ಧಾರ್ಮಿಕ

ನ.14 ರಿಂದ 22 : ಶ್ರೀ ರಾಧಾ ಸುರಭಿ ಗೋಮಂದಿರದಲ್ಲಿ ಗೋನವರಾತ್ರಿ ಉತ್ಸವ: ಪುತ್ತೂರಿಗೆ ಆಗಮಿಸಿದ ಗೋರಥ ಯಾತ್ರೆ

ಪುತ್ತೂರು: ಶ್ರೀ ರಾಧಾ ಸುರಭಿ ಗೋಮಂದಿರದಲ್ಲಿ ಅಷ್ಟೋತ್ತರ ಶತ ಶ್ರೀಮದ್ಭಾಗವತ ಕಥಾ ಪಾರಾಯಣ ಮಹಾಯಜ್ಞ ಹಾಗೂ ಗೋನವರಾತ್ರಿ ಉತ್ಸವ ನ.14 ರಿಂದ ಆರಂಭಗೊಂಡು ನ.22ರಂದು ಸಂಪನ್ನಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ಅಲ್ಲಿಂದ ಹೊರಟ ಗೋರಥ ಗುರುವಾರ ಸಂಜೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ಗೋರಥವನ್ನು ಸ್ವಾಗತಿಸಿದ ಬಳಿಕ, ಪುತ್ತೂರು ನಗರರ ಸಂಚಾರಕ್ಕೆ ತೆರಳಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗೋಪುರದ ಬಳಿ ಗೋಮಾತೆಗೆ ಆರತಿ ಬೆಳಗಲಾಯಿತು. ಬಳಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಬಿ.ಐತ್ತಪ್ಪ […]

ನ.14 ರಿಂದ 22 : ಶ್ರೀ ರಾಧಾ ಸುರಭಿ ಗೋಮಂದಿರದಲ್ಲಿ ಗೋನವರಾತ್ರಿ ಉತ್ಸವ: ಪುತ್ತೂರಿಗೆ ಆಗಮಿಸಿದ ಗೋರಥ ಯಾತ್ರೆ Read More »

ಜ.22: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ : ಪ್ರಧಾನಿ ಮೋದಿಗೆ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದಲ್ಲಿ ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದ್ದು, ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಮಂತ್ರಣ ನೀಡಲಾಯಿತು. ಈ ಬಗ್ಗೆ ಸ್ವತಃ ಪ್ರಧಾನಿಗಳು ಟ್ವಿಟ್ ಮಾಡಿದ್ದು, ತಮ್ಮ ಜೀವಮಾನದಲ್ಲಿ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿರುವುದಕ್ಕೆ ಧನ್ಯನಾಗಿದ್ದೇನೆ ಎಂದು ಹೇಳಿದ್ದಾರೆ. ತಮಗೆ ಆಮಂತ್ರಣ ನೀಡಿದ್ದನ್ನು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಜೈ ಸಿಯಾರಾಮ್! ಇಂದು ಅತ್ಯಂತ ಭಾವನಾತ್ಮಕ ದಿನವಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿಗೆ ಆಮಂತ್ರಣ ನೀಡಿದ ತೀರ್ಥ ಕ್ಷೇತ್ರ

ಜ.22: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ : ಪ್ರಧಾನಿ ಮೋದಿಗೆ ಆಹ್ವಾನ Read More »

ಚಂದ್ರಗ್ರಹಣ : ಕುಕ್ಕೆ ಕ್ಷೇತ್ರದಲ್ಲಿ ದರ್ಶನ ಸಮಯದಲ್ಲಿ ಬದಲಾವಣೆ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.28ರಂದು ಶನಿವಾರ ಚಂದ್ರಗ್ರಹಣ ಇರುವುದರಿಂದ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತಾಧಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅ.28ರಂದು ಶನಿವಾರ ರಾತ್ರಿ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯಗೊಳ್ಳಲಿದೆ. ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಈ ದಿನ ಸಾಯಂಕಾಲ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ. ರಾತ್ರಿ ಪ್ರಸಾದ ಬೋಜನ ಪ್ರಸಾದ ವಿತರಣೆ ಇರುವುದಿಲ್ಲ ಎಂದು ಶ್ರೀ ದೇವಳದ

ಚಂದ್ರಗ್ರಹಣ : ಕುಕ್ಕೆ ಕ್ಷೇತ್ರದಲ್ಲಿ ದರ್ಶನ ಸಮಯದಲ್ಲಿ ಬದಲಾವಣೆ Read More »

ವೈಭವದ ಶೋಭಾಯಾತ್ರೆಯೊಂದಿಗೆ ಪುತ್ತೂರು ಶಾರದೋತ್ಸವ ಸಮಾಪನ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಒಂಭತ್ತು ದಿನಗಳ ಕಾಲ ನಡೆದ ಪುತ್ತೂರು ಶಾರದೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಸಂಜೆ ಶ್ರೀ ದೇವಸ್ಥಾನದಲ್ಲಿ ಶ್ರೀ ಶಾರದಾ ಮಾತೆಗೆ ಮಹಾಪೂಜೆ ಬಳಿಕ ಶೋಭಾಯಾತ್ರೆ ಹೊರಟು ಬೊಳುವಾರಿಗೆ ತೆರಳಿತು. ಅಲ್ಲಿ ಮೆರವಣಿಗೆಗೆ ಚಾಲನೆ ನೀಡಿ ಭಜನಾ ತಂಡಗಳ ಸಹಸ್ರಾರು ಭಜಕರು ಕುಣಿತ ಭಜನೆಯೊಂದಿಗೆ, ಆಕರ್ಷಕ ಸ್ತಬ್ಧಚಿತ್ರ, ಡೊಳ್ಳು ಕುಣಿತ, ಮುಂತಾದ ಹತ್ತು ಹಲವಾರು ಆಕರ್ಷಣೆಯೊಂದಿಗೆ ಬೊಳುವಾರಿನಿಂದ ಮುಖ್ಯರಸ್ತೆಯಲ್ಲಿ ಆಗಮಿಸಿ, ಬಸ್ ನಿಲ್ದಾಣ, ಕಲ್ಲಾರೆ,

ವೈಭವದ ಶೋಭಾಯಾತ್ರೆಯೊಂದಿಗೆ ಪುತ್ತೂರು ಶಾರದೋತ್ಸವ ಸಮಾಪನ Read More »

ಸರಸ್ವತಿ ಗೀತ ಗಾಯನ ಸ್ಪರ್ಧೆಯ ಫಲಿತಾಂಶ

ಪುತ್ತೂರು: ನವರಾತ್ರಿ ಹಿನ್ನೆಲೆಯಲ್ಲಿ ನ್ಯೂಸ್ ಪುತ್ತೂರು ಏರ್ಪಡಿಸಿದ್ದ ಸರಸ್ವತಿ ಗೀತ ಗಾಯನ ಸ್ಪರ್ಧೆಯ ಫಲಿತಾಂಶವನ್ನು ಇಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕ ವಿಭಾಗದಲ್ಲಿ ಸುಮಾ ಕೋಟೆ ಪ್ರಥಮ, ಸಾನ್ವಿ ಕಜೆ ದ್ವಿತೀಯ, ಶಿವಪ್ರಿಯಾ ಪಿ. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಶಾಲಾ ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಸುಪ್ರಜಾ ರಾವ್ ಪ್ರಥಮ, ಜನನಿ ದ್ವಿತೀಯ ಸ್ಥಾನ ಹಾಗೂ ಆರಾಧ್ಯ ಸಿ.ಯು. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ತೀರ್ಪುಗಾರರಾಗಿ ಸಂಗೀತಾ ಶಿಕ್ಷಕಿಯರಾದ ಪವಿತ್ರಾ ರೂಪೇಶ್, ಪೂರ್ಣಿಮಾ ದಿನೇಶ್ ಅಂಬೆಕಲ್ಲು ಸಹಕರಿಸಿದರು.

ಸರಸ್ವತಿ ಗೀತ ಗಾಯನ ಸ್ಪರ್ಧೆಯ ಫಲಿತಾಂಶ Read More »

ಬಡವರ ಜೊತೆ ಸಹಭೋಜನ ಮಾಡುವ ಉದ್ದೇಶದಿಂದ ಸಾರಿ ವಿತರಣೆ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನಲ್ಲಿ ಈ ಬಾರಿ ಸುಮಾರು 50 ಸಾವಿರ ಮಂದಿಗೆ ವಸ್ತ್ರ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವ ಬಡವರ ಜೊತೆ ಸಹಭೋಜನವನ್ನು ಮಾಡಲಿದ್ದೇನೆ. ಈ ಉದ್ದೇಶದಿಂದಲೇ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂದಿರದಲ್ಲಿ ನಡೆದ 19ನೇ ವರ್ಷದ ನವರಾತ್ರಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಇನ್ನೊಬ್ಬರ ಕಷ್ಟಕ್ಕೆ ನೆರವಾಗುವುದೇ ಧರ್ಮ. ಜಾತಿಮತಗಳ ಭೇದವಿಲ್ಲದೆ ಎಲ್ಲರೊಂದಿಗೆ ಸಹೋದರ ಭಾವನೆಯಿಂದ ಬದುಕುವುದು ಮತ್ತು ಧರ್ಮಗಳ ನಡುವೆ

ಬಡವರ ಜೊತೆ ಸಹಭೋಜನ ಮಾಡುವ ಉದ್ದೇಶದಿಂದ ಸಾರಿ ವಿತರಣೆ: ಶಾಸಕ ಅಶೋಕ್ ರೈ Read More »

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಸಮರ್ಪಣೆ!

ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿಯನ್ನು ಶನಿವಾರ ಸಮರ್ಪಣೆ ಮಾಡಲಾಗಿದೆ. ಬಿಹಾರ ಮೂಲದ ಡಾ. ರಾಹುಲ್ ಕುಮಾರ್ ಪಾಟ್ನಾ ಅವರು ಪ್ರಭಾವಳಿ ಸಮರ್ಪಿಸಿದ್ದು, ಶನಿವಾರ ವಿಶೇಷ ಪೂಜೆ ಸಲ್ಲಿಸಿ ಸಮರ್ಪಿಸಲಾಯಿತು. ಮದುವೆ ಬಳಿಕ ಸಂತಾನಕ್ಕಾಗಿ ಹೇಳಲಾದ ಹರಕೆ ಸೇವೆ ಇದಾಗಿದ್ದು, ಪುತ್ರ ಸಂತಾನ ಆದ ನಂತರ ದಂಪತಿ ಕ್ಷೇತ್ರಕ್ಕೆ ಆಗಮಿಸಿ ಹರಕೆ ತೀರಿಸಿರುವುದಾಗಿ ತಿಳಿದು ಬಂದಿದೆ. ಹರಕೆ ತೀರಿಸುವ ಅಂಗವಾಗಿ ಡಾ. ರಾಹುಲ್ ಕುಮಾರ್ ದಂಪತಿ ಪುತ್ರನ ಉಪಸ್ಥಿತಿಯಲ್ಲಿ

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಸಮರ್ಪಣೆ! Read More »

ಪುತ್ತೂರಿನಲ್ಲಿ ವೈಭವದ ಶಾರದೋತ್ಸವ: ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ

ಪುತ್ತೂರು: ಆರು ದಿನಗಳಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯುತ್ತಿರುವ ಪುತ್ತೂರು ಶಾರದೋತ್ಸವದ ಅಂಗವಾಗಿ ಶ್ರೀ ಶಾರದಾ ಮಾತೆಯ ವಿಗ್ರಹದ ಮೆರವಣಿಗೆಯೊಂದಿಗೆ ಪ್ರತಿಷ್ಠಾಪನೆ ಶುಕ್ರವಾರ ನಡೆಯಿತು. ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶಾರದೋತ್ಸವ ವಿಜೃಂಭಣೆಯಿಂದ ಜರಗುತ್ತಿದ್ದು, ಶುಕ್ರವಾರ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ಮೆರವಣಿಗೆ ಮೂಲಕ ಕರೆತಂದು ಪ್ರತಿಷ್ಠಾಪಿಸಲಾಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಪ್ರತಿಷ್ಠಾಪನೆ ಬಳಿಕ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ರಾಜೇಶ್‍ ಬನ್ನೂರು,

ಪುತ್ತೂರಿನಲ್ಲಿ ವೈಭವದ ಶಾರದೋತ್ಸವ: ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ Read More »

ಹುಟ್ಟೂರ ದೇವರಿಗೆ ವಜ್ರದ ಸರ ಅರ್ಪಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ನವರಾತ್ರಿ ಪ್ರಯುಕ್ತ ಕೋಡಿಂಬಾಡಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಚಂಡಿಕಾ ಹೋಮ ಮತ್ತು ತುಲಾಭಾರ ಸೇವೆ ಸಲ್ಲಿಸಿದರು. ಇದೇ ಸಂರ್ಭ ಸೇವಾ ರೂಪದಲ್ಲಿ ತನ್ನ ಹುಟ್ಟೂರ ಆರಾಧ್ಯ ದೇವರಾದ ಮಹಿಷ‌ಮರ್ಧಿನಿಗೆ ವಜ್ರದ ಸರವನ್ನು ಸೇವಾರೂಪದಲ್ಲಿ ಸಮರ್ಪಿಸಿದರು. ಬೆಳಿಗ್ಗೆ ದೇವಳದಲ್ಲಿ ಚಂಡಿಕಾಹೋಮ, ವಿಶೇಷ ಪೂಜೆ ಮತ್ತು ತುಲಾಭಾರ ಸೇವೆಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮದ ಭಕ್ತಾದಿಗಳು ಶಾಸಕರ ಕುಟುಂಬಸ್ಥರು ಭಾಗವಹಿಸಿದ್ದರು. ಪೂಜೆಯ ಬಳಿಕ ಅನ್ನದಾನ ನಡೆಯಿತು.

ಹುಟ್ಟೂರ ದೇವರಿಗೆ ವಜ್ರದ ಸರ ಅರ್ಪಿಸಿದ ಶಾಸಕ ಅಶೋಕ್ ರೈ Read More »

ಅ. 22ರಂದು ಪುತ್ತೂರ್ದ ಪಿಲಿರಂಗ್ ಸೀಸನ್ 2 | ತುಳು ಧ್ವಜಾರೋಹಣ, ಬಹುಮಾನ, ಕಾರ್ಯಕ್ರಮದ ರೂಪುರೇಷೆ ವಿವರಿಸಿದ ಮಾಜಿ ಶಾಸಕಿ

ಪುತ್ತೂರು: ಸಾಂಸ್ಕೃತಿಕ ಕಲೆ ನಮ್ಮ ಊರಿಗೂ ಬರಲಿ ಎಂಬ ಉದ್ದೇಶದಿಂದ ಆರಂಭಗೊಂಡಿರುವ ಪುತ್ತೂರ್ದ ಪಿಲಿರಂಗ್ ಸೀಸನ್ 2 ಅಕ್ಟೋಬರ್ 22ರಂದು ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರಿಗೆ ಹೆಸರು ಬರಬೇಕು ಎಂಬ ನಿಟ್ಟಿನಲ್ಲಿ ಪಿಲಿರಂಗ್ ಆರಂಭ ಮಾಡಿದ್ದೇವೆ. ಈ ವರ್ಷ ಬೆಳಿಗ್ಗೆ 11ಕ್ಕೆ ಗಣಹೋಮ ನಡೆಯಲಿದೆ. ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ತುಳು

ಅ. 22ರಂದು ಪುತ್ತೂರ್ದ ಪಿಲಿರಂಗ್ ಸೀಸನ್ 2 | ತುಳು ಧ್ವಜಾರೋಹಣ, ಬಹುಮಾನ, ಕಾರ್ಯಕ್ರಮದ ರೂಪುರೇಷೆ ವಿವರಿಸಿದ ಮಾಜಿ ಶಾಸಕಿ Read More »

error: Content is protected !!
Scroll to Top