ಧಾರ್ಮಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರುತ್ಥಾನ: ಮಹಾಸಭೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಿನ್ನಲೆಯಲ್ಲಿ ಈಗಾಗಲೇ 25 ಕೋಟಿ ರೂ. ಅನುದಾನಕ್ಕಾಗಿ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದ್ದು, ಇದು ಸರಕಾರದ ಮಟ್ಟದಲ್ಲಿದೆ. 4.66 ಕೋಟಿ ರೂ.ವನ್ನು ಭಕ್ತರಿಂದ ಸಂಗ್ರಹಕ್ಕಾಗಿ ಸರಕಾರ ಒಪ್ಪಿಗೆ ನೀಡಿದೆ. ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು. ಅವರು ಭಾನುವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಪುನರುತ್ಥಾನ ಕಾರ್ಯದ ಅಂಗವಾಗಿ ಅನ್ನಛತ್ರ ನಿರ್ಮಾಣ ಮತ್ತು ಪುಷ್ಕರಣಿ ಪುನರುತ್ಥಾನ ನಿಧಿ ಸಂಚಯನದ ಕುರಿತು ಭಕ್ತರ ಮಹಾಸಭೆಯನ್ನು ಉದ್ಘಾಟಿಸಿ […]

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರುತ್ಥಾನ: ಮಹಾಸಭೆ Read More »

ಜಮಾಅತೆ ಇಸ್ಲಾಮೀ ಹಿಂದ್’ನಿಂದ ವಿಚಾರ ವಿನಿಮಯ

ಪುತ್ತೂರು: ಪ್ರತಿ ವರ್ಷ ಪ್ರವಾದಿ ಮಹಮ್ಮದ್ ಪೈಗಂಬರ್ (ಸ.ಅ.) ಅವರ ಜನ್ಮ ಮಾಸದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಸೀರತ್ ಅಭಿಯಾನ ನಡೆಸಲಾಗುತ್ತಿದ್ದು, ನ. 17ರಂದು ಸಮಾರೋಪ ಸಮಾರಂಭ ಪುತ್ತೂರು ಪುರಭವನದಲ್ಲಿ ನಡೆಯಲಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ವಲಯ ಉಪ ಸಂಚಾಲಕ ಅಮೀನ್ ಹಸನ್ ತಿಳಿಸಿದ್ದಾರೆ. ಅಭಿಯಾನದ ಅಂಗವಾಗಿ ಗುರುವಾರ ಸಂಘಟನೆ ವತಿಯಿಂದ ಪುತ್ತೂರಿನಲ್ಲಿ ಪತ್ರಕರ್ತರ ಜತೆಗಿನ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‘ಸಮಾನತೆಯ ಸಮಾಜ ಶಿಲ್ಪಿ ಅಭಿಯಾನ’ ಎಂಬ ಹೆಸರಿನಲ್ಲಿ ಅಭಿಯಾನ ನಡೆಯುತ್ತಿದ್ದು,

ಜಮಾಅತೆ ಇಸ್ಲಾಮೀ ಹಿಂದ್’ನಿಂದ ವಿಚಾರ ವಿನಿಮಯ Read More »

89ನೇ ಪುತ್ತೂರು ಶಾರದೋತ್ಸವದ ಶೋಭಾಯಾತ್ರೆಗೆ 80 ಭಜನಾ ತಂಡಗಳ ಮೆರುಗು

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ.15 ರಿಂದ 24ರ ತನಕ ನಡೆಯುವ 89ನೇ ವರ್ಷದ “ಪುತ್ತೂರು ಶಾರದೋತ್ಸವ” ಈ ಬಾರಿ ಅತ್ಯಂತ ವೈಭವದಿಂದ ನಡೆಯಲಿದ್ದು, ಇದಕ್ಕಾಗಿ ಸಿದ್ಧತೆಗಳು ಭರದಿಂದ ಸಾಗುತ್ತಿದೆ ಎಂದು ಶೋಭಾಯಾತ್ರೆ ಸಂಚಾಲಕ ಸೀತಾರಾಮ ರೈ ಕೆದಂಬಾಡಿಗುತ್ತು ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಉತ್ಸವದ ವಿವರ ನೀಡಿದ ಅವರು, 9 ದಿನಗಳು ಶಾರದೋತ್ಸವ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಅ. 24ರಂದು ವೈಭವದ ಶೋಭಾಯಾತ್ರೆಗೆ ಬೊಳುವಾರು

89ನೇ ಪುತ್ತೂರು ಶಾರದೋತ್ಸವದ ಶೋಭಾಯಾತ್ರೆಗೆ 80 ಭಜನಾ ತಂಡಗಳ ಮೆರುಗು Read More »

ಪುತ್ತೂರು ಶಾರದೋತ್ಸವದ ಆಮಂತ್ರಣ ವಿತರಣೆ

ಪುತ್ತೂರು: ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ. 15ರಿಂದ 24ರತನಕ ನಡೆಯಲಿರುವ 89ನೇ ವರ್ಷದ ಪುತ್ತೂರು ಶಾರದೋತ್ಸವದ ಆಮಂತ್ರಣ ವಿತರಣೆಗೆ ದರ್ಬೆ ವೃತ್ತದ ಬಳಿ ಗುರುವಾರ ಚಾಲನೆ ನೀಡಲಾಯಿತು. ಬಳಿಕ ಚೆಂಡೆ, ಕಲ್ಲಡ್ಕ ಬೊಂಬೆಯೊಂದಿಗೆ ಬೊಳುವಾರು ತನಕ ಸಾಗಿ ಆಮಂತ್ರಣ ಪತ್ರಿಕೆಯನ್ನು ಪೇಟೆಯ ವರ್ತಕರಿಗೆ ವಿತರಿಸಲಾಯಿತು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ ನೀಡಿ ಮಾತನಾಡಿ, ಪುತ್ತೂರು ಶಾರದೋತ್ಸವ ಈ

ಪುತ್ತೂರು ಶಾರದೋತ್ಸವದ ಆಮಂತ್ರಣ ವಿತರಣೆ Read More »

ಅ. 15ರಿಂದ 26: ‘ಪುತ್ತೂರು ದಸರಾ ಮಹೋತ್ಸವ’

ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ವತಿಯಿಂದ 21ನೇ ವರ್ಷದ ‘ಪುತ್ತೂರು ದಸರಾ ಮಹೋತ್ಸವ’ ಅ. 15ರಿಂದ 26ರ ತನಕ ಸಂಪ್ಯ ಉದಯಗಿರಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿ ಸಂಚಾಲಕ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 15ರಂದು ಬೆಳಿಗ್ಗೆ 10ಕ್ಕೆ ಗಣಪತಿ ಹಾಗೂ ನವದುರ್ಗೆಯರ ಪ್ರತಿಷ್ಠೆ ನಡೆದು, ಬಳಿಕ ಕಾರ್ಯಕ್ರಮಗಳಿಗೆ ಆರ್ಯಾಪು ಗ್ರಾಪಂ ಅಧ್ಯಕ್ಷೆ ಗೀತಾ ದೀಪ

ಅ. 15ರಿಂದ 26: ‘ಪುತ್ತೂರು ದಸರಾ ಮಹೋತ್ಸವ’ Read More »

ವಜ್ರದೇಹಿ ಶ್ರೀಗೆ ಸಿಸಿಬಿ ನೋಟೀಸ್!?

ಮಂಗಳೂರು: ದಕ್ಷಿಣ ಕನ್ನಡದ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ಟಿಕೆಟ್ ಡೀಲ್ ವಿಷಯವಾಗಿ ಹಿಂದೂ ಮುಖಂಡೆ ಚೈತ್ರ ಕುಂದಾಪುರ ಹಾಗೂ ಹಾಲಶ್ರೀ ಸ್ವಾಮಿಜಿ ಬಂಧನವಾಗಿ ತಿಂಗಳು ಕಳೆದಿದೆ. ಇದೀಗ  ಬೆಂಗಳೂರು ನಗರ ಸಿಸಿಬಿ ಮಹಿಳಾ ಸಂರಕ್ಷಣಾ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ರೀನಾ ಸುವರ್ಣ ಅವರು ಶ್ರೀಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಚೈತ್ರ ಇಡಿಗೆ ಬರೆದ ಪತ್ರದಲ್ಲಿ ವಜ್ರದೇಹಿ ಮಠದ

ವಜ್ರದೇಹಿ ಶ್ರೀಗೆ ಸಿಸಿಬಿ ನೋಟೀಸ್!? Read More »

ಕುಕ್ಕೆಗೆ ಆಗಮಿಸಿದ ಎಚ್.ಡಿ. ದೇವೇಗೌಡ ದಂಪತಿ | ಹೆಲಿಕಾಫ್ಟರ್ ರದ್ದು ಮಾಡಿ, ವಿಮಾನದಲ್ಲಿ ಆಗಮಿಸಿದ ಮಾಜಿ ಪ್ರಧಾನಿ

ಸುಬ್ರಹ್ಮಣ್ಯ : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಹಾಗೂ ಚೆನ್ನಮ್ಮ ದಂಪತಿ ಅ. 9ರಂದು ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಪಡೆದು, ವಿಶೇಷ ಸೇವೆ ಸಲ್ಲಿಸಿದರು. ಹೆಚ್.ಡಿ.ದೇವೇಗೌಡ ದಂಪತಿ ಅ. 8ರಂದು ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ ವಿಮಾನ ಮೂಲಕ ಬಂದು ಅಲ್ಲಿಂದ ರಸ್ತೆ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು. ರಾತ್ರಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಮಾಡಿ ಅ. 9ರಂದು ಪ್ರಾತಃ ಕಾಲ ವಿಶೇಷ ಸೇವೆ ನೆರವೇರಿಸಿದರು. ಹೆಚ್.ಡಿ. ದೇವೇಗೌಡ ದಂಪತಿ ನಿನ್ನೆ

ಕುಕ್ಕೆಗೆ ಆಗಮಿಸಿದ ಎಚ್.ಡಿ. ದೇವೇಗೌಡ ದಂಪತಿ | ಹೆಲಿಕಾಫ್ಟರ್ ರದ್ದು ಮಾಡಿ, ವಿಮಾನದಲ್ಲಿ ಆಗಮಿಸಿದ ಮಾಜಿ ಪ್ರಧಾನಿ Read More »

ಪರಸ್ಪರ ಸೌಹಾರ್ಧತೆಯಿಂದ ಬಾಳಿದರೆ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ | ಇರ್ದೆ- ಪೇರಳ್ತಡ್ಕ ನವೀಕೃತ ಜುಮಾ ಮಸೀದಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ ಭಾರತ. ದೇಶದ ಸ್ವಾತಂತ್ರ್ಯಕ್ಕೆ ಇಲ್ಲಿರುವ ಎಲ್ಲಾ ಧರ್ಮಗಳ ನೇತಾರರು ಹೋರಾಟ ಮಾಡಿದ್ದಾರೆ. ಪ್ರಾಣತ್ಯಾಗವನ್ನೂ ಮಾಡಿದ್ದಾರೆ. ನಮ್ಮ ದೇಶಕ್ಕೆ ಸುಲಭದಲ್ಲಿ ಸ್ವಾತಂತ್ರ್ಯ ಸಿಕ್ಕಿಲ್ಲ ಎಂಬುದು ನಮಗೆಲ್ಲರಿಗೂ ಗೊತ್ತಿದೆ. ಆದರೆ ನಾವಿಂದು ದೇಶದ ಇತಿಹಾಸವನ್ನು ಮರೆತು ಧರ್ಮ, ಜಾತಿಯ ಹೆಸರಿನಲ್ಲಿ ಕಚ್ಚಾಟ ನಡೆಸಿ ಭಾರತದ ಸೌಂದರ್ಯವನ್ನೇ ಹಾಳುಮಾಡುತ್ತಿದ್ದೇವೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ಇರ್ದೆ ಪೇರಲ್ತಡ್ಕದಲ್ಲಿ ನವೀಕೃತಗೊಂಡ ಮಸೀದಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಲ್ಲಾ ಧರ್ಮಗಳು

ಪರಸ್ಪರ ಸೌಹಾರ್ಧತೆಯಿಂದ ಬಾಳಿದರೆ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ | ಇರ್ದೆ- ಪೇರಳ್ತಡ್ಕ ನವೀಕೃತ ಜುಮಾ ಮಸೀದಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ Read More »

ಇಂದು ರಾತ್ರಿ ಕುಕ್ಕೆ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ದೇವೆ ಗೌಡ ಅವರು ಇಂದು ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ. ಹೆಲಿಕಾಪ್ಟರ್ ನಲ್ಲಿ ಬಂದು ಸಕಲೇಶಪುರದಲ್ಲಿ ಇಳಿದು ಶ್ರೀ ಕ್ಷೇತ್ರಕ್ಕೆ ಬರುವವರಿದ್ದರು. ಆದರೆ ಸಕಲೇಶಪುರ ಭಾಗದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದ್ದು, ಹೆಲಿಕಾಪ್ಟರ್ ಬರಲು ಅನಾನುಕೂಲ ವಾತಾವರಣ ಉಂಟಾಗಿದ್ಧ ಹಿನ್ನೆಲೆಯಲ್ಲಿ ಮಂಗಳೂರಿನವರೆಗೆ ವಿಮಾನದಲ್ಲಿ ಆಗಮಿಸಿ, ಅಲ್ಲಿಂದ ಸುಮಾರು ರಾತ್ರಿ 11:30ಕ್ಕೆ ಸುಬ್ರಹ್ಮಣ್ಯ ತಲುಪಲಿದ್ದಾರೆ.

ಇಂದು ರಾತ್ರಿ ಕುಕ್ಕೆ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ Read More »

ಶೃಂಗೇರಿಗೆ ಆರ್.ಎಸ್.ಎಸ್. ಸರಸಂಘಚಾಲಕ್ ಮೋಹನ್ ಭಾಗವತ್ ಭೇಟಿ | ರಾಮ ಮಂದಿರ ಉದ್ಘಾಟನೆಗೆ ಶ್ರೀಗಳಿಗೆ ಆಹ್ವಾನವೇ?

ಚಿಕ್ಕಮಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ್ ಮೋಹನ್ ಭಾಗವತ್ ಅವರು ಶೃಂಗೇರಿ ಶಾರದ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಶ್ರೀಗಳ ಆಶೀರ್ವಾದ ಪಡೆದರು. ಗುರುವಾರ ಶಾರದ ದೇವಸ್ಥಾನಕ್ಕೆ ಭೇಟಿ ನೀಡಿದ ಮೋಹನ್ ಭಾಗವತ್ ಅವರು ಶಾರದ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಹಿರಿಯ ಶ್ರೀಗಳಾದ ಭಾರತೀತೀರ್ಥ ಶ್ರೀಗಳು ಹಾಗೂ ಕಿರಿಯ ಶ್ರೀ ವಿಧುಶೇಖರ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚಿಸಿದರು. ಭಾಗವತ್ ಅವರ ಜತೆ ಐವರು

ಶೃಂಗೇರಿಗೆ ಆರ್.ಎಸ್.ಎಸ್. ಸರಸಂಘಚಾಲಕ್ ಮೋಹನ್ ಭಾಗವತ್ ಭೇಟಿ | ರಾಮ ಮಂದಿರ ಉದ್ಘಾಟನೆಗೆ ಶ್ರೀಗಳಿಗೆ ಆಹ್ವಾನವೇ? Read More »

error: Content is protected !!
Scroll to Top