ಧಾರ್ಮಿಕ

ಶೋಭಾಯಮಾನ ಶೋಭಾಯಾತ್ರೆಯ ಶ್ರೀ ಗಣೇಶನ ಉತ್ಸವಕ್ಕೆ ಚಾಲನೆ

ಪುತ್ತೂರು: ಪುತ್ತೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ಶ್ರೀ ಗಣೇಶೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ತೆರೆದ ವಾಹನದಲ್ಲಿ ಶ್ರೀ ಗಣೇಶನ ವಿಗ್ರಹವನ್ನು ಬೊಳುವಾರಿನಿಂದ ಮೆರವಣಿಗೆಯಲ್ಲಿ ತರಲಾಗಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಿರ್ಮಿಸಿದ ಬೃಹತ್ ಪೆಂಡಾಲ್‍ ನಲ್ಲಿ ಪ್ರತಿಷ್ಠಾಪಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುಜೀಂದ್ರ ಪ್ರಭು, ಗೌರವಾಧ್ಯಕ್ಷ ಎಂ.ಕೆ. ಪ್ರಸಾದ್, ಕಾರ್ಯಾಧ್ಯಕ್ಷ ರಾಧಾಕೃಷ್ಣ […]

ಶೋಭಾಯಮಾನ ಶೋಭಾಯಾತ್ರೆಯ ಶ್ರೀ ಗಣೇಶನ ಉತ್ಸವಕ್ಕೆ ಚಾಲನೆ Read More »

ಕುದ್ಮಾರಿನಲ್ಲಿ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸವಣೂರು: ಕುದ್ಮಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 19ರಂದು ಕುದ್ಮಾರು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿತು. ಪುರೋಹಿತ್ ನರಸಿಂಹ ಪ್ರಸಾದ್ ಪಾಂಗಣ್ಣಾಯ ಕುವೆತ್ತೋಡಿ ಅವರು ವೈದಿಕ ಕಾರ್ಯಕ್ರಮ ನೆರವೇರಿಸಿದರು. ಬೆಳಿಗ್ಗೆ ಪಂಚಗವ್ಯ ಪುಣ್ಯಾಹ ನಡೆದು, ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ ಜರಗಿತು. ಬಳಿಕ ಗಣಹೋಮ, ಮಂಗಳಾರತಿ ನಡೆಯಿತು. ನಂತರ ಹೂಕಟ್ಟುವ ಸ್ಪರ್ಧೆ ಜರಗಿತು. ಭಜನಾ ಕಾರ್ಯಕ್ರಮದಲ್ಲಿ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ, ಕೆಳಗಿನಕೇರಿ

ಕುದ್ಮಾರಿನಲ್ಲಿ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

ಪೆರ್ನೆ ಕಾರ್ಲ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಶ್ರೀ ಗಣೇಶೋತ್ಸವ | ಮೆರವಣಿಗೆಯಲ್ಲಿ ಕರೆತಂದ ಮೂರ್ತಿ | ಪ್ರತಿಷ್ಠಾಪನೆ

ಮಾಣಿ: ಪೆರ್ನೆ ಕಾರ್ಲ ಶ್ರೀ ರಾಮಾಂಜನೇಯ ಭಜನಾ ಮಂದಿರದ ವತಿಯಿಂದ ಪೆರ್ನೆ ಯುವಸ್ಪಂದನದ ಸಹಕಾರದೊಂದಿಗೆ ನಡೆಯುವ 28ನೇ ವರ್ಷದ ಗಣೇಶೋತ್ಸವದ ಶ್ರೀ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ತರಲಾಯಿತು. ಬಳಿಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಪ್ರತಿಷ್ಠಾಪಿಸಲಾಯಿತು. ಬೆಳಿಗ್ಗೆ 9 ಗಂಟೆಗೆ ಪೆರ್ನೆ ಕೃಷಿಕರಾದ ರಾಮಣ್ಣ ಗೌಡ ಪಡ್ಡಾಯಿ ಗಣೇಶೋತ್ಸವದ ವಿವಿಧ ಕಾರ್ಯಕ್ರಮಗಳನ್ನು ಧ್ವಜಾರೋಹಣ ಮಾಡಿ, ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪೆರ್ನೆ ಕಾರ್ಲ ಶ್ರೀ ರಾಮಾಂಜನೇಯ ಭಜನಾ ಮಂದಿರದ ಸ್ಥಾಪಕ

ಪೆರ್ನೆ ಕಾರ್ಲ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಶ್ರೀ ಗಣೇಶೋತ್ಸವ | ಮೆರವಣಿಗೆಯಲ್ಲಿ ಕರೆತಂದ ಮೂರ್ತಿ | ಪ್ರತಿಷ್ಠಾಪನೆ Read More »

ಮೆರವಣಿಗೆಯಲ್ಲಿ ಕರೆತಂದ ಕಲ್ಲಾರೆ ಗಣೇಶನ ವಿಗ್ರಹ | ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಸಭಾಮಂಟಪದಲ್ಲಿ ಪ್ರತಿಷ್ಠಾಪನೆ

ಪುತ್ತೂರು: ಇಲ್ಲಿಯ ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಪುತ್ತೂರು ಕಲ್ಲಾರೆ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಪೂಜಿಸಲ್ಪಡುವ ಶ್ರೀ ಗಣೇಶನ ವಿಗ್ರಹವನ್ನು ಮೆರವಣಿಗೆ ಮೂಲಕ ಕರೆತಂದು ಶ್ರೀ ರಾಘವೇಂದ್ರ ಮಠದ ಸಭಾ ಮಂಟಪದಲ್ಲಿ  ಪ್ರತಿಷ್ಠಾಪಿಸಲಾಯಿತು. ಶ್ರೀ ರಾಘವೇಂದ್ರ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪರು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಪ್ರತಿಷ್ಠಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಯು.ಪೂವಪ್ಪ, ಪ್ರಧಾನ ಕಾರ್ಯದರ್ಶಿ ಯು.ಲೋಕೇಶ್ ಹೆಗ್ಡೆ, ಕೋಶಾಧಿಕಾರಿ ಬೆಟ್ಟ ಈಶ್ವರ ಭಟ್ಟ, ಸಮಿತಿ ಸದಸ್ಯರು,

ಮೆರವಣಿಗೆಯಲ್ಲಿ ಕರೆತಂದ ಕಲ್ಲಾರೆ ಗಣೇಶನ ವಿಗ್ರಹ | ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಸಭಾಮಂಟಪದಲ್ಲಿ ಪ್ರತಿಷ್ಠಾಪನೆ Read More »

2023-24ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ | ಪುತ್ತೂರು, ಉಪ್ಪಿನಂಗಡಿ ಕಂಬಳದ ದಿನಾಂಕ ಹೀಗಿದೆ…

ಪುತ್ತೂರು : 2023-24ನೇ ಸಾಲಿನ ಕಂಬಳ ವೇಳಾಪಟ್ಟಿಯಂತೆ ಇದೇ ನ.11ರಂದು ಗುರುಪುರ ಕಂಬಳದೊಂದಿಗೆ ಜೋಡುಕರೆ ಕಂಬಳ ಋತು ಆರಂಭಗೊಳ್ಳಲಿದೆ. 22 ಕಂಬಳಗಳು ವೇಳಾಪಟ್ಟಿಯಂತೆ ನಡೆಯಲಿದೆ. ಕೋಟಿ ಚೆನ್ನಯ ಜೋಡುಕರೆ ಕಂಬಳ 2024ರ ಜ .27ರಂದು ನಡೆಯಲಿದೆ. ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಮಾ.23ರಂದು ನಡೆಯಲಿದೆ.

2023-24ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ | ಪುತ್ತೂರು, ಉಪ್ಪಿನಂಗಡಿ ಕಂಬಳದ ದಿನಾಂಕ ಹೀಗಿದೆ… Read More »

ಮಹಾಲಿಂಗೇಶ್ವರ ದೇವರ ಉತ್ಸವ ಬಲಿಯೊಂದಿಗೆ ಕದಿರು ವಿನಿಯೋಗ – ವಿತರಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ-ವಿತರಣೆ ಕಾರ್ಯಕ್ರಮ ಸೋಮವಾರವೂ ಮುಂದುವರಿಯಿತು. ದೇವಸ್ಥಾನದ ಪುಷ್ಕರಣಿ ಬಳಿ ಇರುವ ಅಶ್ವತ್ಥ ಕಟ್ಟೆಯಲ್ಲಿ ಕದಿರಿಗೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ದೇವರ ಉತ್ಸವ ಬಲಿಯೊಂದಿಗೆ ಕದಿರನ್ನು ದೇವಸ್ಥಾನದ ಒಳಾಂಗಣಕ್ಕೆ ತಂದು ಪೂಜೆ ಸಲ್ಲಿಸಲಾಯಿತು. ಬಳಿಕ ಕದಿರನ್ನು ಹೊರಾಂಗಣದಲ್ಲಿ ಸರತಿ ಸಾಲಿನಲ್ಲಿ ನಿಂತ ಭಕ್ತರಿಗೆ ವಿತರಿಸಲಾಯಿತು. ದೇವಸ್ಥಾನದ ಗರ್ಭಗುಡಿ, ಗೋಪುರ, ರಥ, ಕಟ್ಟೆಗಳಿಗೆ ಕದಿರು ಕಟ್ಟುವ ಸಂಪ್ರದಾಯ ನಡೆದ ಬಳಿಕ ಮಧ್ಯಾಹ್ನ ಶ್ರೀ ದೇವರಿಗೆ ಹೊಸ ಅಕ್ಕಿ

ಮಹಾಲಿಂಗೇಶ್ವರ ದೇವರ ಉತ್ಸವ ಬಲಿಯೊಂದಿಗೆ ಕದಿರು ವಿನಿಯೋಗ – ವಿತರಣೆ Read More »

ಯಶಸ್ವಿ 2ನೇ ವರ್ಷಕ್ಕೆ ಪಾದಾರ್ಪಣೆಗೈದ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ ಲಕ್ಷ್ಮೀಪೂಜೆ

ಪುತ್ತೂರು: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಪ್ರಭು ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆ ಸೆ. 18ರಂದು ಎರಡನೇ ವರ್ಷಕ್ಕೆ ಕಾಲಿಟ್ಟಿದೆ. 2ನೇ ವರ್ಷದ ಪಾದಾರ್ಪಣೆ ಅಂಗವಾಗಿ ಸಂಸ್ಥೆಯಲ್ಲಿ ಲಕ್ಷ್ಮೀಪೂಜೆ ನಡೆಯಿತು. ಈ ಸಂದರ್ಭ ಸಂಸ್ಥೆಯ ಅಧ್ಯಕ್ಷರಾದ ಪ್ರವೀಣ್ ಕುಂಟ್ಯಾನ, ನಿರ್ದೇಶಕರಾದ ಮುರಳೀಧರ ಕೆ.ಎಲ್., ನಾಗೇಶ್ ಕೆಡೆಂಜಿ, ವಸಂತ ವೀರಮಂಗಲ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್’ನ ನಿರ್ದೇಶಕರಾದ ಕೇಶವ ಅಮೈ ಕಲಾಯಿಗುತ್ತು, ಸತೀಶ್ ಪಾಂಬಾರು, ಪ್ರೇರಣಾ ಸಂಸ್ಥೆಯ ಪ್ರಬಂಧಕರಾದ ದಯಾಮಣಿ ನಾಗೇಶ್, ಪಿ.ಆರ್‍.ಒ. ಮೋಕ್ಷಿತ ಕೂಟೇಲು, ಆಶಾಲತಾ ಸತೀಶ್ ಪಾಂಬಾರು, ಮಮತಾ

ಯಶಸ್ವಿ 2ನೇ ವರ್ಷಕ್ಕೆ ಪಾದಾರ್ಪಣೆಗೈದ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ ಲಕ್ಷ್ಮೀಪೂಜೆ Read More »

ನಾಳೆ (ಸೆ.19): ಕುದ್ಮಾರು ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

ಪುತ್ತೂರು: ಕಡಬ ತಾಲೂಕಿನ ಕುದ್ಮಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.19 ಮಂಗಳವಾರ ಕುದ್ಮಾರು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ಪುರೋಹಿತ ನರಸಿಂಹ ಪ್ರಸಾದ್ ಪಾಂಗಣ್ಣಾಯ ಕೂವೆತ್ತೋಡಿ ವೈದಿಕ ಕಾರ್ಯಕ್ರಮ ನೆರವೇರಿಸುವರು ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜ್‍ ದೀಪಕ್ ಜೈನ್‍ ಕುದ್ಮಾರುಗುತ್ತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಸೆ.19): ಕುದ್ಮಾರು ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

ನರೇಂದ್ರ ಮೋದಿ ಆಯುಷ್ಯ, ಅರೋಗ್ಯ ವೃದ್ಧಿಗಾಗಿ ಪ್ರಾರ್ಥನೆ | ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಮಾಡ್ನೂರು ಶಕ್ತಿಕೇಂದ್ರದ ಬಿಜೆಪಿ ಪ್ರಮುಖರು

ಕಾವು: ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 73 ನೇ ಜನ್ಮ ದಿನದ ಪ್ರಯುಕ್ತ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅವರ ಆರೋಗ್ಯ , ಆಯುಷ್ಯ ಹಾಗೂ ಮುಂದಿನ ಚುನಾವಣೆಯಲ್ಲೂ ದೇಶದ ಚುಕ್ಕಾಣಿ ಹಿಡಿಯುವ ಶಕ್ತಿ ಅವರಿಗೆ ಪಂಚಲಿಂಗೇಶ್ವರ ದೇವರು ಅನುಗ್ರಹಿಸಲಿ ಎಂದು ಪ್ರಾರ್ಥನೆ ಮಾಡಲಾಯಿತು. ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡ ಪ್ರಾರ್ಥನೆ ಸಲ್ಲಿಸಿದರು. ಅರ್ಚಕ ಪ್ರಕಾಶ್ ಬಳ್ಳಕ್ಕುರಾಯ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ

ನರೇಂದ್ರ ಮೋದಿ ಆಯುಷ್ಯ, ಅರೋಗ್ಯ ವೃದ್ಧಿಗಾಗಿ ಪ್ರಾರ್ಥನೆ | ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಮಾಡ್ನೂರು ಶಕ್ತಿಕೇಂದ್ರದ ಬಿಜೆಪಿ ಪ್ರಮುಖರು Read More »

ನಾರ್ಯಬೈಲು ಜೋಕಾಲಿ ಬಳಗದಿಂದ ಮೊಸರು ಕುಡಿಕೆ ಉತ್ಸವ

ಪುತ್ತೂರು: ಕೈಮಣ ನಾರ್ಯಬೈಲು ಜೋಕಾಲಿ ಬಳಗದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಸೆ. 17ರಂದು ನಡೆಯಿತು. ಮೊಸರು ಕುಡಿಕೆ ಉತ್ಸವದ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಪುಷ್ಪಾವತಿ ಕಳುವಾಜೆ ನೆರವೇರಿಸಿದರು. ನಾರ್ಯಬೈಲು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರವೀಣ್ ಕುಮಾರ್ ಮರಕ್ಕಡ ಅಧ್ಯಕ್ಷತೆ ವಹಿಸಿದ್ದರು. ಬೆಳಂದೂರು ಗ್ರಾಪಂ ಸದಸ್ಯೆ ಉಮೇಶ್ವರಿ ಅಗಳಿ, ನಾರ್ಯಬೈಲು ಅಂಗನವಾಡಿ ಕಾರ್ಯಕರ್ತೆ ಪಾರ್ವತಿ, ವಿದ್ಯುತ್ ಗುತ್ತಿಗೆದಾರ ಚೇತನ್ ನಾವೂರು ಉಪಸ್ಥಿತರಿದ್ದರು. ಸಂಜೆ ನಡೆದ ಸಮಾರೋಪದಲ್ಲಿ ಮೊಸರು ಕುಡಿಕೆ

ನಾರ್ಯಬೈಲು ಜೋಕಾಲಿ ಬಳಗದಿಂದ ಮೊಸರು ಕುಡಿಕೆ ಉತ್ಸವ Read More »

error: Content is protected !!
Scroll to Top