ಧಾರ್ಮಿಕ

ಮಹಾಲಿಂಗೇಶ್ವರ ದೇವರ ಉತ್ಸವ ಬಲಿಯೊಂದಿಗೆ ಕದಿರು ವಿನಿಯೋಗ – ವಿತರಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ-ವಿತರಣೆ ಕಾರ್ಯಕ್ರಮ ಸೋಮವಾರವೂ ಮುಂದುವರಿಯಿತು. ದೇವಸ್ಥಾನದ ಪುಷ್ಕರಣಿ ಬಳಿ ಇರುವ ಅಶ್ವತ್ಥ ಕಟ್ಟೆಯಲ್ಲಿ ಕದಿರಿಗೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ದೇವರ ಉತ್ಸವ ಬಲಿಯೊಂದಿಗೆ ಕದಿರನ್ನು ದೇವಸ್ಥಾನದ ಒಳಾಂಗಣಕ್ಕೆ ತಂದು ಪೂಜೆ ಸಲ್ಲಿಸಲಾಯಿತು. ಬಳಿಕ ಕದಿರನ್ನು ಹೊರಾಂಗಣದಲ್ಲಿ ಸರತಿ ಸಾಲಿನಲ್ಲಿ ನಿಂತ ಭಕ್ತರಿಗೆ ವಿತರಿಸಲಾಯಿತು. ದೇವಸ್ಥಾನದ ಗರ್ಭಗುಡಿ, ಗೋಪುರ, ರಥ, ಕಟ್ಟೆಗಳಿಗೆ ಕದಿರು ಕಟ್ಟುವ ಸಂಪ್ರದಾಯ ನಡೆದ ಬಳಿಕ ಮಧ್ಯಾಹ್ನ ಶ್ರೀ ದೇವರಿಗೆ ಹೊಸ ಅಕ್ಕಿ […]

ಮಹಾಲಿಂಗೇಶ್ವರ ದೇವರ ಉತ್ಸವ ಬಲಿಯೊಂದಿಗೆ ಕದಿರು ವಿನಿಯೋಗ – ವಿತರಣೆ Read More »

ಯಶಸ್ವಿ 2ನೇ ವರ್ಷಕ್ಕೆ ಪಾದಾರ್ಪಣೆಗೈದ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ ಲಕ್ಷ್ಮೀಪೂಜೆ

ಪುತ್ತೂರು: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಪ್ರಭು ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆ ಸೆ. 18ರಂದು ಎರಡನೇ ವರ್ಷಕ್ಕೆ ಕಾಲಿಟ್ಟಿದೆ. 2ನೇ ವರ್ಷದ ಪಾದಾರ್ಪಣೆ ಅಂಗವಾಗಿ ಸಂಸ್ಥೆಯಲ್ಲಿ ಲಕ್ಷ್ಮೀಪೂಜೆ ನಡೆಯಿತು. ಈ ಸಂದರ್ಭ ಸಂಸ್ಥೆಯ ಅಧ್ಯಕ್ಷರಾದ ಪ್ರವೀಣ್ ಕುಂಟ್ಯಾನ, ನಿರ್ದೇಶಕರಾದ ಮುರಳೀಧರ ಕೆ.ಎಲ್., ನಾಗೇಶ್ ಕೆಡೆಂಜಿ, ವಸಂತ ವೀರಮಂಗಲ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್’ನ ನಿರ್ದೇಶಕರಾದ ಕೇಶವ ಅಮೈ ಕಲಾಯಿಗುತ್ತು, ಸತೀಶ್ ಪಾಂಬಾರು, ಪ್ರೇರಣಾ ಸಂಸ್ಥೆಯ ಪ್ರಬಂಧಕರಾದ ದಯಾಮಣಿ ನಾಗೇಶ್, ಪಿ.ಆರ್‍.ಒ. ಮೋಕ್ಷಿತ ಕೂಟೇಲು, ಆಶಾಲತಾ ಸತೀಶ್ ಪಾಂಬಾರು, ಮಮತಾ

ಯಶಸ್ವಿ 2ನೇ ವರ್ಷಕ್ಕೆ ಪಾದಾರ್ಪಣೆಗೈದ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ ಲಕ್ಷ್ಮೀಪೂಜೆ Read More »

ನಾಳೆ (ಸೆ.19): ಕುದ್ಮಾರು ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

ಪುತ್ತೂರು: ಕಡಬ ತಾಲೂಕಿನ ಕುದ್ಮಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.19 ಮಂಗಳವಾರ ಕುದ್ಮಾರು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ಪುರೋಹಿತ ನರಸಿಂಹ ಪ್ರಸಾದ್ ಪಾಂಗಣ್ಣಾಯ ಕೂವೆತ್ತೋಡಿ ವೈದಿಕ ಕಾರ್ಯಕ್ರಮ ನೆರವೇರಿಸುವರು ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜ್‍ ದೀಪಕ್ ಜೈನ್‍ ಕುದ್ಮಾರುಗುತ್ತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಸೆ.19): ಕುದ್ಮಾರು ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

ನರೇಂದ್ರ ಮೋದಿ ಆಯುಷ್ಯ, ಅರೋಗ್ಯ ವೃದ್ಧಿಗಾಗಿ ಪ್ರಾರ್ಥನೆ | ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಮಾಡ್ನೂರು ಶಕ್ತಿಕೇಂದ್ರದ ಬಿಜೆಪಿ ಪ್ರಮುಖರು

ಕಾವು: ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 73 ನೇ ಜನ್ಮ ದಿನದ ಪ್ರಯುಕ್ತ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅವರ ಆರೋಗ್ಯ , ಆಯುಷ್ಯ ಹಾಗೂ ಮುಂದಿನ ಚುನಾವಣೆಯಲ್ಲೂ ದೇಶದ ಚುಕ್ಕಾಣಿ ಹಿಡಿಯುವ ಶಕ್ತಿ ಅವರಿಗೆ ಪಂಚಲಿಂಗೇಶ್ವರ ದೇವರು ಅನುಗ್ರಹಿಸಲಿ ಎಂದು ಪ್ರಾರ್ಥನೆ ಮಾಡಲಾಯಿತು. ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡ ಪ್ರಾರ್ಥನೆ ಸಲ್ಲಿಸಿದರು. ಅರ್ಚಕ ಪ್ರಕಾಶ್ ಬಳ್ಳಕ್ಕುರಾಯ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ

ನರೇಂದ್ರ ಮೋದಿ ಆಯುಷ್ಯ, ಅರೋಗ್ಯ ವೃದ್ಧಿಗಾಗಿ ಪ್ರಾರ್ಥನೆ | ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಮಾಡ್ನೂರು ಶಕ್ತಿಕೇಂದ್ರದ ಬಿಜೆಪಿ ಪ್ರಮುಖರು Read More »

ನಾರ್ಯಬೈಲು ಜೋಕಾಲಿ ಬಳಗದಿಂದ ಮೊಸರು ಕುಡಿಕೆ ಉತ್ಸವ

ಪುತ್ತೂರು: ಕೈಮಣ ನಾರ್ಯಬೈಲು ಜೋಕಾಲಿ ಬಳಗದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಸೆ. 17ರಂದು ನಡೆಯಿತು. ಮೊಸರು ಕುಡಿಕೆ ಉತ್ಸವದ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಪುಷ್ಪಾವತಿ ಕಳುವಾಜೆ ನೆರವೇರಿಸಿದರು. ನಾರ್ಯಬೈಲು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರವೀಣ್ ಕುಮಾರ್ ಮರಕ್ಕಡ ಅಧ್ಯಕ್ಷತೆ ವಹಿಸಿದ್ದರು. ಬೆಳಂದೂರು ಗ್ರಾಪಂ ಸದಸ್ಯೆ ಉಮೇಶ್ವರಿ ಅಗಳಿ, ನಾರ್ಯಬೈಲು ಅಂಗನವಾಡಿ ಕಾರ್ಯಕರ್ತೆ ಪಾರ್ವತಿ, ವಿದ್ಯುತ್ ಗುತ್ತಿಗೆದಾರ ಚೇತನ್ ನಾವೂರು ಉಪಸ್ಥಿತರಿದ್ದರು. ಸಂಜೆ ನಡೆದ ಸಮಾರೋಪದಲ್ಲಿ ಮೊಸರು ಕುಡಿಕೆ

ನಾರ್ಯಬೈಲು ಜೋಕಾಲಿ ಬಳಗದಿಂದ ಮೊಸರು ಕುಡಿಕೆ ಉತ್ಸವ Read More »

ದೇಶದ ಬೆನ್ನೆಲುಬಾದ ರೈತರಿಗೆ ಬೆನ್ನೆಲುಬು ವಿಶ್ವಕರ್ಮರು | ಬೊಳುವಾರಿನಲ್ಲಿ ನಡೆದ ವಿಶ್ವಕರ್ಮ ಮಹೋತ್ಸವದಲ್ಲಿ ಶಿವಾನಂದ ಆಚಾರ್ಯ | ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ

ಪುತ್ತೂರು: ಜಾತಿ ವಿಂಗಡಣೆಯಲ್ಲಿ 1216 ಜಾತಿಗಳನ್ನು ಗುರುತಿಸಲಾಗಿದೆ. ಅದರಲ್ಲಿ ದೇವರ ಹೆಸರಿನಿಂದ ಗುರುತಿಸುವ ಏಕೈಕ ಜಾತಿ ವಿಶ್ವಕರ್ಮ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ, ಉಪವಲಯ ಅರಣ್ಯಾಧಿಕಾರಿ ಶಿವಾನಂದ ಆಚಾರ್ಯ ಹೇಳಿದರು. ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಭಾನುವಾರ ವಿಶ್ವಕರ್ಮ ಯುವ ಸಮಾಜ ಹಾಗೂ ವಿಶ್ವಬ್ರಾಹ್ಮಣ ಸೇವಾ ಸಂಘದ ಆಶ್ರಯದಲ್ಲಿ ವಿಶ್ವಕರ್ಮ ಪೂಜೆ ಹಿನ್ನೆಲೆಯಲ್ಲಿ ನಡೆದ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ದೇವಾನುದೇವತೆಗಳಿಗೆ ಆಯುಧಗಳನ್ನು ಸೃಷ್ಟಿಸಿಕೊಟ್ಟವ ವಿಶ್ವಕರ್ಮ. ದೇವರ

ದೇಶದ ಬೆನ್ನೆಲುಬಾದ ರೈತರಿಗೆ ಬೆನ್ನೆಲುಬು ವಿಶ್ವಕರ್ಮರು | ಬೊಳುವಾರಿನಲ್ಲಿ ನಡೆದ ವಿಶ್ವಕರ್ಮ ಮಹೋತ್ಸವದಲ್ಲಿ ಶಿವಾನಂದ ಆಚಾರ್ಯ | ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ Read More »

ವಿಶ್ವಕರ್ಮ ಮಹೋತ್ಸವ, ವೈಭವದ ವಿಶ್ವಕರ್ಮ ವಾಹನ ಮೆರವಣಿಗೆ

ಪುತ್ತೂರು: ವಿಶ್ವಕರ್ಮ ಜಯಂತಿ ಅಂಗವಾಗಿ ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಚಾಲನೆ ನೀಡಿದರು. ಬಳಿಕ ಪುತ್ತೂರು ಪೇಟೆಯ ಮುಖ್ಯರಸ್ತೆಯಿಂದಾಗಿ ಸಾಗಿದ ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆ ಬೊಳುವಾರು ವಿಶ್ವಕರ್ಮ ಸಭಾಭವನದವರೆಗೆ ಸಾಗಿತು. ಮೆರವಣಿಗೆಯಲ್ಲಿ ಚೆಂಡೆ, ಕುಣಿತ ಭಜನೆ, ವಿಶ್ವಕರ್ಮ ದೇವರ ಸ್ತಬ್ದಚಿತ್ರ ಗಮನ ಸೆಳೆಯಿತು. ಇದನ್ನನುಸರಿಸಿ ವಿಶ್ವಕರ್ಮ ಸಮುದಾಯದವರು ಮೆರವಣಿಗೆಯಲ್ಲಿ

ವಿಶ್ವಕರ್ಮ ಮಹೋತ್ಸವ, ವೈಭವದ ವಿಶ್ವಕರ್ಮ ವಾಹನ ಮೆರವಣಿಗೆ Read More »

ಮುಂದಿನ ಬಾರಿಯೂ ಮೋದಿಯೇ ಪ್ರಧಾನಿಯಾಗಲಿ | ಹುಟ್ಟುಹಬ್ಬ ಪ್ರಯುಕ್ತ ಮೋದಿ ಹೆಸರಲ್ಲಿ ವಿಶೇಷ ಪ್ರಾರ್ಥನೆ, ಕುಂಕುಮಾರ್ಚನೆ

ಪುತ್ತೂರು: ಪ್ರಧಾನ ಮಂತ್ರಿ ನರೇಂದ್ರ ದಾಮೋದರದಾಸ್ ಮೋದಿ ಅವರ 73ನೇ ಜನ್ಮದಿನದ ಪ್ರಯುಕ್ತ ಹಿನ್ನೆಲೆಯಲ್ಲಿ ಅವರ ಆಯುಷ್ಯ,ಆರೋಗ್ಯ ವೃದ್ಧಿಗಾಗಿ ಮತ್ತು ಮುಂದಿನ ಚುನಾವಣೆಯಲ್ಲೂ ದೇಶದ ಚುಕ್ಕಾಣಿ ಹಿಡಿಯುವ ಶಕ್ತಿ ಅವರಿಗೆ ಮಹಾದೇವಿ ಅನುಗ್ರಹಿಸಲಿ ಎಂದು ಪ್ರಾರ್ಥಿಸಿ, ಕಬಕ ಮಹಾದೇವಿ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಸೇವೆ ಸಲ್ಲಿಸಲಾಯಿತು. ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ, ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ಎಸ್.ಟಿ ಮೋರ್ಚಾ ಪ್ರ.ಕಾರ್ಯದರ್ಶಿ ಹರೀಶ್ ಬಿಜತ್ರೆ, ಪುಣಚ

ಮುಂದಿನ ಬಾರಿಯೂ ಮೋದಿಯೇ ಪ್ರಧಾನಿಯಾಗಲಿ | ಹುಟ್ಟುಹಬ್ಬ ಪ್ರಯುಕ್ತ ಮೋದಿ ಹೆಸರಲ್ಲಿ ವಿಶೇಷ ಪ್ರಾರ್ಥನೆ, ಕುಂಕುಮಾರ್ಚನೆ Read More »

ಮಾಡತ್ತಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಮೊಸರು ಕುಡಿಕೆ, ಸನ್ಮಾನ,

ಕಲ್ಲೇಗ: ಮಾಡತ್ತಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 11ನೇ ವರ್ಷದ ಮೊಸರು ಕುಡಿಕೆ ಉತ್ಸವ ಮಾಡತ್ತಾರು ಶ್ರೀ ಪುಣ್ಯಕುಮಾರ ದೈವಸ್ಥಾನದ ವಠಾರದಲ್ಲಿ ನಡೆಯಿತು. ತಿಮ್ಮಪ್ಪ ಗೌಡ ಪೋಳ್ಯ ಉದ್ಘಾಟಿಸಿದರು. ನಂತರ ಪುಟಾಣಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿವಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜೀವಂಧರ್ ಜೈನ್ ಕಲ್ಲೇಗ, ರಘುರಾಜ ಉಬರಡ್ಕ, ಹೇಮಚಂದ್ರ ಮುರ, ಉಮೇಶ್ ಆಚಾರ್ಯ ಕಲ್ಲೇಗ, ಎಲ್. ಅನಂತ ಪ್ರಸಾದ್ ಮಾಡತ್ತಾರು, ಅಣ್ಣು

ಮಾಡತ್ತಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಮೊಸರು ಕುಡಿಕೆ, ಸನ್ಮಾನ, Read More »

ಪೆರ್ನೆಯ ಕಾರ್ಲದಲ್ಲಿ 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮಾಣಿ: ಪೆರ್ನೆಯ ಕಾರ್ಲ ಶ್ರೀ ರಾಮಾಂಜನೇಯ ಭಜನಾ ಮಂದಿರದ ವತಿಯಿಂದ ಪೆರ್ನೆ ಯುವಸ್ಪಂದನದ ಸಹಕಾರದೊಂದಿಗೆ 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ಸುಡುಮದ್ದು ಪ್ರದರ್ಶನ, ಹುಲಿವೇಷ ಕುಣಿತ ಸೆ. 19ರಂದು ನಡೆಯಲಿದೆ. ಬೆಳಿಗ್ಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆಗೊಂಡ ಬಳಿಕ ವಿವಿಧ ಸ್ಪರ್ಧೆಗಳು ನಡೆಯಲಿವೆ. ಸಂಜೆ ಆಕರ್ಷಕ ಸುಡುಮದ್ದು ಪ್ರದರ್ಶನ, ನಾಸಿಕ್ ಬ್ಯಾಂಕ್, ಕುಣಿತ ಭಜನೆ, ಹುಲಿವೇಷ ಕುಣಿತ, ಗೊಂಬೆ, ಟ್ಯಾಬ್ಲೋಗಳೊಂದಿಗೆ ಶೋಭಾಯಾತ್ರೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪೆರ್ನೆಯ ಕಾರ್ಲದಲ್ಲಿ 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

error: Content is protected !!
Scroll to Top