ಧಾರ್ಮಿಕ

ಬಂತು ಬಂತು ದೀಪಗಳ ಬೆಳಕಿನ ದೀಪಾವಳಿ ಹಬ್ಬ

ದೀಪಾವಳಿ ಬರೆ ಒಂದು ದಿವಸಗಳ ಹಬ್ಬವಲ್ಲ ಐದು ದಿವಸಗಳ ಕಾಲ ಆಚರಿಸಲಾಗುತ್ತದೆ. ಹಿಂದೂ ಸಂಪ್ರದಾಯ ಪ್ರಕಾರ ಅಕ್ಟೊಬರ್ 20 ರಂದು ದೀಪಾವಳಿ ಸೂರ್ಯಸ್ತದ ನಂತರ ಲಕ್ಷ್ಮಿ ಪೂಜೆಯನ್ನು ಮಾಡಲಾಗುತ್ತದೆ ಮರುದಿನ ನರಕಚತುರ್ದಶಿ ಅಥವಾ ದೀಪಾವಳಿ ಯನ್ನು ಆಚರಣೆ ಮಾಡುತ್ತಾರೆ ನರಕ ಚತುರ್ದಶಿಯಂದು ಬೆಳಿಗ್ಗೆ ತಿಲ ಮತ್ತು ಎಣ್ಣೆ ಹಚ್ಚಿ ಸ್ಥಾನ ಮಾಡುವ ಸಂಪ್ರದಾಯವಿದೆ ಹಾಗೂ ಗೋವರ್ಧನ ಪೂಜೆ ಅಂಗಡಿ ಪೂಜೆ ಬಲಿಪಾಡ್ಯಮಿ ಆಚರಣೆ ಹಾಗೂ ಸಹೋದರಿಯರು ಸಹೋದರರ ಹಣೆಗೆ ತಿಲಕವನ್ನು ಹಚ್ಚಿ ಒಣಗಿದ ಗೋಲವನ್ನು ಉಡುಗೊರೆಯಾಗಿ ನೀಡುತ್ತಾರೆ. ದೀಪಾವಳಿ […]

ಬಂತು ಬಂತು ದೀಪಗಳ ಬೆಳಕಿನ ದೀಪಾವಳಿ ಹಬ್ಬ Read More »

ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ರಿ ಕರ್ನಾಟಕ ಕೇಂದ್ರ ಕಚೇರಿ ತುಮಕೂರು, ಮಂಗಳೂರು ಜಿಲ್ಲಾ ಬೆಳ್ತಂಗಡಿ, ಕಳಿಯ ಮತ್ತು ಗುರುವಾಯನಕೆರೆ ಯೋಗ ಶಾಖೆಯ ಯೋಗ ಬಂಧುಗಳು ದೀಪಾವಳಿ ಗೋ ಪೂಜೆಯ ಪ್ರಯುಕ್ತ ಕಾಯರ್ತಡ್ಕದ ನಂದಗೋಕುಲ ಗೋಶಾಲೆಗೆ ಇಂದು ಮುಂಜಾನೆ ಭೇಟಿ ನೀಡಿ ಸಾಮೂಹಿಕ ಗೋಪೂಜೆ ನೆರವೇರಿಸಿದರು. ಯೋಗಬಂಧು ಅಶ್ವಥ್ ಗೋಪೂಜೆಯ ಮಹತ್ವದ ಬಗ್ಗೆ ಬೌದ್ಧಿಕ ನೀಡಿದರು. ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್, ಸಹ ಶಿಕ್ಷಕ ಸುಕೇಶ್,ವಿಜಯಣ್ಣ ಹಾಗೂ ಮೂರು ಯೋಗ ಶಾಖೆಗಳ 85 ಯೋಗ ಬಂಧುಗಳು

ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ Read More »

ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ನಾಳೆ ಗೋಪೂಜೆಗೆ ‌ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ದೀಪಾವಳಿ ಹಿನ್ನೆಲೆ ನಾಳೆ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯಡಿಯಲ್ಲಿ ಬರುವ ರಾಜ್ಯದ ಎಲ್ಲಾ ದೇವಾಲಯಗಳಲ್ಲೂ ಬಲಿಪಾಡ್ಯಮಿ ಹಿನ್ನೆಲೆ ಗೋಪೂಜೆ ನಡೆಸುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರು, ಕರ್ನಾಟಕ ಸರ್ಕಾರದ ಪರ ಬಲಿಪಾಡ್ಯಮಿಯಂದು ರಾಜ್ಯದ ಮುಜರಾಯಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ ಗೋ ಪೂಜೆ ನಡೆಸುವಂತೆ ಆದೇಶಿಸಿರುವುದಾಗಿದೆ. ಹಿಂದೂ ಧರ್ಮದಲ್ಲಿ ಗೋವಿಗೆ ‌ವಿಶೇಷ ಸ್ಥಾನಮಾನ ಇದ್ದು, ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿದೆ. ಗೋವುಗಳ ಮಹತ್ವ ಮತ್ತು ಅವುಗಳ

ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ನಾಳೆ ಗೋಪೂಜೆಗೆ ‌ರಾಜ್ಯ ಸರ್ಕಾರ ಆದೇಶ Read More »

ಅಯೋಧ್ಯೆಯಲ್ಲಿ ನಾಳೆ ಬೆಳಗಲಿವೆ 26.11 ಲಕ್ಷ ಮಣ್ಣಿನ ಹಣತೆಗಳು

ಈ ದೀಪಾವಳಿಗೆ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಲು ಅಯೋಧ್ಯೆ ಸಜ್ಜು ಲಖನೌ: ದೀಪಾವಳಿಯ ಸ್ವಾಗತಕ್ಕೆ ಶ್ರೀರಾಮನ ಜನ್ಮಸ್ಥಾನ ಅಯೋಧ್ಯೆ ಸಜ್ಜಾಗಿದ್ದು, ಈ ಬಾರಿ ಅಯೋಧ್ಯೆಯಲ್ಲಿ ದೀಪಾವಳಿ ಅಂಗವಾಗಿ ಬರೋಬ್ಬರಿ 26.11 ಲಕ್ಷ ಮಣ್ಣಿನ ದೀಪಗಳನ್ನು ಅಕ್ಟೋಬರ್ 19ರಂದು ಬೆಳಗಿಸಲಾಗುತ್ತಿದೆ. ಇದು ಹೊಸ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸುವ ನಿರೀಕ್ಷೆ ಇದೆ. ಇದು ನಂಬಿಕೆ ಮತ್ತು ಸಮುದಾಯ ಮನೋಭಾವಕ್ಕೆ ಮಹತ್ವದ ಸಾಕ್ಷಿಯಾಗಿದೆ. ಈ ವರ್ಷ ದೀಪಾವಳಿಗೆ ಅಯೋಧ್ಯೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಸೇರುವ ಸಾಧ್ಯತೆಗಳಿವೆ. ಡಾ.ರಾಮ್ ಮನೋಹರ್ ಲೋಹಿಯಾ

ಅಯೋಧ್ಯೆಯಲ್ಲಿ ನಾಳೆ ಬೆಳಗಲಿವೆ 26.11 ಲಕ್ಷ ಮಣ್ಣಿನ ಹಣತೆಗಳು Read More »

ತಲಕಾವೇರಿಯಲ್ಲಿ ‌ಪವಿತ್ರ ಕಾವೇರಿ ತೀರ್ಥೋದ್ಭವ

ಮಡಿಕೇರಿ: ಇಂದು ಮಧ್ಯಾಹ್ನ 1.44 ರ ಶುಭ ಮುಹೂರ್ತದಲ್ಲಿ ಕಾವೇರಿ ನದಿಯ ಉಗಮ ಸ್ಥಾನವಾದ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ನಡೆಯಿತು. ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಕಾವೇರಿ ತೀರ್ಥ ಸ್ವರೂಪಿಣಿಯಾಗಿ ಕಾಣಿಸಿಕೊಂಡು ಭಕ್ತರನ್ನು ಅನುಗ್ರಹಿಸಿದಳು. ಈ ಪುಣ್ಯ ಕಾರ್ಯಕ್ಕೆ ಸಂಸದ ಯದುವೀರ ಕೃಷ್ಣದತ್ತ ಒಡೆಯರ್, ಸಿ ಎಂ ಕಾನೂನು ಸಲಹೆಗಾರ ಮತ್ತು ಶಾಸಕ ಎ. ಎಸ್. ಪೊನ್ನಣ್ಣ ಸೇರಿದಂತೆ ಇನ್ನೂ ಹಲವು ಗಣ್ಯರು ಸಾಕ್ಷಿಗಳಾದರು.

ತಲಕಾವೇರಿಯಲ್ಲಿ ‌ಪವಿತ್ರ ಕಾವೇರಿ ತೀರ್ಥೋದ್ಭವ Read More »

ಶ್ರೀಶೈಲಂ ‌ಮಲ್ಲಿಕಾರ್ಜುನ ಸ್ವಾಮಿ ದೇವರಿಗೆ ಪ್ರಧಾನಿ ಮೋದಿ ಪೂಜೆ

ಶ್ರೀಶೈಲಂ: ಆಂಧ್ರಪ್ರದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಶ್ರೀಶೈಲಂ‌ನ ಶ್ರೀ ಭ್ರಮರಾಂಭ ಮಲ್ಲಿಕಾರ್ಜುನ ಸ್ವಾಮಿ ವರ್ಲ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಪ್ರಧಾನಿ ಅವರು ಹಸುವಿನ ಹಾಲು, ತುಪ್ಪ, ಸಕ್ಕರೆ, ಜೇನು ತುಪ್ಪ, ಮೊಸರು ಮಿಶ್ರಿತ ರುದ್ರಾಭಿಷೇಕವನ್ನು ಶ್ರೀ ದೇವರಿಗೆ ನೆರವೇರಿಸಿದರು‌. ಆ ಬಳಿಕ ದೇಗುಲದಲ್ಲಿ ಕೊಂಚ ಧ್ಯಾನ ನಡೆಸಿ, ಬಳಿಕ ಪ್ರಾರ್ಥಿಸಿದರು‌. ಒಂದೇ ದೇವಾಲಯದ ಸಂಕೀರ್ಣದಲ್ಲಿ ಜ್ಯೋತಿರ್ಲಿಂಗ ಮತ್ತು ಶಕ್ತಿ ಪೀಠಗಳೆರಡೂ ಇದ್ದು, ಇದು ವಿಶೇಷ ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ.

ಶ್ರೀಶೈಲಂ ‌ಮಲ್ಲಿಕಾರ್ಜುನ ಸ್ವಾಮಿ ದೇವರಿಗೆ ಪ್ರಧಾನಿ ಮೋದಿ ಪೂಜೆ Read More »

ಅ. 18: ಪೆರುವಾಜೆಯ ಜೆ. ಡಿ. ಆಡಿಟೋರಿಯಂ‌ನಲ್ಲಿ ಮಕ್ಕಳ ‘ಗೊಂಬೆ ರಾವಣ’ ನಾಟಕ

ಪುತ್ತೂರು: ಯುವ ರಾಜ್ಯ ಪ್ರಶಸ್ತಿ ಪುರಸ್ಕೃತ ರಂಗ ನಿರ್ದೇಶಕ ವಿದ್ದು ಉಚ್ಚಿಲ ಅವರ ಮಾರ್ಗದರ್ಶನದಲ್ಲಿ, ಡ್ಯಾನ್ಸ್ & ಬೀಟ್ಸ್ ನೃತ್ಯ ಸಂಸ್ಥೆ ಬೆಳ್ಳಾರೆ ನೇತೃತ್ವದ ಗೊಂಬೆ ರಾವಣ ಎಂಬ ಮಕ್ಕಳ ರಂಗ ನಾಟಕ ಅ. 18 ಶನಿವಾರದಂದು ಪೆರುವಾಜೆಯ ಜೆ. ಡಿ. ಆಡಿಟೋರಿಯಂ‌ನಲ್ಲಿ ಚೊಚ್ಚಲ ಪ್ರದರ್ಶನ ಕಾಣಲಿದೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಬಳಿಕ ವಿವಿಧ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 13 ಮಕ್ಕಳು ಈ ರಂಗನಾಟಕದಲ್ಲಿ ಅಭಿನಯಿಸಲಿದ್ದಾರೆ. ಕಲಾ ಪೋಷಕರ ಸಹಕಾರದ ಜೊತೆಗೆ ‘ಮುದ್ರಾರಂಗ’ – ಚಿಣ್ಣರ

ಅ. 18: ಪೆರುವಾಜೆಯ ಜೆ. ಡಿ. ಆಡಿಟೋರಿಯಂ‌ನಲ್ಲಿ ಮಕ್ಕಳ ‘ಗೊಂಬೆ ರಾವಣ’ ನಾಟಕ Read More »

ಗೇರುಕಟ್ಟೆ ಅರ್ಕುಳ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

ಗೇರುಕಟ್ಟೆ ಅರ್ಕುಳ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ ಶ್ರೀ ಜಗದ್ಗುರು ಅಯ್ಯ ಸ್ವಾಮಿ ಮಠ ಆಲoಗಾರು ಮೂಡಬಿದಿರೆ ಪುನರ್ ನಿರ್ಮಾಣ ಜೀರ್ಣೋದ್ಧಾರದ ಪ್ರಯುಕ್ತ ನಡೆದ ಶ್ರೀ ಗುರು ಮತ್ತು ವಿಶ್ವಕರ್ಮ ಯಜ್ಞದ ಶುಭಾವಸರದಲ್ಲಿ ಅಲoಗಾರಿನ ಪಾಲ್ಕೆ ಬಾಬುರಾಯ ಆಚಾರ್ಯ ವೇದಿಕೆಯಲ್ಲಿ ಗೇರುಕಟ್ಟೆಯ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಡಗುತಿಟ್ಟಿನ ಪ್ರಸಿದ್ಧ ಕಲಾವಿದ ತೀರ್ಥಹಳ್ಳಿ ಗೋಪಾಲ ಆಚಾರ್ಯ ಇವರಿಗೆ ಅರ್ಕುಳ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನುವಹಿಸಿದ್ದ ಶ್ರೀಮಠದ ಜೀರ್ಣೋದ್ಧಾರ

ಗೇರುಕಟ್ಟೆ ಅರ್ಕುಳ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ Read More »

ಋಷಿಕೇಶದಲ್ಲಿ ರಜನಿಕಾಂತ್‌ : ಫೋಟೊ ಭಾರಿ ವೈರಲ್‌

ರಸ್ತೆ ಬದಿ ನಿಂತು ಜನಸಾಮಾನ್ಯರಂತೆ ಊಟ ಮಾಡಿದ ಸೂಪರ್‌ಸ್ಟಾರ್‌ ಚೆನ್ನೈ : ಆಗಾಗ ಹಿಮಾಲಯದತ್ತ ಆಧ್ಯಾತ್ಮಿಕ ಪ್ರವಾಸ ಕೈಗೊಂಡು ಧ್ಯಾನ, ಪ್ರಾರ್ಥನೆ ಮಾಡಿ ಬರುವ ಹವ್ಯಾಸ ಇಟ್ಟುಕೊಂಡಿರುವ ಮೇರುನಟ ರಜನಿಕಾಂತ್‌ ಈ ಸಲ ಋಷಿಕೇಶಕ್ಕೆ ಹೋಗಿದ್ದಾರೆ. ರಜನಿಕಾಂತ್ ‘ಕೂಲಿ’ ಸಿನಿಮಾ ಬಳಿಕ ಆಧ್ಯಾತ್ಮಿಕ ವಿರಾಮಕ್ಕಾಗಿ ಋಷಿಕೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿ ಅವರು ಸರಳವಾಗಿ ರಸ್ತೆ ಬದಿಯಲ್ಲಿ ಊಟ ಮಾಡುತ್ತಿರುವ ಫೋಟೋ ವೈರಲ್ ಆಗಿದೆ. ರಜನಿಕಾಂತ್‌ ದಯಾನಂದ ಆಶ್ರಮಕ್ಕೆ ಭೇಟಿ ನೀಡಿ, ಗಂಗಾ ನದಿಯಲ್ಲಿ ಧ್ಯಾನ ಮಾಡಿದ್ದಾರೆ.

ಋಷಿಕೇಶದಲ್ಲಿ ರಜನಿಕಾಂತ್‌ : ಫೋಟೊ ಭಾರಿ ವೈರಲ್‌ Read More »

ಕಟೀಲು ದೇವಳದಲ್ಲಿ ಮಹಿಳೆಯರಿಗೆ ದೇವರ ಶೇಷವಸ್ತ್ರ ವಿತರಣೆ

ನವರಾತ್ರಿ ಅಂಗವಾಗಿ 25 ಸಾವಿರಕ್ಕೂ ಅಧಿಕ ಮಹಿಳೆಯರಿಗೆ ಸೀರೆ ವಿತರಣೆ ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಶನಿವಾರ ಲಲಿತಾ ಪಂಚಮಿಯ ದಿನ ಮಹಿಳೆಯರಿಗೆ ಶೇಷವಸ್ತ್ರವಾಗಿ 25 ಸಾವಿರಕ್ಕೂ ಹೆಚ್ಚು ಸೀರೆಗಳನ್ನು ವಿತರಿಸಲಾಯಿತು. ಸಂಜೆ ಮೂರರಿಂದಲೇ ಭಕ್ತರು ಸರದಿಯಲ್ಲಿ ನಿಂತಿದ್ದು, ಸಂಜೆ 5 ಗಂಟೆಯಿಂದ ಆರಂಭವಾದ ವಿತರಣೆ ತಡರಾತ್ರಿವರೆಗೆ ನಡೆಯಿತು. ಈ ವರ್ಷದಲ್ಲಿ ಒಟ್ಟಾರೆ ಸುಮಾರು 44 ಸಾವಿರ ಸೀರೆಗಳನ್ನು ವಿತರಿಸಲು ದೇವಳ ಪೂರ್ವಸಿದ್ಧತೆ ಮಾಡಿಕೊಂಡಿತ್ತು. ಭಕ್ತರ ಸಾಲಿನಲ್ಲಿ ನೂಕುನುಗ್ಗಲು ತಪ್ಪಿಸಲು

ಕಟೀಲು ದೇವಳದಲ್ಲಿ ಮಹಿಳೆಯರಿಗೆ ದೇವರ ಶೇಷವಸ್ತ್ರ ವಿತರಣೆ Read More »

error: Content is protected !!
Scroll to Top