ಧಾರ್ಮಿಕ

ಶ್ರೀ ಕ್ಷೇತ್ರ ಕೆಲಿಂಜದಲ್ಲಿ ವೈಭವದಿಂದ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ಬಂಟ್ವಾಳ ತಾಲೂಕಿನ ಕೆಲಿಂಜ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 47ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಶ್ರೀ ನಿಕೇತನ ಮಂದಿರದಲ್ಲಿ ಮಂಗಳವಾರ ಸಂಭ್ರಮದಿಂದ ನಡೆಯಿತು. ಉತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ರಾಮ್ ದಾಸ್ ಶೆಟ್ಟಿ ಮಾತನಾಡಿ, ಸ್ಥಳೀಯ ಸಂಘಟಕರು ಧಾರ್ಮಿಕವಾಗಿ ಉತ್ತಮ ಕಾರ್ಯಕ್ರಮ ಸಂಘಟಿಸಿದ್ದಾರೆ. ಈ ರೀತಿಯ ಸಮಿತಿ ಮೂಲಕ ನಡೆಯುವ ಕಾರ್ಯಕ್ರಮ ಊರಿನ ಅಭಿವೃದ್ಧಿಗೆ ಪೂರಕವಾಗಿದೆ ಎಂದರು. ಇನ್ನೋರ್ವ ಮುಖ್ಯ ಅತಿಥಿಯಾಗಿ […]

ಶ್ರೀ ಕ್ಷೇತ್ರ ಕೆಲಿಂಜದಲ್ಲಿ ವೈಭವದಿಂದ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ Read More »

ಕೇಸರಿ ಶಾಲು ಧರ್ಮದ ಸಂಕೇತ, ಯಾವುದೇ ಪಕ್ಷದ ಸೊತ್ತಲ್ಲ | ಸಂತ ಫಿಲೋಮಿನಾ ಕಾಲೇಜಿನ 41 ನೇ ಗಣೇಶೋತ್ಸವ ಸಂಭ್ರಮದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಕೇಸರಿ ಶಾಲು ಧರ್ಮದ ಸಂಕೇತವಾಗಿದೆ ವಿನಾ ಯಾವುದೇ ರಾಜಕೀಯ ಪಕ್ಷದ ಸೊತ್ತಲ್ಲ, ಕೆಲವರು ಅದು ನಮ್ಮದೇ ಎಂದು ಹೇಳುತ್ತಿದ್ದಾರೆ. ಧರ್ಮದ ಹಾದಿಯಲ್ಲಿ ನಡೆಯುವ ಪ್ರತೀಯೊಬ್ಬ ವ್ಯಕ್ತಿಯೂ ತನ್ನ ಧರ್ಮವನ್ನು ಆಚರಣೆ ಮಾಡುವುದರ ಜೊತೆ ಸಹೋದರ ಧರ್ಮವನ್ನು ಗೌರವಿಸುತ್ತಾನೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಸಂತಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಗಣೇಶೋತ್ಸವ ಸೇವಾ ಟ್ರಸ್ಟ್ ಹಾಗೂ ಕಾಲೇಜು ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಲ್ಲಿ ಪ್ರತೀಯೊಬ್ಬರೂ

ಕೇಸರಿ ಶಾಲು ಧರ್ಮದ ಸಂಕೇತ, ಯಾವುದೇ ಪಕ್ಷದ ಸೊತ್ತಲ್ಲ | ಸಂತ ಫಿಲೋಮಿನಾ ಕಾಲೇಜಿನ 41 ನೇ ಗಣೇಶೋತ್ಸವ ಸಂಭ್ರಮದಲ್ಲಿ ಶಾಸಕ ಅಶೋಕ್ ರೈ Read More »

ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂದಿರದಲ್ಲಿ ವೈಭವದ ಗಣೇಶೋತ್ಸವ | ಶೋಭಾಯಾತ್ರೆಗೆ ಮೆರುಗು ನೀಡಿದ ಕುಣಿತ ಭಜನೆ ತಂಡ

ಪುತ್ತೂರು: ತಾಲೂಕಿನ ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂಡಳಿ ಹಾಗೂ ಯಕ್ಷಗಾನ ಕಲಾಕೂಟದ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಗಳವಾರ ರಾತ್ರಿ ವಿವಿಧ ವೈದಿಕ ಕಾರ್ಯಕ್ರಮ, ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು. ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂದಿರದಲ್ಲಿ ನಡೆದ ಉತ್ಸವದ ಅಂಗವಾಗಿ ಬೆಳಿಗ್ಗೆ 9 ಕ್ಕೆ ಮೂರ್ತಿ ಪ್ರತಿಷ್ಠಾಪನೆ ನಡೆದು, ಭಜನೆ, ಮಂಗಳಾರತಿ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು. ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಷಣ್ಮುಖದೇವ ಭಜನಾ ಮಂಡಳಿ ಹಾಗೂ ಯಕ್ಷಗಾನ ಕಲಾಕೂಟದ ಅಧ್ಯಕ್ಷ ಮಂಜುನಾಥ್

ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂದಿರದಲ್ಲಿ ವೈಭವದ ಗಣೇಶೋತ್ಸವ | ಶೋಭಾಯಾತ್ರೆಗೆ ಮೆರುಗು ನೀಡಿದ ಕುಣಿತ ಭಜನೆ ತಂಡ Read More »

ಧಾರ್ಮಿಕತೆಯ ಗಣೇಶೋತ್ಸವಕ್ಕೆ ಸಾಮಾಜಿಕ ಮಹತ್ವವೂ ಇದೆ

“ವಕ್ರ ತುಂಡ ಮಹಾಕಾಯ ಸೂರ್ಯ ಕೋಟಿ ಸಮಪ್ರಭl ನಿರ್ವಿಘ್ನಂ ಕುರುಮೇ ದೇವ ಸರ್ವ ಕಾರ್ಯೇಶು ಸರ್ವದಾl” ಹೀಗೆಂದು ಪ್ರಾರ್ಥಿಸುತ್ತಾ ಪ್ರತೀ ವರುಷ ದೇಶವಿಡೀ ಗಣೇಶ ಚತುರ್ಥಿಯನ್ನು ವಿಜ್ರಂಭಣೆಯಿಂದ ಆಚರಿಸುತ್ತೇವೆ. ಪೌರಾಣಿಕ, ಧಾರ್ಮಿಕ ಹಾಗೂ ಸಾಮಜಿಕ ಹಿನ್ನೆಲೆಯುಳ್ಳ ಈ ಹಬ್ಬವನ್ನು ಪ್ರತೀ ವರುಷ  ಭಾದ್ರಪದ  ಮಾಸದ ಶುಕ್ಲ ಪಕ್ಷದ ಚೌತಿಯ ದಿನದಂದು ನಡೆಸುತ್ತೇವೆ. ಕೆಲವೆಡೆ ಗೌರಿ ಗಣೇಶ ಹಬ್ಬ ಎಂದೇ ಕರೆಯಲಾಗುವ ಈ ಹಬ್ಬದಲ್ಲಿ ಮುತ್ತೈದೆಯರಿಗೆ ತವರು ಮನೆಯಿಂದ ಬಾಗಿನ ಕೊಡುವ ಸಂಪ್ರದಾಯವೂ ಇದೆ. ಮನೆ ಮನೆಗಳಲ್ಲಿ, ದೇವಸ್ಥಾನಗಳಲ್ಲಿ,

ಧಾರ್ಮಿಕತೆಯ ಗಣೇಶೋತ್ಸವಕ್ಕೆ ಸಾಮಾಜಿಕ ಮಹತ್ವವೂ ಇದೆ Read More »

ಬಲಿ ಉತ್ಸವ ಪ್ರಿಯ ಶ್ರೀ ಗಣೇಶನ ಉತ್ಸವಕ್ಕೆ ಚಾಲನೆ

ಪುತ್ತೂರು ನಗರದ ಕಿಲ್ಲೆ ಮೈದಾನದಲ್ಲಿ ಶ್ರೀ ದೇವತಾ ಸಮಿತಿ ವತಿಯಿಂದ ಏಳು ದಿನಗಳ ಕಾಲ ನಡೆಯುವ ಇತಿಹಾಸ ಪ್ರಸಿದ್ಧ 66ನೇ ವರ್ಷದ ಗಣೇಶೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕಿಲ್ಲೆ ಮೈದಾನಕ್ಕೆ ತಂದು, 11 ಗಂಟೆಗೆ ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ ಮಾಡಲಾಯಿತು.   ಈ ಸಂದರ್ಭದಲ್ಲಿ ಶ್ರೀ ದೇವತಾ ಸಮಿತಿ ಕಾರ್ಯದರ್ಶಿ ರಮೇಶ್, ಕೋಶಾಧಿಕಾರಿ ಸಿ.ಶ್ರೀಧರ ನಾಯಕ್, ಸಮಿತಿ ಸದಸ್ಯರಾದ ದಿನೇಶ್ ಕುಲಾಲ್ ಪಿ.ವಿ., ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ರತ್ನಾಕರ

ಬಲಿ ಉತ್ಸವ ಪ್ರಿಯ ಶ್ರೀ ಗಣೇಶನ ಉತ್ಸವಕ್ಕೆ ಚಾಲನೆ Read More »

ಶೋಭಾಯಮಾನ ಶೋಭಾಯಾತ್ರೆಯ ಶ್ರೀ ಗಣೇಶನ ಉತ್ಸವಕ್ಕೆ ಚಾಲನೆ

ಪುತ್ತೂರು: ಪುತ್ತೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ಶ್ರೀ ಗಣೇಶೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ತೆರೆದ ವಾಹನದಲ್ಲಿ ಶ್ರೀ ಗಣೇಶನ ವಿಗ್ರಹವನ್ನು ಬೊಳುವಾರಿನಿಂದ ಮೆರವಣಿಗೆಯಲ್ಲಿ ತರಲಾಗಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಿರ್ಮಿಸಿದ ಬೃಹತ್ ಪೆಂಡಾಲ್‍ ನಲ್ಲಿ ಪ್ರತಿಷ್ಠಾಪಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುಜೀಂದ್ರ ಪ್ರಭು, ಗೌರವಾಧ್ಯಕ್ಷ ಎಂ.ಕೆ. ಪ್ರಸಾದ್, ಕಾರ್ಯಾಧ್ಯಕ್ಷ ರಾಧಾಕೃಷ್ಣ

ಶೋಭಾಯಮಾನ ಶೋಭಾಯಾತ್ರೆಯ ಶ್ರೀ ಗಣೇಶನ ಉತ್ಸವಕ್ಕೆ ಚಾಲನೆ Read More »

ಕುದ್ಮಾರಿನಲ್ಲಿ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸವಣೂರು: ಕುದ್ಮಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 19ರಂದು ಕುದ್ಮಾರು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿತು. ಪುರೋಹಿತ್ ನರಸಿಂಹ ಪ್ರಸಾದ್ ಪಾಂಗಣ್ಣಾಯ ಕುವೆತ್ತೋಡಿ ಅವರು ವೈದಿಕ ಕಾರ್ಯಕ್ರಮ ನೆರವೇರಿಸಿದರು. ಬೆಳಿಗ್ಗೆ ಪಂಚಗವ್ಯ ಪುಣ್ಯಾಹ ನಡೆದು, ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ ಜರಗಿತು. ಬಳಿಕ ಗಣಹೋಮ, ಮಂಗಳಾರತಿ ನಡೆಯಿತು. ನಂತರ ಹೂಕಟ್ಟುವ ಸ್ಪರ್ಧೆ ಜರಗಿತು. ಭಜನಾ ಕಾರ್ಯಕ್ರಮದಲ್ಲಿ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ, ಕೆಳಗಿನಕೇರಿ

ಕುದ್ಮಾರಿನಲ್ಲಿ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

ಪೆರ್ನೆ ಕಾರ್ಲ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಶ್ರೀ ಗಣೇಶೋತ್ಸವ | ಮೆರವಣಿಗೆಯಲ್ಲಿ ಕರೆತಂದ ಮೂರ್ತಿ | ಪ್ರತಿಷ್ಠಾಪನೆ

ಮಾಣಿ: ಪೆರ್ನೆ ಕಾರ್ಲ ಶ್ರೀ ರಾಮಾಂಜನೇಯ ಭಜನಾ ಮಂದಿರದ ವತಿಯಿಂದ ಪೆರ್ನೆ ಯುವಸ್ಪಂದನದ ಸಹಕಾರದೊಂದಿಗೆ ನಡೆಯುವ 28ನೇ ವರ್ಷದ ಗಣೇಶೋತ್ಸವದ ಶ್ರೀ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ತರಲಾಯಿತು. ಬಳಿಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಪ್ರತಿಷ್ಠಾಪಿಸಲಾಯಿತು. ಬೆಳಿಗ್ಗೆ 9 ಗಂಟೆಗೆ ಪೆರ್ನೆ ಕೃಷಿಕರಾದ ರಾಮಣ್ಣ ಗೌಡ ಪಡ್ಡಾಯಿ ಗಣೇಶೋತ್ಸವದ ವಿವಿಧ ಕಾರ್ಯಕ್ರಮಗಳನ್ನು ಧ್ವಜಾರೋಹಣ ಮಾಡಿ, ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪೆರ್ನೆ ಕಾರ್ಲ ಶ್ರೀ ರಾಮಾಂಜನೇಯ ಭಜನಾ ಮಂದಿರದ ಸ್ಥಾಪಕ

ಪೆರ್ನೆ ಕಾರ್ಲ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಶ್ರೀ ಗಣೇಶೋತ್ಸವ | ಮೆರವಣಿಗೆಯಲ್ಲಿ ಕರೆತಂದ ಮೂರ್ತಿ | ಪ್ರತಿಷ್ಠಾಪನೆ Read More »

ಮೆರವಣಿಗೆಯಲ್ಲಿ ಕರೆತಂದ ಕಲ್ಲಾರೆ ಗಣೇಶನ ವಿಗ್ರಹ | ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಸಭಾಮಂಟಪದಲ್ಲಿ ಪ್ರತಿಷ್ಠಾಪನೆ

ಪುತ್ತೂರು: ಇಲ್ಲಿಯ ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಪುತ್ತೂರು ಕಲ್ಲಾರೆ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಪೂಜಿಸಲ್ಪಡುವ ಶ್ರೀ ಗಣೇಶನ ವಿಗ್ರಹವನ್ನು ಮೆರವಣಿಗೆ ಮೂಲಕ ಕರೆತಂದು ಶ್ರೀ ರಾಘವೇಂದ್ರ ಮಠದ ಸಭಾ ಮಂಟಪದಲ್ಲಿ  ಪ್ರತಿಷ್ಠಾಪಿಸಲಾಯಿತು. ಶ್ರೀ ರಾಘವೇಂದ್ರ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪರು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಪ್ರತಿಷ್ಠಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಯು.ಪೂವಪ್ಪ, ಪ್ರಧಾನ ಕಾರ್ಯದರ್ಶಿ ಯು.ಲೋಕೇಶ್ ಹೆಗ್ಡೆ, ಕೋಶಾಧಿಕಾರಿ ಬೆಟ್ಟ ಈಶ್ವರ ಭಟ್ಟ, ಸಮಿತಿ ಸದಸ್ಯರು,

ಮೆರವಣಿಗೆಯಲ್ಲಿ ಕರೆತಂದ ಕಲ್ಲಾರೆ ಗಣೇಶನ ವಿಗ್ರಹ | ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಸಭಾಮಂಟಪದಲ್ಲಿ ಪ್ರತಿಷ್ಠಾಪನೆ Read More »

2023-24ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ | ಪುತ್ತೂರು, ಉಪ್ಪಿನಂಗಡಿ ಕಂಬಳದ ದಿನಾಂಕ ಹೀಗಿದೆ…

ಪುತ್ತೂರು : 2023-24ನೇ ಸಾಲಿನ ಕಂಬಳ ವೇಳಾಪಟ್ಟಿಯಂತೆ ಇದೇ ನ.11ರಂದು ಗುರುಪುರ ಕಂಬಳದೊಂದಿಗೆ ಜೋಡುಕರೆ ಕಂಬಳ ಋತು ಆರಂಭಗೊಳ್ಳಲಿದೆ. 22 ಕಂಬಳಗಳು ವೇಳಾಪಟ್ಟಿಯಂತೆ ನಡೆಯಲಿದೆ. ಕೋಟಿ ಚೆನ್ನಯ ಜೋಡುಕರೆ ಕಂಬಳ 2024ರ ಜ .27ರಂದು ನಡೆಯಲಿದೆ. ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಮಾ.23ರಂದು ನಡೆಯಲಿದೆ.

2023-24ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ | ಪುತ್ತೂರು, ಉಪ್ಪಿನಂಗಡಿ ಕಂಬಳದ ದಿನಾಂಕ ಹೀಗಿದೆ… Read More »

error: Content is protected !!
Scroll to Top