ಧಾರ್ಮಿಕ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿದ ವೈಭವದ ಲಕ್ಷದೀಪೋತ್ಸವ | ಬೆಳಕಿನ ಚಿತ್ತಾರ ಮೂಡಿಸಿದ ಲಕ್ಷಾಂತರ ಹಣತೆ ದೀಪಗಳು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಮಂಗಳವಾರ ರಾತ್ರಿ ವೈಭವದಿಂದ ನಡೆಯಿತು. ದೇವಸ್ಥಾನದ ರಥಬೀದಿಯಲ್ಲಿ ನೂರಾರು  ಭಕ್ತಾದಿಗಳಿಂದ ಬೆಳಗಿದ ಲಕ್ಷಾಂತರ ಹಣತೆ ದೀಪಗಳು ಇದಕ್ಕೆ ಸಾಕ್ಷಿಯಾದವು. ದೀಪೋತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀ ದೇವಸ್ಥಾನದ ಒಳಾಂಗಣದಲ್ಲಿ ಲಕ್ಷ ಬಿಲ್ವಾರ್ಚನೆ ಸೇವೆ ನಡೆದು ಮಧ್ಯಾಹ್ನ ಮಹಾಪೂಜೆ ನಡೆಯಿತು. ಸಂಜೆ ಭಕ್ತಾದಿಗಳಿಂದ ಭಜನಾ ಸೇವೆ ನಡೆಯಿತು. ಸಂಜೆ ಹಿಂದೂ ಧಾರ್ಮಿಕ ಶಿಕ್ಷಣ ಯೋಜನೆಯ ವಿದ್ಯಾರ್ಥಿಗಳಿಂದ ದೀಪ ನಮನ ಹಾಗೂ ಧಾರ್ಮಿಕ ಸತ್ಸಂಗ ನಡೆಯಿತು. ಸಂಜೆ 7 ಗಂಟೆಗೆ […]

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿದ ವೈಭವದ ಲಕ್ಷದೀಪೋತ್ಸವ | ಬೆಳಕಿನ ಚಿತ್ತಾರ ಮೂಡಿಸಿದ ಲಕ್ಷಾಂತರ ಹಣತೆ ದೀಪಗಳು Read More »

ಶ್ರೀ ದೇವಿ ಲಲಿತೋಪಖ್ಯಾನ ಯಕ್ಷಗಾನ: ಆಮಂತ್ರಣ ಬಿಡುಗಡೆ

ಕಾಣಿಯೂರು: ಇಲ್ಲಿನ ಯಕ್ಷಮಿತ್ರ ಬಳಗದ ವತಿಯಿಂದ ನಡೆಯಲಿರುವ ಶ್ರೀ ದೇವಿ ಲಲಿತೋಪಖ್ಯಾನ ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರಿಕೆಯನ್ನು ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಜ. 2ರ ಮಂಗಳವಾರ ಸಂಜೆ 6.30ರಿಂದ ಕಾಣಿಯೂರು ಜಾತ್ರಾ ಗದ್ದೆಯಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಹನುಮಗಿರಿ ಮೇಳದಿಂದ `ಶ್ರೀ ದೇವಿ ಲಲಿತೋಪಖ್ಯಾನ’ ಯಕ್ಷಗಾನ ಬಯಲಾಟ ನಡೆಯಲಿದೆ. ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕಾಣಿಯೂರು ಮಠದ ಮೆನೇಜರ್ ನಿರಂಜನ ಆಚಾರ್ಯ ಅವರು ಆಮಂತ್ರಣವನ್ನು ಬಿಡುಗಡೆಗೊಳಿಸಿದರು. ಯಕ್ಷಮಿತ್ರ

ಶ್ರೀ ದೇವಿ ಲಲಿತೋಪಖ್ಯಾನ ಯಕ್ಷಗಾನ: ಆಮಂತ್ರಣ ಬಿಡುಗಡೆ Read More »

ನಾಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಲಕ್ಷ ದೀಪೋತ್ಸವ | ಬೆಳಗಲಿದೆ ಭಕ್ತರಿಂದ ಲಕ್ಷಾಂತರ ದೀಪ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಲಕ್ಷ ದೀಪೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಈ ನಿಟ್ಟಿನಲ್ಲಿ ಸಿದ್ಧತೆಗಳು ನಡೆಯುತ್ತಿದೆ. ಡಿ.12 ಮಂಗಳವಾರ ಲಕ್ಷದೀಪೋತ್ಸವ ನಡೆಯಲಿದ್ದು, ಈಗಾಗಲೇ ಒಂದು ಸುತ್ತಿನ ಸ್ವಚ್ಛತಾ ಕಾರ್ಯ ನಡೆದಿದೆ. ಸ್ವಚ್ಛತೆಯ ಹಿನ್ನಲೆಯಲ್ಲಿ ಭಾನುವಾರ ಸಂಜೆಯಿಂದಲೇ ರಥಬೀದಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ದೀಪೋತ್ಸವದ ಅಂಗವಾಗಿ ಬೆಳಿಗ್ಗೆ ಲಕ್ಷ ಬಿಲ್ವಾರ್ಚನೆ ಸೇವೆ, ಮಧ್ಯಾಹ್ನ ಮಹಾಪೂಜೆ, ಸಂಜೆ ಭಕ್ತಾದಿಗಳಿಂದ ಭಜನಾ ಸೇವೆ, ಸಂಜೆ 6.30 ರಿಂದ ದೀಪ ಪ್ರಜ್ವಲನ, ರಂಗೋಲಿ, 7.30 ರ ಪೂಜೆ ಬಳಿಕ ಶ್ರೀ ದೇವರ

ನಾಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಲಕ್ಷ ದೀಪೋತ್ಸವ | ಬೆಳಗಲಿದೆ ಭಕ್ತರಿಂದ ಲಕ್ಷಾಂತರ ದೀಪ Read More »

ಡಿ.16-19 : ಕೆಮ್ಮಿಂಜೆ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ | ನೆರವೇರಿತು ಗೊನೆಮುಹೂರ್ತ

ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಡಿ.16 ರಿಂದ 19 ರ ತನಕ ನಡೆಯಲಿರುವ ವರ್ಷಾವಧಿ ಷಷ್ಠಿ ಮಹೋತ್ಸವದ ಅಂಗವಾಗಿ ಗೊನೆ ಮುಹೂರ್ತ ಸೋಮವಾರ ನಡೆಯಿತು. ಅರ್ಚಕ ಯೋಗೀಶ್ ಭಟ್‍ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ನೆರವೇರಿಸಿದರು. ಬಳಿಕ ನಾಗೇಶ್ ತಂತ್ರಿಗಳ ತೋಟದಲ್ಲಿ ಹಿರಿಯರಾದ ಸದಾಶಿವ ಮೂಡಂಬಡಿತ್ತಾಯ ಗೊನೆ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಉಪತಹಶೀಲ್ದಾರ್ ಸುಲೋಚನಾ ಪಿ.ಕೆ., ಉತ್ಸವ ಸಮಿತಿ ಅಧ್ಯಕ್ಷ ತಂತ್ರಿ ಕೆ.ಸುಬ್ರಹ್ಮಣ್ಯ ಬಳ್ಳಕ್ಕುರಾಯ,

ಡಿ.16-19 : ಕೆಮ್ಮಿಂಜೆ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ | ನೆರವೇರಿತು ಗೊನೆಮುಹೂರ್ತ Read More »

ಕುಕ್ಕೆ ಜಾತ್ರೆ: ಭಕ್ತರಿಗೆ ಮೂಲಮೃತ್ತಿಕೆ ವಿತರಣೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾ ಷಷ್ಠಿ ಜಾತ್ರೋತ್ಸವದ ಅಂಗವಾಗಿ ಭಾನುವಾರ ಮೂಲಮೃತಿಕ ಪ್ರಸಾದ ತೆಗೆದು ಭಕ್ತರಿಗೆ ವಿತರಿಸಲಾಯಿತು. ಈ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತಾಯ ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿ ಮೃತ್ತಿಕೆಯನ್ನು ತಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರುಗಳು, ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿ ವರ್ಗ, ಮಾಜಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರುಗಳು ಸದಸ್ಯರುಗಳು ಅಲ್ಲದೆ ನೆರೆದ ಸಾವಿರಾರು ಭಕ್ತಾದಿಗಳಿಗೆ ಮೃತ್ವಿಕೆಯನ್ನು ವಿತರಣೆ ಮಾಡಿದರು.

ಕುಕ್ಕೆ ಜಾತ್ರೆ: ಭಕ್ತರಿಗೆ ಮೂಲಮೃತ್ತಿಕೆ ವಿತರಣೆ Read More »

ಮುರುಡೇಶ್ವರದಲ್ಲಿ ರಾಜ್ಯದ ಅತಿ ಉದ್ದದ ತೇಲುವ ಸೇತುವೆ!

ಮುರುಡೇಶ್ವರದಲ್ಲಿ ಪ್ರವಾಸಿಗರಿಗೆ ಸ್ಕೂಬಾ ಡೈವಿಂಗ್ ಮತ್ತು ಇತರ ಕಾರ್ಯಕ್ರಮಗಳ ಜೊತೆಗೆ ತೇಲುವ ಸೇತುವೆಯನ್ನು  ನಿರ್ಮಿಸಲಾಗಿದೆ. ನೀರಿನಲ್ಲಿ ಮುಳುಗುವ ಭಯದಿಂದ ಅನೇಕ ಪ್ರವಾಸಿಗರು ಆದಷ್ಟು ನೀರಿನಿಂದ ದೂರವೇ ಉಳಿಯುತ್ತಾರೆ. ಪ್ರವಾಸಿಗರು ಕೊಚ್ಚಿಕೊಂಡು ಹೋದ ಹಲವಾರು ನಿದರ್ಶನಗಳೂ ಇವೆ. ಅದರೆ, ಇದೆಲ್ಲದರ ಮಧ್ಯೆಯೇ ಪ್ರವಾಸಿಗರಿಗೆ ಉತ್ತಮ ಅನುಭವವನ್ನು ಒದಗಿಸಲೆಂದು ತೇಲುವ ಸೇತುವೆ ನಿರ್ಮಾಣ ಮಾಡಲಾಗಿದ್ದು, ಈ ಮೂಲಕ ಪ್ರವಾಸಿಗರು ಸಮುದ್ರದಲ್ಲಿ ಹೆಜ್ಜೆ ಹಾಕಬಹುದಾಗಿದೆ. ರಾಜ್ಯದಲ್ಲಿಯೇ ಅತಿ ಉದ್ಧದ ತೂಗು ಸೇತುವೆ ಇದೀಗ ಮುರುಡೇಶ್ವರದಲ್ಲಿ ನಿರ್ಮಾಣಗೊಂಡಿದೆ. 130 ಮೀಟರ್ ಉದ್ದದ ಈ

ಮುರುಡೇಶ್ವರದಲ್ಲಿ ರಾಜ್ಯದ ಅತಿ ಉದ್ದದ ತೇಲುವ ಸೇತುವೆ! Read More »

ಶ್ರೀರಾಮ ತಾರಕ ಮಂತ್ರದ ಮೂಲಕ ತನ್ನ ಮನೆಯನ್ನೇ ರಾಮಮಂದಿರ ಮಾಡಿಕೊಳ್ಳಬೇಕು | ಪವಿತ್ರ ಮಂತ್ರಾಕ್ಷತೆ ವಿತರಣಾ ಕಾರ್ಯಕ್ರಮದಲ್ಲಿ ಶ್ರೀ ರಾಜಶೇಖರಾನಂದ ಸ್ವಾಮೀಜಿ

ಪುತ್ತೂರು: ನಿತ್ಯ ಶ್ರೀರಾಮ ತಾರಕ ಮಂತ್ರ ಜಪದ ಮೂಲಕ ಪ್ರತಿಯೊಬ್ಬ ಹಿಂದೂ ತನ್ನ ಮನೆಯನ್ನೇ ರಾಮಮಂದಿರ ಮಾಡಿಕೊಳ್ಳುವ ಮೂಲಕ ಹಿಂದೂ ಸಮಾಜದ ಉದ್ಧಾರಕ್ಕೆ ಪಣತೊಡಬೇಕಾದ ಅಗತ್ಯವಿದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ನುಡಿದರು. ಅವರು ಭಾನುವಾರ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಅಯೋಧ್ಯೆ ರಾಮಜನ್ಮಭೂಮಿಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯನ್ನು ಪುತ್ತೂರು ನಗರದಿಂದ ಉಪವಸತಿ ಕೇಂದ್ರಕ್ಕೆ ವಿತರಿಸುವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.  ಶ್ರೀ ರಾಮ ತಾರಕ ಮಂತ್ರದ ಜತೆಗೆ ಧ್ಯಾನ ಮಾಡುವ ಮೂಲಕ

ಶ್ರೀರಾಮ ತಾರಕ ಮಂತ್ರದ ಮೂಲಕ ತನ್ನ ಮನೆಯನ್ನೇ ರಾಮಮಂದಿರ ಮಾಡಿಕೊಳ್ಳಬೇಕು | ಪವಿತ್ರ ಮಂತ್ರಾಕ್ಷತೆ ವಿತರಣಾ ಕಾರ್ಯಕ್ರಮದಲ್ಲಿ ಶ್ರೀ ರಾಜಶೇಖರಾನಂದ ಸ್ವಾಮೀಜಿ Read More »

ಅಯೋಧ್ಯೆ ಶ್ರೀರಾಮ ದೇಗುಲದಲ್ಲಿ ಪೌರೋಹಿತ್ಯ ಸೇವೆಗೈಯಲಿದ್ದಾರೆ ಯುವ ಪುರೋಹಿತ ಮೋಹಿತ್ ಪಾಂಡೆ

ಅಯೋಧ್ಯೆ ಶೀಘ್ರದಲ್ಲೇ ಉದ್ಘಾಟನೆ ಆಗಲಿರುವ ಶ್ರೀ ರಾಮ ದೇಗುಲದಲ್ಲಿ ಶ್ರೀರಾಮನ ಪೌರೋಹಿತ್ಯ ಸೇವೆ ಮಾಡಲು ಆಯ್ಕೆಯಾದ ಯುವ ಪುರೋಹಿತ, ಸಕಲ ವೇದ ಪಾರಂಗತ ಭಾಗ್ಯವಂತ ಮೋಹಿತ್ ಪಾಂಡೆ ದೇಶದಾದ್ಯಂತ ಕರೆಯಲಾದ 3000 ಕ್ಕಿಂತಲೂ ಅಧಿಕ ಪುರೋಹಿತರ ಸಂದರ್ಶನದಲ್ಲಿ ಮತ್ತು ವೇಧಜ್ಞಾನ ಕಠಿಣ ಪರೀಕ್ಷೆಯಲ್ಲಿ ತನ್ನ ವೇದ ಮತ್ತು ಪೂಜಾ ವಿಧಿ, ವಿಧಾನಗಳ ಅಪಾರ ಪಾಂಡಿತ್ಯ ಮತ್ತು ಜ್ಞಾನದಿಂದ ಆಯ್ಕೆಯಾದ ಕೊನೆಯ 50 ಮಂದಿಯಲ್ಲಿ ಅಗ್ರಸ್ಥಾನಿಯಾಗಿ ಆಯ್ಕೆಯಾದವರು ಮೋಹಿತ್ ಪಾಂಡೆ. ಯುವ ಪುರೋಹಿತರಾಗಿದ್ದು, ಪ್ರಸ್ತುತ ಗಾಜಿಯಾಬಾದ್ ನ ಧುದೇಶ್ವರನಾಥ

ಅಯೋಧ್ಯೆ ಶ್ರೀರಾಮ ದೇಗುಲದಲ್ಲಿ ಪೌರೋಹಿತ್ಯ ಸೇವೆಗೈಯಲಿದ್ದಾರೆ ಯುವ ಪುರೋಹಿತ ಮೋಹಿತ್ ಪಾಂಡೆ Read More »

ಭತ್ತ ಬೇಸಾಯ ತಂದುಕೊಟ್ಟ ಲಾಭ! | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ 18 ಕ್ವಿಂಟಾಲ್ ಭತ್ತ ಕೊಯ್ಲು!!

ಪುತ್ತೂರು: ‘ಭತ್ತ ಬೆಳೆಯೋಣ ಗದ್ದೆಗಿಳಿಯೋಣ’ ಅಭಿಯಾನದ ಮೂಲಕ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಈ ಬಾರಿ 50 ಸಾವಿರ ರೂ. ಆದಾಯ ಗಳಿಸಿದ್ದು, ಈ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕೃಷಿಕರ ಬದುಕಿಗೆ ಮಾದರಿಯಾಗಿದೆ. ಮೂರು ವರ್ಷಗಳ ಹಿಂದೆ ಧಾರ್ಮಿಕ ಕ್ಷೇತ್ರಗಳಲ್ಲಿ ‘ಭತ್ತ ಬೆಳೆಯೋಣ ಗದ್ದೆಗಿಳಿಯೋಣ’ ಅಭಿಯಾನವನ್ನು ಆರಂಭಗೊಳಿಸಲಾಗಿತ್ತು. ಅದರಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಗದ್ದೆಯಲ್ಲಿ ಭತ್ತವನ್ನು ಬೆಳೆದು ಬೇಸಾಯದಿಂದಲೂ ಲಾಭ ಗಳಿಸಬಹುದು ಅನ್ನೋದನ್ನು ತೋರಿಸಿಕೊಟ್ಟಿದೆ. ಅದರಲ್ಲೂ ಈ ಬಾರಿ ಉತ್ತಮ

ಭತ್ತ ಬೇಸಾಯ ತಂದುಕೊಟ್ಟ ಲಾಭ! | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ 18 ಕ್ವಿಂಟಾಲ್ ಭತ್ತ ಕೊಯ್ಲು!! Read More »

ಶ್ರೀನಿವಾಸ ಕಲ್ಯಾಣೋತ್ಸವ: ದೇವರಮಾರು ಗದ್ದೆಯಲ್ಲಿ ಚಪ್ಪರ ಮಹೋತ್ಸವ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ. 24 ಹಾಗೂ 25ರಂದು ಪುತ್ತಿಲ ಪರಿವಾರದ ವತಿಯಿಂದ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಚಪ್ಪರ ಮುಹೂರ್ತ ಶುಕ್ರವಾರ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಚಪ್ಪರ ಮುಹುರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ ಸಂಘಟನೆ ಕಾರ್ಯಕರ್ತರು, ಭಕ್ತಾದಿಗಳು ಉಪಸ್ಥಿತರಿದ್ದರು.

ಶ್ರೀನಿವಾಸ ಕಲ್ಯಾಣೋತ್ಸವ: ದೇವರಮಾರು ಗದ್ದೆಯಲ್ಲಿ ಚಪ್ಪರ ಮಹೋತ್ಸವ Read More »

error: Content is protected !!
Scroll to Top