ಧಾರ್ಮಿಕ

ಜ. 25ರಿಂದ ಅಯೋಧ್ಯೆಗೆ ದೇಶದ 430 ಕಡೆಯಿಂದ 35 ರೈಲು ಸಂಚಾರ!

ನವದೆಹಲಿ: ದೇಶದ 430 ಕಡೆಯಿಂದ ಆಯೋಧ್ಯೆಗೆ ರೈಲು ಸೇವೆ ನೀಡಲು ನಿರ್ಧರಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಜನವರಿ 25 ರಿಂದ 60 ದಿನಗಳ ಕಾಲ ವಿಶೇಷ ಹಾಗೂ ಹೆಚ್ಚುವರಿ ರೈಲುಗಳು ಆಯೋಧ್ಯೆಯತ್ತ ಸಂಚರಿಸಲಿವೆ. ಪ್ರತಿ ದಿನ 35 ರೈಲುಗಳು ಆಯೋಧ್ಯೆ ತೆರಳುವ ಭಕ್ತರಿಗೆ ಸೇವೆ ನೀಡಲಿವೆ ಎಂದು ಬಿಜೆಪಿ ಸಭೆಯಲ್ಲಿ ಹೇಳಿದರು. ಈ‌ ಮೂಲಕ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಶ್ರೀರಾಮ ಮಂದಿರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಿದೆ. ದೇಶಾದ್ಯಂತ ದೀಪಾವಳಿ ಸಡಗರ ಮನೆ […]

ಜ. 25ರಿಂದ ಅಯೋಧ್ಯೆಗೆ ದೇಶದ 430 ಕಡೆಯಿಂದ 35 ರೈಲು ಸಂಚಾರ! Read More »

ಶ್ರೀ ದೇವಿ ಮಹಾತ್ಮೆ ಇನ್ನು ಪೂರ್ಣ ರಾತ್ರಿ ಪ್ರದರ್ಶನ | ಕಟೀಲು ಮೇಳಕ್ಕೆ ಹೈಕೋರ್ಟ್ ಅನುಮತಿ!

ಕಾಲಮಿತಿಯಲ್ಲಿ ನಡೆಯುತ್ತಿದ್ದ ಕಟೀಲು ಮೇಳದ ಯಕ್ಷಗಾನ ಇನ್ನು ಪೂರ್ಣರಾತ್ರಿ ನಡೆಯಲಿದೆ. ಹಳೆ ಪದ್ಧತಿಯಂತೆ ರಾತ್ರಿಯಿಡೀ ಯಕ್ಷಗಾನ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಯಕ್ಷಗಾನ ಪ್ರಿಯರ ಸಂತಸಕ್ಕೆ ಕಾರಣವಾಗಿದೆ. ಜ. 14ರಿಂದ ಮತ್ತೆ ಹಿಂದಿನಂತೆ ಪೂರ್ಣರಾತ್ರಿ ಪ್ರದರ್ಶನ ನೀಡಲು ಕಟೀಲಿನ 6 ಮೇಳಗಳು ಸಿದ್ಧವಾಗಿವೆ. ಶಬ್ದಮಾಲಿನ್ಯ ಮಿತಿಯ ನಿಯಮದಿಂದಾಗಿ ಕಳೆದ ವರ್ಷದಿಂದ ಕಾಲಮಿತಿಗೆ ಒಳಪಟ್ಟಿದ್ದ ಕಟೀಲು ಮೇಳ ಈ ಬಾರಿಯೂ ಸುಮಾರು ಒಂದೂವರೆ ತಿಂಗಳ ಕಾಲ ಕಾಲಮಿತಿಯಲ್ಲಿ ಪ್ರದರ್ಶನ ನೀಡಿದೆ. ಹೈಕೋರ್ಟ್‌ ಆದೇಶ ಮತ್ತು ಶ್ರೀ ಕ್ಷೇತ್ರದ ಭಕ್ತರ

ಶ್ರೀ ದೇವಿ ಮಹಾತ್ಮೆ ಇನ್ನು ಪೂರ್ಣ ರಾತ್ರಿ ಪ್ರದರ್ಶನ | ಕಟೀಲು ಮೇಳಕ್ಕೆ ಹೈಕೋರ್ಟ್ ಅನುಮತಿ! Read More »

ರಾಮಮಂದಿರ ಉದ್ಘಾಟನೆಯಂದು ಮೌನ ವ್ರತ ಮುರಿಯಲಿದ್ದಾರೆ ಮೌನಿ ಮಾತಾ!!

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ ಮೌನ ಮುರಿಯುತ್ತೇನೆ ಎಂದು ಶಪಥಗೈದಿದ್ದ ಮಹಿಳೆಯೊಬ್ಬರು ಬರೋಬ್ಬರಿ 30 ವರ್ಷದ ನಂತರ ಮಾತನಾಡಲಿದ್ದಾರೆ. ಜಾರ್ಖಂಡ್ನ 85 ವರ್ಷದ ಸರಸ್ವತಿ ದೇವಿ 1992ರ ಡಿ. 6ರಂದು ಜನ್ಮಸ್ಥಾನದಲ್ಲಿ ದಾಳಿಕೋರರು ನಿರ್ಮಿಸಿದ್ದ ಕಟ್ಟಡ ಕರಸೇವಕರಿಂದ ನೆಲಸಮವಾಗಿದ್ದು, ಅಂದು ಸರಸ್ವತಿ ದೇವಿ ಮೌನವ್ರತ ಕೈಗೊಂಡಿದ್ದರು. ಜ.22 ರಂದು ಸರಸ್ವತಿ ದೇವಿ ಅಗರ್ವಾಲ್ ತಮ್ಮ ಕನಸು ನನಸಾಗುತ್ತಿರುವುದರಿಂದ ಅಂದಿನಿಂದ ಮತ್ತೆ ಮಾತನಾಡಲು ತೀರ್ಮಾನಿಸಿದ್ದಾರೆ. 30 ವರ್ಷದ ಅವರ ಮೌನ ದೀಕ್ಷೆ ಕೊನೆಗೊಳ್ಳುವ ಕಾಲ ರಾಮಮಂದಿರ ನಿರ್ಮಾಣದೊಂದಿಗೆ ಸನ್ನಿಹಿತವಾಗಿದೆ.

ರಾಮಮಂದಿರ ಉದ್ಘಾಟನೆಯಂದು ಮೌನ ವ್ರತ ಮುರಿಯಲಿದ್ದಾರೆ ಮೌನಿ ಮಾತಾ!! Read More »

ಧಾರ್ಮಿಕ ಕಾರ್ಯಕ್ರಮ ಸಮಾಜಕ್ಕೆ ಶಕ್ತಿ: ಪುತ್ತಿಲ

ಕಾವು: ಇಲ್ಲಿನ ಪುತ್ತಿಲ ಪರಿವಾರದ ವತಿಯಿಂದ ಕಾವು ಶ್ರೀ ಪಂಚಲಿಂಗೇಶ್ವರ ದೇವರಿಗೆ ಸೋಮವಾರ ಪೂಜೆ ನೆರವೇರಿಸಲಾಯಿತು. ನೇತೃತ್ವ ವಹಿಸಿದ್ದ ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಗೌರವ ಸ್ವೀಕರಿಸಿ ಮಾತನಾಡಿ, ನಾವು ಒಗ್ಗಟ್ಟಿನಿಂದ ನಡೆಸುವ ಧಾರ್ಮಿಕ ಕಾರ್ಯಕ್ರಮಗಳು  ಹಿಂದೂ ಸಮಾಜಕ್ಕೆ ಶಕ್ತಿಯನ್ನು ತುಂಬುತ್ತವೆ. ನಿರಂತರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಹಿಂದುಗಳಲ್ಲಿ ಜಾಗೃತಿಯೂ ಮೂಡುತ್ತದೆ. ಎಲ್ಲರೂ ಒಟ್ಟಾಗಿ ಮುನ್ನಡೆಯೋಣ ಎಂದರು. ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರದ ಕೇಂದ್ರ ಕಚೇರಿ ಅಧ್ಯಕ್ಷರು, ಪದಾಧಿಕಾರಿಗಳು, ಕಾವು ಘಟಕದ ಪದಾಧಿಕಾರಿಗಳು, ಸದಸ್ಯರು ಮೊದಲಾದವರು

ಧಾರ್ಮಿಕ ಕಾರ್ಯಕ್ರಮ ಸಮಾಜಕ್ಕೆ ಶಕ್ತಿ: ಪುತ್ತಿಲ Read More »

ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ಪೂಜೆ

ಪುತ್ತೂರು: ನಗರದ ಪರ್ಲಡ್ಕದ ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ಪೂಜೆ ಹಾಗೂ ದೈವಗಳ ನೇಮೋತ್ಸವ ಶನಿವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಕೆಮ್ಮಿಂಜೆ ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿಯವರ ನೇತೃತ್ವದಲ್ಲಿ ಬೆಳಗ್ಗೆಯಿಂದ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಪಂಚಾಮೃತ ಅಭಿಷೇಕ, ಶ್ರೀ ದೈವಗಳ ಕಲಶ ತಂಬಿಲ ಸೇವೆ, ಸಾಮೂಹಿಕ ಆಶ್ಲೇಷಬಲಿ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆದು ಬಳಿಕ ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ಪಾಂಗಳಾಯಿ ಶ್ರೀ ಅರಸು

ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ಪೂಜೆ Read More »

ಕೊಡಿಪ್ಪಾಡಿ ಕ್ಷೇತ್ರದಲ್ಲಿ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ‘ತೊಟ್ಟಿಲು ಪೂಜೆ’  

ಪುತ್ತೂರು: ಪುತ್ತೂರಿನಲ್ಲಿ ಪೌರ ಸನ್ಮಾನ ಸ್ವೀಕರಿಸಲು ಗುರುವಾರ ಸಂಜೆ ಪುತ್ತೂರಿಗೆ ಆಗಮಿಸಲಿರುವ ಪುತ್ತಿಗೆ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರಿ ಸುಶ್ರೀಂದ್ರ ತೀರ್ಥ ಸ್ವಾಮೀಜಿಗಳು ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನಕ್ಕೆ ರಾತ್ರಿ ಭೇಟಿ ನೀಡಿದರು. ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರು ದೇವಸ್ಥಾನದಲ್ಲಿ ಪಟ್ಟದ ದೇವರಿಗೆ ‘ತೊಟ್ಟಿಲು ಪೂಜೆ ಸೇವೆ’ ನೆರವೇರಿಸಿ, ಆಶೀರ್ವಚನ ನೀಡಿದರು. ಭಕ್ತಾದಿಗಳು ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿಕೊಂಡ ಹರಿಪ್ರಸಾದ್ ವೈಲಾಯ ಕರಾಯ ಹಾಗೂ ಮನೆಯವರು, ಶ್ರೀ ಕ್ಷೇತ್ರದ

ಕೊಡಿಪ್ಪಾಡಿ ಕ್ಷೇತ್ರದಲ್ಲಿ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ‘ತೊಟ್ಟಿಲು ಪೂಜೆ’   Read More »

ಶ್ರೀ ಕೃಷ್ಣನಿಗೆ ಗೀತೆ ಅರ್ಪಣೆ ಮಾಡಿದರೆ ಪರಿಪೂರ್ಣ ಅನುಗ್ರಹ ಪಡೆಯಲು ಸಾಧ್ಯ | ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರು

ಪುತ್ತೂರು: ಶ್ರೀಕೃಷ್ಣನಿಗೆ ಪ್ರಿಯವಾದ ಗೀತೆಯನ್ನು ಅರ್ಪಣೆ ಮಾಡಿದರೆ ಪರಿಪೂರ್ಣ ಅನುಗ್ರಹ ಪಡೆಯಲು ಸಾಧ್ಯ ಎಂದು ಉಡುಪಿ ಪುತ್ತಿಗೆ ಮಠಾಧೀಶರಾದ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರು ನುಡಿದರು. ಅವರು ಪರ್ಯಾಯ ಪುತ್ತಿಗೆ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರ ಪೌರ ಸನ್ಮಾನ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಗುರುವಾರ ಸಂಜೆ ನಡೆದ ಪೌರ ಸನ್ಮಾನ ಹಾಗೂ ಶ್ರೀಗಳಿಂದ ಕೋಟಿ ಗೀತಾ ಲೇಖನ ಯಜ್ಷ ದೀಕ್ಷೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಜಗತ್ತಿಗೆ ಕೃಷ್ಣನ ಅನುಗ್ರಹವಾಗುವ ನಿಟ್ಟಿನಲ್ಲಿ ಗೀತಾ

ಶ್ರೀ ಕೃಷ್ಣನಿಗೆ ಗೀತೆ ಅರ್ಪಣೆ ಮಾಡಿದರೆ ಪರಿಪೂರ್ಣ ಅನುಗ್ರಹ ಪಡೆಯಲು ಸಾಧ್ಯ | ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಶ್ರೀ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರು Read More »

 ಜ.7: 2ನೇ ವರ್ಷದ ‘ಜಲಾಲಿಯ್ಯಾ ರಾತೀಬ್ ಮಸ್ಲಿಸ್’

ಪುತ್ತೂರು: ಕೆಮ್ಮಾಯಿ ಬಸ್ತಾನುಲ್ ಬಾದುಷ ಮಸ್ಲಿಸ್ ಮತ್ತು ಜಲಾಲಿಯ್ಯಾ ರಾತೀಬ್ ಸಮಿತಿ ಜಂಟಿ ಆಶ್ರಯದಲ್ಲಿ 2ನೇ ವರ್ಷದ ‘ಜಲಾಲಿಯ್ಯಾ ರಾತೀಬ್ ಮಸ್ಲಿಸ್’ ಜ.7ರಂದು ಕೆಮ್ಮಾಯಿಯ ತಂಙಳ್ ನಿವಾಸದಲ್ಲಿ ನಡೆಯಲಿದೆ ಎಂದು ಜಲಾಲಿಯ್ಯಾ ರಾತೀಬ್ ಸಮಿತಿ ಸಂಚಾಲಕ ಇಸಾಕ್ ಸಾಲ್ಮರ ತಿಳಿಸಿದ್ದಾರೆ. ಗುರುವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಕೆಮ್ಮಾಯಿ ಮದ್ರಸಾದ ಮಹಮ್ಮದ್ ಇರ್ಶಾದ್ ಸಖಾಫಿ ಉದ್ಘಾಟಿಸಲಿದ್ದಾರೆ.  ಹಾಜಿ ಸಯ್ಯದ್ ಅಬೂಬಕ್ಕರ್ ಅಧ್ಯಕ್ಷತೆ ವಹಿಸುವರು. ಬಿ.ಕೆ.ಅಬ್ದುಲ್ ಮಜೀದ್ ಸ್ವಾಗತಿಸಲಿದ್ದಾರೆ. ಸಾಲ್ಮರದ ಅಲ್ ಹಾಜಿ ಅಸ್ಸಯಿದ್ ಮಹಮ್ಮದ್, ಅಸ್ಸಯಿದ್ ಹಾಮಿದ್

 ಜ.7: 2ನೇ ವರ್ಷದ ‘ಜಲಾಲಿಯ್ಯಾ ರಾತೀಬ್ ಮಸ್ಲಿಸ್’ Read More »

ಕುಮಾರಪರ್ವತದ ತುದಿಯ ಕುಮಾರನ ಪಾದಕ್ಕೆ ಪೂಜೆ

ಸುಬ್ರಹ್ಮಣ್ಯ: ಸುಮಾರು 4 ಸಾವಿರ ಅಡಿ ಎತ್ತರವಿರುವ ಕುಮಾರಪರ್ವತದ ತುತ್ತ ತುದಿಯಲ್ಲಿರುವ ಕುಮಾರನ ಪಾದಕ್ಕೆ ಮತ್ತು ಸಮೀಪದಲ್ಲಿರುವ ವಾಸುಕಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಯಡಪಡಿತ್ತಾಯ ಅವರು ಮಂಗಳವಾರ ಪೂಜೆ ನೆರವೇರಿಸಿದರು. ಈ ಸಂಧರ್ಭ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಲೋಕೇಶ್ ಮುಂಡೋಕಜೆ, ಶೋಭಾ ಗಿರಿಧರ್, ದೇವಸ್ಥಾನದ ಸಿಬ್ಬಂದಿ ಉಪಸ್ಥಿತರಿದ್ದರು. ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ 150ಕ್ಕೂ ಅಧಿಕ

ಕುಮಾರಪರ್ವತದ ತುದಿಯ ಕುಮಾರನ ಪಾದಕ್ಕೆ ಪೂಜೆ Read More »

ವಿಟ್ಲ ಸೀಮೆದೊಡೆಯನ ಜಾತ್ರೆಗೆ ಗೊನೆ ಮುಹೂರ್ತ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಬುಧವಾರ ನಡೆಯಿತು. ಬಸವನ ಗುಡಿ ರಾಮಣ್ಣ ಗೌಡರ ತೋಟದಲ್ಲಿ ದೇವಳದ ಅರ್ಚಕರು ಗೊನೆ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಟ್ಲ ಅರಮನೆಯ ಸದಾಶಿವ ವಿ.ಆರ್., ಕೃಷ್ಣಯ್ಯ ಕೆ., ರಾಜಾರಾಮ ವರ್ಮ, ಜಯರಾಮ ಬಲ್ಲಾಳ, ಶ್ರೀಕಂಠ ವರ್ಮ ಮತ್ತು ಅರುಣ್ ಕುಮಾರ್ ವರ್ಮ, ದಿನೇಶ್ ರಾವ್, ಅನಂತ ಪ್ರಸಾದ್, ನಾಗರಾಜ್, ಕುಂಞಣ್ಣ ಗೌಡ ಬಸವನಗುಡಿ, ವಿ. ರಮಾನಾಥ ದೇವಾಡಿಗ, ಪದ್ಮನಾಭ ಮಂಜಲಾಡಿ, ಅಣ್ಣು ಗೌಡ, ರಾಮಣ್ಣ

ವಿಟ್ಲ ಸೀಮೆದೊಡೆಯನ ಜಾತ್ರೆಗೆ ಗೊನೆ ಮುಹೂರ್ತ Read More »

error: Content is protected !!
Scroll to Top