ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರ ವೈಭವದ ಶೋಭಾಯಾತ್ರೆ | ಆಯೋಧ್ಯಾ ಮಂಟಪದಲ್ಲಿ ಮೇಳೈಸಿದ ಸನಾತನ ಸಮಾಗಮ
ಪುತ್ತೂರು: ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಎರಡು ದಿನಗಳ ಕಾಲ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ತಿರುಪತಿ ತಿರುಮಲ ಶ್ರೀ ಬಾಲಾಜಿ ದೇವರ ಉತ್ಸವ ಮೂರ್ತಿಯನ್ನು ಬರಮಾಡಿಕೊಳ್ಳುವ ನಿಟ್ಟಿನಲ್ಲಿ ವೈಭವದ ಶೋಭಾಯಾತ್ರೆ ಬೊಳುವಾರು ವೃತ್ತದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತನಕ ನಡೆಯಿತು. ಬೊಳುವಾರು ವೃತ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಂಪುಟ ಮಠದ ಶ್ರಿ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಬಳಿಕ ಶ್ರೀದೇವಿ, ಭೂದೇವಿ ಸಹಿತ […]










