ಧಾರ್ಮಿಕ

ಕರ್ವೆಲ್ ಶ್ರೀರಾಮ‌ ಭಜನಾ ಮಂದಿರದ 28 ನೇ ವಾರ್ಷಿಕೋತ್ಸವ, ಕುಣಿತ ಭಜನಾ ಸಂಭ್ರಮ

ಪುತ್ತೂರು: ದೇವರ ಪ್ರೀತಿಯನ್ನು ಗಳಿಸುವುದೇ ಭಜನೆಯ ಮೂಲ ಉದ್ದೇಶ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಕರ್ವೆಲು ಶ್ರೀರಾಮ‌ ಭಜನಾ ಮಂದಿರದ ವಾರ್ಷಿಕೋತ್ಸವ ಹಾಗೂ ಕುಣಿತ ಭಜನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭಜನೆ ಭಕ್ತರನ್ನು ಒಗ್ಗೂಡಿಸುತ್ತದೆ,.ಮಕ್ಕಳಲ್ಲಿ ಭಜನೆಯ ಅಭಿರುಚಿ ಮೂಡಿಸುವ ಕೆಲಸ ‌ಮಾಡಬೇಕು. ಭಜನೆಯ ಜೊತೆ ಸಂಸ್ಕ್ರತಿ, ಸಂಸ್ಕಾರವನ್ನು‌ ಕಲಿಸುವ ಕೆಲಸವನ್ನು ಪೋಷಕರು ಮಾಡಬೇಕು. ಮಕ್ಕಳು ಉತ್ತಮ ಪ್ರಜೆಗಳಾದರೆ ದೇಶ ವಿಶ್ವಗುರುವಾಗಲು ಸಾಧ್ಯವಾಗುತ್ತದೆ ಎಂದರು. ವೇದಿಕೆಯಲ್ಲಿ ಭಜನಾ ಮಂದಿರದ ಗೌರವಾಧ್ಯಕ್ಷರಾದ ತೋಹಿಜಾಕ್ಷ ಶೆಟ್ಟಿ, ಧನ್ಯಕುಮಾರ್ […]

ಕರ್ವೆಲ್ ಶ್ರೀರಾಮ‌ ಭಜನಾ ಮಂದಿರದ 28 ನೇ ವಾರ್ಷಿಕೋತ್ಸವ, ಕುಣಿತ ಭಜನಾ ಸಂಭ್ರಮ Read More »

ಜ. 22: ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

ಪುತ್ತೂರು: ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆ, ಶ್ರೀರಾಮ ದೇವರ ಪ್ರತಿಮೆ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ. 22ರಂದು ಶ್ರೀ ರಾಮೋತ್ಸವ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 6ರಿಂದ ಶ್ರೀರಾಮ ಜ್ಯೋತಿ ಪ್ರಜ್ವಲನೆ, ಭಜನೆ, ಸತ್ಸಂಗ ರಾಮ ನಾಮದ ಮಹತ್ವ, ಅಯೋಧ್ಯೆ ಕಾರ್ಯಕ್ರಮದ ನೇರ ಪ್ರಸಾರ, ಇನ್ನಿತರ ಧಾರ್ಮಿಕ, ವೈಧಿಕ ಕಾರ್ಯಕ್ರಮಗಳು ಜರಗಲಿದೆ. ಮಧ್ಯಾಹ್ನ ದೇವರ ಪ್ರಸಾದ ರೂಪದ ಅನ್ನಸಂತರ್ಪಣೆ ಇದೆ. ಕಾರ್ಯಕ್ರಮದ ಯಶಸ್ಸಿಗೆ ಧನಸಹಾಯ, ವಸ್ತು ರೂಪದಲ್ಲಿ ಅಕ್ಕಿ, ತೆಂಗಿನಕಾಯಿ, ತರಕಾರಿ, ಬಾಳೆಗೊನೆ,

ಜ. 22: ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ Read More »

ಶ್ರೀರಾಮನ ಸೇವೆಗಾಗಿ ಶ್ರೀರಾಮ ಭಕ್ತರಿಂದ ವ್ಯಾಪಾರ ಸ್ಥಗಿತ | ಪುತ್ತೂರು ಸೆಂಟರ್ ವ್ಯಾಪರಸ್ಥರಿಂದ ಹೀಗೊಂದು ಬ್ಯಾನರ್ ಅಳವಡಿಕೆ

ಪುತ್ತೂರು: ಇಲ್ಲಿನ ಪುತ್ತೂರು ಸೆಂಟರ್ ವ್ಯಾಪರಸ್ಥರು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆಯ ದಿನದಂದು ವ್ಯಾಪಾರ ಸ್ಥಗಿತಗೊಳಿಸಿ, ಶ್ರೀರಾಮಚಂದ್ರನ ಪೂಜಾ ಕೈಂಕರ್ಯದಲ್ಲಿ ಭಾಗವಹಿಸುತ್ತೇವೆ ಎನ್ನುವ ಬ್ಯಾನರ್ ಅಳವಡಿಸಿ ಗಮನ ಸೆಳೆದಿದ್ದಾರೆ. “||ಜೈ ಶ್ರೀರಾಮ್|| ಶ್ರೀರಾಮನ ಸೇವೆಗಾಗಿ ಸೋಮವಾಗಿ ತಾ. 22.01.2024ರಂದು ವ್ಯವಹಾರ ಸ್ಥಗಿತ. ಪುತ್ತೂರು ಸೆಂಟರ್ ವ್ಯಾಪಾರಸ್ಥರು. ಎಲ್ಲರಿಗೂ ಉತ್ತರೋತ್ತರ ಅಭಿವೃದ್ಧಿಯಾಗಲಿ” ಹೀಗೆಂದು ಬ್ಯಾನರಿನಲ್ಲಿ ಬರೆಯಲಾಗಿದೆ. ಸೋಮವಾರ ವ್ಯವಹಾರ ಸ್ಥಗಿತಗೊಳಿಸಿ, ಶ್ರೀರಾಮನ ಪೂಜಾ ಕೈಂಕರ್ಯದಲ್ಲಿ ಭಾಗಿಯಾಗಲು ತೀರ್ಮಾನಿಸಿದ್ದೇವೆ ಎನ್ನುತ್ತಾರೆ ವ್ಯಾಪಾರಸ್ಥರು. ನಿತಿನ್ ಕುಮಾರ್ ಮಂಗಳ, ಸಂಕಪ್ಪ ಗೌಡ, ಕೃಷ್ಣರಾಜ್ ಹೆಗ್ಡೆ,

ಶ್ರೀರಾಮನ ಸೇವೆಗಾಗಿ ಶ್ರೀರಾಮ ಭಕ್ತರಿಂದ ವ್ಯಾಪಾರ ಸ್ಥಗಿತ | ಪುತ್ತೂರು ಸೆಂಟರ್ ವ್ಯಾಪರಸ್ಥರಿಂದ ಹೀಗೊಂದು ಬ್ಯಾನರ್ ಅಳವಡಿಕೆ Read More »

ಜ. 22: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಿಶೇಷ ಭಜನೆ

ಪುತ್ತೂರು: ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ನೇತೃತ್ವದಲ್ಲಿ ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ. 22ರಂದು 108 ರಾಮ ಮಂತ್ರ ಜಪಿಸಿ ಭಜನಾ ಕಾರ್ಯಕ್ರಮ ನಡೆಯಲಿದೆ.ಜ. 22ರಂದು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಈ ವಿಶೇಷ ಭಜನಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಭಜನೆಯನ್ನು ನಡೆಸಿಕೊಡಲಿದೆ.ಬೆಳಿಗ್ಗೆ 10.30 ರಿಂದ 11.30 ರ ತನಕ ಭಜನಾ ಕಾರ್ಯಕ್ರಮ ನಡೆಯಲಿದ್ದು, ರಾಮಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಡಳಿತ ಮಂಡಳಿಯ ಪ್ರಕಟಣೆ

ಜ. 22: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಿಶೇಷ ಭಜನೆ Read More »

ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: ನಗರದ ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ 8ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಚಂಡಿಕಾಯಾಗ ಜ.24 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಕ್ಷೇತ್ರದ ಪವಿತ್ರಪಾಣಿ ಬಾಲಸುಬ್ರಹ್ಮಣ್ಯ ಭಟ್ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಷ್ಟಮಂಗಲ ಪ್ರಶ್ನೆಯಂತೆ 2016 ರಲ್ಲಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ನಡೆದು ಸ್ಥಳೀಯರು ಸಹಿತ ಊರ, ಪರವೂರ ಭಕ್ತಾದಿಗಳ ಸಹಕಾರದೊಂದಿಗೆ ಕ್ಷೇತ್ರದಲ್ಲಿ ಪೂಜಾಧಿ ಕಾರ್ಯಕ್ರಮಗಳು ನಡೆಯುತ್ತಾ ಬಂದಿದೆ. ವಿಶೇಷವೆಂದರೆ ಶ್ರೀ ದುರ್ಗಾ ಉಳ್ಳಾಳ್ತಿ ಯಕ್ಷಕಲಾ ಸಂಘದ

ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಜ.22:  ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯಿಂದ 108 ರಾಮ ಮಂತ್ರ ಜಪಿಸಿ ಭಜನೆ

ಪುತ್ತೂರು: ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ ನಡೆಯುವ ದಿನದಂದು ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ 108 ರಾಮ ಮಂತ್ರ ಜಪಿಸಿ ಭಜನಾ ಕಾರ್ಯಕ್ರಮ ನಡೆಯಲಿದೆ. ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ವತಿಯಿಂದ ಬೆಳಿಗ್ಗೆ 10.30 ರಿಂದ 11.30 ರ ತನಕ ಭಜನಾ ಕಾರ್ಯಕ್ರಮ ನಡೆಯಲಿದೆ. ರಾಮಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

ಜ.22:  ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯಿಂದ 108 ರಾಮ ಮಂತ್ರ ಜಪಿಸಿ ಭಜನೆ Read More »

ಜ.22 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ | ಪುತ್ತೂರಿನಲ್ಲಿ ನಡೆಯಿತು ಶ್ರೀ ರಾಮಶ್ವ ಯಾತ್ರೆಗೆ ಚಾಲನೆ

ಪುತ್ತೂರು: ಜ.22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶ್ರೀ ರಾಮನ ದಿಗ್ವಿಜಯದ ಸಂಕೇತವಾಗಿ ಶ್ರೀ ರಾಮಶ್ವ ಯಾತ್ರೆಗೆ ಶುಕ್ರವಾರ ದೇವಸ್ಥಾನದ ರಥಬೀದಿಯಲ್ಲಿ ಚಾಲನೆ ನೀಡಲಾಯಿತು. ಪುತ್ತೂರು ಸೀಮೆಗೆ ಸಂಬಂಧಿಸಿ ಮೂರು ದಿನಗಳ ಕಾಲ ಸಂಚರಿಸಲಿರುವ ಈ ಯಾತ್ರೆಯನ್ನು ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಶೇಖರ್ ನಾರಾವಿ, ಬಿ.ಐತ್ತಪ್ಪ

ಜ.22 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ | ಪುತ್ತೂರಿನಲ್ಲಿ ನಡೆಯಿತು ಶ್ರೀ ರಾಮಶ್ವ ಯಾತ್ರೆಗೆ ಚಾಲನೆ Read More »

ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠೆಯನ್ನು ದೀಪಾವಳಿ ರೀತಿ ಆಚರಿಸಿ | ಪತ್ರಿಕಾಗೋಷ್ಠಿಯಲ್ಲಿ ಡಾ.ಕೃಷ್ಣಪ್ರಸನ್ನ ಕರೆ

ಪುತ್ತೂರು: ಜ.22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠೆ ಮಧ್ಯಾಹ್ನ 12.20 ರ ಶುಭ ಮುಹೂರ್ತದಲ್ಲಿ ವಿದ್ಯುಕ್ತವಾಗಿ ನಡೆಯಲಿದ್ದು, ಅಂದು ಪ್ರತೀ ಹಿಂದೂ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ ದೀಪಾವಳಿ ಆಚರಣೆ ರೀತಿಯಲ್ಲಿ ಶ್ರೀರಾಮನನ್ನು ಆರಾಧಿಸುವಂತೆ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ ವಿನಂತಿ ಮಾಡಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಾಣಪ್ರತಿಷ್ಠೆ ದಿನ ಹಿಂದೂ ಬಾಂಧವರು ಕನಿಷ್ಠ ಐದು ದೀಪಗಳನ್ನು ಉತ್ತರಾಭಿಮುಖವಾಗಿ ಬೆಳಗಿಸಿ, ಆರತಿ ಬೆಳಗಿ ಶ್ರೀರಾಮ಻ನನ್ನು ಆರಾಧಿಸಬೇಕು. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ

ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠೆಯನ್ನು ದೀಪಾವಳಿ ರೀತಿ ಆಚರಿಸಿ | ಪತ್ರಿಕಾಗೋಷ್ಠಿಯಲ್ಲಿ ಡಾ.ಕೃಷ್ಣಪ್ರಸನ್ನ ಕರೆ Read More »

ಜ.22: ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಶ್ರೀ ರಾಮ ಪೂಜಾ ಮಹೋತ್ಸವ | ಕರಸೇವಕರಿಗೆ ಗೌರವಾರ್ಪಣೆ

ವೀರಕಂಭ: ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಶ್ರೀರಾಮ ಪೂಜಾ ಮಹೋತ್ಸವ ಜ.22 ರಂದು ಕೆಲಿಂಜ ಶ್ರೀನಿಕೇತನ ಮಂದಿರದಲ್ಲಿ ನಡೆಯಲಿದೆ. ಅಯೋಧ್ಯ ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ನಡೆಯುವ ಪೂಜಾ ಕಾರ್ಯಕ್ರಮವನ್ನು ಪುರೋಹಿತ ಉದಯ ಭಟ್ ನಂದಾವರ ನಡೆಸಿಕೊಡಲಿದ್ದಾರೆ. ಬೆಳಿಗ್ಗೆ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ಸತ್ಯಸುಂದರ ಭಟ್ ಕಲ್ಮಲೆ ದೀಪ ಬೆಳಗಿಸುವರು. ಕೆಲಿಂಜ ಶ್ರೀ ಕೆಲಿಂಜೇಶ್ವರಿ ಭಜನಾ ಮಂಡಳಿ, ವೀರಕಂಭ ಶ್ರೀ ಶಾರದಾ ಭಜನಾ ಮಂಡಳಿ, ಅಜ್ಜಿನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯವರಿಂದ

ಜ.22: ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಶ್ರೀ ರಾಮ ಪೂಜಾ ಮಹೋತ್ಸವ | ಕರಸೇವಕರಿಗೆ ಗೌರವಾರ್ಪಣೆ Read More »

ಭಕ್ತರೊಬ್ಬರಿಂದ ನಿರ್ಮಾಣವಾಯಿತು ಪಾರ್ಲೆ-ಜಿ ಬಿಸ್ಕೆಟ್‍ ನಿಂದ ರಾಮ ಮಂದಿರ ಪ್ರತಿಕೃತಿ | 20 ಕೆ.ಜಿ. ಬಿಸ್ಕೆಟ್ ಬಳಕೆ

20 ಕೆ.ಜಿ.ಪಾರ್ಲೆ-ಜಿ ಬಿಸ್ಕೆಟ್ ಬಳಸಿ ಅಯೋಧ್ಯೆ ರಾಮ ಮಂದಿರದ ಪ್ರತಿಕೃತಿ ನಿರ್ಮಿಸುವ ಮೂಲಕ ವ್ಯಕ್ತಿಯೊಬ್ಬರು ರಾಮಭಕ್ತಿ ತೋರಿಸಿದ್ದಾರೆ. ಪಶ್ಚಿಮ ಬಂಗಾಳದ ದುರ್ಗಾಪುರ ಜಿಲ್ಲೆಯ ಛೋಟಾನ್ ಘೋಷ್ ಎಂಬವರು ಪಾರ್ಲೆ- ಜಿ ಬಿಸ್ಕೆಟ್ ಬಳಸಿ ನಾಲ್ಕು ಅಡಿ ಎತ್ತರದ ರಾಮಮಂದಿರ ಪ್ರತಿಕೃತಿ ರಚಿಸಿದ್ದಾರೆ. ಐದು ದಿನಗಳಲ್ಲಿ ಈ ಕೆಲಸ ಪೂರ್ಣಗೊಳಿಸಿದ್ದು, ನಿರ್ಮಾಣಕ್ಕೆ ಪ್ಲೈವುಡ್, ಅಂಟು ಬಳಸಲಾಗಿದೆ.  ಸ್ನೇಹಿತರು ಸಹಾಯ ಮಾಡಿದ್ದಾರೆ ಎಂದಿದ್ದಾರೆ ಛೋಟಾನ್ ಘೋಷ್

ಭಕ್ತರೊಬ್ಬರಿಂದ ನಿರ್ಮಾಣವಾಯಿತು ಪಾರ್ಲೆ-ಜಿ ಬಿಸ್ಕೆಟ್‍ ನಿಂದ ರಾಮ ಮಂದಿರ ಪ್ರತಿಕೃತಿ | 20 ಕೆ.ಜಿ. ಬಿಸ್ಕೆಟ್ ಬಳಕೆ Read More »

error: Content is protected !!
Scroll to Top