಕ್ಕೆ ಶಕ್ತಿಯನ್ನು ತುಂಬುತ್ತವೆ. ನಿರಂತರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಹಿಂದುಗಳಲ್ಲಿ ಜಾಗೃತಿಯೂ ಮೂಡುತ್ತದೆ. ಎಲ್ಲರೂ ಒಟ್ಟಾಗಿ ಮುನ್ನಡೆಯೋಣ ಎಂದರು. ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರದ ಕೇಂದ್ರ ಕಚೇರಿ ಅಧ್ಯಕ್ಷರು, ಪದಾಧಿಕಾರಿಗಳು, ಕಾವು ಘಟಕದ ಪದಾಧಿಕಾರಿಗಳು, ಸದಸ್ಯರು ಮೊದಲಾದವರು

ಧಾರ್ಮಿಕ ಕಾರ್ಯಕ್ರಮ ಸಮಾಜಕ್ಕೆ ಶಕ್ತಿ: ಪುತ್ತಿಲ Read More »

ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ಪೂಜೆ

ಪುತ್ತೂರು: ನಗರದ ಪರ್ಲಡ್ಕದ ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ಪೂಜೆ ಹಾಗೂ ದೈವಗಳ ನೇಮೋತ್ಸವ ಶನಿವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಕೆಮ್ಮಿಂಜೆ ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿಯವರ ನೇತೃತ್ವದಲ್ಲಿ ಬೆಳಗ್ಗೆಯಿಂದ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಪಂಚಾಮೃತ ಅಭಿಷೇಕ, ಶ್ರೀ ದೈವಗಳ ಕಲಶ ತಂಬಿಲ ಸೇವೆ, ಸಾಮೂಹಿಕ ಆಶ್ಲೇಷಬಲಿ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆದು ಬಳಿಕ ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ಪಾಂಗಳಾಯಿ ಶ್ರೀ ಅರಸು

ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ಪೂಜೆ Read More »

error: Content is protected !!
Scroll to Top