ಪುತ್ತೂರಿಗೆ ಟೂರಿಸಂ ಮಾನ್ಯತೆಗೆ ಪ್ರಯತ್ನ | ನವೀಕೃತ ಶ್ರೀ ಮಹಾಲಿಂಗೇಶ್ವರ ಸಭಾಭವನ ಸಮರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ | ಗೋಲೋಕ ಉತ್ಸವ ಕುರಿತು ಯೋಜನೆ: ಕೇಶವ ಪ್ರಸಾದ್ ಮುಳಿಯ
ಪುತ್ತೂರು: ಕರಾವಳಿ ಭಾಗ ಧಾರ್ಮಿಕತೆಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ ಪುತ್ತೂರನ್ನು ಟೂರಿಸಂ ಪ್ರದೇಶ ಆಗುವ ನಿಟ್ಟಿನಲ್ಲಿ ಮಾನ್ಯತೆ ನೀಡಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ಮಾಸ್ಟರ್ ಪ್ಲಾನ್ ಸಹಿತ ಮಾಡಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ನವೀಕೃತಗೊಂಡಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಸಭಾಭವನದ ಸಮರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಈಗಾಗಲೇ ಅಭಿವೃದ್ಧಿ ಕಾರ್ಯಕ್ರಮಗಳಲ್ಲೊಂದಾದ ಸಭಾಭವನ ಸಮರ್ಪಣೆ ಕಾರ್ಯ ನಡೆದಿದೆ. ಮುಂದಿನ ದಿನಗಳಲ್ಲಿ ಕೆರೆಯಲ್ಲಿ ಕಾರಂಜಿ, ಕೆರೆಯ […]










