ಧಾರ್ಮಿಕ

ಮುಗೇರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಆಗಮಿಸಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ

ಕುದ್ಮಾರು: ಅಯೋಧ್ಯೆ ಶ್ರೀ ರಾಮಜನ್ಮ ಭೂಮಿಯಲ್ಲಿರುವ ಶ್ರೀ ಶ್ರೀ ರಾಮ ಮಂದಿರದಲ್ಲಿ ಜ.22 ರಂದು ಶ್ರೀರಾಮನ ಪ್ರಾಣ ಪ್ರತಿಷ್ಠೆ ಅಂಗವಾಗಿ ಅಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯನ್ನು ಮೆರವಣಿಗೆ ಮೂಲಕ ಮುಗೇರು ಶ್ರೀಮಹಾವಿಷ್ಣುಮೂರ್ತಿ  ದೇವಸ್ಥಾನನಕ್ಕೆ ತರಲಾಯಿತು. ಕುದ್ಮಾರು, ಸವಣೂರು ಹಾಗೂ ಪುಣ್ಚಪ್ಪಾಡಿಯ ರಾಮಭಕ್ತರು ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಬಳಿಕ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪವಿತ್ರ ಮಂತ್ರಾಕ್ಷತೆಯನ್ನಿರಿಸಿ ಅದಕ್ಕೆಅರ್ಚಕರು ಆರತಿ ಬೆಳಗಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ಮುಗೇರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಆಗಮಿಸಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತಾಧಿಕಾರಿ ಅಧಿಕಾರ ಸ್ವೀಕಾರ

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ನೂತನ ಆಡಳಿತ ಅಧಿಕಾರಿಯಾಗಿ ಪುತ್ತೂರು ಹೋಬಳಿಯ ಕಂದಾಯ ನಿರೀಕ್ಷಕ ಗೋಪಾಲ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು ಅಧಿಕಾರ ಹಸ್ತಾಂತರ ಮಾಡಿದರು. ಆಡಳಿತ ಅಧಿಕಾರಿಯನ್ನು ಸ್ವಾಗತಿಸಿ ಗೌರವಿಸಲಾಯಿತು. ನಿರ್ಗಮಿತ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಅವರನ್ನು ಜೀರ್ಣೋದ್ಧಾರ ಸಮಿತಿ ವತಿಯಿಂದ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಶಾಲು ಹಾಕಿ ಗೌರವಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ವ್ಯವಸ್ಥಾಪನಾ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತಾಧಿಕಾರಿ ಅಧಿಕಾರ ಸ್ವೀಕಾರ Read More »

ಕುಕ್ಕೆ ಕ್ಷೇತ್ರಕ್ಕೆ ಇಸ್ರೋ ನಿರ್ದೇಶಕ ರಾಮಕೃಷ್ಣ ಭೇಟಿ

ಸುಬ್ರಹ್ಮಣ್ಯ: ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಟೆಲಿಮೆಟ್ರಿ ಟ್ರ್ಯಾಕಿಂಗ್ ಆಂಡ್ ಕಮಾಂಡ್ ನೆಟ್‌ವರ್ಕ್ ನಿರ್ದೇಶಕ ಬಿ.ಎನ್. ರಾಮಕೃಷ್ಣ ಅವರು ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ ವಿ.ಭಟ್, ಶೋಭಾ ಗಿರಿಧರ್, ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗಣೇಶ್ ಪ್ರಸಾದ್, ಪ್ರಾಂಶುಪಾಲ ಸಂಕೀರ್ತ್ ಹೆಬ್ಬಾರ್, ದೇವಸ್ಥಾನದ ಶಿಷ್ಟಾಚಾರ ಅಧಿಕಾರಿಗಳಾದ ಜಯರಾಮ ರಾವ್,

ಕುಕ್ಕೆ ಕ್ಷೇತ್ರಕ್ಕೆ ಇಸ್ರೋ ನಿರ್ದೇಶಕ ರಾಮಕೃಷ್ಣ ಭೇಟಿ Read More »

ಡಿ. 18ರಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

ಸವಣೂರು: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ. 18ರಂದು ಷಷ್ಠಿ ಮಹೋತ್ಸವ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮಹೋತ್ಸವ ಜರಗಲಿದೆ. ಸೋಮವಾರದಂದು ನಡೆಯಲಿರುವ ಷಷ್ಠಿ ಮಹೋತ್ಸವದ ಬಳಿಕ ದೇವರ ಪ್ರಸಾದ ವಿತರಣೆ ನಡೆಯಲಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ. 18ರಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ Read More »

ಕುಕ್ಕೆಯಲ್ಲಿ ಮಳೆಯ ನಡುವೆ ಲಕ್ಷದೀಪೋತ್ಸವ ಸಡಗರ

ಸುಬ್ರಹ್ಮಣ್ಯ: ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ಲಕ್ಷದೀಪೋತ್ಸವ ವೈಭವದಿಂದ ಜರಗಿತು. ಇದರ ನಡುವೆ ವರುಣ ಸಿಂಚನ ಶುರುವಾಗಿತ್ತು. ಲಕ್ಷದೀಪೋತ್ಸವದ ಸಡಗರ ಹೆಚ್ಚುತ್ತಿದ್ದಂತೆ, ಮಳೆಯ ಅಬ್ಬರವೂ ಇಮ್ಮಡಿಸಿತು. ದೀಪೋತ್ಸವದ ಸಡಗರಕ್ಕೆ ಸ್ವಲ್ಪ ತಡೆಯಾದರೂ, ಭಕ್ತರ ಉತ್ಸಾಹಕ್ಕೆ ತಡೆಯಾಗಲಿಲ್ಲ. ಲಕ್ಷದೀಪೋತ್ಸವದ ಪ್ರಯುಕ್ತ ಕುಣಿತ ಭಜನೆ ಭಕ್ತರ ಗಮನ ಸೆಳೆಯಿತು. ಕುಕ್ಕೆ ಆಸುಪಾಸಿನ ಪ್ರದೇಶದಲ್ಲಿ ಭಾರೀ ಮಳೆ ಸುರಿದಿದೆ.

ಕುಕ್ಕೆಯಲ್ಲಿ ಮಳೆಯ ನಡುವೆ ಲಕ್ಷದೀಪೋತ್ಸವ ಸಡಗರ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿದ ವೈಭವದ ಲಕ್ಷದೀಪೋತ್ಸವ | ಬೆಳಕಿನ ಚಿತ್ತಾರ ಮೂಡಿಸಿದ ಲಕ್ಷಾಂತರ ಹಣತೆ ದೀಪಗಳು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಮಂಗಳವಾರ ರಾತ್ರಿ ವೈಭವದಿಂದ ನಡೆಯಿತು. ದೇವಸ್ಥಾನದ ರಥಬೀದಿಯಲ್ಲಿ ನೂರಾರು  ಭಕ್ತಾದಿಗಳಿಂದ ಬೆಳಗಿದ ಲಕ್ಷಾಂತರ ಹಣತೆ ದೀಪಗಳು ಇದಕ್ಕೆ ಸಾಕ್ಷಿಯಾದವು. ದೀಪೋತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀ ದೇವಸ್ಥಾನದ ಒಳಾಂಗಣದಲ್ಲಿ ಲಕ್ಷ ಬಿಲ್ವಾರ್ಚನೆ ಸೇವೆ ನಡೆದು ಮಧ್ಯಾಹ್ನ ಮಹಾಪೂಜೆ ನಡೆಯಿತು. ಸಂಜೆ ಭಕ್ತಾದಿಗಳಿಂದ ಭಜನಾ ಸೇವೆ ನಡೆಯಿತು. ಸಂಜೆ ಹಿಂದೂ ಧಾರ್ಮಿಕ ಶಿಕ್ಷಣ ಯೋಜನೆಯ ವಿದ್ಯಾರ್ಥಿಗಳಿಂದ ದೀಪ ನಮನ ಹಾಗೂ ಧಾರ್ಮಿಕ ಸತ್ಸಂಗ ನಡೆಯಿತು. ಸಂಜೆ 7 ಗಂಟೆಗೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿದ ವೈಭವದ ಲಕ್ಷದೀಪೋತ್ಸವ | ಬೆಳಕಿನ ಚಿತ್ತಾರ ಮೂಡಿಸಿದ ಲಕ್ಷಾಂತರ ಹಣತೆ ದೀಪಗಳು Read More »

ಶ್ರೀ ದೇವಿ ಲಲಿತೋಪಖ್ಯಾನ ಯಕ್ಷಗಾನ: ಆಮಂತ್ರಣ ಬಿಡುಗಡೆ

ಕಾಣಿಯೂರು: ಇಲ್ಲಿನ ಯಕ್ಷಮಿತ್ರ ಬಳಗದ ವತಿಯಿಂದ ನಡೆಯಲಿರುವ ಶ್ರೀ ದೇವಿ ಲಲಿತೋಪಖ್ಯಾನ ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರಿಕೆಯನ್ನು ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಜ. 2ರ ಮಂಗಳವಾರ ಸಂಜೆ 6.30ರಿಂದ ಕಾಣಿಯೂರು ಜಾತ್ರಾ ಗದ್ದೆಯಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಹನುಮಗಿರಿ ಮೇಳದಿಂದ `ಶ್ರೀ ದೇವಿ ಲಲಿತೋಪಖ್ಯಾನ’ ಯಕ್ಷಗಾನ ಬಯಲಾಟ ನಡೆಯಲಿದೆ. ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕಾಣಿಯೂರು ಮಠದ ಮೆನೇಜರ್ ನಿರಂಜನ ಆಚಾರ್ಯ ಅವರು ಆಮಂತ್ರಣವನ್ನು ಬಿಡುಗಡೆಗೊಳಿಸಿದರು. ಯಕ್ಷಮಿತ್ರ

ಶ್ರೀ ದೇವಿ ಲಲಿತೋಪಖ್ಯಾನ ಯಕ್ಷಗಾನ: ಆಮಂತ್ರಣ ಬಿಡುಗಡೆ Read More »

ನಾಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಲಕ್ಷ ದೀಪೋತ್ಸವ | ಬೆಳಗಲಿದೆ ಭಕ್ತರಿಂದ ಲಕ್ಷಾಂತರ ದೀಪ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಲಕ್ಷ ದೀಪೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಈ ನಿಟ್ಟಿನಲ್ಲಿ ಸಿದ್ಧತೆಗಳು ನಡೆಯುತ್ತಿದೆ. ಡಿ.12 ಮಂಗಳವಾರ ಲಕ್ಷದೀಪೋತ್ಸವ ನಡೆಯಲಿದ್ದು, ಈಗಾಗಲೇ ಒಂದು ಸುತ್ತಿನ ಸ್ವಚ್ಛತಾ ಕಾರ್ಯ ನಡೆದಿದೆ. ಸ್ವಚ್ಛತೆಯ ಹಿನ್ನಲೆಯಲ್ಲಿ ಭಾನುವಾರ ಸಂಜೆಯಿಂದಲೇ ರಥಬೀದಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ದೀಪೋತ್ಸವದ ಅಂಗವಾಗಿ ಬೆಳಿಗ್ಗೆ ಲಕ್ಷ ಬಿಲ್ವಾರ್ಚನೆ ಸೇವೆ, ಮಧ್ಯಾಹ್ನ ಮಹಾಪೂಜೆ, ಸಂಜೆ ಭಕ್ತಾದಿಗಳಿಂದ ಭಜನಾ ಸೇವೆ, ಸಂಜೆ 6.30 ರಿಂದ ದೀಪ ಪ್ರಜ್ವಲನ, ರಂಗೋಲಿ, 7.30 ರ ಪೂಜೆ ಬಳಿಕ ಶ್ರೀ ದೇವರ

ನಾಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಲಕ್ಷ ದೀಪೋತ್ಸವ | ಬೆಳಗಲಿದೆ ಭಕ್ತರಿಂದ ಲಕ್ಷಾಂತರ ದೀಪ Read More »

ಡಿ.16-19 : ಕೆಮ್ಮಿಂಜೆ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ | ನೆರವೇರಿತು ಗೊನೆಮುಹೂರ್ತ

ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಡಿ.16 ರಿಂದ 19 ರ ತನಕ ನಡೆಯಲಿರುವ ವರ್ಷಾವಧಿ ಷಷ್ಠಿ ಮಹೋತ್ಸವದ ಅಂಗವಾಗಿ ಗೊನೆ ಮುಹೂರ್ತ ಸೋಮವಾರ ನಡೆಯಿತು. ಅರ್ಚಕ ಯೋಗೀಶ್ ಭಟ್‍ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ನೆರವೇರಿಸಿದರು. ಬಳಿಕ ನಾಗೇಶ್ ತಂತ್ರಿಗಳ ತೋಟದಲ್ಲಿ ಹಿರಿಯರಾದ ಸದಾಶಿವ ಮೂಡಂಬಡಿತ್ತಾಯ ಗೊನೆ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಉಪತಹಶೀಲ್ದಾರ್ ಸುಲೋಚನಾ ಪಿ.ಕೆ., ಉತ್ಸವ ಸಮಿತಿ ಅಧ್ಯಕ್ಷ ತಂತ್ರಿ ಕೆ.ಸುಬ್ರಹ್ಮಣ್ಯ ಬಳ್ಳಕ್ಕುರಾಯ,

ಡಿ.16-19 : ಕೆಮ್ಮಿಂಜೆ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ | ನೆರವೇರಿತು ಗೊನೆಮುಹೂರ್ತ Read More »

ಕುಕ್ಕೆ ಜಾತ್ರೆ: ಭಕ್ತರಿಗೆ ಮೂಲಮೃತ್ತಿಕೆ ವಿತರಣೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾ ಷಷ್ಠಿ ಜಾತ್ರೋತ್ಸವದ ಅಂಗವಾಗಿ ಭಾನುವಾರ ಮೂಲಮೃತಿಕ ಪ್ರಸಾದ ತೆಗೆದು ಭಕ್ತರಿಗೆ ವಿತರಿಸಲಾಯಿತು. ಈ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತಾಯ ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿ ಮೃತ್ತಿಕೆಯನ್ನು ತಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರುಗಳು, ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿ ವರ್ಗ, ಮಾಜಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರುಗಳು ಸದಸ್ಯರುಗಳು ಅಲ್ಲದೆ ನೆರೆದ ಸಾವಿರಾರು ಭಕ್ತಾದಿಗಳಿಗೆ ಮೃತ್ವಿಕೆಯನ್ನು ವಿತರಣೆ ಮಾಡಿದರು.

ಕುಕ್ಕೆ ಜಾತ್ರೆ: ಭಕ್ತರಿಗೆ ಮೂಲಮೃತ್ತಿಕೆ ವಿತರಣೆ Read More »

error: Content is protected !!
Scroll to Top