ಧಾರ್ಮಿಕ

ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪಂಚಮಿ ಉತ್ಸವ

ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ವೈಭವದ ಪಂಚಮಿ ಉತ್ಸವ ನಡೆಯಿತು. ಉತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀ ಕ್ಷೇತ್ರದ ನಾಗಬನದಲ್ಲಿ ಸಾಮೂಹಿಕ ಆಶ್ಲೇಷಾ ಬಲಿ, ನಾಗತಂಬಿಲ ಸೇವೆಗಳು ಜರಗಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ರಾತ್ರಿ 7 ಗಂಟೆಯಿಂದ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಪಂಚಮಿ ಉತ್ಸವ, ಪಲ್ಲಕ್ಕಿ ಉತ್ಸವ, ಕಟ್ಟೆಪೂಜೆ, 5 ರಿಂದ ಶಿರಾಡಿ ದೈವದ ಕಿರುವಾಳು ಆಗಮಿಸಿತು. ಬಳಿಕ ಮಂಗಳೂರು ಶ್ರೀ ಮುನೀಶ್ವರ […]

ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪಂಚಮಿ ಉತ್ಸವ Read More »

ಡಿ.26: ಶಿಲಾನ್ಯಾಸ ಕಾರ್ಯಕ್ರಮ | ಯಶಸ್ಸಿಗೆ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಪ್ರಾರ್ಥನೆ

ಕೆಮ್ಮಲೆ: ಡಿ.26 ರಂದು ನಡೆಯುವ ಕಡಬ ತಾಲೂಕು ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದ ಗರ್ಭಗುಡಿಯಲ್ಲಿ ಇಟ್ಟು ಪ್ರಾರ್ಥಿಸಲಾಯಿತು. ಪಂಚಮಿ ದಿನವಾದ ಭಾನುವಾರ ಶ್ರೀ ಕ್ಷೇತ್ರ ಕೆಮ್ಮಲೆಯಲ್ಲಿ ವಿಶೇಷ ದಿನವಾದ್ದರಿಂದ ಶಿಲಾನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಅರ್ಚಕರು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕಡಬ ತಾಲೂಕು ಒಕ್ಕಲಿಗ ಗೌಡ ಸಂಘದ ಪದಾಧಿಕಾರಿಗಳಾದ ಗೋಪಾಲಕೃಷ್ಣ ಐಪಳ, ನಾರಾಯಣ ಕೊರ್ಜೆ, ಕುಸುಮಾವತಿ ಕೊರ್ಜೆ, ಬಾಲಕೃಷ್ಣ ಹೇಮಳ, ವಸಂತ ಹೇಮಳ, ಅಶೋಕ

ಡಿ.26: ಶಿಲಾನ್ಯಾಸ ಕಾರ್ಯಕ್ರಮ | ಯಶಸ್ಸಿಗೆ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಪ್ರಾರ್ಥನೆ Read More »

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ದತ್ತಜಯಂತಿ| ವಜ್ರದೇಹಿ ಸ್ವಾಮೀಜಿಯವರಿಗೆ ಆಮಂತ್ರಣ

ಚಿಕ್ಕಮಗಳೂರು : ದತ್ತ ಜಯಂತಿ ಅಂಗವಾಗಿ ಚಿಕ್ಕಮಂಗಳೂರು ಚಂದ್ರದ್ರೋಣ ಪರ್ವತದಲ್ಲಿ ನಡೆಯುವ ದತ್ತಜಯಂತಿ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಗುರುಪುರ ವಜ್ರದೇಹಿ ಮಠದ  ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರಿಗೆ ನೀಡಲಾಯಿತು. ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ್ ಸುನೀಲ್ ಕೆ.ಆರ್,ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿ ಕೃಷ್ಣ ಹಸಂತಡ್ಕ, ಬಜರಂಗದಳ ಮಂಗಳೂರು ವಿಭಾಗ ಸಹ ಸಂಯೋಜಕ್ ಪುನೀತ್ ಅತ್ತಾವರ ಆಮಂತ್ರಣ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬಜರಂಗದಳ ಪುತ್ತೂರು ನಗರ ಪ್ರಖಂಡ ಸಂಯೋಜಕ್ ಜಯಂತ್ ಕುಂಜೂರುಪಂಜ,ವಿಶ್ವ ಹಿಂದೂ ಪರಿಷದ್ ಪುತ್ತೂರು

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ದತ್ತಜಯಂತಿ| ವಜ್ರದೇಹಿ ಸ್ವಾಮೀಜಿಯವರಿಗೆ ಆಮಂತ್ರಣ Read More »

ಬಿಳಿಯೂರು ಕಿಂಡಿ ಅಣೆಕಟ್ಟು ರೈತರ ಪಾಲಿಗೆ ಸಂತಸ ತಂದಿದೆ | ಗಂಗಾಪೂಜೆಯಲ್ಲಿ ಬಾಗೀನ ಅರ್ಪಿಸಿ ಸಂಜೀವ ಮಠಂದೂರು

ಬಂಟ್ವಾಳ:  ತಾಲೂಕಿನ ಪೆರ್ನೆ. ಬಿಳಿಯೂರು ಗ್ರಾಮದ ಕಡಪು ಎಂಬಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಅವರ ಅವಧಿಯಲ್ಲಿ ನಿರ್ಮಾಣವಾದ 51 ಕೋಟಿ ವೆಚ್ಚದ ಸಂಪರ್ಕ ರಸ್ತೆ ಮತ್ತು ಕಿಂಡಿ ಅಣೆಕಟ್ಟಿನಲ್ಲಿ ನದಿಗೆ ಬಾಗಿನ ಅರ್ಪಿಸುವ ಗಂಗಾ ಪೂಜೆ ಡಿ.17 ಭಾನುವಾರ ಬೆಳಿಗ್ಗೆ ನಡೆಯಿತು. ಗೋಪಾಲಕೃಷ್ಣ ಭಟ್ ಅವರು ಪೂಜೆ ನೆರವೇರಿಸಿದರು. ಬಾಗಿನ ಅರ್ಪಿಸಿ ಮಾತನಾಡಿದ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಬಂಟ್ವಾಳ ತಾಲೂಕಿನ ಪೆರ್ನೆಯ ಬಿಳಿಯೂರು ಎಂಬಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ರೂ. 51 ಕೋಟಿ

ಬಿಳಿಯೂರು ಕಿಂಡಿ ಅಣೆಕಟ್ಟು ರೈತರ ಪಾಲಿಗೆ ಸಂತಸ ತಂದಿದೆ | ಗಂಗಾಪೂಜೆಯಲ್ಲಿ ಬಾಗೀನ ಅರ್ಪಿಸಿ ಸಂಜೀವ ಮಠಂದೂರು Read More »

ತಾಲೂಕು ಭಜನಾ ಪರಿಷತ್‌ ಗೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಲೋಕೇಶ್‍ ಬೆತ್ತೋಡಿ, ಕಾಯ೯ದಶಿ೯ಯಾಗಿ ಗೋಪಾಲಕೃಷ್ಣ ಪಾಟಾಳಿ

ಪುತ್ತೂರು: ಶ್ರೀ ಧಮ೯ಸ್ಥಳ ಮಂಜುನಾಥೇಶ್ವರ ಪುತ್ತೂರು ತಾಲೂಕು ಭಜನಾ ಪರಿಷತ್‌ನ ನೂತನ ಅಧ್ಯಕ್ಷರಾಗಿ ಲೋಕೇಶ್‌ ಬೆತ್ತೋಡಿ, ಉಪಾಧ್ಯಕ್ಷರಾಗಿ ದಿನೇಶ್‌ ಸಾಲಿಯಾನ್, ಗಂಗಾಧರ್‌ ರೈ, ಕಾಯ೯ದಶಿ೯ಯಾಗಿ ಗೋಪಾಲಕೃಷ್ಣ ಪಾಟಾಳಿ, ಜೊತೆಕಾಯ೯ದಶಿ೯ಯಾಗಿ ಸುಜಯ ಹಾಗೂ ಕೋಶಾಧಿಕಾರಿಯಾಗಿ ಸುದಾಕರ್‌ ಕುಲಾಲ್ ಅವರನ್ನು ಆಯ್ಕೆ ಮಾಡಲಾಯಿತು ಪುತ್ತೂರು ಯೋಜನಾ ಕಚೇರಿಯಲ್ಲಿ ಭಜನಾ ಪರಿಷತ್‌ ಅಧ್ಯಕ್ಷ ಸುಬ್ಬಯ್ಯ ಅವರ ನೇತೃತ್ವದಲ್ಲಿ ಶ್ರೀ ಧಮ೯ಸ್ಥಳ ಮಂಜುನಾಥೇಶ್ವರ ಪುತ್ತೂರು ತಾಲೂಕು ಭಜನಾ ಪರಿಷತ್‌ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪುತ್ತೂರು ತಾಲೂಕಿನಲ್ಲಿ 6 ವಷ೯ಗಳಿಂದ ಭಜನಾಪರಿಷತ್‌ನ ಪದಾಧಿಕಾರಿಗಳ

ತಾಲೂಕು ಭಜನಾ ಪರಿಷತ್‌ ಗೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಲೋಕೇಶ್‍ ಬೆತ್ತೋಡಿ, ಕಾಯ೯ದಶಿ೯ಯಾಗಿ ಗೋಪಾಲಕೃಷ್ಣ ಪಾಟಾಳಿ Read More »

ಮುಗೇರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಆಗಮಿಸಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ

ಕುದ್ಮಾರು: ಅಯೋಧ್ಯೆ ಶ್ರೀ ರಾಮಜನ್ಮ ಭೂಮಿಯಲ್ಲಿರುವ ಶ್ರೀ ಶ್ರೀ ರಾಮ ಮಂದಿರದಲ್ಲಿ ಜ.22 ರಂದು ಶ್ರೀರಾಮನ ಪ್ರಾಣ ಪ್ರತಿಷ್ಠೆ ಅಂಗವಾಗಿ ಅಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯನ್ನು ಮೆರವಣಿಗೆ ಮೂಲಕ ಮುಗೇರು ಶ್ರೀಮಹಾವಿಷ್ಣುಮೂರ್ತಿ  ದೇವಸ್ಥಾನನಕ್ಕೆ ತರಲಾಯಿತು. ಕುದ್ಮಾರು, ಸವಣೂರು ಹಾಗೂ ಪುಣ್ಚಪ್ಪಾಡಿಯ ರಾಮಭಕ್ತರು ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಬಳಿಕ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪವಿತ್ರ ಮಂತ್ರಾಕ್ಷತೆಯನ್ನಿರಿಸಿ ಅದಕ್ಕೆಅರ್ಚಕರು ಆರತಿ ಬೆಳಗಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ಮುಗೇರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಆಗಮಿಸಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತಾಧಿಕಾರಿ ಅಧಿಕಾರ ಸ್ವೀಕಾರ

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ನೂತನ ಆಡಳಿತ ಅಧಿಕಾರಿಯಾಗಿ ಪುತ್ತೂರು ಹೋಬಳಿಯ ಕಂದಾಯ ನಿರೀಕ್ಷಕ ಗೋಪಾಲ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು ಅಧಿಕಾರ ಹಸ್ತಾಂತರ ಮಾಡಿದರು. ಆಡಳಿತ ಅಧಿಕಾರಿಯನ್ನು ಸ್ವಾಗತಿಸಿ ಗೌರವಿಸಲಾಯಿತು. ನಿರ್ಗಮಿತ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಅವರನ್ನು ಜೀರ್ಣೋದ್ಧಾರ ಸಮಿತಿ ವತಿಯಿಂದ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಶಾಲು ಹಾಕಿ ಗೌರವಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ವ್ಯವಸ್ಥಾಪನಾ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತಾಧಿಕಾರಿ ಅಧಿಕಾರ ಸ್ವೀಕಾರ Read More »

ಕುಕ್ಕೆ ಕ್ಷೇತ್ರಕ್ಕೆ ಇಸ್ರೋ ನಿರ್ದೇಶಕ ರಾಮಕೃಷ್ಣ ಭೇಟಿ

ಸುಬ್ರಹ್ಮಣ್ಯ: ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಟೆಲಿಮೆಟ್ರಿ ಟ್ರ್ಯಾಕಿಂಗ್ ಆಂಡ್ ಕಮಾಂಡ್ ನೆಟ್‌ವರ್ಕ್ ನಿರ್ದೇಶಕ ಬಿ.ಎನ್. ರಾಮಕೃಷ್ಣ ಅವರು ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ ವಿ.ಭಟ್, ಶೋಭಾ ಗಿರಿಧರ್, ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗಣೇಶ್ ಪ್ರಸಾದ್, ಪ್ರಾಂಶುಪಾಲ ಸಂಕೀರ್ತ್ ಹೆಬ್ಬಾರ್, ದೇವಸ್ಥಾನದ ಶಿಷ್ಟಾಚಾರ ಅಧಿಕಾರಿಗಳಾದ ಜಯರಾಮ ರಾವ್,

ಕುಕ್ಕೆ ಕ್ಷೇತ್ರಕ್ಕೆ ಇಸ್ರೋ ನಿರ್ದೇಶಕ ರಾಮಕೃಷ್ಣ ಭೇಟಿ Read More »

ಡಿ. 18ರಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

ಸವಣೂರು: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ. 18ರಂದು ಷಷ್ಠಿ ಮಹೋತ್ಸವ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮಹೋತ್ಸವ ಜರಗಲಿದೆ. ಸೋಮವಾರದಂದು ನಡೆಯಲಿರುವ ಷಷ್ಠಿ ಮಹೋತ್ಸವದ ಬಳಿಕ ದೇವರ ಪ್ರಸಾದ ವಿತರಣೆ ನಡೆಯಲಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ. 18ರಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ Read More »

ಕುಕ್ಕೆಯಲ್ಲಿ ಮಳೆಯ ನಡುವೆ ಲಕ್ಷದೀಪೋತ್ಸವ ಸಡಗರ

ಸುಬ್ರಹ್ಮಣ್ಯ: ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ಲಕ್ಷದೀಪೋತ್ಸವ ವೈಭವದಿಂದ ಜರಗಿತು. ಇದರ ನಡುವೆ ವರುಣ ಸಿಂಚನ ಶುರುವಾಗಿತ್ತು. ಲಕ್ಷದೀಪೋತ್ಸವದ ಸಡಗರ ಹೆಚ್ಚುತ್ತಿದ್ದಂತೆ, ಮಳೆಯ ಅಬ್ಬರವೂ ಇಮ್ಮಡಿಸಿತು. ದೀಪೋತ್ಸವದ ಸಡಗರಕ್ಕೆ ಸ್ವಲ್ಪ ತಡೆಯಾದರೂ, ಭಕ್ತರ ಉತ್ಸಾಹಕ್ಕೆ ತಡೆಯಾಗಲಿಲ್ಲ. ಲಕ್ಷದೀಪೋತ್ಸವದ ಪ್ರಯುಕ್ತ ಕುಣಿತ ಭಜನೆ ಭಕ್ತರ ಗಮನ ಸೆಳೆಯಿತು. ಕುಕ್ಕೆ ಆಸುಪಾಸಿನ ಪ್ರದೇಶದಲ್ಲಿ ಭಾರೀ ಮಳೆ ಸುರಿದಿದೆ.

ಕುಕ್ಕೆಯಲ್ಲಿ ಮಳೆಯ ನಡುವೆ ಲಕ್ಷದೀಪೋತ್ಸವ ಸಡಗರ Read More »

error: Content is protected !!
Scroll to Top