ಧಾರ್ಮಿಕ

ಡಿ.9 : ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶನೈಶ್ಚರ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ: ಪುತ್ತಿಲ ಪರಿವಾರ ವಿಟ್ಲ ವಲಯ ಹಾಗೂ ಶನೈಶ್ಚರ ಪೂಜಾ ಸಮಿತಿ ವತಿಯಿಂದ ಡಿ.9 ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತಾ, ಪೂಜಾ ಸಮಿತಿಯ ಅಧ್ಯಕ್ಷ, ನ್ಯಾಯವಾದಿ ಶ್ರೀಕೃಷ್ಣ […]

ಡಿ.9 : ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶನೈಶ್ಚರ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಉಪ್ಪಿನಂಗಡಿ ದೇವಳಕ್ಕೆ ಹೊಸ ಲುಕ್ : ಕ್ಷೇತ್ರದ ಅಭಿವೃದ್ದಿಗೆ 174 ಕೋಟಿ ರೂ. ಪ್ರಸ್ತಾವನೆ | ದೇವಸ್ಥಾನದ ಅಭಿವೃದ್ಧಿ ಕುರಿತ ಸಭೆಯಲ್ಲಿ ಶಾಸಕ ಅಶೋಕ್ ರೈ

ಉಪ್ಪಿನಂಗಡಿ: ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಾಗ 25 ವರ್ಷಗಳಷ್ಟಾದರೂ ಭವಿಷ್ಯದ ಚಿಂತನೆಯಿರಬೇಕು. ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಾಲಯದ ಅಭಿವೃದ್ಧಿಯೂ ಇದೇ ರೀತಿ ನಡೆಯಬೇಕಿದ್ದು, ಬರುವ ಭಕ್ತರಿಗೆ ಉತ್ತಮ ಇಲ್ಲಿ ವ್ಯವಸ್ಥೆ ಮಾಡಿಕೊಡುವ ಕಾರ್ಯವಾಗಬೇಕು. ಪುಣ್ಯಕ್ಷೇತ್ರವಾಗಿರುವ ಈ ಸಂಗಮ ಕ್ಷೇತ್ರವನ್ನು ಪ್ರವಾಸೋದ್ಯಮ ಕೇಂದ್ರವಾಗಿಯೂ ಅಭಿವೃದ್ಧಿ ಪಡಿಸಬೇಕಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಅಭಿವೃದ್ಧಿಯ ವಿಚಾರವಾಗಿ ದೇವಾಲಯದ ಸಭಾಂಗಣದಲ್ಲಿ ನಡೆದ ಹಾಲಿ ಹಾಗೂ ಮಾಜಿ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಮತ್ತು ಭಕ್ತರ

ಉಪ್ಪಿನಂಗಡಿ ದೇವಳಕ್ಕೆ ಹೊಸ ಲುಕ್ : ಕ್ಷೇತ್ರದ ಅಭಿವೃದ್ದಿಗೆ 174 ಕೋಟಿ ರೂ. ಪ್ರಸ್ತಾವನೆ | ದೇವಸ್ಥಾನದ ಅಭಿವೃದ್ಧಿ ಕುರಿತ ಸಭೆಯಲ್ಲಿ ಶಾಸಕ ಅಶೋಕ್ ರೈ Read More »

ಇಂದು ಚಂದ್ರ ಗ್ರಹಣ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾತ್ರಿ ಪೂಜೆಯಲ್ಲಿ ಯಾವುದೇ ಬದಲಾವಣೆ ಇಲ್ಲ

ಪುತ್ತೂರು: ಅಶ್ವಿಜ ಮಾಸವನ್ನು ಹಬ್ಬಗಳ ಮಾಸ ಎಂದು ಕರೆಯಲಾಗುತ್ತಿದ್ದು, ಜ್ಯೋತಿಷ್ಯ ಮೂಲಗಳ ಪ್ರಕಾರ ಇಂದು ನಡೆಯುವ ಚಂದ್ರ ಗ್ರಹಣ ಎಲ್ಲಾ ರಾಶಿಗಳ ಜನರ ಜೀವನದ ಮೇಲೆ ಪ್ರಭಾವ ಬೀರಲಿದೆ. ಗ್ರಹಣದ ಅವಧಿ ಮಧ್ಯರಾತ್ರಿ 1.04  ರಿಂದ 2.24  ವರಗೆ ಇರಲಿದೆ. ಹಿಂದೂ ಧರ್ಮದ ನಂಬಿಕೆ ಪ್ರಕಾರ ಗ್ರಹಣದ 9 ಗಂಟೆ ಮೊದಲು ಚಂದ್ರಗ್ರಹಣದ ಸೂತಕ ಅವಧಿ ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಮುಖ್ಯವಾಗಿ ಗರ್ಭಿಣಿಯರು ಹೊರಗಡೆ ಹೋಗುವುದನ್ನು ಕಡ್ಡಾಯವಾಗಿ ತಪ್ಪಿಸುವ ಮೂಲಕ ವಿಶೇಷ ಕಾಳಜಿ ವಹಿಸಬೇಕು. ಗ್ರಹಣದ ಸಂದರ್ಭದಲ್ಲಿ

ಇಂದು ಚಂದ್ರ ಗ್ರಹಣ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾತ್ರಿ ಪೂಜೆಯಲ್ಲಿ ಯಾವುದೇ ಬದಲಾವಣೆ ಇಲ್ಲ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ-2023 ಶನಿವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ತಹಶೀಲ್ದಾರ್ ಜೆ.ಶಿವಶಂಕರ ದೀಪ ಪ್ರಜ್ವಲನೆ ಮಾಡಿ ಮಾತನಾಡಿ, ಜಗತ್ತಿನ ಅತ್ಯಂತ ದೊಡ್ಡ ಕೃತಿ ರಾಮಾಯಣವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶದ ಹಾದಿಯಲ್ಲಿ ನಾವೆಲ್ಲರೂ ನಡೆಯುವ ಅಗತ್ಯವಿದೆ ಎಂದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಂಚಾಲಕ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್‍.ಆರ್‍. ಮಾತನಾಡಿ, ಮನುಷ್ಯ ಸುಖ, ಶಾಂತಿ, ಸಂತೋಷದಿಂದ ಬದುಕಲು, ಎಲ್ಲರಿಗೂ ಸಮಬಾಳು, ಸಮಪಾಲು

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ Read More »

ಶೋಭಾಯಾತ್ರೆಯೊಂದಿಗೆ ಪುತ್ತೂರು ದಸರಾ ಉತ್ಸವ ಸಂಪನ್ನ

ಪುತ್ತೂರು: ಅ 15ರಂದು ಪುತ್ತೂರಿನ ಸಂಪ್ಯ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಆರಂಭಗೊಂಡ ಪುತ್ತೂರು ದಸರಾ ಉತ್ಸವ ಗುರುವಾರ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು. ಗುರುವಾರ ಸಂಜೆ ನಡೆದ ದಸರಾ ಮರವಣಿಗೆ ಜನಮನ ಸೂರೆಗೊಂಡಿತು. ನವದುರ್ಗೆ ಮತ್ತು ಶಾರದೆ ಹಾಗೂ ಮಹಾ ಗಣಪತಿ ವಿಗ್ರಹಗಳ ಮೆರವಣಿಗೆಗೆ ವಿಶ್ವಹಿಂದೂ ಪರಿಷತ್ ಮುಖಂಡರಾದ ಯು. ಪೂವಪ್ಪ ಚಾಲನೆ ನೀಡಿದರು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಕುಣಿತ ಭಜನಾ ಮೆರವಣಿಗೆಗೆ ಚಾಲನೆ ನೀಡಿದರು. ನವದುರ್ಗಾರಾಧನಾ ಸಮಿತಿಯ ಅಧ್ಯಕ್ಷರಾದ ಜಯಂತ ಶೆಟ್ಟಿ ಕಂಬಳದಡ್ಡ, ಸಂಚಾಲಕರಾದ

ಶೋಭಾಯಾತ್ರೆಯೊಂದಿಗೆ ಪುತ್ತೂರು ದಸರಾ ಉತ್ಸವ ಸಂಪನ್ನ Read More »

ನ.14 ರಿಂದ 22 : ಶ್ರೀ ರಾಧಾ ಸುರಭಿ ಗೋಮಂದಿರದಲ್ಲಿ ಗೋನವರಾತ್ರಿ ಉತ್ಸವ: ಪುತ್ತೂರಿಗೆ ಆಗಮಿಸಿದ ಗೋರಥ ಯಾತ್ರೆ

ಪುತ್ತೂರು: ಶ್ರೀ ರಾಧಾ ಸುರಭಿ ಗೋಮಂದಿರದಲ್ಲಿ ಅಷ್ಟೋತ್ತರ ಶತ ಶ್ರೀಮದ್ಭಾಗವತ ಕಥಾ ಪಾರಾಯಣ ಮಹಾಯಜ್ಞ ಹಾಗೂ ಗೋನವರಾತ್ರಿ ಉತ್ಸವ ನ.14 ರಿಂದ ಆರಂಭಗೊಂಡು ನ.22ರಂದು ಸಂಪನ್ನಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ಅಲ್ಲಿಂದ ಹೊರಟ ಗೋರಥ ಗುರುವಾರ ಸಂಜೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ಗೋರಥವನ್ನು ಸ್ವಾಗತಿಸಿದ ಬಳಿಕ, ಪುತ್ತೂರು ನಗರರ ಸಂಚಾರಕ್ಕೆ ತೆರಳಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗೋಪುರದ ಬಳಿ ಗೋಮಾತೆಗೆ ಆರತಿ ಬೆಳಗಲಾಯಿತು. ಬಳಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಬಿ.ಐತ್ತಪ್ಪ

ನ.14 ರಿಂದ 22 : ಶ್ರೀ ರಾಧಾ ಸುರಭಿ ಗೋಮಂದಿರದಲ್ಲಿ ಗೋನವರಾತ್ರಿ ಉತ್ಸವ: ಪುತ್ತೂರಿಗೆ ಆಗಮಿಸಿದ ಗೋರಥ ಯಾತ್ರೆ Read More »

ಜ.22: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ : ಪ್ರಧಾನಿ ಮೋದಿಗೆ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದಲ್ಲಿ ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದ್ದು, ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಮಂತ್ರಣ ನೀಡಲಾಯಿತು. ಈ ಬಗ್ಗೆ ಸ್ವತಃ ಪ್ರಧಾನಿಗಳು ಟ್ವಿಟ್ ಮಾಡಿದ್ದು, ತಮ್ಮ ಜೀವಮಾನದಲ್ಲಿ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿರುವುದಕ್ಕೆ ಧನ್ಯನಾಗಿದ್ದೇನೆ ಎಂದು ಹೇಳಿದ್ದಾರೆ. ತಮಗೆ ಆಮಂತ್ರಣ ನೀಡಿದ್ದನ್ನು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಜೈ ಸಿಯಾರಾಮ್! ಇಂದು ಅತ್ಯಂತ ಭಾವನಾತ್ಮಕ ದಿನವಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿಗೆ ಆಮಂತ್ರಣ ನೀಡಿದ ತೀರ್ಥ ಕ್ಷೇತ್ರ

ಜ.22: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ : ಪ್ರಧಾನಿ ಮೋದಿಗೆ ಆಹ್ವಾನ Read More »

ಚಂದ್ರಗ್ರಹಣ : ಕುಕ್ಕೆ ಕ್ಷೇತ್ರದಲ್ಲಿ ದರ್ಶನ ಸಮಯದಲ್ಲಿ ಬದಲಾವಣೆ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.28ರಂದು ಶನಿವಾರ ಚಂದ್ರಗ್ರಹಣ ಇರುವುದರಿಂದ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತಾಧಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅ.28ರಂದು ಶನಿವಾರ ರಾತ್ರಿ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯಗೊಳ್ಳಲಿದೆ. ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಈ ದಿನ ಸಾಯಂಕಾಲ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ. ರಾತ್ರಿ ಪ್ರಸಾದ ಬೋಜನ ಪ್ರಸಾದ ವಿತರಣೆ ಇರುವುದಿಲ್ಲ ಎಂದು ಶ್ರೀ ದೇವಳದ

ಚಂದ್ರಗ್ರಹಣ : ಕುಕ್ಕೆ ಕ್ಷೇತ್ರದಲ್ಲಿ ದರ್ಶನ ಸಮಯದಲ್ಲಿ ಬದಲಾವಣೆ Read More »

ವೈಭವದ ಶೋಭಾಯಾತ್ರೆಯೊಂದಿಗೆ ಪುತ್ತೂರು ಶಾರದೋತ್ಸವ ಸಮಾಪನ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಒಂಭತ್ತು ದಿನಗಳ ಕಾಲ ನಡೆದ ಪುತ್ತೂರು ಶಾರದೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಸಂಜೆ ಶ್ರೀ ದೇವಸ್ಥಾನದಲ್ಲಿ ಶ್ರೀ ಶಾರದಾ ಮಾತೆಗೆ ಮಹಾಪೂಜೆ ಬಳಿಕ ಶೋಭಾಯಾತ್ರೆ ಹೊರಟು ಬೊಳುವಾರಿಗೆ ತೆರಳಿತು. ಅಲ್ಲಿ ಮೆರವಣಿಗೆಗೆ ಚಾಲನೆ ನೀಡಿ ಭಜನಾ ತಂಡಗಳ ಸಹಸ್ರಾರು ಭಜಕರು ಕುಣಿತ ಭಜನೆಯೊಂದಿಗೆ, ಆಕರ್ಷಕ ಸ್ತಬ್ಧಚಿತ್ರ, ಡೊಳ್ಳು ಕುಣಿತ, ಮುಂತಾದ ಹತ್ತು ಹಲವಾರು ಆಕರ್ಷಣೆಯೊಂದಿಗೆ ಬೊಳುವಾರಿನಿಂದ ಮುಖ್ಯರಸ್ತೆಯಲ್ಲಿ ಆಗಮಿಸಿ, ಬಸ್ ನಿಲ್ದಾಣ, ಕಲ್ಲಾರೆ,

ವೈಭವದ ಶೋಭಾಯಾತ್ರೆಯೊಂದಿಗೆ ಪುತ್ತೂರು ಶಾರದೋತ್ಸವ ಸಮಾಪನ Read More »

ಸರಸ್ವತಿ ಗೀತ ಗಾಯನ ಸ್ಪರ್ಧೆಯ ಫಲಿತಾಂಶ

ಪುತ್ತೂರು: ನವರಾತ್ರಿ ಹಿನ್ನೆಲೆಯಲ್ಲಿ ನ್ಯೂಸ್ ಪುತ್ತೂರು ಏರ್ಪಡಿಸಿದ್ದ ಸರಸ್ವತಿ ಗೀತ ಗಾಯನ ಸ್ಪರ್ಧೆಯ ಫಲಿತಾಂಶವನ್ನು ಇಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕ ವಿಭಾಗದಲ್ಲಿ ಸುಮಾ ಕೋಟೆ ಪ್ರಥಮ, ಸಾನ್ವಿ ಕಜೆ ದ್ವಿತೀಯ, ಶಿವಪ್ರಿಯಾ ಪಿ. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಶಾಲಾ ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಸುಪ್ರಜಾ ರಾವ್ ಪ್ರಥಮ, ಜನನಿ ದ್ವಿತೀಯ ಸ್ಥಾನ ಹಾಗೂ ಆರಾಧ್ಯ ಸಿ.ಯು. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ತೀರ್ಪುಗಾರರಾಗಿ ಸಂಗೀತಾ ಶಿಕ್ಷಕಿಯರಾದ ಪವಿತ್ರಾ ರೂಪೇಶ್, ಪೂರ್ಣಿಮಾ ದಿನೇಶ್ ಅಂಬೆಕಲ್ಲು ಸಹಕರಿಸಿದರು.

ಸರಸ್ವತಿ ಗೀತ ಗಾಯನ ಸ್ಪರ್ಧೆಯ ಫಲಿತಾಂಶ Read More »

error: Content is protected !!
Scroll to Top