ಧಾರ್ಮಿಕ

ಬಾರ್ಯ ದೇವಸ್ಥಾನದಲ್ಲಿ ತೆನೆ ಹಬ್ಬ

ಬಾರ್ಯ ದೇವಸ್ಥಾನದಲ್ಲಿ ತೆನೆ ಹಬ್ಬ.ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ 9 ದಿನಗಳ ಪರ್ಯಂತ ನವದುರ್ಗೆಯರ ಆರಾಧನೆ ಮತ್ತು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಚಾಲನೆಯನ್ನು ದೇವಳದ ಮತ್ತು ಪರಿವಾರದೈವಗಳ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ನೆರವೇರಿಸಿದರು. ನವರಾತ್ರಿ ಪ್ರಥಮ ದಿನದಂದು ಗ್ರಾಮಸ್ಥರಿಗೆ ತೆನೆಯನ್ನು ವಿತರಿಸಲಾಯಿತು. ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯ,, ಆಡಳಿತ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಪೈ ಬಾರ್ಯ ಮತ್ತು ಟ್ರಸ್ಟಿಗಳು, ಊರ ಹತ್ತು […]

ಬಾರ್ಯ ದೇವಸ್ಥಾನದಲ್ಲಿ ತೆನೆ ಹಬ್ಬ Read More »

ಶ್ರೀ ನಾಳ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

ನಾಳ ಶ್ರೀ ದುರ್ಗಾ ಪರಮೇಶ್ವರಿ ದೇವಾಸ್ತನದಲ್ಲಿ ನವರಾತ್ರಿ ಉತ್ಸವ ಮತ್ತು ಚಂಡಿಕಾಯಾಗದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ರಾಘವೇಂದ್ರ ಆಸ್ರನ್ನ ಉದ್ಘಾಟಿಸಿದರು. ಕ್ಷೇತ್ರದ ಪರಂಪರೆಯಿಂದ ಬೆಳೆದು ಬಂದಿರುವ ಯಕ್ಷಗಾನ ಸೇವೆ ಶ್ರೀ ದುರ್ಗಾಪರಮೇಶ್ವರಿಯ ಅನುಗ್ರಹದಿಂದ ನಿರಂತರವಾಗಿ ಈ ಕ್ಷೇತ್ರದಲ್ಲಿ ಮುಂದುವರೆಯಲಿ ಎಂದು ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ವಹಿಸಿದ್ದು ಕ್ಷೇತ್ರದಲ್ಲಿ ನಡೆಯುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಕ್ತರು ಭಾಗವಹಿಸಿ ಶ್ರೀ ದುರ್ಗಾ ಮಾತೆಯ ಅನುಗ್ರಹ ಪಡೆಯುವಂತಾಗಲಿಯೆಂದರು.

ಶ್ರೀ ನಾಳ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ Read More »

ಕಟ್ಟಡ ಕಾರ್ಮಿಕ ಸಂಘದಿಂದ ಕುಂಜೂರು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ್ನ

ಪುತ್ತೂರು: ನವ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ ಮತ್ತು ಕರ್ಣಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘ ಅನುರಾಗ ವಠಾರ ಪುತ್ತೂರು ಇದರ ವತಿಯಿಂದ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಪೂರ್ವಭಾವಿಯಾಗಿ ಸ್ವಚ್ಚತಾ ಶ್ರಮಸೇವೆ ನಡೆಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಗನ್ನಾಥ ರೈ ಶ್ರಮದಾನ ಸೇವೆಯಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರ ಪರವಾಗಿ ಸಂಘದ ಅಧ್ಯಕ್ಷರಿಗೆ ಹಾಗೂ ಕಾಯಾದ್ಯಕ್ಷರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಶ್ರಮದಾನ ಸೇವೆಯಲ್ಲಿ

ಕಟ್ಟಡ ಕಾರ್ಮಿಕ ಸಂಘದಿಂದ ಕುಂಜೂರು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ್ನ Read More »

ಧಾರ್ಮಿಕ ಕೇಂದ್ರಗಳು ನಮ್ಮನ್ನು ಒಗ್ಗೂಡಿಸುತ್ತದೆ : ಸಂಜೀವ ಮಠಂದೂರು

ಭಗವಂತನ ಅನುಗ್ರಹವನ್ನು ಪಡೆಯಲು ಭಕ್ತಿಯೇ ಮುಖ್ಯ. ಭಕ್ತಿಯ ಮೂಲಕವೇ ಧಾರ್ಮಿಕ ಕೇಂದ್ರಗಳಲ್ಲಿ ಭಕ್ತರೆಲ್ಲ ಒಗ್ಗೂಡಿ ಪೂಜೆ ಉತ್ಸವ ಸತ್ಸಂಗದಲ್ಲಿ ಭಾಗವಹಿಸುವ ಮೂಲಕ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಲು ಸಾಧ್ಯವೆಂದು ಪುತ್ತೂರು ಕ್ಷೇತ್ರದ ಮಾಜಿ ಶಾಸಕರಾದ ಸಂಜೀವ ಮಠಂದೂರು ತಿಳಿಸಿದರು. ಉಪ್ಪಿನಂಗಡಿಗೆ ಸಮೀಪದ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಭದ್ರತಾ ಕೋಶದ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತೆಯರು ನವದುರ್ಗೆಯರ ರೂಪದಲ್ಲಿ ಸಮಾಜಕ್ಕೆ ಬರುವ ಕಂಟಕಗಳನ್ನು ದೂರ ಪಡಿಸುವ ಶಕ್ತಿ ಸ್ವರೂಪಿಗಳಾಗಬೇಕೆಂದು

ಧಾರ್ಮಿಕ ಕೇಂದ್ರಗಳು ನಮ್ಮನ್ನು ಒಗ್ಗೂಡಿಸುತ್ತದೆ : ಸಂಜೀವ ಮಠಂದೂರು Read More »

ಸ್ಥಗಿತಗೊಂಡಿದ್ದ ವೈಷ್ಣೋದೇವಿ ಯಾತ್ರೆ ಪುನರಾರಂಭ

ಶ್ರೀನಗರ: ನಿರಂತರವಾದ ಮಳೆ, ಭೂಕುಸಿತ ಕಾರಣದಿಂದ ಸ್ಥಗಿತವಾಗಿದ್ದ ವೈಷ್ಣೋದೇವಿ ಯಾತ್ರೆಯನ್ನು 22 ದಿನಗಳ ಬಳಿಕ ಈಗ ಮತ್ತೆ ಆರಂಭ ಮಾಡಲಾಗಿದೆ. ಈ ಸಂಬಂಧ ಶ್ರೀ ಮಾತಾ ವೈಷ್ಣೋದೇವಿ ಯಾತ್ರಾ ಮಂಡಳಿಯು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದು, ಯಾತ್ರಾ ಪ್ರದೇಶದಲ್ಲಿ ಪರಿಸ್ಥಿತಿ ಸುಧಾರಣೆ ಕಂಡಲ್ಲಿ ಯಾತ್ರಾ ಮಾರ್ಗವನ್ನು ಮುಕ್ತಗೊಳಿಸುವುದಾಗಿಯೂ ಅಧಿಕಾರಿಗಳು ಹೇಳಿದ್ದಾರೆ. ಆ. 26 ರಂದು ಇಂದ್ರಪ್ರಸ್ಥದ ಭೋಜಶಾಲ ಬಳಿ ಭೂ ಕುಸಿತ ನಡೆದಿತ್ತು. ಆ ಬಳಿಕ ಯಾತ್ರೆಯನ್ನು ಮುಂದೂಡುತ್ತಲೇ ಬರಲಾಗುತ್ತಿತ್ತು. ಸುಮಾರು 34 ಜನರು ಭೂಕುಸಿತದಲ್ಲಿ ಮೃತಪಟ್ಟಿದ್ದರು.

ಸ್ಥಗಿತಗೊಂಡಿದ್ದ ವೈಷ್ಣೋದೇವಿ ಯಾತ್ರೆ ಪುನರಾರಂಭ Read More »

ಹಬ್ಬ, ಉತ್ಸವಗಳಿಗೆ ಪೊಲೀಸ್ ಇಲಾಖೆಯಿಂದ ಸಮಸ್ಯೆ ಆಗಿಲ್ಲ: ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಸಾರ್ವಜನಿಕವಾಗಿ ಆಚರಣೆ ಮಾಡುವ ಯಾವುದೇ ಹಬ್ಬಗಳಿಗೆ, ಮೆರವಣಿಗೆಗಳಿಗೆ ಪೊಲೀಸ್ ಇಲಾಖೆ ಅಡ್ಡಿ ಮಾಡಿಲ್ಲ. ಬೇರೆಯವರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ‘ಶಬ್ದದ ಮಿತಿ’ ನಿಗದಿ ಮಾಡಲಾಗಿದ್ದು, ಅದನ್ನು ಅನುಸರಿಸಿಕೊಂಡು ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಹಲವಾರು ಗಣೇಶೋತ್ಸವ ಮೆರವಣಿಗೆಗಳು ತಂಡ ರಾತ್ರಿಯ ವರೆಗೆ ನಡೆದಿದ್ದು, ಅಲ್ಲಿ ಯಾವ ಸಮಸ್ಯೆಯೂ ಆಗಿಲ್ಲ. ಪೊಲೀಸರು ಸಮಸ್ಯೆ ಮಾಡಿಲ್ಲ. ಆದರೆ ಶಬ್ದ ಮಿತಿಯನ್ನು ಮಾತ್ರ ಹಾಕಲಾಗಿತ್ತು ಎಂದು ತಿಳಿಸಿದ್ದಾರೆ.

ಹಬ್ಬ, ಉತ್ಸವಗಳಿಗೆ ಪೊಲೀಸ್ ಇಲಾಖೆಯಿಂದ ಸಮಸ್ಯೆ ಆಗಿಲ್ಲ: ಸುಧೀರ್ ಕುಮಾರ್ ರೆಡ್ಡಿ Read More »

ಶ್ರೀ ಮಹಾಭಾರತ ಸರಣಿಯಲ್ಲಿ ಮಹಿಳಾ ಯಕ್ಷಕೂಟ ಕದ್ರಿ ಇವರಿಂದ ಗದಾಯುದ್ಧ ತಾಳಮದ್ದಳೆ

ಶ್ರೀ ಕಾಳಿಕಾಂಬ ಯಕ್ಷಕಲಾ ಸೇವಾ ಟ್ರಸ್ಟಿನ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 95ನೇ ಕಾರ್ಯಕ್ರಮವಾಗಿ ಮಹಿಳಾ ಯಕ್ಷಕೂಟ ಕದ್ರಿಮಂಗಳೂರು ಬಳಗದಿಂದ ಎಲ್ಲೂರು ರಾಮಚಂದ್ರರಾವ್ ನಿರ್ದೇಶನದಲ್ಲಿ ಗದಾಯುದ್ಧ ತಾಳಮದ್ದಳೆ ಉಪ್ಪಿನಂಗಡಿ ರಾಮನಗರದ ಶಾರದಾ ಕಲಾಮಂಟಪದಲ್ಲಿ ಜರಗಿತು. ಭಾಗವತರಾಗಿ ಲಕ್ಷ್ಮೀನಾರಾಯಣ ಹೊಳ್ಳ, ಸ್ಕಂದ ಕೊನ್ನರ್,ಕೃಷ್ಣರಾವ್, ಚಕ್ರತಾಳದಲ್ಲಿ ರಾಮಚಂದ್ರ ಎಲ್ಲೂರು ಅರ್ಥಧಾರಿಗಳಾಗಿವನಿತಾ ಎಲ್ಲೂರು (ಕೌರವ 1) ರಂಜಿತಾ ಎಲ್ಲೂರು( ಕೌರವ 2) ವಿಶಾಲ ಕೇಶವ ಭಟ್ (ಭೀಮ) ಶೀಲಾ ಜಯಪ್ರಕಾಶ್ (ಅಶ್ವತ್ಥಾಮ) ರಮಾಮಣಿ ಭಟ್ (ಸಂಜಯ) ಸಂಧ್ಯಾ

ಶ್ರೀ ಮಹಾಭಾರತ ಸರಣಿಯಲ್ಲಿ ಮಹಿಳಾ ಯಕ್ಷಕೂಟ ಕದ್ರಿ ಇವರಿಂದ ಗದಾಯುದ್ಧ ತಾಳಮದ್ದಳೆ Read More »

ಮದ್ದೂರಿನಲ್ಲಿಂದು ಗಣೇಶ ವಿಸರ್ಜನೆ ಬೃಹತ್‌ ಮೆರವಣಿಗೆ

ವಿಜಯೇಂದ್ರ ಸಹಿತ ಹಲವು ಬಿಜೆಪಿ ನಾಯಕರು ಭಾಗಿ ಬೆಂಗಳೂರು: ಭಾನುವಾರ ಗಣೇಶ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಿದ ಘಟನೆಯ ಬಳಿಕ ಬೂದಿ ಮುಚ್ಚಿದ ಕೆಂಡದಂತಿರುವ ಮಂಡ್ಯದ ಮದ್ದೂರಿನಲ್ಲಿ ಇಂದು ಮತ್ತೆ ಗಣೇಶ ವಿಸರ್ಜನೆಯ ಬೃಹತ್‌ ಮೆರವಣಿಗೆ ನಡೆಯಲಿದೆ. ಮದ್ದೂರಿನಲ್ಲಿಂದು ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದ್ದು, 28ಕ್ಕೂ ಹೆಚ್ಚು ಗಣೇಶ ಮೂರ್ತಿಗಳ ಮೆರವಣಿಗೆಯಲ್ಲಿ ಸಾಗಲಿವೆ. 20 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆಯಿದೆ. ಬೆಳಗ್ಗೆ 10.30ಕ್ಕೆ ಮದ್ದೂರು ಪಟ್ಟಣದಿಂದ ಮೆರವಣಿಗೆ ಆರಂಭವಾಗಿ ಮೂರು ಕಿ.ಮೀ ಸಾಗಿ

ಮದ್ದೂರಿನಲ್ಲಿಂದು ಗಣೇಶ ವಿಸರ್ಜನೆ ಬೃಹತ್‌ ಮೆರವಣಿಗೆ Read More »

ಹಿರಿಯರನ್ನು ಸ್ಮರಿಸುವುದು ನಮ್ಮ ಸಂಸ್ಕೃತಿ : ಭಾಸ್ಕರ ರೈ ಕುಕ್ಕುವಳ್ಳಿ

ಕಲೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ನಮ್ಮ ಹಿರಿಯರು ಮಾಡಿರುವ ಸಾಧನೆಗಳಿಂದ ನಾವು ಸಾಮಾಜಿಕವಾಗಿ ಒಗ್ಗೂಡುವಂತಾಗಿದೆ. ಹಿರಿಯರ ಸಂಸ್ಮರಣೆಯಿಂದ ಈ ವಿಚಾರಧಾರೆಯು ಮುಂದಿನ ಪೀಳಿಗೆಗೆ ಆದರ್ಶವಾಗಿ ದಾರಿದೀಪವಾಗುತ್ತದೆಯೆಂದು ಮಂಗಳೂರು ಯಕ್ಷಾಂಗಣದ ಅಧ್ಯಕ್ಷ, ಅರ್ಥದಾರಿ ಭಾಸ್ಕರ ರೈ ಕುಕ್ಕುವಳ್ಳಿ ತಿಳಿಸಿದರು. ಉಪ್ಪಿನಂಗಡಿ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿದ ಶ್ರೀ ಕಾಳಿಕಾಂಬಾ ಯಕ್ಷ ಕಲಾ ಟ್ರಸ್ಟಿನ 50ನೇ ವರ್ಷದ ನಿಮಿತ್ತ ನಡೆಸುತ್ತಿರುವ ಮಹಾಭಾರತ ಸರಣಿಯ ತಾಳ ಮದ್ದಳೆ, ಪ್ರಶಸ್ತಿ ಪ್ರದಾನ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ

ಹಿರಿಯರನ್ನು ಸ್ಮರಿಸುವುದು ನಮ್ಮ ಸಂಸ್ಕೃತಿ : ಭಾಸ್ಕರ ರೈ ಕುಕ್ಕುವಳ್ಳಿ Read More »

ಶ್ರೀ ಮಹಾಭಾರತ ಸರಣಿ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ 50 ನೇ ವರ್ಷದ ನಿಮಿತ್ತ ನಡೆಸುತ್ತಿರುವ ಮಹಾಭಾರತ ಸರಣಿಯ ನಾಲ್ಕನೇ ಹಂತದ ತಾಳಮದ್ದಳೆಯ ಉದ್ಘಾಟನಾ ಕಾರ್ಯಕ್ರಮವು ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿತು. ಭಾರತೀಯ ಭೂಸೇನೆಯ ನಿವೃತ್ತ ಬಿಎಸ್ಎಫ್ ಕಮಾಂಡೆಂಟ್ ಡಿ. ಚಂದಪ್ಪ ಮೂಲ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವಲ್ಲಿ ತಾಳಮದ್ದಳೆಯಂತ ಕಲಾ ಪ್ರಕಾರಗಳು ಸಮರ್ಥ ಮಾಧ್ಯಮವಾಗಿದ್ದು ಇದನ್ನು ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಪುತ್ತೂರಿನ ಮಾಜಿ ಶಾಸಕರಾದ ಸಂಜೀವ ಮಠ0ದೂರು ಮಾತನಾಡಿ ಯಕ್ಷಗಾನ

ಶ್ರೀ ಮಹಾಭಾರತ ಸರಣಿ ತಾಳಮದ್ದಳೆ Read More »

error: Content is protected !!
Scroll to Top