ಧಾರ್ಮಿಕ

ಶೀಘ್ರದಲ್ಲಿ ಆರಂಭಗೊಳ್ಳಲಿದೆ ಭಗವದ್ಗೀತೆ ಶ್ಲೋಕಗಳ ತರಗತಿ

ಪುತ್ತೂರು: ಭಗವದ್ಗೀತೆಯ ಎಲ್ಲಾ ಶ್ಲೋಕಗಳನ್ನು ಸ್ಪಷ್ಟವಾಗಿ ಓದಲು ಕಲಿಸುವ ತರಗತಿಗಳನ್ನು ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ. ತರಗತಿಯ ಅವಧಿ ಒಂದು ಗಂಟೆಯಾಗಿದ್ದು, 140 ದಿವಸಗಳಲ್ಲಿ ನಿರಂತರವಾಗಿ, ನಿಯಮಿತವಾಗಿ ಸೇರಬೇಕಾದ್ದು ಕಡ್ಡಾಯ. ಹೊಸ ತರಗತಿಗಳ ಸಮಯ ಈ ಕೆಳಗಿನಂತಿದೆ. ಮಧ್ಯಾಹ್ನ 3 ಗಂಟೆ , ಸಂಜೆ 6.30 ಹಾಗೂ ರಾತ್ರಿ 7.30, 8 ಹಾಗೂ 8.30. ಭಗವದ್ಗೀತೆ ಕಲಿಯಲು ಆಸಕ್ತಿ ಇರುವವರು ಈ ಕೆಳಗಿನ ಗೂಗಲ್ ಫಾರ್ಮನ್ನು ಅ.2, 2023ರ ಒಳಗೆ ಭರ್ತಿ ಮಾಡಿ ಕಳಿಸಬೇಕು. ಗೂಗಲ್ ಫಾರ್ಮ್ ಭರ್ತಿ ಮಾಡಿದವರೆಲ್ಲರಿಗೂ […]

ಶೀಘ್ರದಲ್ಲಿ ಆರಂಭಗೊಳ್ಳಲಿದೆ ಭಗವದ್ಗೀತೆ ಶ್ಲೋಕಗಳ ತರಗತಿ Read More »

`ನನ್ನ ಮಣ್ಣು ನನ್ನ ದೇಶ’ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಚಾಲನೆ

ಪುತ್ತೂರು: ದೇಶದಾದ್ಯಂತ ನಡೆಯುವ ’ನನ್ನ ಮಣ್ಣು ನನ್ನ ದೇಶ’ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಶನಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಚಾಲನೆ ನೀಡಲಾಯಿತು. ದೇಶಕ್ಕಾಗಿ ಹುತಾತ್ಮರಾದ ಯೋಧರ ತ್ಯಾಗವನ್ನು ಸ್ಮರಿಸಿ ಗೌರವಿಸುವ ಮತ್ತು ದೇಶದ ಏಕತೆಗಾಗಿ ಪ್ರಧಾನಿ ನರೇಂದ್ರ ಮೋದಿಯವರ ಅಪೇಕ್ಷೆಯಂತೆ ನಡೆಯುವ ಈ ಕಾರ್ಯಕ್ರಮವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ಮೃತ್ತಿಕೆಯನ್ನು ಕಲಶಕ್ಕೆ ಅರ್ಪಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ, ದೇಹ ಸರಿ

`ನನ್ನ ಮಣ್ಣು ನನ್ನ ದೇಶ’ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಚಾಲನೆ Read More »

ವೈಭವದಿಂದ ನಡೆಯಲಿದೆ ಪುತ್ತೂರು ಶಾರದೋತ್ಸವ : ಆಮಂತ್ರಣ ಪತ್ರಿಕೆ, ಲೋಗೋ ಬಿಡುಗಡೆ

ಪುತ್ತೂರು: ಅ.15 ರಿಂದ 24ರ ತನಕ ನಡೆಯುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶಾರದಾ ಭಜನಾ ಮಂದಿರದ 89ನೇ ವರ್ಷದ ವೈಭವದ ಪುತ್ತೂರು ಶಾರದೋತ್ಸವದ ಲಾಂಛನ ಮತ್ತು ಆಮಂತ್ರಣ ಬಿಡುಗಡೆ ಮಾಡಲಾಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಡಾ.ಸುರೇಶ್ ಪುತ್ತೂರಾಯ ಲಾಂಛನ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಬನ್ನೂರು, ಶೋಭಾಯಾತ್ರೆ ಸಮಿತಿ ಸಂಚಾಲಕ ಸೀತಾರಾಮ ರೈ ಕೆದಂಬಾಡಿಗುತ್ತು, ಸಮಿತಿ ಕಾರ್ಯದರ್ಶಿ ಅಜಿತ್ ರೈ ಹೊಸಮನೆ,

ವೈಭವದಿಂದ ನಡೆಯಲಿದೆ ಪುತ್ತೂರು ಶಾರದೋತ್ಸವ : ಆಮಂತ್ರಣ ಪತ್ರಿಕೆ, ಲೋಗೋ ಬಿಡುಗಡೆ Read More »

ತಾಲೂಕಿನಾದ್ಯಂತ ಸಂಭ್ರಮದ ಈದ್ ಮಿಲಾದ್ ಆಚರಣೆ | ಮಸ್ಲಿಂ ಯುವಜನ ಪರಿಷತ್ ವತಿಯಿಂದ ಬೃಹತ್ ವಾಹನ ರ್ಯಾಲಿ, ಸಮಾವೇಶ

ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಗುರುವಾರ ಮುಸ್ಲಿಂ ಬಾಂಧವರು ಆಚರಿಸಿದರು. ಬೆಳಿಗ್ಗೆ ಮುಸ್ಲಿಂ ಬಾಂಧವರು ಪ್ರಾರ್ಥನಾ ಮಂದಿರಗಳಿಗೆ ತೆರಳಿ ಪರಸ್ಪರ ಶುಭಾಶಯ ಕೋರಿದರು. ಈದ್ ಮಿಲಾದ್ ಅಂಗವಾಗಿ ತಾ ದ.ಕ. ಜಿಲ್ಲಾ ಯುವಜನ ಪರಿಷತ್ ಪುತ್ತೂರು ತಾಲೂಕು ಹಾಗೂ ಈದ್ ಮಿಲಾದ್ ಸಮಿತಿ ವತಿಯಿಂದ 31ನೇ ವರ್ಷದ ಬೃಹತ್ ಮಿಲಾದ್ ಸಮಾವೇಶ ಹಾಗೂ ಬುರ್ಧಾ ಮಜ್ಲಿಸ್ ಗುರುವಾರ ನಗರದ ಕಿಲ್ಲೆ ಮೈದಾನದಲ್ಲಿ ಹಮ್ಮಿಕೊಂಡಿತು. ಸಂಜೆ ಕಬಕ ವೃತ್ತದಲ್ಲಿ ರ್ಯಾಲಿಗೆ ಕಬಕ ಟೈಲರ್ ಇಸ್ಮಾಯಿಲ್

ತಾಲೂಕಿನಾದ್ಯಂತ ಸಂಭ್ರಮದ ಈದ್ ಮಿಲಾದ್ ಆಚರಣೆ | ಮಸ್ಲಿಂ ಯುವಜನ ಪರಿಷತ್ ವತಿಯಿಂದ ಬೃಹತ್ ವಾಹನ ರ್ಯಾಲಿ, ಸಮಾವೇಶ Read More »

ಬಿಗ್ ಬಾಸ್ ವೇದಿಕೆಯಲ್ಲೂ ಹೆಜ್ಜೆ ಮೂಡಿಸಿದ್ದ `ಪಿಲಿಏಸ’ದ ಆಮಂತ್ರಣ ಪತ್ರ ಬಿಡುಗಡೆ | ಹೀಗೆ ನಡೆಯಲಿದೆ ಕಲ್ಲೇಗ ಟೈಗರ್ಸ್ ತಂಡದ ಹುಲಿ ಇಳಿಯುವ ಕಾರ್ಯಕ್ರಮ

ಪುತ್ತೂರು: ಪಿಲಿಏಸ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬಳಿಕ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಹಿಂದಿನ ವರ್ಷ ಪಿಲಿಗೊಬ್ಬು ಎಂಬ ಹೆಸರಿನಲ್ಲಿ ಹೊಸ ಇತಿಹಾಸ ಬರೆದಿದ್ದು, ಸುಮಾರು 60 ಮಂದಿ ಹುಲಿ ವೇಷ ಹಾಕಿದ್ದರು. ಮಾತ್ರವಲ್ಲ ಬಿಗ್ ಬಾಸ್ ವೇದಿಕೆಯಲ್ಲೂ ಹೆಜ್ಜೆ ಹಾಕಿ, ರಾಜ್ಯದ ಜನತೆಗೆ ಕರಾವಳಿ ಸಂಸ್ಕೃತಿಯ ಸೊಗಡನ್ನು ಪರಿಚಯಿಸಿದ್ದರು. ಇದೀಗ ಮತ್ತೊಮ್ಮೆ ನವರಾತ್ರಿ ಹಬ್ಬ ಬಂದಿದ್ದು, ಕಲ್ಲೇಗ ಟೈಗರ್ಸ್

ಬಿಗ್ ಬಾಸ್ ವೇದಿಕೆಯಲ್ಲೂ ಹೆಜ್ಜೆ ಮೂಡಿಸಿದ್ದ `ಪಿಲಿಏಸ’ದ ಆಮಂತ್ರಣ ಪತ್ರ ಬಿಡುಗಡೆ | ಹೀಗೆ ನಡೆಯಲಿದೆ ಕಲ್ಲೇಗ ಟೈಗರ್ಸ್ ತಂಡದ ಹುಲಿ ಇಳಿಯುವ ಕಾರ್ಯಕ್ರಮ Read More »

ಪುತ್ತೂರಿನಲ್ಲಿ ನಡೆಯಲಿದೆ ಅದ್ದೂರಿಯ ‘ಪುತ್ತೂರು ಶಾರದೋತ್ಸವ’ | ಶಾರದೆ ವಿಗ್ರಹ ರಚನೆಗೆ ನೆರವೇರಿತು ಮುಹೂರ್ತ

ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಭಕ್ತರ ಸಹಕಾರದೊಂದಿಗೆ ಈ ಬಾರಿ ನಡೆಯಲಿರುವ “ಪುತ್ತೂರು ಶಾರದೋತ್ಸವದ” ಶಾರದೆ ವಿಗ್ರಹ ರಚನೆಗೆ ಮುಹೂರ್ತ ಗುರುವಾರ ಪ್ರಭು ಸ್ಟುಡಿಯೋ ಮಾಲಕ ಶ್ರೀನಿವಾಸ ಪ್ರಭುರವರ ನಿವಾಸದ ಬಳಿ ನಡೆಯಿತು. ಈ ಬಾರಿ ಶ್ರೀ ಶಾರದೆ ಪ್ರತಿಷ್ಠೆ, ಶೋಭಾಯಾತ್ರೆಯೊಂದಿಗೆ ಅದ್ದೂರಿಯಾಗಿ ನಡೆಯಲಿದ್ದು, ಸಮಿತಿ ಪದಾಧಿಕಾರಿಗಳು ಮಹಾಲಿಂಗೇಶ್ವರ ದೇವರ ಸನ್ನಿಧಿ ಹಾಗೂ ಶಾರದಾ ಭಜನಾ ಮಂದಿರದಲ್ಲಿ ಪ್ರಾರ್ಥಿಸಿ ಬಳಿಕ ಉಳ್ಳಾಲ್ತಿ ಕಟ್ಟೆ ಬಳಿ ಇರುವ ಶ್ರೀನಿವಾಸ ಪ್ರಭು ಅವರ ನಿವಾಸದಲ್ಲಿ ವಿಗ್ರಹ ಮುಹೂರ್ತ

ಪುತ್ತೂರಿನಲ್ಲಿ ನಡೆಯಲಿದೆ ಅದ್ದೂರಿಯ ‘ಪುತ್ತೂರು ಶಾರದೋತ್ಸವ’ | ಶಾರದೆ ವಿಗ್ರಹ ರಚನೆಗೆ ನೆರವೇರಿತು ಮುಹೂರ್ತ Read More »

ಶ್ರೀ ದೇವಿ ಮಹಾತ್ಮೆ ತುಳುವಿನಲ್ಲಿ `ಸಿರಿ ದೇವಿ ಮೈಮೆ ‘!! | ಮೊದಲ ಪ್ರದರ್ಶನಕ್ಕೂ ಸ್ಥಳ, ದಿನಾಂಕ ನಿಗದಿ

ಮಂಗಳೂರು: ತುಳುವೆರೆ ಆಯನೊ ಕೂಟದ ವತಿಯಿಂದ ಪ್ರಥಮ ಬಾರಿಗೆ ತುಳು ಭಾಷೆಯಲ್ಲಿ ಭಾಗವತಿಕೆ ಸಹಿತ ಶ್ರೀದೇವಿ ಮಹಾತ್ಮೆ ಯಕ್ಷಗಾನವು ‘ಸಿರಿ ದೇವಿ ಮೈಮೆ’ ಎಂಬ ಹೆಸರಿನಲ್ಲಿ ಸೆ. 30ರಂದು ನಗರದ ಪುರಭವನದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಕೂಟದ ಅಧ್ಯಕ್ಷೆ ಶಮಿನಾ ಆಳ್ವ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಪರಾಹ್ನ 2 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕೂಟದ 2023-24ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ನಡೆಯಲಿದೆ. ಕಾರ್ಯಕ್ರಮದಲ್ಲಿ

ಶ್ರೀ ದೇವಿ ಮಹಾತ್ಮೆ ತುಳುವಿನಲ್ಲಿ `ಸಿರಿ ದೇವಿ ಮೈಮೆ ‘!! | ಮೊದಲ ಪ್ರದರ್ಶನಕ್ಕೂ ಸ್ಥಳ, ದಿನಾಂಕ ನಿಗದಿ Read More »

ಸೆ. 28ರಿಂದ ಅ. 4ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 25ನೇ ವರ್ಷದ ಭಜನಾ ಕಮ್ಮಟ | ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿಯಿಂದ ಉದ್ಘಾಟನೆ

ಧರ್ಮಸ್ಥಳ: 25ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.28 ರಿಂದ ಅ.4 ರ ವರೆಗೆ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಸೆ.28 ಗುರುವಾರ ಬೆಳಿಗ್ಗೆ 11 ಗಂಟೆಗೆ ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟವನ್ನು ಉದ್ಘಾಟಿಸುವರು. ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದು, ಮಾಣಿಲದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡುವರು. ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಶುಭಾಶಂಸನೆ ಮಾಡುವರು. ಅ. 4ರಂದು ನಡೆಯುವ ಸಮಾರೋಪ ಸಮಾರಂಭ ಬೆಳಿಗ್ಗೆ

ಸೆ. 28ರಿಂದ ಅ. 4ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 25ನೇ ವರ್ಷದ ಭಜನಾ ಕಮ್ಮಟ | ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿಯಿಂದ ಉದ್ಘಾಟನೆ Read More »

ಶ್ರದ್ಧಾ ಭಕ್ತಿಯ ಸಮರ್ಪಣೆಯಿಂದ ಔನ್ನತ್ಯ: ಶ್ರೀ ಮೋಹನದಾಸ ಸ್ವಾಮೀಜಿ | ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದ ನಿಧಿ ಸಂಚಯನ ಕಾರ್ಯದ ಪೂರ್ವಭಾವಿ ಸಭೆ

ಸವಣೂರು: ಬೆಳಂದೂರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ನಿಧಿ ಸಂಚಯನ ಕಾರ್ಯದ ಪೂರ್ವಭಾವಿ ಸಭೆ ಮಂಗಳವಾರ ಮದ್ಯಾಹ್ನ ನಡೆಯಿತು. ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿ, ಯಾವುದೇ ಒಂದು ಧಾರ್ಮಿಕ ಕ್ಷೇತ್ರ ಚೈತನ್ಯ ಪಡೆಯಬೇಕಾದರೆ ಶ್ರದ್ಧಾ ಭಕ್ತಿಯಿಂದ ತನ್ನನ್ನು ತಾನು ಸಮರ್ಪಿಸಿಕೊಳ್ಳಬೇಕು. ಆಗ ಕ್ಷೇತ್ರದ ಅಭಿವೃದ್ಧಿ ಜತೆ ನಾವೂ ಉನ್ನತ ಮಟ್ಟಕ್ಕೆ ಏರಲು ಸಾಧ್ಯ ಎಂದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್‍.ಅಂಗಾರ, ಶ್ರೀ

ಶ್ರದ್ಧಾ ಭಕ್ತಿಯ ಸಮರ್ಪಣೆಯಿಂದ ಔನ್ನತ್ಯ: ಶ್ರೀ ಮೋಹನದಾಸ ಸ್ವಾಮೀಜಿ | ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದ ನಿಧಿ ಸಂಚಯನ ಕಾರ್ಯದ ಪೂರ್ವಭಾವಿ ಸಭೆ Read More »

ಕಿಲ್ಲೆ ಮೈದಾನದ ಮಹಾಗಣೇಶೋತ್ಸವ ಶೋಭಾಯಾತ್ರೆಯೊಂದಿಗೆ ಸಮಾಪನ | ಮಂಜಲ್ಪಡ್ಪು ಕೆರೆಯಲ್ಲಿ ವಿಗ್ರಹ ವಿಸರ್ಜನೆ

ಪುತ್ತೂರು: ನಗರದ ಕಿಲ್ಲೆ ಮೈದಾನದಲ್ಲಿ ಶ್ರೀ ದೇವತಾ ಸಮಿತಿ ವತಿಯಿಂದ ಏಳು ದಿನಗಳ ಕಾಲ ನಡೆದ ಶ್ರೀ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಏಳು ದಿನಗಳ ಕಾಲ ನಡೆದ ಶ್ರೀ ಗಣೇಶೋತ್ಸವದಲ್ಲಿ ವಿವಿಧ ಧಾರ್ಮಿಕ, ಮೂಡಪ್ಪ ಸೇವೆ, ತುಲಾಭಾರ ಸೇವೆ, ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರಗಿತು. ಸೋಮವಾರ ಮಧ್ಯಾಹ್ನ ಶ್ರೀ ದೇವರ ಮಹಾಪೂಜೆ ಬಳಿಕ ಮಧ್ಯಾಹ್ನ 1 ಗಂಟೆಗೆ ಉತ್ಸವ ಬಲಿ ನಡೆಯಿತು. ಸಂಜೆ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವದ ಭೂತಕೋಲ ಜರಗಿತು. ರಾತ್ರಿ  ತಾಲೀಮು ಪ್ರದರ್ಶನ,

ಕಿಲ್ಲೆ ಮೈದಾನದ ಮಹಾಗಣೇಶೋತ್ಸವ ಶೋಭಾಯಾತ್ರೆಯೊಂದಿಗೆ ಸಮಾಪನ | ಮಂಜಲ್ಪಡ್ಪು ಕೆರೆಯಲ್ಲಿ ವಿಗ್ರಹ ವಿಸರ್ಜನೆ Read More »

error: Content is protected !!
Scroll to Top