ಧಾರ್ಮಿಕ

ಉಪ್ಪಿನಂಗಡಿ ದೇವಳಗಳಲ್ಲಿ ಭಜನೆ, ವಿಶೇಷ ಪೂಜಾ ಸೇವೆ

ಪುತ್ತೂರು: ಅಯೋಧ್ಯಾ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ, ಲಕ್ಷ್ಮಿ ವೆಂಕಟರಮಣ ದೇವಾಲಯ ಸೇರಿದಂತೆ ಪರಿಸರದ ಬಹುತೇಕ ಎಲ್ಲಾ ದೇವಾಲಯಗಳಲ್ಲಿ ಭಜನಾ ಸೇವೆ ಮತ್ತು ವಿಶೇಷ ಪೂಜಾ ಸೇವೆಗಳು ನಡೆದವು. ಉಪ್ಪಿನಂಗಡಿ ಸಹಸ್ರಲಿಂಗೇಶ್ಚರ ದೇವಾಲಯದಲ್ಲಿ ಸ್ಥಳೀಯ ಸಹಸ್ರಲಿಂಗೇಶ್ವರ ಹಾಗೂ ಶಾರದಾ ವನಿತಾ ಭಜನಾ ಮಂಡಳಿಯ ನೇತೃತ್ವದಲ್ಲಿ ವಿವಿಧ ಭಜನಾ ತಂಡಗಳಿಂದ ದಿನವಿಡೀ ಭಜನಾ ಸೇವೆ ನಡೆಯಿತು. ಮುದ್ಯ ಪಂಚಲಿಂಗೇಶ್ವರ ದೇವಾಲಯ, ಪದಾಳ ಸುಬ್ರಹ್ಮಣ್ಯ ದೇವಾಲಯ, ಪೆರಿಯಡ್ಕ ದುರ್ಗಾಪರಮೆಶ್ವರಿ ಭಜನಾ ಮಂದಿರ, ನೆಕ್ಕಿಲಾಡಿಯ ರಾಮ ಭಜನಾ ಮಂದಿರ […]

ಉಪ್ಪಿನಂಗಡಿ ದೇವಳಗಳಲ್ಲಿ ಭಜನೆ, ವಿಶೇಷ ಪೂಜಾ ಸೇವೆ Read More »

ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆ ವಿಶ್ವಕ್ಕೆ ಶಾಂತಿ ನೆಮ್ಮದಿ ಕರುಣಿಸಲಿ: ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವರಿಗೆ ಪುಷ್ಪ ಸಮರ್ಪಿಸಿ ಶಾಸಕ ಅಶೋಕ್ ರೈ

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕೋಡಿಂಬಾಡಿ ಗ್ರಾಮಸ್ಥರ ಹಾಗೂ ಪುತ್ತೂರಿನ ಸಮಸ್ತ ನಾಗರಿಕರ ಪರವಾಗಿ ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಮಠಂತಬೆಟ್ಟು‌ಶ್ರೀ ಮಹಿಷ‌ಮರ್ಧಿನಿ ದೇವಿಗೆ ಪುಷ್ಪ ಸಮರ್ಪಿಸಿದರು. ಬಳಿಕ ಮಾತನಾಡಿದ ಶಾಸಕರು, ದೇಶದಲ್ಲಿ ಎಲ್ಲಾ ಧರ್ಮಿಯರು ಪರಸ್ಪರ ಸಹೋದರತೆಯಿಂದ ಬಾಳ್ವೆ ನಡೆಸುವ ಮೂಲಕ ದೇಶ ,ಜಗತ್ತಿನಲ್ಲಿ‌ ಶಾಂತಿ ನೆಲಸುವಂತಾಗಲಿ ಎಂದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿರಂಜನ್ ರೈ ರೈ ಮಠಂತಬೆಟ್ಡು, ಮುರಳೀಧರ್ ರೈ ಮಠಂತಬೆಟ್ಟು, ಯೋಗೀಶ್

ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆ ವಿಶ್ವಕ್ಕೆ ಶಾಂತಿ ನೆಮ್ಮದಿ ಕರುಣಿಸಲಿ: ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವರಿಗೆ ಪುಷ್ಪ ಸಮರ್ಪಿಸಿ ಶಾಸಕ ಅಶೋಕ್ ರೈ Read More »

ಶ್ರೀ ರಾಮನ ಪ್ರಾಣಪ್ರತಿಷ್ಠೆ ಕಣ್ತುಂಬಿಕೊಂಡಿರುವುದು ನಮ್ಮ ಬಾಳಿನ ಸೌಭಾಗ್ಯ | ಕೆಲಿಂಜ ಶ್ರೀನಿಕೇತನದಲ್ಲಿ ನಡೆದ ಶ್ರೀರಾಮ ಪೂಜಾ ಮಹೋತ್ಸವದಲ್ಲಿ ಜಯಶ್ಯಾಮ್ ನೀರ್ಕಜೆ

ಕೆಲಿಂಜ: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ನಡೆದ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ ಅಂಗವಾಗಿ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ವತಿಯಿಂದ ಶ್ರೀರಾಮ ಪೂಜಾ ಮಹೋತ್ಸವ ಸೋಮವಾರ ಕೆಲಿಂಜ ಶ್ರೀನಿಕೇತನದಲ್ಲಿ ನಡೆಯಿತು. ಆರ್‍.ಎಸ್‍.ಎಸ್‍.ನ ಹಿರಿಯರಾದ, ಸಾಮಾಜಿಕ ಕಾರ್ಯಕರ್ತ ಜಯಶ್ಯಾಮ್ ನೀರ್ಕಜೆ ಧಾರ್ಮಿಕ ಉಪನ್ಯಾಸ ನೀಡಿ, ಬಾಲರಾಮನ ಪ್ರತಿಷ್ಠೆ ಆಗಿದೆ. ಈ ಸಂದರ್ಭದಲ್ಲಿ ಜೀವಂತ ಇದ್ದು ರಾಮಪ್ರತಿಷ್ಠೆಯನ್ನು ಕಣ್ತುಂಬಿಕೊಂಡಿರುವುದು ನಮ್ಮ ಬಾಳಿನ ಸೌಭಾಗ್ಯ. 1992 ರಲ್ಲಿ ನಡೆದ ಬೃಹತ್ ಜನಾಂದೋಲನದಿಂದ ಬಾಬರಿ ಮಸೀದಿ ತೆಗೆದು ಸುಂದರ ಭವ್ಯ ರಾಮ ಮಂದಿರ ನಿರ್ಮಾಣಗೊಂಡಿದೆ.

ಶ್ರೀ ರಾಮನ ಪ್ರಾಣಪ್ರತಿಷ್ಠೆ ಕಣ್ತುಂಬಿಕೊಂಡಿರುವುದು ನಮ್ಮ ಬಾಳಿನ ಸೌಭಾಗ್ಯ | ಕೆಲಿಂಜ ಶ್ರೀನಿಕೇತನದಲ್ಲಿ ನಡೆದ ಶ್ರೀರಾಮ ಪೂಜಾ ಮಹೋತ್ಸವದಲ್ಲಿ ಜಯಶ್ಯಾಮ್ ನೀರ್ಕಜೆ Read More »

ಮುಗೇರು ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ | ನೇರ ಪ್ರಸಾರದ ಮೂಲಕ ಶ್ರೀರಾಮನ ಪ್ರಾಣಪ್ರತಿಷ್ಠೆ ವೀಕ್ಷಿಸಿದ ರಾಮಭಕ್ತರು

ಪುತ್ತೂರು: ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆ, ಶ್ರೀರಾಮ ದೇವರ ಪ್ರತಿಮೆ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಮುಗೇರು ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ.22 ರಂದು ಶ್ರೀ ರಾಮೋತ್ಸವ ನಡೆಯಿತು. ಬೆಳಿಗ್ಗೆ 6.00 ರಿಂದ  ಶ್ರೀರಾಮ ಜ್ಯೋತಿ ಪ್ರಜ್ವಲನೆ, ಭಜನೆ, ಸತ್ಸಂಗ ರಾಮ ನಾಮದ ಮಹತ್ವ,   ಇನ್ನಿತರ ಧಾರ್ಮಿಕ, ವೈಧಿಕ ಕಾರ್ಯಕ್ರಮಗಳು ಜರಗಿತು. ಕಾರ್ಯಕ್ರಮದಲ್ಲಿ ನೆರೆದಿದ್ದ ರಾಮ ಭಕ್ತರು ನೇರ ಪ್ರಸಾರದ ಮೂಲಕ ಅಯೋಧ್ಯೆ ಕಾರ್ಯಕ್ರಮವನ್ನು ವೀಕ್ಷಿಸಿದರು.  ಮಧ್ಯಾಹ್ನ ದೇವರ ಪ್ರಸಾದ ರೂಪದ ಅನ್ನಸಂತರ್ಪಣೆ ನಡೆಯಿತು.

ಮುಗೇರು ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ | ನೇರ ಪ್ರಸಾರದ ಮೂಲಕ ಶ್ರೀರಾಮನ ಪ್ರಾಣಪ್ರತಿಷ್ಠೆ ವೀಕ್ಷಿಸಿದ ರಾಮಭಕ್ತರು Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 108 ರಾಮ ಮಂತ್ರ ಜಪಿಸಿ ರಾಮಸ್ತೋತ್ರ ಪಠಣ

ಬರೆಪ್ಪಾಡಿ : ಅಯೋಧ್ಯೆ ಶ್ರೀ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ ಅಂಗವಾಗಿ ಶ್ರೀ ಕ್ಷೇತ್ರ ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 108 ರಾಮ ಮಂತ್ರ ಜಪಿಸಿ ರಾಮಸ್ತ್ರೋತ್ರ ನೆರವೇರಿಸಲಾಯಿತು. ರಾಮ ಭಕ್ತರು ಶ್ರೀರಾಮ ಫೋಟೊ ಇರುವ ಭಗವಾಧ್ವಜ ದೇವಸ್ಥಾನದ ವಠಾರದಲ್ಲಿ ಹಾಕಿ, ಶ್ರೀರಾಮನ ಫೋಟೊ ಇಟ್ಟು ಸಂಭ್ರಮದಿಂದ ಆಚರಿಸಿದರು, ನೂರಾರು ರಾಮಭಕ್ತರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 108 ರಾಮ ಮಂತ್ರ ಜಪಿಸಿ ರಾಮಸ್ತೋತ್ರ ಪಠಣ Read More »

ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದಲ್ಲಿ ವಿಶೇಷ ಪೂಜೆ | ಎಲ್‍ ಇಡಿ ಪರದೆ ಮೂಲಕ ಶ್ರೀರಾಮನ ಪ್ರಾಣಪ್ರತಿಷ್ಠೆಯ ವೀಕ್ಷಣೆ

ಪುತ್ತೂರು: ಕಲ್ಲಾರೆ ಶ್ರೀಗುರು ರಾಘವೇಂದ್ರ ಮಠದಲ್ಲಿ ಶ್ರೀ ರಾಮಲಲ್ಲಾನ ಪ್ರತಿಷ್ಠಾಪನೆಯ ಸಂಭ್ರಮವನ್ನು ಶ್ರೀ ಗುರುಗಳ ವಿಶೇಷ ಪೂಜೆಯೊಂದಿಗೆ ನೆರವೇರಿಸಲಾಯಿತು. ಶ್ರೀ ಗುರುರಾಘವೇಂದ್ರ ಮಠದ ಆವರಣದಲ್ಲಿ ಎಲ್‍ ಇಡಿ ಸ್ಕ್ರೀನ್ ಅಳವಡಿಸಿ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯನ್ನು ನೇರ ಪ್ರಸಾರದ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭಲದಲ್ಲಿ ಸುಮಾರು 500 ಕ್ಕೂ ಮಿಕ್ಕಿ ಭಕ್ತಾದಿಗಳು ಪಾಲ್ಗೊಂಡಿದ್ದರು. ಬಳಿಕ ವಿಶೇಷ ಪೂಜೆ ನಡೆದ ಬಳಿಕ ಅನ್ನಸಂತರ್ಪಣೆ ನಡೆಯಿತು.

ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದಲ್ಲಿ ವಿಶೇಷ ಪೂಜೆ | ಎಲ್‍ ಇಡಿ ಪರದೆ ಮೂಲಕ ಶ್ರೀರಾಮನ ಪ್ರಾಣಪ್ರತಿಷ್ಠೆಯ ವೀಕ್ಷಣೆ Read More »

ಪುತ್ತಿಲ ಪರಿವಾರ ಕಚೇರಿಯಲ್ಲಿ ಶ್ರೀರಾಮ ದೇವರಿಗೆ ಪುಷ್ಪಾರ್ಚನೆ

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ ಆಗುತ್ತಿದ್ದಂತೆ ಪುತ್ತಿಲ ಪರಿವಾರ ಕಚೇರಿಯಲ್ಲಿ ಪ್ರಭು ಶ್ರೀರಾಮದೇವರಿಗೆ ಪುಷ್ಪಾರ್ಚನೆ ನೆರವೇರಿಸಿ ಪ್ರಾರ್ಥನೆ ನೆರವೇರಿತು. ಹಿಂದೂಗಳು ಶತಶತಮಾನಗಳಿಂದ ಕಾತರದಿಂದ ಕಾಯುತ್ತಿದ್ದ ಅಯೋಧ್ಯೆಯ ಪ್ರಭು ಶ್ರೀರಾಮಮಂದಿರ ಶುಭಮುಹೂರ್ತದಲ್ಲಿ ಲೋಕಾರ್ಪಣೆಗೊಂಡು ಶ್ರೀ ರಾಮಲಲ್ಲಾನ ಪ್ರಾಣಪ್ರತಿಷ್ಠೆಯೂ ನೆರವೇರಿತು. ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತಾ, ಕಾರ್ಯದರ್ಶಿ  ಉಮೇಶ್ ಕೋಡಿಬೈಲು, ನಗರ ಅಧ್ಯಕ್ಷ ಅನಿಲ್ ತೆಂಕಿಲ ಪ್ರಮುಖರಾದ ರವಿ ರೈ ಕೆದಂಬಾಡಿ ಮಠ, ಭೀಮಯ್ಯ ಭಟ್ ಸಂಪ್ಯ, ಪ್ರವೀಣ್ ಭಂಡಾರಿ,  ರಾಜ್ ಶೆಟ್ಟಿ

ಪುತ್ತಿಲ ಪರಿವಾರ ಕಚೇರಿಯಲ್ಲಿ ಶ್ರೀರಾಮ ದೇವರಿಗೆ ಪುಷ್ಪಾರ್ಚನೆ Read More »

ಶ್ರೀರಾಮ ಪ್ರಾಣ ಪ್ರತಿಷ್ಠೆ | ಅನ್ಯಾಡಿ, ಕೆಡೆಂಜಿ ಯುವಕರಿಂದ ರಾಮಭಕ್ತರಿಗೆ ತಂಪು ಪಾನೀಯ ವಿತರಣೆ

ಸವಣೂರು: ಎಲ್ಲೆಡೆ ಇಂದು ಶ್ರೀರಾಮ ಪ್ರಾಣಪ್ರತಿಷ್ಠೆಯನ್ನು ಸಂಭ್ರಮದಿಂದ ವಿವಿಧ ರೀತಿಯಲ್ಲಿ ಆಚರಣೆ ಮಾಡುತ್ತಿದ್ದು, ಅನ್ಯಾಡಿ ಮತ್ತು ಕೆಡೆಂಜಿ ಯುವಕರಿಂದ ಹತ್ತನೇಕಲ್ಲಿನಲ್ಲಿ ತಂಪು ಪಾನೀಯ ವಿತರಿಸಲಾಯಿತು. ಅಯೋಧ್ಯೆ ಶ್ರೀರಾಮ ಪ್ರತಿಷ್ಠಾಪನೆ ಪ್ರಯುಕ್ತ ರಾಮಭಕ್ತರಿಗೆ, ಸಾರ್ವಜನಿಕರಿಗೆ ತಂಪು ಪಾನೀಯ ವಿತರಿಸಲಾಯಿತು. ಹಲವಾರು ರಾಮಭಕ್ತರು, ಸಾರ್ವಜನಿಕರು ತಂಪು ಪಾನೀಯ ಸ್ವೀಕರಿಸಿದರು.

ಶ್ರೀರಾಮ ಪ್ರಾಣ ಪ್ರತಿಷ್ಠೆ | ಅನ್ಯಾಡಿ, ಕೆಡೆಂಜಿ ಯುವಕರಿಂದ ರಾಮಭಕ್ತರಿಗೆ ತಂಪು ಪಾನೀಯ ವಿತರಣೆ Read More »

ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರಾಣಪ್ರತಿಷ್ಠಾ ವಿಧಿವಿಧಾನಗಳಿಗೆ ಚಾಲನೆ

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆಯ ವಿಧಿವಿಧಾನಗಳು ಆರಂಭವಾಗಿದ್ದು, ಈ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಇಂದು ಮುಂಜಾನೆ ಪ್ರಾಣಪ್ರತಿಷ್ಠೆಗೆ  ವಿಧಿವಿಧಾನ ಆರಂಭವಾಗಿದ್ದು, 114 ಕಲಶಗಳಿಂದ ವಿವಿಧ ಔಷಧೀಯ ನೀರಿನಿಂದ ವಿಗ್ರಹ ಸ್ನಾನ ನಡೆಸಲಾಯಿತು. ಕಲಶ ನೀರಿನಿಂದ ಮೂರ್ತಿಗಳ ಪುಣ್ಯ ಸ್ನಾನದ ಬಳಿ ಪ್ರತಿಷ್ಠಾಪಿಸಲಿರುವ ದೇವತೆಗಳಿಗೆ ನಿತ್ಯ ಪೂಜೆ, ಹವನ, ಪಾರಾಯಣ ನಡೆದಿದೆ. ಪ್ರಾತಃಕಾಲ ಮಾಧ್ವಾಧೀನಗಳು, ಮಹಾಪೂಜೆ, ಉತ್ಸವ ಮೂರ್ತಿ ಪ್ರಸಾದ ಪರಿಕ್ರಮ, ತತ್ತ್ವನ್ಯಾಯ, ಮಹನ್ಯಾಸ, ಅದಿನ್ಯಾಸ, ಅಘೋರ ಹೋಮ, ವ್ಯಾಹೃತಿ ಹೋಮ, ಜಾಗರಣ, ಸಂಜೆಪೂಜೆ ಹಾಗೂ

ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರಾಣಪ್ರತಿಷ್ಠಾ ವಿಧಿವಿಧಾನಗಳಿಗೆ ಚಾಲನೆ Read More »

ನಾಳೆ ಆಯೋಧ್ಯೆಯಲ್ಲಿ ಶ್ರೀ ರಾಮ ಪ್ರಾಣಪ್ರತಿಷ್ಠೆ | ಜೀವನದಿ ನೇತ್ರಾವತಿ ನದಿ ಮಧ್ಯೆ ನಡೆಯಿತು ಶ್ರೀ ಸತ್ಯನಾರಾಯಣ ಪೂಜೆ

ಬಂಟ್ವಾಳ: ಜ.22 ರಂದು ಅಯೋಧ್ಯೆ ರಾಮಂದಿರದಲ್ಲಿ ಶ್ರೀರಾಮ ಪ್ರಾಣಪ್ರತಿಷ್ಠೆ ಅಂಗವಾಗಿ ಮುನ್ನಾ ದಿನ ಭಾನುವಾರ ಜೀವನದಿ ನೇತ್ರಾವತಿ ನದಿ ಮಧ್ಯೆ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಮಾಜಿ ಪುರಸಭೆ ಸದಸ್ಯ, ರಾಮಭಕ್ತ ಎ.ಗೊವಿಂದ ಪ್ರಭು ಎಂಬವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಜಿಲ್ಲೆಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಬಳಿಯ ನೇತ್ರಾವತಿ ನದಿ ನದಿ ಮಧ್ಯೆ ಭಾನುವಾರ ರಾತ್ರಿ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಪುರಸಭೆಯ ಹಿರಿಯ ಸದಸ್ಯ

ನಾಳೆ ಆಯೋಧ್ಯೆಯಲ್ಲಿ ಶ್ರೀ ರಾಮ ಪ್ರಾಣಪ್ರತಿಷ್ಠೆ | ಜೀವನದಿ ನೇತ್ರಾವತಿ ನದಿ ಮಧ್ಯೆ ನಡೆಯಿತು ಶ್ರೀ ಸತ್ಯನಾರಾಯಣ ಪೂಜೆ Read More »

error: Content is protected !!
Scroll to Top